HomeಮುಖಪುಟBihar Election: ಅಕ್ಟೋಬರ್ 28 ರಿಂದ ಬಿಹಾರ ವಿಧಾನಸಭಾ ಚುನಾವಣೆ, ನವೆಂಬರ್ 10ಕ್ಕೆ ಫಲಿತಾಂಶ

Bihar Election: ಅಕ್ಟೋಬರ್ 28 ರಿಂದ ಬಿಹಾರ ವಿಧಾನಸಭಾ ಚುನಾವಣೆ, ನವೆಂಬರ್ 10ಕ್ಕೆ ಫಲಿತಾಂಶ

ಬಿಹಾರ ಚುನಾವಣೆಗಾಗಿ 46 ಲಕ್ಷ ಮಾಸ್ಕ್‌ಗಳು, 23 ಲಕ್ಷ ಕೈಗವಸುಗಳು, 7 ಲಕ್ಷ ಲೀಟರ್ ಸ್ಯಾನಿಟೈಸರ್, 6 ಲಕ್ಷ ಪಿಪಿಇ ಕಿಟ್‌ಗಳನ್ನು ಬಳಸಲು ನಿರ್ಧಿರಿಸಲಾಗಿದೆ ಎಂದು ಸುನೀಲ್ ಅರೋರಾ ತಿಳಿಸಿದ್ದಾರೆ.

- Advertisement -
- Advertisement -

ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಕೊನೆಗೂ ದಿನಾಂಕ ನಿಗಧಿ ಮಾಡಿದೆ. ಅಕ್ಟೋಬರ್ 28 ರಿಂದ ಚುನಾವಣೆ ಆರಂಭವಾಗಲಿದ್ದು 3 ಹಂತಗಳಲ್ಲಿ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ನಾಮಪತ್ರ ಸಲ್ಲಿಕೆ ಆರಂಭ: ಮೊದಲ ಹಂತಕ್ಕೆ ಅಕ್ಟೋಬರ್ 1 ರಿಂದ ಆರಂಭ

ಮೊದಲ ಹಂತ: ಅಕ್ಟೋಬರ್ 28.  (71 ಕ್ಷೇತ್ರಗಳಿಗೆ 16 ಜಿಲ್ಲೆಗಳಲ್ಲಿ)

ಎರಡನೇ ಹಂತ: ನವೆಂಬರ್ 03. (94 ಕ್ಷೇತ್ರಗಳಿಗೆ 17 ಜಿಲ್ಲೆಗಳಲ್ಲಿ)

ಮೂರನೇ ಹಂತ: ನವೆಂಬರ್ 07. (78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ)

ಫಲಿತಾಂಶ: ನವೆಂಬರ್ 10.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಕೊರೊನಾ ವೈರಸ್ ಸಾಂಕ್ರಾಮಿಕದ ನಡುವೆ ಸುರಕ್ಷಿತವಾಗಿ ಚುನಾವಣೆ ನಡೆಸುವ ಭರವಸೆ ನೀಡಿದರು. ಮತದಾನದ ಸಮಯವನ್ನು ಒಂದು ಗಂಟೆ ಹೆಚ್ಚು ಮಾಡಿದ್ದು, ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ.

ವಿಶ್ವಾದಾದ್ಯಂತ ಹರಡಿರುವ ಕೊರೊನಾ ವೈರಸ್ ಸಾಂಕ್ರಾಮಿಕದ ನಡುವೆಯು ನಡೆಯುತ್ತಿರುವ ಬಹುದೊಡ್ಡ  ಚುನಾವಣೆ ಇದಾಗಿದೆ. ಹಾಗಾಗಿ ಚುನಾವಣಾ ಆಯೋಗವು ಚುನಾವಣೆ ನಡೆಸಲು ಹಲವು ನಿಬಂಧನೆಗಳ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೊರೊನಾ ಪಾಸಿಟಿವ್ ಇರುವವರು ಸಹ ಮತದಾನ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಬಿಹಾರ ಚುನಾವಣೆಗಾಗಿ 46 ಲಕ್ಷ ಮಾಸ್ಕ್‌ಗಳು, 23 ಲಕ್ಷ ಕೈಗವಸುಗಳು, 7 ಲಕ್ಷ ಲೀಟರ್ ಸ್ಯಾನಿಟೈಸರ್, 6 ಲಕ್ಷ ಪಿಪಿಇ ಕಿಟ್‌ಗಳನ್ನು ಬಳಸಲು ನಿರ್ಧಿರಿಸಲಾಗಿದೆ ಎಂದು ಸುನೀಲ್ ಅರೋರಾ ತಿಳಿಸಿದ್ದಾರೆ. ಆನ್‌ಲೈನ್‌ನಲ್ಲಿಯೂ ಸಹ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ.

ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎನ್‌ಡಿಎ ಮತ್ತು ಮಹಾಮೈತ್ರಿ ನಡುವೆ ನೇರ ಹಣಾಹಣಿ ನಡೆಯಲಿದೆ. ಎನ್‌ಡಿಯ ಮೈತ್ರಿಕೂಟದಲ್ಲಿ ನಿತೀಶ್‌ ಕುಮಾರ್‌ರವರ ಜೆಡಿಯು, ಬಿಜೆಪಿ, ಚಿರಾಗ್ ಪಾಸ್ವಾನ್‌ರವರ ಎಲ್‌ಜೆಪಿ ಮತ್ತು ಜತಿನ್ ರಾಮ್‌ ಮಾಂಝಿಯವರ ಹಿಂದೂಸ್ತಾನ್ ಅವಮ್ ಮೋರ್ಚಾ ಸೇರಿವೆ. ಇದರ ಪ್ರತಿಸ್ಪರ್ಧಿ ಮಹಾಮೈತ್ರಿಯಲ್ಲಿ ಲಾಲು ಪ್ರಸಾದ್ ಯಾದವ್‌ರವರ ಆರ್‌ಜೆಡಿ, ಕಾಂಗ್ರೆಸ್ ಪ್ರಮುಖ ಪಕ್ಷಗಳಾಗಿವೆ.

ಸದ್ಯಕ್ಕೆ ಲಾಲು ಪ್ರಸಾದ್ ಯಾದವ್‌ರವರು ಜೈಲಿನಲ್ಲಿರುವ ಕಾರಣ ಅವರ ಮಗ ತೇಜಸ್ವಿ ಯಾದವ್ ಆರ್‌ಜೆಡಿ ಮತ್ತು ಮಹಾಮೈತ್ರಿಯನ್ನು ಮುನ್ನಡೆಸುತ್ತಿದ್ದಾರೆ. ನಿತೀಶ್ ಕುಮಾರ್‌ರವರು ಕೊರೊನಾ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾರಿರುವ ಅವರು ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತ ವಿರೋಧಿ ಸರ್ಕಾರ ಎಂದು ಟೀಕಿಸಿದ್ದಾರೆ.

ಹಾಲಿ ಮುಖ್ಯಮಂತ್ರಿ ಜೆಡಿಯುನ ನಿತೀಶ್ ಕುಮಾರ್ ನಾಲ್ಕನೇ ಬಾರಿಗೆ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. 2015 ರಲ್ಲಿ ಆರ್‌ಜೆಡಿ, ಕಾಂಗ್ರೆಸ್‌ ಜೊತೆ ಚುನಾವಣಾ ಪೂರ್ವ ಮೈತ್ರಿಯೊಂದಿಗೆ ಜಯಿಸಿ ಸಿಎಂ ಆಗಿದ್ದ ಅವರು 2017ರಲ್ಲಿ ಮೈತ್ರಿ ಮುರಿದು ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ಕಾರಣಕ್ಕೆ ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಚುನಾವಣಾ ಚತುರ ಎಂದೇ ಖ್ಯಾತಿಯಾದ ಪ್ರಶಾಂತ್ ಕಿಶೋರ್ ಬಿಹಾರದಲ್ಲಿ ಯುವಜನರನ್ನು ಸಂಘಟಿಸುತ್ತಿದ್ದಾರೆ. ಅದೇ ರೀತಿಯಾಗಿ ಕಳೆದ ಲೋಕಸಭೆಯಲ್ಲಿ ಸ್ಪರ್ಧಿಸಿ ಗಮನಸೆಳೆದಿದ್ದ ಸಿಪಿಐ ಪಕ್ಷದ ಯುವ ಮುಖಂಡ ಕನ್ಹಯ್ಯ ಕುಮಾರ್ ಸಹ ಈ ಚುನಾವಣೆಯಲ್ಲ ಪ್ರಮುಖ ಪಾತ್ರ ವಹಿಸಲಿದ್ದಾರೆ ಎನ್ನಲಾಗಿದೆ.

ಅದೇ ರೀತಿಯಾಗಿ ಇತ್ತೀಚೆಗೆ ಪ್ರವರ್ಧಮಾನಕ್ಕೆ ಬಂದಿರುವ ಯುವ ದಲಿತ ಹೋರಾಟಗಾರ ಭೀಮ್‌ ಆರ್ಮಿಯ ಚಂದ್ರಶೇಖರ್ ಆಜಾದ್ ಕೂಡ ‘ಅಜಾದ್ ಸಮಾಜ ಪಕ್ಷ’ ಸ್ಥಾಪಿಸಿದ್ದು ಬಿಹಾರ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...