HomeಮುಖಪುಟBihar Election: ಅಕ್ಟೋಬರ್ 28 ರಿಂದ ಬಿಹಾರ ವಿಧಾನಸಭಾ ಚುನಾವಣೆ, ನವೆಂಬರ್ 10ಕ್ಕೆ ಫಲಿತಾಂಶ

Bihar Election: ಅಕ್ಟೋಬರ್ 28 ರಿಂದ ಬಿಹಾರ ವಿಧಾನಸಭಾ ಚುನಾವಣೆ, ನವೆಂಬರ್ 10ಕ್ಕೆ ಫಲಿತಾಂಶ

ಬಿಹಾರ ಚುನಾವಣೆಗಾಗಿ 46 ಲಕ್ಷ ಮಾಸ್ಕ್‌ಗಳು, 23 ಲಕ್ಷ ಕೈಗವಸುಗಳು, 7 ಲಕ್ಷ ಲೀಟರ್ ಸ್ಯಾನಿಟೈಸರ್, 6 ಲಕ್ಷ ಪಿಪಿಇ ಕಿಟ್‌ಗಳನ್ನು ಬಳಸಲು ನಿರ್ಧಿರಿಸಲಾಗಿದೆ ಎಂದು ಸುನೀಲ್ ಅರೋರಾ ತಿಳಿಸಿದ್ದಾರೆ.

- Advertisement -
- Advertisement -

ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಕೊನೆಗೂ ದಿನಾಂಕ ನಿಗಧಿ ಮಾಡಿದೆ. ಅಕ್ಟೋಬರ್ 28 ರಿಂದ ಚುನಾವಣೆ ಆರಂಭವಾಗಲಿದ್ದು 3 ಹಂತಗಳಲ್ಲಿ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ನಾಮಪತ್ರ ಸಲ್ಲಿಕೆ ಆರಂಭ: ಮೊದಲ ಹಂತಕ್ಕೆ ಅಕ್ಟೋಬರ್ 1 ರಿಂದ ಆರಂಭ

ಮೊದಲ ಹಂತ: ಅಕ್ಟೋಬರ್ 28.  (71 ಕ್ಷೇತ್ರಗಳಿಗೆ 16 ಜಿಲ್ಲೆಗಳಲ್ಲಿ)

ಎರಡನೇ ಹಂತ: ನವೆಂಬರ್ 03. (94 ಕ್ಷೇತ್ರಗಳಿಗೆ 17 ಜಿಲ್ಲೆಗಳಲ್ಲಿ)

ಮೂರನೇ ಹಂತ: ನವೆಂಬರ್ 07. (78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ)

ಫಲಿತಾಂಶ: ನವೆಂಬರ್ 10.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಕೊರೊನಾ ವೈರಸ್ ಸಾಂಕ್ರಾಮಿಕದ ನಡುವೆ ಸುರಕ್ಷಿತವಾಗಿ ಚುನಾವಣೆ ನಡೆಸುವ ಭರವಸೆ ನೀಡಿದರು. ಮತದಾನದ ಸಮಯವನ್ನು ಒಂದು ಗಂಟೆ ಹೆಚ್ಚು ಮಾಡಿದ್ದು, ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ.

ವಿಶ್ವಾದಾದ್ಯಂತ ಹರಡಿರುವ ಕೊರೊನಾ ವೈರಸ್ ಸಾಂಕ್ರಾಮಿಕದ ನಡುವೆಯು ನಡೆಯುತ್ತಿರುವ ಬಹುದೊಡ್ಡ  ಚುನಾವಣೆ ಇದಾಗಿದೆ. ಹಾಗಾಗಿ ಚುನಾವಣಾ ಆಯೋಗವು ಚುನಾವಣೆ ನಡೆಸಲು ಹಲವು ನಿಬಂಧನೆಗಳ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೊರೊನಾ ಪಾಸಿಟಿವ್ ಇರುವವರು ಸಹ ಮತದಾನ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಬಿಹಾರ ಚುನಾವಣೆಗಾಗಿ 46 ಲಕ್ಷ ಮಾಸ್ಕ್‌ಗಳು, 23 ಲಕ್ಷ ಕೈಗವಸುಗಳು, 7 ಲಕ್ಷ ಲೀಟರ್ ಸ್ಯಾನಿಟೈಸರ್, 6 ಲಕ್ಷ ಪಿಪಿಇ ಕಿಟ್‌ಗಳನ್ನು ಬಳಸಲು ನಿರ್ಧಿರಿಸಲಾಗಿದೆ ಎಂದು ಸುನೀಲ್ ಅರೋರಾ ತಿಳಿಸಿದ್ದಾರೆ. ಆನ್‌ಲೈನ್‌ನಲ್ಲಿಯೂ ಸಹ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ.

ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎನ್‌ಡಿಎ ಮತ್ತು ಮಹಾಮೈತ್ರಿ ನಡುವೆ ನೇರ ಹಣಾಹಣಿ ನಡೆಯಲಿದೆ. ಎನ್‌ಡಿಯ ಮೈತ್ರಿಕೂಟದಲ್ಲಿ ನಿತೀಶ್‌ ಕುಮಾರ್‌ರವರ ಜೆಡಿಯು, ಬಿಜೆಪಿ, ಚಿರಾಗ್ ಪಾಸ್ವಾನ್‌ರವರ ಎಲ್‌ಜೆಪಿ ಮತ್ತು ಜತಿನ್ ರಾಮ್‌ ಮಾಂಝಿಯವರ ಹಿಂದೂಸ್ತಾನ್ ಅವಮ್ ಮೋರ್ಚಾ ಸೇರಿವೆ. ಇದರ ಪ್ರತಿಸ್ಪರ್ಧಿ ಮಹಾಮೈತ್ರಿಯಲ್ಲಿ ಲಾಲು ಪ್ರಸಾದ್ ಯಾದವ್‌ರವರ ಆರ್‌ಜೆಡಿ, ಕಾಂಗ್ರೆಸ್ ಪ್ರಮುಖ ಪಕ್ಷಗಳಾಗಿವೆ.

ಸದ್ಯಕ್ಕೆ ಲಾಲು ಪ್ರಸಾದ್ ಯಾದವ್‌ರವರು ಜೈಲಿನಲ್ಲಿರುವ ಕಾರಣ ಅವರ ಮಗ ತೇಜಸ್ವಿ ಯಾದವ್ ಆರ್‌ಜೆಡಿ ಮತ್ತು ಮಹಾಮೈತ್ರಿಯನ್ನು ಮುನ್ನಡೆಸುತ್ತಿದ್ದಾರೆ. ನಿತೀಶ್ ಕುಮಾರ್‌ರವರು ಕೊರೊನಾ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾರಿರುವ ಅವರು ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತ ವಿರೋಧಿ ಸರ್ಕಾರ ಎಂದು ಟೀಕಿಸಿದ್ದಾರೆ.

ಹಾಲಿ ಮುಖ್ಯಮಂತ್ರಿ ಜೆಡಿಯುನ ನಿತೀಶ್ ಕುಮಾರ್ ನಾಲ್ಕನೇ ಬಾರಿಗೆ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. 2015 ರಲ್ಲಿ ಆರ್‌ಜೆಡಿ, ಕಾಂಗ್ರೆಸ್‌ ಜೊತೆ ಚುನಾವಣಾ ಪೂರ್ವ ಮೈತ್ರಿಯೊಂದಿಗೆ ಜಯಿಸಿ ಸಿಎಂ ಆಗಿದ್ದ ಅವರು 2017ರಲ್ಲಿ ಮೈತ್ರಿ ಮುರಿದು ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ಕಾರಣಕ್ಕೆ ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಚುನಾವಣಾ ಚತುರ ಎಂದೇ ಖ್ಯಾತಿಯಾದ ಪ್ರಶಾಂತ್ ಕಿಶೋರ್ ಬಿಹಾರದಲ್ಲಿ ಯುವಜನರನ್ನು ಸಂಘಟಿಸುತ್ತಿದ್ದಾರೆ. ಅದೇ ರೀತಿಯಾಗಿ ಕಳೆದ ಲೋಕಸಭೆಯಲ್ಲಿ ಸ್ಪರ್ಧಿಸಿ ಗಮನಸೆಳೆದಿದ್ದ ಸಿಪಿಐ ಪಕ್ಷದ ಯುವ ಮುಖಂಡ ಕನ್ಹಯ್ಯ ಕುಮಾರ್ ಸಹ ಈ ಚುನಾವಣೆಯಲ್ಲ ಪ್ರಮುಖ ಪಾತ್ರ ವಹಿಸಲಿದ್ದಾರೆ ಎನ್ನಲಾಗಿದೆ.

ಅದೇ ರೀತಿಯಾಗಿ ಇತ್ತೀಚೆಗೆ ಪ್ರವರ್ಧಮಾನಕ್ಕೆ ಬಂದಿರುವ ಯುವ ದಲಿತ ಹೋರಾಟಗಾರ ಭೀಮ್‌ ಆರ್ಮಿಯ ಚಂದ್ರಶೇಖರ್ ಆಜಾದ್ ಕೂಡ ‘ಅಜಾದ್ ಸಮಾಜ ಪಕ್ಷ’ ಸ್ಥಾಪಿಸಿದ್ದು ಬಿಹಾರ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...