HomeಮುಖಪುಟBihar Election: ಅಕ್ಟೋಬರ್ 28 ರಿಂದ ಬಿಹಾರ ವಿಧಾನಸಭಾ ಚುನಾವಣೆ, ನವೆಂಬರ್ 10ಕ್ಕೆ ಫಲಿತಾಂಶ

Bihar Election: ಅಕ್ಟೋಬರ್ 28 ರಿಂದ ಬಿಹಾರ ವಿಧಾನಸಭಾ ಚುನಾವಣೆ, ನವೆಂಬರ್ 10ಕ್ಕೆ ಫಲಿತಾಂಶ

ಬಿಹಾರ ಚುನಾವಣೆಗಾಗಿ 46 ಲಕ್ಷ ಮಾಸ್ಕ್‌ಗಳು, 23 ಲಕ್ಷ ಕೈಗವಸುಗಳು, 7 ಲಕ್ಷ ಲೀಟರ್ ಸ್ಯಾನಿಟೈಸರ್, 6 ಲಕ್ಷ ಪಿಪಿಇ ಕಿಟ್‌ಗಳನ್ನು ಬಳಸಲು ನಿರ್ಧಿರಿಸಲಾಗಿದೆ ಎಂದು ಸುನೀಲ್ ಅರೋರಾ ತಿಳಿಸಿದ್ದಾರೆ.

- Advertisement -
- Advertisement -

ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಕೊನೆಗೂ ದಿನಾಂಕ ನಿಗಧಿ ಮಾಡಿದೆ. ಅಕ್ಟೋಬರ್ 28 ರಿಂದ ಚುನಾವಣೆ ಆರಂಭವಾಗಲಿದ್ದು 3 ಹಂತಗಳಲ್ಲಿ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ನಾಮಪತ್ರ ಸಲ್ಲಿಕೆ ಆರಂಭ: ಮೊದಲ ಹಂತಕ್ಕೆ ಅಕ್ಟೋಬರ್ 1 ರಿಂದ ಆರಂಭ

ಮೊದಲ ಹಂತ: ಅಕ್ಟೋಬರ್ 28.  (71 ಕ್ಷೇತ್ರಗಳಿಗೆ 16 ಜಿಲ್ಲೆಗಳಲ್ಲಿ)

ಎರಡನೇ ಹಂತ: ನವೆಂಬರ್ 03. (94 ಕ್ಷೇತ್ರಗಳಿಗೆ 17 ಜಿಲ್ಲೆಗಳಲ್ಲಿ)

ಮೂರನೇ ಹಂತ: ನವೆಂಬರ್ 07. (78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ)

ಫಲಿತಾಂಶ: ನವೆಂಬರ್ 10.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಕೊರೊನಾ ವೈರಸ್ ಸಾಂಕ್ರಾಮಿಕದ ನಡುವೆ ಸುರಕ್ಷಿತವಾಗಿ ಚುನಾವಣೆ ನಡೆಸುವ ಭರವಸೆ ನೀಡಿದರು. ಮತದಾನದ ಸಮಯವನ್ನು ಒಂದು ಗಂಟೆ ಹೆಚ್ಚು ಮಾಡಿದ್ದು, ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ.

ವಿಶ್ವಾದಾದ್ಯಂತ ಹರಡಿರುವ ಕೊರೊನಾ ವೈರಸ್ ಸಾಂಕ್ರಾಮಿಕದ ನಡುವೆಯು ನಡೆಯುತ್ತಿರುವ ಬಹುದೊಡ್ಡ  ಚುನಾವಣೆ ಇದಾಗಿದೆ. ಹಾಗಾಗಿ ಚುನಾವಣಾ ಆಯೋಗವು ಚುನಾವಣೆ ನಡೆಸಲು ಹಲವು ನಿಬಂಧನೆಗಳ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೊರೊನಾ ಪಾಸಿಟಿವ್ ಇರುವವರು ಸಹ ಮತದಾನ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಬಿಹಾರ ಚುನಾವಣೆಗಾಗಿ 46 ಲಕ್ಷ ಮಾಸ್ಕ್‌ಗಳು, 23 ಲಕ್ಷ ಕೈಗವಸುಗಳು, 7 ಲಕ್ಷ ಲೀಟರ್ ಸ್ಯಾನಿಟೈಸರ್, 6 ಲಕ್ಷ ಪಿಪಿಇ ಕಿಟ್‌ಗಳನ್ನು ಬಳಸಲು ನಿರ್ಧಿರಿಸಲಾಗಿದೆ ಎಂದು ಸುನೀಲ್ ಅರೋರಾ ತಿಳಿಸಿದ್ದಾರೆ. ಆನ್‌ಲೈನ್‌ನಲ್ಲಿಯೂ ಸಹ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ.

ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎನ್‌ಡಿಎ ಮತ್ತು ಮಹಾಮೈತ್ರಿ ನಡುವೆ ನೇರ ಹಣಾಹಣಿ ನಡೆಯಲಿದೆ. ಎನ್‌ಡಿಯ ಮೈತ್ರಿಕೂಟದಲ್ಲಿ ನಿತೀಶ್‌ ಕುಮಾರ್‌ರವರ ಜೆಡಿಯು, ಬಿಜೆಪಿ, ಚಿರಾಗ್ ಪಾಸ್ವಾನ್‌ರವರ ಎಲ್‌ಜೆಪಿ ಮತ್ತು ಜತಿನ್ ರಾಮ್‌ ಮಾಂಝಿಯವರ ಹಿಂದೂಸ್ತಾನ್ ಅವಮ್ ಮೋರ್ಚಾ ಸೇರಿವೆ. ಇದರ ಪ್ರತಿಸ್ಪರ್ಧಿ ಮಹಾಮೈತ್ರಿಯಲ್ಲಿ ಲಾಲು ಪ್ರಸಾದ್ ಯಾದವ್‌ರವರ ಆರ್‌ಜೆಡಿ, ಕಾಂಗ್ರೆಸ್ ಪ್ರಮುಖ ಪಕ್ಷಗಳಾಗಿವೆ.

ಸದ್ಯಕ್ಕೆ ಲಾಲು ಪ್ರಸಾದ್ ಯಾದವ್‌ರವರು ಜೈಲಿನಲ್ಲಿರುವ ಕಾರಣ ಅವರ ಮಗ ತೇಜಸ್ವಿ ಯಾದವ್ ಆರ್‌ಜೆಡಿ ಮತ್ತು ಮಹಾಮೈತ್ರಿಯನ್ನು ಮುನ್ನಡೆಸುತ್ತಿದ್ದಾರೆ. ನಿತೀಶ್ ಕುಮಾರ್‌ರವರು ಕೊರೊನಾ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾರಿರುವ ಅವರು ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತ ವಿರೋಧಿ ಸರ್ಕಾರ ಎಂದು ಟೀಕಿಸಿದ್ದಾರೆ.

ಹಾಲಿ ಮುಖ್ಯಮಂತ್ರಿ ಜೆಡಿಯುನ ನಿತೀಶ್ ಕುಮಾರ್ ನಾಲ್ಕನೇ ಬಾರಿಗೆ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. 2015 ರಲ್ಲಿ ಆರ್‌ಜೆಡಿ, ಕಾಂಗ್ರೆಸ್‌ ಜೊತೆ ಚುನಾವಣಾ ಪೂರ್ವ ಮೈತ್ರಿಯೊಂದಿಗೆ ಜಯಿಸಿ ಸಿಎಂ ಆಗಿದ್ದ ಅವರು 2017ರಲ್ಲಿ ಮೈತ್ರಿ ಮುರಿದು ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ಕಾರಣಕ್ಕೆ ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಚುನಾವಣಾ ಚತುರ ಎಂದೇ ಖ್ಯಾತಿಯಾದ ಪ್ರಶಾಂತ್ ಕಿಶೋರ್ ಬಿಹಾರದಲ್ಲಿ ಯುವಜನರನ್ನು ಸಂಘಟಿಸುತ್ತಿದ್ದಾರೆ. ಅದೇ ರೀತಿಯಾಗಿ ಕಳೆದ ಲೋಕಸಭೆಯಲ್ಲಿ ಸ್ಪರ್ಧಿಸಿ ಗಮನಸೆಳೆದಿದ್ದ ಸಿಪಿಐ ಪಕ್ಷದ ಯುವ ಮುಖಂಡ ಕನ್ಹಯ್ಯ ಕುಮಾರ್ ಸಹ ಈ ಚುನಾವಣೆಯಲ್ಲ ಪ್ರಮುಖ ಪಾತ್ರ ವಹಿಸಲಿದ್ದಾರೆ ಎನ್ನಲಾಗಿದೆ.

ಅದೇ ರೀತಿಯಾಗಿ ಇತ್ತೀಚೆಗೆ ಪ್ರವರ್ಧಮಾನಕ್ಕೆ ಬಂದಿರುವ ಯುವ ದಲಿತ ಹೋರಾಟಗಾರ ಭೀಮ್‌ ಆರ್ಮಿಯ ಚಂದ್ರಶೇಖರ್ ಆಜಾದ್ ಕೂಡ ‘ಅಜಾದ್ ಸಮಾಜ ಪಕ್ಷ’ ಸ್ಥಾಪಿಸಿದ್ದು ಬಿಹಾರ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...