HomeUncategorizedಬಿಹಾರ ವಿಧಾನಸಭಾ ಚುನಾವಣೆ: ರಾಜಕೀಯ ಪಕ್ಷಗಳಲ್ಲಿ ಕೇಂದ್ರ ಸ್ಥಾನ ಪಡೆಯುತ್ತಿರುವ ದಲಿತರು

ಬಿಹಾರ ವಿಧಾನಸಭಾ ಚುನಾವಣೆ: ರಾಜಕೀಯ ಪಕ್ಷಗಳಲ್ಲಿ ಕೇಂದ್ರ ಸ್ಥಾನ ಪಡೆಯುತ್ತಿರುವ ದಲಿತರು

- Advertisement -
- Advertisement -

ಪಾಟ್ನಾ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಅಲ್ಲಿನ ರಾಜಕೀಯ ಪಕ್ಷಗಳು ಸಜ್ಜಾಗುತ್ತಿವೆ. ಹಾಗೆಯೇ ಇಲ್ಲಿನ ದಲಿತರು ಮತ್ತು ಯುವಕರು ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಅತ್ಯಂತ ಕೆಳ ಅಂಚಿನಲ್ಲಿರುವ ದಲಿತ ಸಮುದಾಯಗಳನ್ನು ತಲುಪಲು, ರಾಜಕೀಯ ಪಕ್ಷಗಳು ಮೂರು ಸಂಭಾವ್ಯ ಮಾರ್ಗಗಳನ್ನು ಅನುಸರಿಸುತ್ತಿವೆ. ದಲಿತ ಕೇಂದ್ರಿತ ಪಕ್ಷಗಳೊಂದಿಗೆ ಹೊಂದಾಣಿಕೆ, ದಲಿತ ನಾಯಕರನ್ನು ಉನ್ನತ ಸಾಂಸ್ಥಿಕ ಸ್ಥಾನಗಳಿಗೆ ನೇಮಿಸುವುದು ಮತ್ತು ದಲಿತ ಸಮುದಾಯಗಳೊಂದಿಗೆ ಸಾರ್ವಜನಿಕ ಸಭೆಗಳನ್ನು ಏರ್ಪಡಿಸುವುದನ್ನು ಮಾಡುತ್ತಿವೆ.

ಪಶುಪತಿ ಕುಮಾರ್ ಪರಾಸ್ ಅವರು ಎನ್‌ಡಿಎ ತೊರೆದಾಗಿನಿಂದ ಅವರ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (ಆರ್‌ಎಲ್‌ಜೆಪಿ) ಅವರನ್ನು ಸೆಳೆಯಲು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನೇತೃತ್ವದ ಮಹಾಘಟಬಂಧನ್ ಪ್ರಯತ್ನಿಸುತ್ತಿದೆ. ತಾನೇ ಸ್ವತಃ ಪ್ರತಿನಿಧಿಸುವ ದುಸಾಧ್ ಸಮುದಾಯದ ಮೇಲೆ ಪರಾಸ್ ಗಮನಾರ್ಹ ಪ್ರಭಾವ ಬೀರಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ದಲಿತ ನಾಯಕ ಜಗ್ಲಾಲ್ ಚೌಧರಿ ಅವರ 130ನೇ ಜನ್ಮ ದಿನಾಚರಣೆಯನ್ನು ಆಚರಿಸಿದೆ. ಇದರ ನಂತರ ಮಾರ್ಚ್‌ನಲ್ಲಿ ಪಕ್ಷದ ಹೊಸ ರಾಜ್ಯಾಧ್ಯಕ್ಷರಾಗಿ ಯುವ ದಲಿತ ನಾಯಕ ಮತ್ತು ಹಾಲಿ ಶಾಸಕ ರಾಜೇಶ್ ಕುಮಾರ್ ರಾಮ್ ಅವರನ್ನು ನೇಮಿಸಿದೆ. ರಾಮ್ ಅವರು ಜಾತವ್ ಸಮುದಾಯಕ್ಕೆ ಸೇರಿದವರಾಗಿದ್ದು, ಇದು ಬಿಹಾರದ ಎರಡನೇ ಅತಿದೊಡ್ಡ ದಲಿತ ಸಮುದಾಯವಾಗಿದ್ದು, ರಾಜ್ಯದ ಒಟ್ಟು ಜನಸಂಖ್ಯೆಯ ಸುಮಾರು ಶೇಕಡಾ 5ರಷ್ಟಿದೆ.

ಮತ್ತೊಂದೆಡೆ ಎನ್‌ಡಿಎ ತನ್ನ ವ್ಯಾಪ್ತಿಯಲ್ಲಿ ಎರಡು ದಲಿತ ಕೇಂದ್ರಿತ ಪಕ್ಷಗಳನ್ನು ಹೊಂದಿದೆ. ಅವು ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಮತ್ತು ಜಿತನ್ ರಾಮ್ ಮಾಂಝಿ ಅವರ ಪಕ್ಷ ಹಿಂದೂಸ್ತಾನಿ ಅವಾಮ್ ಮೋರ್ಚಾಗಳಾಗಿವೆ. ಎಸ್‌ಸಿಯೊಳಗಿನ ಅತಿದೊಡ್ಡ ಉಪಗುಂಪಾದ ಪಾಸ್ವಾನ್‌ಗಳು/ದುಸಾಧ್‌ಗಳಲ್ಲಿ ಎಲ್‌ಜೆಪಿ ಬಲವಾದ ಹಿಡಿತ ಹೊಂದಿದೆ ಮತ್ತು ಬಿಹಾರದ ಒಟ್ಟು ಜನಸಂಖ್ಯೆಯ ಶೇಕಡಾ 5.3 ರಷ್ಟಿದೆ. ಪಾಸ್ವಾನ್ ಸರಣಿ ಸಾರ್ವಜನಿಕ ಸಭೆಗಳನ್ನು ನಡೆಸುವ ಮೂಲಕ ದಲಿತ ಸಮುದಾಯಗಳನ್ನು ತಲುಪುತ್ತಿದ್ದಾರೆ. ಅದೇ ರೀತಿ, ಮಾಂಝಿ ಮುಸಾಹರ್ ಮತದಾರರ ಮೇಲೆ ಬಲವಾದ ಪ್ರಭಾವ ಬೀರಿದ್ದಾರೆ, ಇದು ರಾಜ್ಯದ ಜನಸಂಖ್ಯೆಯ ಶೇಕಡಾ 3 ಕ್ಕಿಂತ ಹೆಚ್ಚು ಇದೆ.

ಈ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಅವರ ಜೆಡಿ(ಯು) ದಲಿತ ಸಮುದಾಯಗಳೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಗಳನ್ನು ತೀವ್ರಗೊಳಿಸಿದೆ. ಗಮನಾರ್ಹವಾಗಿ ದಲಿತ ಮತ ಬ್ಯಾಂಕ್‌ನಲ್ಲಿ ಹಿಡಿತ ಸಾಧಿಸಲು 2007ರಲ್ಲಿ “ಮಹಾದಲಿತರು” ಎಂಬ ಹೊಸ ವರ್ಗವನ್ನು ಸೃಷ್ಟಿಸಿದವರು ಅವರು. ಈ ತಂತ್ರವು ನಂತರದ ಚುನಾವಣೆಗಳಲ್ಲಿ ಅವರಿಗೆ ಪ್ರಯೋಜನವನ್ನು ನೀಡಿದ್ದರೂ, ಇತ್ತೀಚಿನ ಚುನಾವಣೆಗಳಲ್ಲಿ ಅವರಿಗೆ ದಲಿತ ಮತದಾರರ ಬೆಂಬಲ ಕಡಿಮೆಯಾಗಿದೆ. ಉದಾಹರಣೆಗೆ ಪಕ್ಷವು 2015ರಲ್ಲಿ 38 ಎಸ್‌ಸಿ-ಮೀಸಲಾತಿ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಗೆದ್ದಿತ್ತು, ಆದರೆ 2020ರಲ್ಲಿ ಅದು ಕೇವಲ ಎಂಟು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು.

ತನ್ನ ಪ್ರಸ್ತುತ ದಲಿತ ಸಂಪರ್ಕದ ಭಾಗವಾಗಿ ಜೆಡಿಯು ಕಳೆದ ವರ್ಷ ನವೆಂಬರ್-ಡಿಸೆಂಬರ್‌ನಲ್ಲಿ “ಭೀಮ್ ಸಂಸದ್” ಅನ್ನು ಆಯೋಜಿಸಿತ್ತು. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಮುನ್ನಾದಿನದಂದು ಏಪ್ರಿಲ್ 13ರಂದು ನಿತೀಶ್ ಕುಮಾರ್ ಪಾಟ್ನಾದಲ್ಲಿ “ಭೀಮ್ ಸಂವಾದ” ವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಪಕ್ಷದ ನಾಯಕರು ಪರಿಶಿಷ್ಟ ಜಾತಿಗಳಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಒತ್ತಾಯಿಸಿದರು. ಅವರು “ಅಂಬೇಡ್ಕರ್ ಸಮಗ್ರ ಯೋಜನೆ”ಯನ್ನು ಘೋಷಿಸಿದರು, ಇದರ ಮೂಲಕ ಮುಂದಿನ 100 ದಿನಗಳಲ್ಲಿ 40 ಲಕ್ಷ ದಲಿತ ಕುಟುಂಬಗಳನ್ನು ತಲುಪಿ, ಸುಮಾರು ಒಂದು ಡಜನ್ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶ ಹೊಂದಿದೆ.

ಬಿಹಾರದಲ್ಲಿ ದಲಿತರಿಗಾಗಿ ಕೆಲವು ಗಮನಾರ್ಹ ಸರ್ಕಾರಿ ಯೋಜನೆಗಳಲ್ಲಿ ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆ ಮತ್ತು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಕ್ರಮವಾಗಿ 50,000 ರೂ. ಮತ್ತು 1 ಲಕ್ಷ ರೂ.ಗಳ ಆರ್ಥಿಕ ನೆರವು; ಬಿಹಾರ ಮಹಾದಲಿತ ವಿಕಾಸ್ ಮಿಷನ್ (ಬಿಎಂವಿಎಂ) ಮತ್ತು ಸಮುದಾಯದ ನಡುವೆ ಕೊಂಡಿಯಾಗಿ ಕೆಲಸ ಮಾಡುವ ವಿಕಾಸ್ ಮಿತ್ರರ ನೇಮಕಾತಿ; ವ್ಯಾಪಾರ ಪ್ರಾರಂಭಿಸಲು ರೂ. 10 ಲಕ್ಷ (ಅನುದಾನವಾಗಿ ಹೆಚ್ಚುವರಿ 50 ಪ್ರತಿಶತ ಸೇರಿದಂತೆ); 91 ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಕಲಿಯುತ್ತಿರುವ ಪ್ರತಿ ದಲಿತ ವಿದ್ಯಾರ್ಥಿಗೆ ವಿದ್ಯಾರ್ಥಿವೇತನಗಳು ಸೇರಿವೆ. ಕಾಗದದ ಮೇಲೆ ಈ ಯೋಜನೆಗಳು ಸಾಕಷ್ಟು ಆಕರ್ಷಕವಾಗಿವೆ ಮತ್ತು ದಲಿತ ಸಮುದಾಯಗಳ ಸದಸ್ಯರೊಂದಿಗೆ ಪ್ರತಿಧ್ವನಿಸಬಹುದು.

ದಲಿತ ಸಮುದಾಯಗಳ ನಾಯಕರನ್ನು ಸೇರಿಸಿಕೊಳ್ಳುವುದರಿಂದ ಪಕ್ಷಗಳು ಆಯಾ ಸಮುದಾಯಗಳ ಮೇಲಿನ ಪ್ರಭಾವದಿಂದಾಗಿ ತಮ್ಮ ಮತ ಪಾಲನ್ನು ಪಡೆಯಲು ಸಹಾಯ ಮಾಡಬಹುದು. ಆದರೆ ಅದು ಅವರಿಗೆ ಸಕಾರಾತ್ಮಕ ಪರಿಣಾಮ ಬಿರುತ್ತೆ ಎಂದು ಖಾತರಿಪಡಿಸಲು ಸಾಧ್ಯವಿಲ್ಲ. ಏಕೆಂದರೆ ದಲಿತರಿಗೆ ನಾಯಕನ ಉಪಜಾತಿಯು ಹಲವು ಮುಖ್ಯವಾದ ವಿಷಯಗಳಲ್ಲಿ ಒಂದಾಗಿದೆ. ಅಂತಿಮವಾಗಿ ಚುನಾವಣೆಗಳನ್ನು ಗೆಲ್ಲಲು ರಾಜಕೀಯ ಪಕ್ಷಗಳಿಗೆ ತಮ್ಮ ಖಾತರಿಪಡಿಸಿದ ಕ್ಷೇತ್ರಗಳನ್ನು ಮೀರಿ ನಿರ್ಣಾಯಕ ಮತಗಳು ಬೇಕಾಗುತ್ತವೆ. ಹೀಗಾಗಿ, ವಿವಿಧ ದಲಿತ ಸಮುದಾಯಗಳಿಂದ ಹೆಚ್ಚಿದ ಬೆಂಬಲವು ಅವರ ಚುನಾವಣಾ ನಿರೀಕ್ಷೆಯನ್ನು ಬೆಳಗಿಸುವ ಸಾಧ್ಯತೆಯಿದೆ.

ರಾಹುಲ್ ಗಾಂಧಿಯವರ ಸಂವಿಧಾನ ಮತ್ತು ದಲಿತ ಹಕ್ಕುಗಳ ಇತ್ತೀಚಿನ ಪ್ರಸ್ತಾಪ, ಸಾಮಾಜಿಕ ನ್ಯಾಯ ರಾಜಕೀಯದಲ್ಲಿ ಹೊಸ ಅಲೆಯನ್ನು ಸ್ವೀಕರಿಸಲು M-Y ಸಮೀಕರಣವನ್ನು ಮೀರಿ RJDಯ ಗಮನ, ನಿತೀಶ್ ಅವರ ನೆಲೆಯನ್ನು ವಿಸ್ತರಿಸುವ ಪ್ರಯತ್ನ ಮತ್ತು ಪ್ರಮುಖ ದಲಿತ ಪಕ್ಷಗಳೊಂದಿಗೆ ಬಿಜೆಪಿಯ ಮೈತ್ರಿಗಳು ಎಚ್ಚರಿಕೆಯಿಂದ ರೂಪಿಸುವುದು, ಬಿಹಾರದಲ್ಲಿ ಚುನಾವಣಾ ಚರ್ಚೆಯನ್ನು ದಲಿತ ಕೇಂದ್ರಿತವಾಗಿಸುವ ಸಾಮರ್ಥ್ಯವನ್ನು ಹೊಂದಿವೆ.

ಮಂಗಳೂರು| ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ: ಭಾರೀ ಸಂಖ್ಯೆಯಲ್ಲಿ ಜನರು ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...