Homeಕರ್ನಾಟಕಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೈಸೂರು: ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನವೆಂಬರ್ 3ರಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತನೀಡಲು ಕೋರಲಾಗುವುದು ಎಂದರು. 

ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿವೆ. ಬಿಹಾರದಲ್ಲಿ ಎನ್.ಡಿ. ಎ ಮೈತ್ರಿಕೂಟವೂ ರಾಜ್ಯದ ಗ್ಯಾರಂಟಿ ಯೋಜನೆಗಳ ಭರವಸೆಗಳ ಮಾದರಿಯನ್ನು ಅನುಸರಿಸಿದೆ. ಕರ್ನಾಟಕದಲ್ಲಿ 1.24 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಗೃಹಲಕ್ಷ್ಮಿ ಗ್ಯಾರಂಟಿ ನೀಡಲಾಗುತ್ತಿದೆ. ಇದುವರೆಗೆ ರಾಜ್ಯದಲ್ಲಿ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ.  ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದು, ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಬಿಹಾರದಲ್ಲಿ ಬಡತನ ನಿರ್ಮೂಲನೆಯಾಗಿಲ್ಲ.  ಆದ್ದರಿಂದ ಬಡವರು, ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತ ಚಲಾಯಿಸುವ ಭರವಸೆಯಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳ ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಬಾರಿ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ ಎಂದರು.

ಮೈಸೂರಿನಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ. ನೀರು ಮತ್ತು ಮೇವಿನ ಕೊರತೆ ಹಾಗೂ ಹುಲಿ ಚಿರತೆಗಳ ಹಾವಳಿಯಿಂದ  ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಸಭೆ ಈಗಾಗಲೇ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿಯೂ ಸಭೆ ನಡೆಯಲಿದೆ. ಅಲ್ಲದೇ, ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಇದೇ ವೇಳೆ ಕರ್ನಾಟಕದ ಮುಖ್ಯಮಂತ್ರಿಗಳ ಬದಲಾವಣೆ ಕುರಿತ ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರು ಅಭಿಪ್ರಾಯವೇನೇ ಇದ್ದರೂ, ಹೈಕಮಾಂಡ್ ನ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಈ ಬಗ್ಗೆ ಏನೂ ಹೇಳಿರುವುದಿಲ್ಲ . ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನರ್ ರಚಿಸುವ ಬಗ್ಗೆ  ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....