HomeUncategorizedಬಿಹಾರ ವಿಧಾನಸಭಾ ಚುನಾವಣೆ: ರಾಜಕೀಯ ಪಕ್ಷಗಳಲ್ಲಿ ಕೇಂದ್ರ ಸ್ಥಾನ ಪಡೆಯುತ್ತಿರುವ ದಲಿತರು

ಬಿಹಾರ ವಿಧಾನಸಭಾ ಚುನಾವಣೆ: ರಾಜಕೀಯ ಪಕ್ಷಗಳಲ್ಲಿ ಕೇಂದ್ರ ಸ್ಥಾನ ಪಡೆಯುತ್ತಿರುವ ದಲಿತರು

- Advertisement -
- Advertisement -

ಪಾಟ್ನಾ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಅಲ್ಲಿನ ರಾಜಕೀಯ ಪಕ್ಷಗಳು ಸಜ್ಜಾಗುತ್ತಿವೆ. ಹಾಗೆಯೇ ಇಲ್ಲಿನ ದಲಿತರು ಮತ್ತು ಯುವಕರು ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಅತ್ಯಂತ ಕೆಳ ಅಂಚಿನಲ್ಲಿರುವ ದಲಿತ ಸಮುದಾಯಗಳನ್ನು ತಲುಪಲು, ರಾಜಕೀಯ ಪಕ್ಷಗಳು ಮೂರು ಸಂಭಾವ್ಯ ಮಾರ್ಗಗಳನ್ನು ಅನುಸರಿಸುತ್ತಿವೆ. ದಲಿತ ಕೇಂದ್ರಿತ ಪಕ್ಷಗಳೊಂದಿಗೆ ಹೊಂದಾಣಿಕೆ, ದಲಿತ ನಾಯಕರನ್ನು ಉನ್ನತ ಸಾಂಸ್ಥಿಕ ಸ್ಥಾನಗಳಿಗೆ ನೇಮಿಸುವುದು ಮತ್ತು ದಲಿತ ಸಮುದಾಯಗಳೊಂದಿಗೆ ಸಾರ್ವಜನಿಕ ಸಭೆಗಳನ್ನು ಏರ್ಪಡಿಸುವುದನ್ನು ಮಾಡುತ್ತಿವೆ.

ಪಶುಪತಿ ಕುಮಾರ್ ಪರಾಸ್ ಅವರು ಎನ್‌ಡಿಎ ತೊರೆದಾಗಿನಿಂದ ಅವರ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (ಆರ್‌ಎಲ್‌ಜೆಪಿ) ಅವರನ್ನು ಸೆಳೆಯಲು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನೇತೃತ್ವದ ಮಹಾಘಟಬಂಧನ್ ಪ್ರಯತ್ನಿಸುತ್ತಿದೆ. ತಾನೇ ಸ್ವತಃ ಪ್ರತಿನಿಧಿಸುವ ದುಸಾಧ್ ಸಮುದಾಯದ ಮೇಲೆ ಪರಾಸ್ ಗಮನಾರ್ಹ ಪ್ರಭಾವ ಬೀರಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ದಲಿತ ನಾಯಕ ಜಗ್ಲಾಲ್ ಚೌಧರಿ ಅವರ 130ನೇ ಜನ್ಮ ದಿನಾಚರಣೆಯನ್ನು ಆಚರಿಸಿದೆ. ಇದರ ನಂತರ ಮಾರ್ಚ್‌ನಲ್ಲಿ ಪಕ್ಷದ ಹೊಸ ರಾಜ್ಯಾಧ್ಯಕ್ಷರಾಗಿ ಯುವ ದಲಿತ ನಾಯಕ ಮತ್ತು ಹಾಲಿ ಶಾಸಕ ರಾಜೇಶ್ ಕುಮಾರ್ ರಾಮ್ ಅವರನ್ನು ನೇಮಿಸಿದೆ. ರಾಮ್ ಅವರು ಜಾತವ್ ಸಮುದಾಯಕ್ಕೆ ಸೇರಿದವರಾಗಿದ್ದು, ಇದು ಬಿಹಾರದ ಎರಡನೇ ಅತಿದೊಡ್ಡ ದಲಿತ ಸಮುದಾಯವಾಗಿದ್ದು, ರಾಜ್ಯದ ಒಟ್ಟು ಜನಸಂಖ್ಯೆಯ ಸುಮಾರು ಶೇಕಡಾ 5ರಷ್ಟಿದೆ.

ಮತ್ತೊಂದೆಡೆ ಎನ್‌ಡಿಎ ತನ್ನ ವ್ಯಾಪ್ತಿಯಲ್ಲಿ ಎರಡು ದಲಿತ ಕೇಂದ್ರಿತ ಪಕ್ಷಗಳನ್ನು ಹೊಂದಿದೆ. ಅವು ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಮತ್ತು ಜಿತನ್ ರಾಮ್ ಮಾಂಝಿ ಅವರ ಪಕ್ಷ ಹಿಂದೂಸ್ತಾನಿ ಅವಾಮ್ ಮೋರ್ಚಾಗಳಾಗಿವೆ. ಎಸ್‌ಸಿಯೊಳಗಿನ ಅತಿದೊಡ್ಡ ಉಪಗುಂಪಾದ ಪಾಸ್ವಾನ್‌ಗಳು/ದುಸಾಧ್‌ಗಳಲ್ಲಿ ಎಲ್‌ಜೆಪಿ ಬಲವಾದ ಹಿಡಿತ ಹೊಂದಿದೆ ಮತ್ತು ಬಿಹಾರದ ಒಟ್ಟು ಜನಸಂಖ್ಯೆಯ ಶೇಕಡಾ 5.3 ರಷ್ಟಿದೆ. ಪಾಸ್ವಾನ್ ಸರಣಿ ಸಾರ್ವಜನಿಕ ಸಭೆಗಳನ್ನು ನಡೆಸುವ ಮೂಲಕ ದಲಿತ ಸಮುದಾಯಗಳನ್ನು ತಲುಪುತ್ತಿದ್ದಾರೆ. ಅದೇ ರೀತಿ, ಮಾಂಝಿ ಮುಸಾಹರ್ ಮತದಾರರ ಮೇಲೆ ಬಲವಾದ ಪ್ರಭಾವ ಬೀರಿದ್ದಾರೆ, ಇದು ರಾಜ್ಯದ ಜನಸಂಖ್ಯೆಯ ಶೇಕಡಾ 3 ಕ್ಕಿಂತ ಹೆಚ್ಚು ಇದೆ.

ಈ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಅವರ ಜೆಡಿ(ಯು) ದಲಿತ ಸಮುದಾಯಗಳೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಗಳನ್ನು ತೀವ್ರಗೊಳಿಸಿದೆ. ಗಮನಾರ್ಹವಾಗಿ ದಲಿತ ಮತ ಬ್ಯಾಂಕ್‌ನಲ್ಲಿ ಹಿಡಿತ ಸಾಧಿಸಲು 2007ರಲ್ಲಿ “ಮಹಾದಲಿತರು” ಎಂಬ ಹೊಸ ವರ್ಗವನ್ನು ಸೃಷ್ಟಿಸಿದವರು ಅವರು. ಈ ತಂತ್ರವು ನಂತರದ ಚುನಾವಣೆಗಳಲ್ಲಿ ಅವರಿಗೆ ಪ್ರಯೋಜನವನ್ನು ನೀಡಿದ್ದರೂ, ಇತ್ತೀಚಿನ ಚುನಾವಣೆಗಳಲ್ಲಿ ಅವರಿಗೆ ದಲಿತ ಮತದಾರರ ಬೆಂಬಲ ಕಡಿಮೆಯಾಗಿದೆ. ಉದಾಹರಣೆಗೆ ಪಕ್ಷವು 2015ರಲ್ಲಿ 38 ಎಸ್‌ಸಿ-ಮೀಸಲಾತಿ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಗೆದ್ದಿತ್ತು, ಆದರೆ 2020ರಲ್ಲಿ ಅದು ಕೇವಲ ಎಂಟು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು.

ತನ್ನ ಪ್ರಸ್ತುತ ದಲಿತ ಸಂಪರ್ಕದ ಭಾಗವಾಗಿ ಜೆಡಿಯು ಕಳೆದ ವರ್ಷ ನವೆಂಬರ್-ಡಿಸೆಂಬರ್‌ನಲ್ಲಿ “ಭೀಮ್ ಸಂಸದ್” ಅನ್ನು ಆಯೋಜಿಸಿತ್ತು. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಮುನ್ನಾದಿನದಂದು ಏಪ್ರಿಲ್ 13ರಂದು ನಿತೀಶ್ ಕುಮಾರ್ ಪಾಟ್ನಾದಲ್ಲಿ “ಭೀಮ್ ಸಂವಾದ” ವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಪಕ್ಷದ ನಾಯಕರು ಪರಿಶಿಷ್ಟ ಜಾತಿಗಳಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಒತ್ತಾಯಿಸಿದರು. ಅವರು “ಅಂಬೇಡ್ಕರ್ ಸಮಗ್ರ ಯೋಜನೆ”ಯನ್ನು ಘೋಷಿಸಿದರು, ಇದರ ಮೂಲಕ ಮುಂದಿನ 100 ದಿನಗಳಲ್ಲಿ 40 ಲಕ್ಷ ದಲಿತ ಕುಟುಂಬಗಳನ್ನು ತಲುಪಿ, ಸುಮಾರು ಒಂದು ಡಜನ್ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶ ಹೊಂದಿದೆ.

ಬಿಹಾರದಲ್ಲಿ ದಲಿತರಿಗಾಗಿ ಕೆಲವು ಗಮನಾರ್ಹ ಸರ್ಕಾರಿ ಯೋಜನೆಗಳಲ್ಲಿ ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆ ಮತ್ತು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಕ್ರಮವಾಗಿ 50,000 ರೂ. ಮತ್ತು 1 ಲಕ್ಷ ರೂ.ಗಳ ಆರ್ಥಿಕ ನೆರವು; ಬಿಹಾರ ಮಹಾದಲಿತ ವಿಕಾಸ್ ಮಿಷನ್ (ಬಿಎಂವಿಎಂ) ಮತ್ತು ಸಮುದಾಯದ ನಡುವೆ ಕೊಂಡಿಯಾಗಿ ಕೆಲಸ ಮಾಡುವ ವಿಕಾಸ್ ಮಿತ್ರರ ನೇಮಕಾತಿ; ವ್ಯಾಪಾರ ಪ್ರಾರಂಭಿಸಲು ರೂ. 10 ಲಕ್ಷ (ಅನುದಾನವಾಗಿ ಹೆಚ್ಚುವರಿ 50 ಪ್ರತಿಶತ ಸೇರಿದಂತೆ); 91 ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಕಲಿಯುತ್ತಿರುವ ಪ್ರತಿ ದಲಿತ ವಿದ್ಯಾರ್ಥಿಗೆ ವಿದ್ಯಾರ್ಥಿವೇತನಗಳು ಸೇರಿವೆ. ಕಾಗದದ ಮೇಲೆ ಈ ಯೋಜನೆಗಳು ಸಾಕಷ್ಟು ಆಕರ್ಷಕವಾಗಿವೆ ಮತ್ತು ದಲಿತ ಸಮುದಾಯಗಳ ಸದಸ್ಯರೊಂದಿಗೆ ಪ್ರತಿಧ್ವನಿಸಬಹುದು.

ದಲಿತ ಸಮುದಾಯಗಳ ನಾಯಕರನ್ನು ಸೇರಿಸಿಕೊಳ್ಳುವುದರಿಂದ ಪಕ್ಷಗಳು ಆಯಾ ಸಮುದಾಯಗಳ ಮೇಲಿನ ಪ್ರಭಾವದಿಂದಾಗಿ ತಮ್ಮ ಮತ ಪಾಲನ್ನು ಪಡೆಯಲು ಸಹಾಯ ಮಾಡಬಹುದು. ಆದರೆ ಅದು ಅವರಿಗೆ ಸಕಾರಾತ್ಮಕ ಪರಿಣಾಮ ಬಿರುತ್ತೆ ಎಂದು ಖಾತರಿಪಡಿಸಲು ಸಾಧ್ಯವಿಲ್ಲ. ಏಕೆಂದರೆ ದಲಿತರಿಗೆ ನಾಯಕನ ಉಪಜಾತಿಯು ಹಲವು ಮುಖ್ಯವಾದ ವಿಷಯಗಳಲ್ಲಿ ಒಂದಾಗಿದೆ. ಅಂತಿಮವಾಗಿ ಚುನಾವಣೆಗಳನ್ನು ಗೆಲ್ಲಲು ರಾಜಕೀಯ ಪಕ್ಷಗಳಿಗೆ ತಮ್ಮ ಖಾತರಿಪಡಿಸಿದ ಕ್ಷೇತ್ರಗಳನ್ನು ಮೀರಿ ನಿರ್ಣಾಯಕ ಮತಗಳು ಬೇಕಾಗುತ್ತವೆ. ಹೀಗಾಗಿ, ವಿವಿಧ ದಲಿತ ಸಮುದಾಯಗಳಿಂದ ಹೆಚ್ಚಿದ ಬೆಂಬಲವು ಅವರ ಚುನಾವಣಾ ನಿರೀಕ್ಷೆಯನ್ನು ಬೆಳಗಿಸುವ ಸಾಧ್ಯತೆಯಿದೆ.

ರಾಹುಲ್ ಗಾಂಧಿಯವರ ಸಂವಿಧಾನ ಮತ್ತು ದಲಿತ ಹಕ್ಕುಗಳ ಇತ್ತೀಚಿನ ಪ್ರಸ್ತಾಪ, ಸಾಮಾಜಿಕ ನ್ಯಾಯ ರಾಜಕೀಯದಲ್ಲಿ ಹೊಸ ಅಲೆಯನ್ನು ಸ್ವೀಕರಿಸಲು M-Y ಸಮೀಕರಣವನ್ನು ಮೀರಿ RJDಯ ಗಮನ, ನಿತೀಶ್ ಅವರ ನೆಲೆಯನ್ನು ವಿಸ್ತರಿಸುವ ಪ್ರಯತ್ನ ಮತ್ತು ಪ್ರಮುಖ ದಲಿತ ಪಕ್ಷಗಳೊಂದಿಗೆ ಬಿಜೆಪಿಯ ಮೈತ್ರಿಗಳು ಎಚ್ಚರಿಕೆಯಿಂದ ರೂಪಿಸುವುದು, ಬಿಹಾರದಲ್ಲಿ ಚುನಾವಣಾ ಚರ್ಚೆಯನ್ನು ದಲಿತ ಕೇಂದ್ರಿತವಾಗಿಸುವ ಸಾಮರ್ಥ್ಯವನ್ನು ಹೊಂದಿವೆ.

ಮಂಗಳೂರು| ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ: ಭಾರೀ ಸಂಖ್ಯೆಯಲ್ಲಿ ಜನರು ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...