Homeಮುಖಪುಟಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

ಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

ಒಂದು ಕಾಲದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ್ದ ಮಾಂಜಿ, ತಡವಾಗಿ ರಾಜ್ಯ ಸರ್ಕಾರ ತೆಗೆದುಕೊಂಡ ವಿಭಿನ್ನ ನಿರ್ಧಾರಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಪ್ರತಿ ಪಕ್ಷ ಮಹಾಮೈತ್ರಿ‌ಗೆ ಹಿನ್ನಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಜಿತಾನ್ ರಾಮ್ ಮಾಂಜಿ ನೇತೃತ್ವದ ಹಿಂದೂಸ್ತಾನಿ ಅವಂ ಮೋರ್ಚಾ (ಜಾತ್ಯತೀತ) (ಎಚ್‌ಎಎಂ-ಎಸ್) ಮೈತ್ರಿಯನ್ನು ತೊರೆಯುವುದಾಗಿ ಘೋಷಿಸಿದೆ.

ಎನ್‌ಡಿಎಗೆ ಸೇರ್ಪಡೆಗೊಳ್ಳಲು ಸಜ್ಜಾಗಿರುವ ಪಕ್ಷವು ಈ ಕುರಿತು ಒಂದೆರಡು ದಿನಗಳಲ್ಲಿ ಕರೆ ನೀಡುವುದಾಗಿ ಹೇಳಿದೆ. “ಪಕ್ಷದ ಕಾರ್ಯಕಾರಿ ಸಮಿತಿಯು ಭವಿಷ್ಯದ ಕ್ರಮಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಮಾಂಜಿ ಅವರಿಗೆ ಅಧಿಕಾರ ನೀಡಿದೆ” ಎಂದು HAM-S ವಕ್ತಾರ ಡ್ಯಾನಿಶ್ ರಿಜ್ವಾನ್ ಹೇಳಿದ್ದಾರೆ.

ಪಕ್ಷದ ಮೂಲಗಳು ಎಚ್‌ಎಎಂ-ಎಸ್ ಜೆಡಿಯು ಜೊತೆ ವಿಲೀನಗೊಳ್ಳಬಹುದು ಅಥವಾ ಬಿಹಾರ ವಿಧಾನಸಭಾ ಚುನಾವಣೆಗೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು ಎಂದು ಹೇಳಿದರು. ಜೊತೆಗೆ “ರಾಜಕೀಯವು ಸಂಭವನೀಯತೆಗಳು ಮತ್ತು ಸಾಧ್ಯತೆಗಳಿಂದ ತುಂಬಿದೆ” ಎಂದು ರಿಜ್ವಾನ್ ಹೇಳಿದ್ದಾರೆ.

ಒಂದು ಕಾಲದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ್ದ ಮಾಂಜಿ, ತಡವಾಗಿ ರಾಜ್ಯ ಸರ್ಕಾರ ತೆಗೆದುಕೊಂಡ ವಿಭಿನ್ನ ನಿರ್ಧಾರಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

ಪಕ್ಷವು ಮಹಾಮೈತ್ರಿಯ ಭಾಗವಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿತ್ತು ಮತ್ತು ಹೀನಾಯವಾಗಿ ಸೋತಿತು. ಹಾಗಾಗಿ ಮಾಂಜಿ, ಕಳೆದ ಎರಡು ತಿಂಗಳುಗಳಲ್ಲಿ ಒವೈಸಿ ನೇತೃತ್ವದ-ಎಐಐಎಂಐಎಂ ಸೇರಿದಂತೆ ವಿವಿಧ ಪಕ್ಷಗಳೊಂದಿಗೆ ಮೈತ್ರಿಯ ಆಯ್ಕೆಗಳನ್ನು ಹುಡುಕುತ್ತಿದ್ದಾರೆ.

ಇದಕ್ಕೂ ಮೊದಲು, 2015ರ ಆರಂಭದಲ್ಲಿ ಸಿಎಂ ಹುದ್ದೆಯನ್ನು ತ್ಯಜಿಸಿದ ನಂತರ ಮಾಂಜಿ, ನಿತೀಶ್ ಕುಮಾರ್ ಅವರೊಂದಿಗೆ ಹೊರಗುಳಿದಿದ್ದರು. 2015ರ ವಿಧಾನಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ನಂತರ ಅವರು ಎನ್‌ಡಿಎಯಿಂದ ಹೊರನಡೆದಿದ್ದರು.

ಬಿಹಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಎಚ್‌ಎಎಂ-ಎಸ್ ತಲಾ ಒಬ್ಬ ಸದಸ್ಯರನ್ನು ಹೊಂದಿದೆ.

ಪಕ್ಷದ ಮೂಲಗಳು ಎಚ್‌ಎಎಂ-ಎಸ್ ಎನ್‌ಡಿಎಯ ಭಾಗವಾಗುವುದು ಔಪಚಾರಿಕವಾಗಿದೆ ಎಂದು ಹೇಳಿದರು. “ಪಕ್ಷವು, ಸ್ಥಾನಗಳ ಬಗ್ಗೆ ಯಾವುದೇ ಪೂರ್ವ ಷರತ್ತುಗಳನ್ನು ವಿಧಿಸಿಲ್ಲ” ಎಂದು ಪಕ್ಷದ ಹಿರಿಯ ಮುಖಂಡರು ಹೇಳಿದ್ದಾರೆ.

“ಯಾರಾದರೂ ಎನ್‌ಡಿಎ ನಾಯಕತ್ವ ಮತ್ತು ನೀತಿಯಲ್ಲಿ ನಂಬಿಕೆ ತೋರಿಸಿದರೆ, ಇತರ ಪಕ್ಷಗಳು ಸೇರುವುದರಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ” ಎಂದು ಬಿಜೆಪಿ ವಕ್ತಾರ ನಿಖಿಲ್ ಆನಂದ್ ಹೇಳಿದ್ದಾರೆ.


ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...