Homeಮುಖಪುಟಬಿಹಾರ ವಿಧಾನಸಭಾ ಚುನಾವಣೆ: 128 ಸ್ಥಾನಗಳಲ್ಲಿ ಅಕ್ರಮ ನಡೆದಿದೆ ಎಂದ ಕೇರಳ ಕಾಂಗ್ರೆಸ್

ಬಿಹಾರ ವಿಧಾನಸಭಾ ಚುನಾವಣೆ: 128 ಸ್ಥಾನಗಳಲ್ಲಿ ಅಕ್ರಮ ನಡೆದಿದೆ ಎಂದ ಕೇರಳ ಕಾಂಗ್ರೆಸ್

- Advertisement -
- Advertisement -

ಇತ್ತೀಚೆಗೆ ಮುಕ್ತಾಯಗೊಂಡ 2025 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 128 ಕ್ಷೇತ್ರಗಳಲ್ಲಿ (ಮತ ಅಳಿಸುವಿಕೆ) ರಿಗ್ಗಿಂಗ್ ನಡೆದಿದೆ ಎಂದು ಕೇರಳ ಕಾಂಗ್ರೆಸ್ ಆರೋಪಿಸಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಗೆದ್ದ 202 ಸ್ಥಾನಗಳಲ್ಲಿ, 128 ಕ್ಷೇತ್ರಗಳಲ್ಲಿ ಗೆಲುವು ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದ ಸಮಯದಲ್ಲಿ ನಡೆಸಿದ ಮತದಾರರ ಅಳಿಸುವಿಕೆಯಿಂದ ಉಂಟಾಗಿದೆ ಎಂದು ಪಕ್ಷ ಹೇಳಿಕೊಂಡಿದೆ. 

ಮತದಾರರ ಅಳಿಸುವಿಕೆಯ ಡೇಟಾವನ್ನು ವಿಶ್ಲೇಷಿಸಿದ ನಂತರ ಮತ್ತು ಪ್ರತಿ ಕ್ಷೇತ್ರದ ಗೆಲುವಿನ ಅಂತರದೊಂದಿಗೆ ಹೋಲಿಸಿದ ನಂತರ, ಭಾರತೀಯ ಚುನಾವಣಾ ಆಯೋಗ (ECI) ನಡೆಸಿದ SIR ಡ್ರೈವ್ ಅಡಿಯಲ್ಲಿ ನಿಜವಾದ ಮತದಾರರನ್ನು ನಿರಂಕುಶವಾಗಿ ತೆಗೆದುಹಾಕಲಾಗಿದೆ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.

ಈ ಕುರಿತು ಶನಿವಾರ ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕೇರಳ ಕಾಂಗ್ರೆಸ್ 2025ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ 128 ವಿಧಾನಸಭಾ ಕ್ಷೇತ್ರಗಳಲ್ಲಿ ಮತ-ಅಳಿಸುವಿಕೆ (ರಿಗ್ಗಿಂಗ್) ನಡೆದಿದೆ ಎಂದು ಗಂಭೀರವಾಗಿ ಆರೋಪಿಸಿದೆ.

ಕಾಂಗ್ರೆಸ್ ಈ ಆರೋಪಗಳನ್ನು ಮುಂದಿಟ್ಟಿದ್ದು, “SIR ಬಾಂಗ್ಲಾದೇಶ, ಮಯನ್ಮಾರ್ ಮತ್ತು ನೇಪಾಳದಿಂದ ಬಂದ ಅಕ್ರಮ ವಲಸಿಗರನ್ನು ಗುರುತಿಸಿ ತೆಗೆದುಹಾಕಲು ಮಾಡಿದ್ದ ಕಾನೂನಾಗಿದೆ. ಆದರೆ ECI ಪ್ರಕಟಪಡಿಸಿದ ಇಪ್ಪತ್ತು ಡೇಟಾಸೆಟ್‌ನಲ್ಲಿ ಒಬ್ಬರಿಗೂ ಅಕ್ರಮ ವಲಸಿಗರು ದೊರೆತಿಲ್ಲ,” “ನಿಜಕ್ಕೂ ಏನು ನಡೆದಿದೆ ಎಂದರೆ, SIR ಹೆಸರಿನಲ್ಲಿ ಬಡತನ ಮತ್ತು ದುರ್ಬಲ ಮತದಾರರನ್ನು – ಎನ್‌ಡಿಎ ಅಡಿಯಲ್ಲಿ ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದವರನ್ನು – ತೆಗೆದುಹಾಕುವ ಸಂಪೂರ್ಣ ಶುದ್ಧೀಕರಣ. ಅವರನ್ನು ಪಟ್ಟಿಯಿಂದ ತೆಗೆದುಹಾಕಿದ ನಂತರ, ಉಳಿದವರನ್ನು ಮತದಾನ ಮಾಡದಂತೆ ತಡೆದು, ಆ ನಂತರ ಸಂಪೂರ್ಣವಾಗಿ ಚುನಾವಣೆಯನ್ನೇ ನಿರ್ವಹಿಸಿದೆ ಎಂದು ಹೇಳಿದೆ. 

ಪ್ರಧಾನಿ ನರೇಂದ್ರ ಮೋದಿ ಅವರ “ಲೋಕತಂತ್ರದ ತಾಯಿ” ಎಂಬ ಪುನರಾವರ್ತಿತ ಹೇಳಿಕೆಯನ್ನು ಟೀಕಿಸಿರುವ ಕೇರಳ ಕಾಂಗ್ರೆಸ್, ಈ ಯೋಜನೆಯನ್ನು ಈಗಲೇ ಅರ್ಥಮಾಡಿಕೊಳ್ಳಬೇಕು, ಇಲ್ಲದಿದ್ದರೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಪ್ರತಿ ನಾಗರಿಕನನ್ನು ಮತದಾರ ಪಟ್ಟಿಯಿಂದ ತೆಗೆದುಹಾಕುತ್ತದೆ ಎಂದು ಹೇಳಿದೆ.

ಜೊತೆಗೆ ಈ ‘ಲೋಕತಂತ್ರದ ತಾಯಿ’ ಯೋಜನೆಯನ್ನು ಈಗಲೇ ಅರ್ಥ ಮಾಡಿಕೊಳ್ಳದಿದ್ದರೆ, ಬಿಜೆಪಿ ನಮ್ಮಲ್ಲಿ ಪ್ರತಿಯೊಬ್ಬರನ್ನು ಶಾಂತವಾಗಿ ಪಟ್ಟಿಯಿಂದ ತೆಗೆದುಹಾಕಿ, ನಮ್ಮ ಸ್ಥಳಕ್ಕೆ ಡಮ್ಮಿ ಬ್ರೆಜಿಲಿಯನ್ನರನ್ನು ಸೇರಿಸಿ, ಅವರ ಹೆಸರಿನಲ್ಲಿ ಮತಗಳನ್ನು ಹಾಕಿ, ಶಾಶ್ವತವಾಗಿ ಚುನಾವಣೆಗಳನ್ನು ಗೆಲ್ಲುತ್ತಾ ಇರುತ್ತದೆ,” ಎಂದು ಪಕ್ಷ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...