Homeಮುಖಪುಟಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

ಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

ಒಂದು ಕಾಲದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ್ದ ಮಾಂಜಿ, ತಡವಾಗಿ ರಾಜ್ಯ ಸರ್ಕಾರ ತೆಗೆದುಕೊಂಡ ವಿಭಿನ್ನ ನಿರ್ಧಾರಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಪ್ರತಿ ಪಕ್ಷ ಮಹಾಮೈತ್ರಿ‌ಗೆ ಹಿನ್ನಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಜಿತಾನ್ ರಾಮ್ ಮಾಂಜಿ ನೇತೃತ್ವದ ಹಿಂದೂಸ್ತಾನಿ ಅವಂ ಮೋರ್ಚಾ (ಜಾತ್ಯತೀತ) (ಎಚ್‌ಎಎಂ-ಎಸ್) ಮೈತ್ರಿಯನ್ನು ತೊರೆಯುವುದಾಗಿ ಘೋಷಿಸಿದೆ.

ಎನ್‌ಡಿಎಗೆ ಸೇರ್ಪಡೆಗೊಳ್ಳಲು ಸಜ್ಜಾಗಿರುವ ಪಕ್ಷವು ಈ ಕುರಿತು ಒಂದೆರಡು ದಿನಗಳಲ್ಲಿ ಕರೆ ನೀಡುವುದಾಗಿ ಹೇಳಿದೆ. “ಪಕ್ಷದ ಕಾರ್ಯಕಾರಿ ಸಮಿತಿಯು ಭವಿಷ್ಯದ ಕ್ರಮಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಮಾಂಜಿ ಅವರಿಗೆ ಅಧಿಕಾರ ನೀಡಿದೆ” ಎಂದು HAM-S ವಕ್ತಾರ ಡ್ಯಾನಿಶ್ ರಿಜ್ವಾನ್ ಹೇಳಿದ್ದಾರೆ.

ಪಕ್ಷದ ಮೂಲಗಳು ಎಚ್‌ಎಎಂ-ಎಸ್ ಜೆಡಿಯು ಜೊತೆ ವಿಲೀನಗೊಳ್ಳಬಹುದು ಅಥವಾ ಬಿಹಾರ ವಿಧಾನಸಭಾ ಚುನಾವಣೆಗೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು ಎಂದು ಹೇಳಿದರು. ಜೊತೆಗೆ “ರಾಜಕೀಯವು ಸಂಭವನೀಯತೆಗಳು ಮತ್ತು ಸಾಧ್ಯತೆಗಳಿಂದ ತುಂಬಿದೆ” ಎಂದು ರಿಜ್ವಾನ್ ಹೇಳಿದ್ದಾರೆ.

ಒಂದು ಕಾಲದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ್ದ ಮಾಂಜಿ, ತಡವಾಗಿ ರಾಜ್ಯ ಸರ್ಕಾರ ತೆಗೆದುಕೊಂಡ ವಿಭಿನ್ನ ನಿರ್ಧಾರಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

ಪಕ್ಷವು ಮಹಾಮೈತ್ರಿಯ ಭಾಗವಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿತ್ತು ಮತ್ತು ಹೀನಾಯವಾಗಿ ಸೋತಿತು. ಹಾಗಾಗಿ ಮಾಂಜಿ, ಕಳೆದ ಎರಡು ತಿಂಗಳುಗಳಲ್ಲಿ ಒವೈಸಿ ನೇತೃತ್ವದ-ಎಐಐಎಂಐಎಂ ಸೇರಿದಂತೆ ವಿವಿಧ ಪಕ್ಷಗಳೊಂದಿಗೆ ಮೈತ್ರಿಯ ಆಯ್ಕೆಗಳನ್ನು ಹುಡುಕುತ್ತಿದ್ದಾರೆ.

ಇದಕ್ಕೂ ಮೊದಲು, 2015ರ ಆರಂಭದಲ್ಲಿ ಸಿಎಂ ಹುದ್ದೆಯನ್ನು ತ್ಯಜಿಸಿದ ನಂತರ ಮಾಂಜಿ, ನಿತೀಶ್ ಕುಮಾರ್ ಅವರೊಂದಿಗೆ ಹೊರಗುಳಿದಿದ್ದರು. 2015ರ ವಿಧಾನಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ನಂತರ ಅವರು ಎನ್‌ಡಿಎಯಿಂದ ಹೊರನಡೆದಿದ್ದರು.

ಬಿಹಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಎಚ್‌ಎಎಂ-ಎಸ್ ತಲಾ ಒಬ್ಬ ಸದಸ್ಯರನ್ನು ಹೊಂದಿದೆ.

ಪಕ್ಷದ ಮೂಲಗಳು ಎಚ್‌ಎಎಂ-ಎಸ್ ಎನ್‌ಡಿಎಯ ಭಾಗವಾಗುವುದು ಔಪಚಾರಿಕವಾಗಿದೆ ಎಂದು ಹೇಳಿದರು. “ಪಕ್ಷವು, ಸ್ಥಾನಗಳ ಬಗ್ಗೆ ಯಾವುದೇ ಪೂರ್ವ ಷರತ್ತುಗಳನ್ನು ವಿಧಿಸಿಲ್ಲ” ಎಂದು ಪಕ್ಷದ ಹಿರಿಯ ಮುಖಂಡರು ಹೇಳಿದ್ದಾರೆ.

“ಯಾರಾದರೂ ಎನ್‌ಡಿಎ ನಾಯಕತ್ವ ಮತ್ತು ನೀತಿಯಲ್ಲಿ ನಂಬಿಕೆ ತೋರಿಸಿದರೆ, ಇತರ ಪಕ್ಷಗಳು ಸೇರುವುದರಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ” ಎಂದು ಬಿಜೆಪಿ ವಕ್ತಾರ ನಿಖಿಲ್ ಆನಂದ್ ಹೇಳಿದ್ದಾರೆ.


ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...