HomeUncategorizedಬಿಹಾರ ವಿಧಾನಸಭಾ ಚುನಾವಣೆ: ರಾಜಕೀಯ ಪಕ್ಷಗಳಲ್ಲಿ ಕೇಂದ್ರ ಸ್ಥಾನ ಪಡೆಯುತ್ತಿರುವ ದಲಿತರು

ಬಿಹಾರ ವಿಧಾನಸಭಾ ಚುನಾವಣೆ: ರಾಜಕೀಯ ಪಕ್ಷಗಳಲ್ಲಿ ಕೇಂದ್ರ ಸ್ಥಾನ ಪಡೆಯುತ್ತಿರುವ ದಲಿತರು

- Advertisement -
- Advertisement -

ಪಾಟ್ನಾ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಅಲ್ಲಿನ ರಾಜಕೀಯ ಪಕ್ಷಗಳು ಸಜ್ಜಾಗುತ್ತಿವೆ. ಹಾಗೆಯೇ ಇಲ್ಲಿನ ದಲಿತರು ಮತ್ತು ಯುವಕರು ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಅತ್ಯಂತ ಕೆಳ ಅಂಚಿನಲ್ಲಿರುವ ದಲಿತ ಸಮುದಾಯಗಳನ್ನು ತಲುಪಲು, ರಾಜಕೀಯ ಪಕ್ಷಗಳು ಮೂರು ಸಂಭಾವ್ಯ ಮಾರ್ಗಗಳನ್ನು ಅನುಸರಿಸುತ್ತಿವೆ. ದಲಿತ ಕೇಂದ್ರಿತ ಪಕ್ಷಗಳೊಂದಿಗೆ ಹೊಂದಾಣಿಕೆ, ದಲಿತ ನಾಯಕರನ್ನು ಉನ್ನತ ಸಾಂಸ್ಥಿಕ ಸ್ಥಾನಗಳಿಗೆ ನೇಮಿಸುವುದು ಮತ್ತು ದಲಿತ ಸಮುದಾಯಗಳೊಂದಿಗೆ ಸಾರ್ವಜನಿಕ ಸಭೆಗಳನ್ನು ಏರ್ಪಡಿಸುವುದನ್ನು ಮಾಡುತ್ತಿವೆ.

ಪಶುಪತಿ ಕುಮಾರ್ ಪರಾಸ್ ಅವರು ಎನ್‌ಡಿಎ ತೊರೆದಾಗಿನಿಂದ ಅವರ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (ಆರ್‌ಎಲ್‌ಜೆಪಿ) ಅವರನ್ನು ಸೆಳೆಯಲು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನೇತೃತ್ವದ ಮಹಾಘಟಬಂಧನ್ ಪ್ರಯತ್ನಿಸುತ್ತಿದೆ. ತಾನೇ ಸ್ವತಃ ಪ್ರತಿನಿಧಿಸುವ ದುಸಾಧ್ ಸಮುದಾಯದ ಮೇಲೆ ಪರಾಸ್ ಗಮನಾರ್ಹ ಪ್ರಭಾವ ಬೀರಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ದಲಿತ ನಾಯಕ ಜಗ್ಲಾಲ್ ಚೌಧರಿ ಅವರ 130ನೇ ಜನ್ಮ ದಿನಾಚರಣೆಯನ್ನು ಆಚರಿಸಿದೆ. ಇದರ ನಂತರ ಮಾರ್ಚ್‌ನಲ್ಲಿ ಪಕ್ಷದ ಹೊಸ ರಾಜ್ಯಾಧ್ಯಕ್ಷರಾಗಿ ಯುವ ದಲಿತ ನಾಯಕ ಮತ್ತು ಹಾಲಿ ಶಾಸಕ ರಾಜೇಶ್ ಕುಮಾರ್ ರಾಮ್ ಅವರನ್ನು ನೇಮಿಸಿದೆ. ರಾಮ್ ಅವರು ಜಾತವ್ ಸಮುದಾಯಕ್ಕೆ ಸೇರಿದವರಾಗಿದ್ದು, ಇದು ಬಿಹಾರದ ಎರಡನೇ ಅತಿದೊಡ್ಡ ದಲಿತ ಸಮುದಾಯವಾಗಿದ್ದು, ರಾಜ್ಯದ ಒಟ್ಟು ಜನಸಂಖ್ಯೆಯ ಸುಮಾರು ಶೇಕಡಾ 5ರಷ್ಟಿದೆ.

ಮತ್ತೊಂದೆಡೆ ಎನ್‌ಡಿಎ ತನ್ನ ವ್ಯಾಪ್ತಿಯಲ್ಲಿ ಎರಡು ದಲಿತ ಕೇಂದ್ರಿತ ಪಕ್ಷಗಳನ್ನು ಹೊಂದಿದೆ. ಅವು ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಮತ್ತು ಜಿತನ್ ರಾಮ್ ಮಾಂಝಿ ಅವರ ಪಕ್ಷ ಹಿಂದೂಸ್ತಾನಿ ಅವಾಮ್ ಮೋರ್ಚಾಗಳಾಗಿವೆ. ಎಸ್‌ಸಿಯೊಳಗಿನ ಅತಿದೊಡ್ಡ ಉಪಗುಂಪಾದ ಪಾಸ್ವಾನ್‌ಗಳು/ದುಸಾಧ್‌ಗಳಲ್ಲಿ ಎಲ್‌ಜೆಪಿ ಬಲವಾದ ಹಿಡಿತ ಹೊಂದಿದೆ ಮತ್ತು ಬಿಹಾರದ ಒಟ್ಟು ಜನಸಂಖ್ಯೆಯ ಶೇಕಡಾ 5.3 ರಷ್ಟಿದೆ. ಪಾಸ್ವಾನ್ ಸರಣಿ ಸಾರ್ವಜನಿಕ ಸಭೆಗಳನ್ನು ನಡೆಸುವ ಮೂಲಕ ದಲಿತ ಸಮುದಾಯಗಳನ್ನು ತಲುಪುತ್ತಿದ್ದಾರೆ. ಅದೇ ರೀತಿ, ಮಾಂಝಿ ಮುಸಾಹರ್ ಮತದಾರರ ಮೇಲೆ ಬಲವಾದ ಪ್ರಭಾವ ಬೀರಿದ್ದಾರೆ, ಇದು ರಾಜ್ಯದ ಜನಸಂಖ್ಯೆಯ ಶೇಕಡಾ 3 ಕ್ಕಿಂತ ಹೆಚ್ಚು ಇದೆ.

ಈ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಅವರ ಜೆಡಿ(ಯು) ದಲಿತ ಸಮುದಾಯಗಳೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಗಳನ್ನು ತೀವ್ರಗೊಳಿಸಿದೆ. ಗಮನಾರ್ಹವಾಗಿ ದಲಿತ ಮತ ಬ್ಯಾಂಕ್‌ನಲ್ಲಿ ಹಿಡಿತ ಸಾಧಿಸಲು 2007ರಲ್ಲಿ “ಮಹಾದಲಿತರು” ಎಂಬ ಹೊಸ ವರ್ಗವನ್ನು ಸೃಷ್ಟಿಸಿದವರು ಅವರು. ಈ ತಂತ್ರವು ನಂತರದ ಚುನಾವಣೆಗಳಲ್ಲಿ ಅವರಿಗೆ ಪ್ರಯೋಜನವನ್ನು ನೀಡಿದ್ದರೂ, ಇತ್ತೀಚಿನ ಚುನಾವಣೆಗಳಲ್ಲಿ ಅವರಿಗೆ ದಲಿತ ಮತದಾರರ ಬೆಂಬಲ ಕಡಿಮೆಯಾಗಿದೆ. ಉದಾಹರಣೆಗೆ ಪಕ್ಷವು 2015ರಲ್ಲಿ 38 ಎಸ್‌ಸಿ-ಮೀಸಲಾತಿ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಗೆದ್ದಿತ್ತು, ಆದರೆ 2020ರಲ್ಲಿ ಅದು ಕೇವಲ ಎಂಟು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು.

ತನ್ನ ಪ್ರಸ್ತುತ ದಲಿತ ಸಂಪರ್ಕದ ಭಾಗವಾಗಿ ಜೆಡಿಯು ಕಳೆದ ವರ್ಷ ನವೆಂಬರ್-ಡಿಸೆಂಬರ್‌ನಲ್ಲಿ “ಭೀಮ್ ಸಂಸದ್” ಅನ್ನು ಆಯೋಜಿಸಿತ್ತು. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಮುನ್ನಾದಿನದಂದು ಏಪ್ರಿಲ್ 13ರಂದು ನಿತೀಶ್ ಕುಮಾರ್ ಪಾಟ್ನಾದಲ್ಲಿ “ಭೀಮ್ ಸಂವಾದ” ವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಪಕ್ಷದ ನಾಯಕರು ಪರಿಶಿಷ್ಟ ಜಾತಿಗಳಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಒತ್ತಾಯಿಸಿದರು. ಅವರು “ಅಂಬೇಡ್ಕರ್ ಸಮಗ್ರ ಯೋಜನೆ”ಯನ್ನು ಘೋಷಿಸಿದರು, ಇದರ ಮೂಲಕ ಮುಂದಿನ 100 ದಿನಗಳಲ್ಲಿ 40 ಲಕ್ಷ ದಲಿತ ಕುಟುಂಬಗಳನ್ನು ತಲುಪಿ, ಸುಮಾರು ಒಂದು ಡಜನ್ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶ ಹೊಂದಿದೆ.

ಬಿಹಾರದಲ್ಲಿ ದಲಿತರಿಗಾಗಿ ಕೆಲವು ಗಮನಾರ್ಹ ಸರ್ಕಾರಿ ಯೋಜನೆಗಳಲ್ಲಿ ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆ ಮತ್ತು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಕ್ರಮವಾಗಿ 50,000 ರೂ. ಮತ್ತು 1 ಲಕ್ಷ ರೂ.ಗಳ ಆರ್ಥಿಕ ನೆರವು; ಬಿಹಾರ ಮಹಾದಲಿತ ವಿಕಾಸ್ ಮಿಷನ್ (ಬಿಎಂವಿಎಂ) ಮತ್ತು ಸಮುದಾಯದ ನಡುವೆ ಕೊಂಡಿಯಾಗಿ ಕೆಲಸ ಮಾಡುವ ವಿಕಾಸ್ ಮಿತ್ರರ ನೇಮಕಾತಿ; ವ್ಯಾಪಾರ ಪ್ರಾರಂಭಿಸಲು ರೂ. 10 ಲಕ್ಷ (ಅನುದಾನವಾಗಿ ಹೆಚ್ಚುವರಿ 50 ಪ್ರತಿಶತ ಸೇರಿದಂತೆ); 91 ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಕಲಿಯುತ್ತಿರುವ ಪ್ರತಿ ದಲಿತ ವಿದ್ಯಾರ್ಥಿಗೆ ವಿದ್ಯಾರ್ಥಿವೇತನಗಳು ಸೇರಿವೆ. ಕಾಗದದ ಮೇಲೆ ಈ ಯೋಜನೆಗಳು ಸಾಕಷ್ಟು ಆಕರ್ಷಕವಾಗಿವೆ ಮತ್ತು ದಲಿತ ಸಮುದಾಯಗಳ ಸದಸ್ಯರೊಂದಿಗೆ ಪ್ರತಿಧ್ವನಿಸಬಹುದು.

ದಲಿತ ಸಮುದಾಯಗಳ ನಾಯಕರನ್ನು ಸೇರಿಸಿಕೊಳ್ಳುವುದರಿಂದ ಪಕ್ಷಗಳು ಆಯಾ ಸಮುದಾಯಗಳ ಮೇಲಿನ ಪ್ರಭಾವದಿಂದಾಗಿ ತಮ್ಮ ಮತ ಪಾಲನ್ನು ಪಡೆಯಲು ಸಹಾಯ ಮಾಡಬಹುದು. ಆದರೆ ಅದು ಅವರಿಗೆ ಸಕಾರಾತ್ಮಕ ಪರಿಣಾಮ ಬಿರುತ್ತೆ ಎಂದು ಖಾತರಿಪಡಿಸಲು ಸಾಧ್ಯವಿಲ್ಲ. ಏಕೆಂದರೆ ದಲಿತರಿಗೆ ನಾಯಕನ ಉಪಜಾತಿಯು ಹಲವು ಮುಖ್ಯವಾದ ವಿಷಯಗಳಲ್ಲಿ ಒಂದಾಗಿದೆ. ಅಂತಿಮವಾಗಿ ಚುನಾವಣೆಗಳನ್ನು ಗೆಲ್ಲಲು ರಾಜಕೀಯ ಪಕ್ಷಗಳಿಗೆ ತಮ್ಮ ಖಾತರಿಪಡಿಸಿದ ಕ್ಷೇತ್ರಗಳನ್ನು ಮೀರಿ ನಿರ್ಣಾಯಕ ಮತಗಳು ಬೇಕಾಗುತ್ತವೆ. ಹೀಗಾಗಿ, ವಿವಿಧ ದಲಿತ ಸಮುದಾಯಗಳಿಂದ ಹೆಚ್ಚಿದ ಬೆಂಬಲವು ಅವರ ಚುನಾವಣಾ ನಿರೀಕ್ಷೆಯನ್ನು ಬೆಳಗಿಸುವ ಸಾಧ್ಯತೆಯಿದೆ.

ರಾಹುಲ್ ಗಾಂಧಿಯವರ ಸಂವಿಧಾನ ಮತ್ತು ದಲಿತ ಹಕ್ಕುಗಳ ಇತ್ತೀಚಿನ ಪ್ರಸ್ತಾಪ, ಸಾಮಾಜಿಕ ನ್ಯಾಯ ರಾಜಕೀಯದಲ್ಲಿ ಹೊಸ ಅಲೆಯನ್ನು ಸ್ವೀಕರಿಸಲು M-Y ಸಮೀಕರಣವನ್ನು ಮೀರಿ RJDಯ ಗಮನ, ನಿತೀಶ್ ಅವರ ನೆಲೆಯನ್ನು ವಿಸ್ತರಿಸುವ ಪ್ರಯತ್ನ ಮತ್ತು ಪ್ರಮುಖ ದಲಿತ ಪಕ್ಷಗಳೊಂದಿಗೆ ಬಿಜೆಪಿಯ ಮೈತ್ರಿಗಳು ಎಚ್ಚರಿಕೆಯಿಂದ ರೂಪಿಸುವುದು, ಬಿಹಾರದಲ್ಲಿ ಚುನಾವಣಾ ಚರ್ಚೆಯನ್ನು ದಲಿತ ಕೇಂದ್ರಿತವಾಗಿಸುವ ಸಾಮರ್ಥ್ಯವನ್ನು ಹೊಂದಿವೆ.

ಮಂಗಳೂರು| ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ: ಭಾರೀ ಸಂಖ್ಯೆಯಲ್ಲಿ ಜನರು ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...