HomeUncategorizedಬಿಹಾರ ವಿಧಾನಸಭಾ ಚುನಾವಣೆ: ರಾಜಕೀಯ ಪಕ್ಷಗಳಲ್ಲಿ ಕೇಂದ್ರ ಸ್ಥಾನ ಪಡೆಯುತ್ತಿರುವ ದಲಿತರು

ಬಿಹಾರ ವಿಧಾನಸಭಾ ಚುನಾವಣೆ: ರಾಜಕೀಯ ಪಕ್ಷಗಳಲ್ಲಿ ಕೇಂದ್ರ ಸ್ಥಾನ ಪಡೆಯುತ್ತಿರುವ ದಲಿತರು

- Advertisement -
- Advertisement -

ಪಾಟ್ನಾ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಅಲ್ಲಿನ ರಾಜಕೀಯ ಪಕ್ಷಗಳು ಸಜ್ಜಾಗುತ್ತಿವೆ. ಹಾಗೆಯೇ ಇಲ್ಲಿನ ದಲಿತರು ಮತ್ತು ಯುವಕರು ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಅತ್ಯಂತ ಕೆಳ ಅಂಚಿನಲ್ಲಿರುವ ದಲಿತ ಸಮುದಾಯಗಳನ್ನು ತಲುಪಲು, ರಾಜಕೀಯ ಪಕ್ಷಗಳು ಮೂರು ಸಂಭಾವ್ಯ ಮಾರ್ಗಗಳನ್ನು ಅನುಸರಿಸುತ್ತಿವೆ. ದಲಿತ ಕೇಂದ್ರಿತ ಪಕ್ಷಗಳೊಂದಿಗೆ ಹೊಂದಾಣಿಕೆ, ದಲಿತ ನಾಯಕರನ್ನು ಉನ್ನತ ಸಾಂಸ್ಥಿಕ ಸ್ಥಾನಗಳಿಗೆ ನೇಮಿಸುವುದು ಮತ್ತು ದಲಿತ ಸಮುದಾಯಗಳೊಂದಿಗೆ ಸಾರ್ವಜನಿಕ ಸಭೆಗಳನ್ನು ಏರ್ಪಡಿಸುವುದನ್ನು ಮಾಡುತ್ತಿವೆ.

ಪಶುಪತಿ ಕುಮಾರ್ ಪರಾಸ್ ಅವರು ಎನ್‌ಡಿಎ ತೊರೆದಾಗಿನಿಂದ ಅವರ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (ಆರ್‌ಎಲ್‌ಜೆಪಿ) ಅವರನ್ನು ಸೆಳೆಯಲು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನೇತೃತ್ವದ ಮಹಾಘಟಬಂಧನ್ ಪ್ರಯತ್ನಿಸುತ್ತಿದೆ. ತಾನೇ ಸ್ವತಃ ಪ್ರತಿನಿಧಿಸುವ ದುಸಾಧ್ ಸಮುದಾಯದ ಮೇಲೆ ಪರಾಸ್ ಗಮನಾರ್ಹ ಪ್ರಭಾವ ಬೀರಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ದಲಿತ ನಾಯಕ ಜಗ್ಲಾಲ್ ಚೌಧರಿ ಅವರ 130ನೇ ಜನ್ಮ ದಿನಾಚರಣೆಯನ್ನು ಆಚರಿಸಿದೆ. ಇದರ ನಂತರ ಮಾರ್ಚ್‌ನಲ್ಲಿ ಪಕ್ಷದ ಹೊಸ ರಾಜ್ಯಾಧ್ಯಕ್ಷರಾಗಿ ಯುವ ದಲಿತ ನಾಯಕ ಮತ್ತು ಹಾಲಿ ಶಾಸಕ ರಾಜೇಶ್ ಕುಮಾರ್ ರಾಮ್ ಅವರನ್ನು ನೇಮಿಸಿದೆ. ರಾಮ್ ಅವರು ಜಾತವ್ ಸಮುದಾಯಕ್ಕೆ ಸೇರಿದವರಾಗಿದ್ದು, ಇದು ಬಿಹಾರದ ಎರಡನೇ ಅತಿದೊಡ್ಡ ದಲಿತ ಸಮುದಾಯವಾಗಿದ್ದು, ರಾಜ್ಯದ ಒಟ್ಟು ಜನಸಂಖ್ಯೆಯ ಸುಮಾರು ಶೇಕಡಾ 5ರಷ್ಟಿದೆ.

ಮತ್ತೊಂದೆಡೆ ಎನ್‌ಡಿಎ ತನ್ನ ವ್ಯಾಪ್ತಿಯಲ್ಲಿ ಎರಡು ದಲಿತ ಕೇಂದ್ರಿತ ಪಕ್ಷಗಳನ್ನು ಹೊಂದಿದೆ. ಅವು ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಮತ್ತು ಜಿತನ್ ರಾಮ್ ಮಾಂಝಿ ಅವರ ಪಕ್ಷ ಹಿಂದೂಸ್ತಾನಿ ಅವಾಮ್ ಮೋರ್ಚಾಗಳಾಗಿವೆ. ಎಸ್‌ಸಿಯೊಳಗಿನ ಅತಿದೊಡ್ಡ ಉಪಗುಂಪಾದ ಪಾಸ್ವಾನ್‌ಗಳು/ದುಸಾಧ್‌ಗಳಲ್ಲಿ ಎಲ್‌ಜೆಪಿ ಬಲವಾದ ಹಿಡಿತ ಹೊಂದಿದೆ ಮತ್ತು ಬಿಹಾರದ ಒಟ್ಟು ಜನಸಂಖ್ಯೆಯ ಶೇಕಡಾ 5.3 ರಷ್ಟಿದೆ. ಪಾಸ್ವಾನ್ ಸರಣಿ ಸಾರ್ವಜನಿಕ ಸಭೆಗಳನ್ನು ನಡೆಸುವ ಮೂಲಕ ದಲಿತ ಸಮುದಾಯಗಳನ್ನು ತಲುಪುತ್ತಿದ್ದಾರೆ. ಅದೇ ರೀತಿ, ಮಾಂಝಿ ಮುಸಾಹರ್ ಮತದಾರರ ಮೇಲೆ ಬಲವಾದ ಪ್ರಭಾವ ಬೀರಿದ್ದಾರೆ, ಇದು ರಾಜ್ಯದ ಜನಸಂಖ್ಯೆಯ ಶೇಕಡಾ 3 ಕ್ಕಿಂತ ಹೆಚ್ಚು ಇದೆ.

ಈ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಅವರ ಜೆಡಿ(ಯು) ದಲಿತ ಸಮುದಾಯಗಳೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಗಳನ್ನು ತೀವ್ರಗೊಳಿಸಿದೆ. ಗಮನಾರ್ಹವಾಗಿ ದಲಿತ ಮತ ಬ್ಯಾಂಕ್‌ನಲ್ಲಿ ಹಿಡಿತ ಸಾಧಿಸಲು 2007ರಲ್ಲಿ “ಮಹಾದಲಿತರು” ಎಂಬ ಹೊಸ ವರ್ಗವನ್ನು ಸೃಷ್ಟಿಸಿದವರು ಅವರು. ಈ ತಂತ್ರವು ನಂತರದ ಚುನಾವಣೆಗಳಲ್ಲಿ ಅವರಿಗೆ ಪ್ರಯೋಜನವನ್ನು ನೀಡಿದ್ದರೂ, ಇತ್ತೀಚಿನ ಚುನಾವಣೆಗಳಲ್ಲಿ ಅವರಿಗೆ ದಲಿತ ಮತದಾರರ ಬೆಂಬಲ ಕಡಿಮೆಯಾಗಿದೆ. ಉದಾಹರಣೆಗೆ ಪಕ್ಷವು 2015ರಲ್ಲಿ 38 ಎಸ್‌ಸಿ-ಮೀಸಲಾತಿ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಗೆದ್ದಿತ್ತು, ಆದರೆ 2020ರಲ್ಲಿ ಅದು ಕೇವಲ ಎಂಟು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು.

ತನ್ನ ಪ್ರಸ್ತುತ ದಲಿತ ಸಂಪರ್ಕದ ಭಾಗವಾಗಿ ಜೆಡಿಯು ಕಳೆದ ವರ್ಷ ನವೆಂಬರ್-ಡಿಸೆಂಬರ್‌ನಲ್ಲಿ “ಭೀಮ್ ಸಂಸದ್” ಅನ್ನು ಆಯೋಜಿಸಿತ್ತು. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಮುನ್ನಾದಿನದಂದು ಏಪ್ರಿಲ್ 13ರಂದು ನಿತೀಶ್ ಕುಮಾರ್ ಪಾಟ್ನಾದಲ್ಲಿ “ಭೀಮ್ ಸಂವಾದ” ವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಪಕ್ಷದ ನಾಯಕರು ಪರಿಶಿಷ್ಟ ಜಾತಿಗಳಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಒತ್ತಾಯಿಸಿದರು. ಅವರು “ಅಂಬೇಡ್ಕರ್ ಸಮಗ್ರ ಯೋಜನೆ”ಯನ್ನು ಘೋಷಿಸಿದರು, ಇದರ ಮೂಲಕ ಮುಂದಿನ 100 ದಿನಗಳಲ್ಲಿ 40 ಲಕ್ಷ ದಲಿತ ಕುಟುಂಬಗಳನ್ನು ತಲುಪಿ, ಸುಮಾರು ಒಂದು ಡಜನ್ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶ ಹೊಂದಿದೆ.

ಬಿಹಾರದಲ್ಲಿ ದಲಿತರಿಗಾಗಿ ಕೆಲವು ಗಮನಾರ್ಹ ಸರ್ಕಾರಿ ಯೋಜನೆಗಳಲ್ಲಿ ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆ ಮತ್ತು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಕ್ರಮವಾಗಿ 50,000 ರೂ. ಮತ್ತು 1 ಲಕ್ಷ ರೂ.ಗಳ ಆರ್ಥಿಕ ನೆರವು; ಬಿಹಾರ ಮಹಾದಲಿತ ವಿಕಾಸ್ ಮಿಷನ್ (ಬಿಎಂವಿಎಂ) ಮತ್ತು ಸಮುದಾಯದ ನಡುವೆ ಕೊಂಡಿಯಾಗಿ ಕೆಲಸ ಮಾಡುವ ವಿಕಾಸ್ ಮಿತ್ರರ ನೇಮಕಾತಿ; ವ್ಯಾಪಾರ ಪ್ರಾರಂಭಿಸಲು ರೂ. 10 ಲಕ್ಷ (ಅನುದಾನವಾಗಿ ಹೆಚ್ಚುವರಿ 50 ಪ್ರತಿಶತ ಸೇರಿದಂತೆ); 91 ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಕಲಿಯುತ್ತಿರುವ ಪ್ರತಿ ದಲಿತ ವಿದ್ಯಾರ್ಥಿಗೆ ವಿದ್ಯಾರ್ಥಿವೇತನಗಳು ಸೇರಿವೆ. ಕಾಗದದ ಮೇಲೆ ಈ ಯೋಜನೆಗಳು ಸಾಕಷ್ಟು ಆಕರ್ಷಕವಾಗಿವೆ ಮತ್ತು ದಲಿತ ಸಮುದಾಯಗಳ ಸದಸ್ಯರೊಂದಿಗೆ ಪ್ರತಿಧ್ವನಿಸಬಹುದು.

ದಲಿತ ಸಮುದಾಯಗಳ ನಾಯಕರನ್ನು ಸೇರಿಸಿಕೊಳ್ಳುವುದರಿಂದ ಪಕ್ಷಗಳು ಆಯಾ ಸಮುದಾಯಗಳ ಮೇಲಿನ ಪ್ರಭಾವದಿಂದಾಗಿ ತಮ್ಮ ಮತ ಪಾಲನ್ನು ಪಡೆಯಲು ಸಹಾಯ ಮಾಡಬಹುದು. ಆದರೆ ಅದು ಅವರಿಗೆ ಸಕಾರಾತ್ಮಕ ಪರಿಣಾಮ ಬಿರುತ್ತೆ ಎಂದು ಖಾತರಿಪಡಿಸಲು ಸಾಧ್ಯವಿಲ್ಲ. ಏಕೆಂದರೆ ದಲಿತರಿಗೆ ನಾಯಕನ ಉಪಜಾತಿಯು ಹಲವು ಮುಖ್ಯವಾದ ವಿಷಯಗಳಲ್ಲಿ ಒಂದಾಗಿದೆ. ಅಂತಿಮವಾಗಿ ಚುನಾವಣೆಗಳನ್ನು ಗೆಲ್ಲಲು ರಾಜಕೀಯ ಪಕ್ಷಗಳಿಗೆ ತಮ್ಮ ಖಾತರಿಪಡಿಸಿದ ಕ್ಷೇತ್ರಗಳನ್ನು ಮೀರಿ ನಿರ್ಣಾಯಕ ಮತಗಳು ಬೇಕಾಗುತ್ತವೆ. ಹೀಗಾಗಿ, ವಿವಿಧ ದಲಿತ ಸಮುದಾಯಗಳಿಂದ ಹೆಚ್ಚಿದ ಬೆಂಬಲವು ಅವರ ಚುನಾವಣಾ ನಿರೀಕ್ಷೆಯನ್ನು ಬೆಳಗಿಸುವ ಸಾಧ್ಯತೆಯಿದೆ.

ರಾಹುಲ್ ಗಾಂಧಿಯವರ ಸಂವಿಧಾನ ಮತ್ತು ದಲಿತ ಹಕ್ಕುಗಳ ಇತ್ತೀಚಿನ ಪ್ರಸ್ತಾಪ, ಸಾಮಾಜಿಕ ನ್ಯಾಯ ರಾಜಕೀಯದಲ್ಲಿ ಹೊಸ ಅಲೆಯನ್ನು ಸ್ವೀಕರಿಸಲು M-Y ಸಮೀಕರಣವನ್ನು ಮೀರಿ RJDಯ ಗಮನ, ನಿತೀಶ್ ಅವರ ನೆಲೆಯನ್ನು ವಿಸ್ತರಿಸುವ ಪ್ರಯತ್ನ ಮತ್ತು ಪ್ರಮುಖ ದಲಿತ ಪಕ್ಷಗಳೊಂದಿಗೆ ಬಿಜೆಪಿಯ ಮೈತ್ರಿಗಳು ಎಚ್ಚರಿಕೆಯಿಂದ ರೂಪಿಸುವುದು, ಬಿಹಾರದಲ್ಲಿ ಚುನಾವಣಾ ಚರ್ಚೆಯನ್ನು ದಲಿತ ಕೇಂದ್ರಿತವಾಗಿಸುವ ಸಾಮರ್ಥ್ಯವನ್ನು ಹೊಂದಿವೆ.

ಮಂಗಳೂರು| ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ: ಭಾರೀ ಸಂಖ್ಯೆಯಲ್ಲಿ ಜನರು ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...