Homeಮುಖಪುಟಬಿಹಾರ ವಿಧಾನಸಭೆ ಚುನಾವಣೆ : 143 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಆರ್‌ಜೆಡಿ

ಬಿಹಾರ ವಿಧಾನಸಭೆ ಚುನಾವಣೆ : 143 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಆರ್‌ಜೆಡಿ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ 143 ಅಭ್ಯರ್ಥಿಗಳ ಪಟ್ಟಿಯನ್ನು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸೋಮವಾರ (ಅ.20) ಪ್ರಕಟಿಸಿದ್ದು, ಎರಡನೇ ಮತ್ತು ಅಂತಿಮ ಹಂತದ ನಾಮಪತ್ರ ಸಲ್ಲಿಕೆಯ ಅವಧಿ ಮುಗಿಯುವ ಕೆಲವೇ ಗಂಟೆಗಳ ಮೊದಲು ಈ ಪಟ್ಟಿಯನ್ನು ಪ್ರಕಟಿಸಲಾಗಿದೆ. ನವೆಂಬರ್ 6 ಮತ್ತು 11 ರಂದು ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆಯಾಗಿ ಫಲಿತಾಂಶ ಘೋಷಣೆಯಾಗಲಿದೆ.

ವೈಶಾಲಿ ಜಿಲ್ಲೆಯ ರಾಘೋಪುರ ವಿಧಾನಸಭಾ ಕ್ಷೇತ್ರದಿಂದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಕಣಕ್ಕಿಳಿದಿದ್ದಾರೆ. ರಾಘೋಪುರ ಯಾದವ್ ಕುಟುಂಬಕ್ಕೆ ಅಪಾರ ರಾಜಕೀಯ ಮತ್ತು ಭಾವನಾತ್ಮಕ ಸಂಬಂಧವನ್ನು ಹೊಂದಿರುವ ಕ್ಷೇತ್ರವಾಗಿದೆ. ಈ ಕ್ಷೇತ್ರವು ಆರ್‌ಜೆಡಿಯ ಭದ್ರಕೋಟೆಯಾಗಿದ್ದು, ಈ ಹಿಂದೆ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪತ್ನಿ, ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಪ್ರತಿನಿಧಿಸಿದ್ದರು. ತೇಜಸ್ವಿ ಯಾದವ್ 2015ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಸತತ ಮೂರನೇ ಅವಧಿಗೆ ಸ್ಪರ್ಧಿಸುತ್ತಿದ್ದಾರೆ.

143 ಅಭ್ಯರ್ಥಿಗಳಲ್ಲಿ, ಐವರು ಇಂಡಿಯಾ ಒಕ್ಕೂಟದ ಇತರ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಲಿದ್ದಾರೆ. ಆರ್‌ಜೆಡಿ ಪ್ರಸ್ತುತ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ರಾಜೇಶ್ ಕುಮಾರ್ ರಾಮ್ ಪ್ರತಿನಿಧಿಸುವ ಕುಟುಂಬ ಕ್ಷೇತ್ರದಿಂದಲೂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದೆ ಎಂಬ ಚರ್ಚೆಗೆ ಮುನ್ನೆಲೆಗೆ ಬಂದಿತ್ತು. ಇಂಡಿಯಾ ಒಕ್ಕೂಟದ ಎರಡು ಪ್ರಮುಖ ಪಕ್ಷಗಳ ನಡುವೆ ತಿಕ್ಕಾಟಕ್ಕೆ ಕಾರಣವಾಗುತ್ತಿದ್ದ ಆ ವಂದಂತಿಗೆ ಆರ್‌ಜೆಡಿಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಇತಿಶ್ರಿ ಹಾಡಿದೆ.

ಆರ್‌ಜೆಡಿ ವೈಶಾಲಿ, ಲಾಲ್‌ಗಂಜ್ ಮತ್ತು ಕಹಲ್‌ಗಾಂವ್‌ನಲ್ಲಿ ಕಾಂಗ್ರೆಸ್ ವಿರುದ್ಧ ಹಾಗೂ ತಾರಾಪುರ ಮತ್ತು ಗೌರ ಬೋರಂನಲ್ಲಿ ಮಾಜಿ ರಾಜ್ಯ ಸಚಿವ ಮುಖೇಶ್ ಸಾಹ್ನಿ ಅವರ ವಿಕಾಸಶೀಲ ಇನ್ಸಾನ್ ಪಕ್ಷದ ವಿರುದ್ಧ ಸ್ಪರ್ಧಿಸಲಿದೆ ಎಂದು ಹೇಳಲಾಗಿತ್ತು. ಈ ವದಂತಿಗೂ ಪಟ್ಟಿ ಪ್ರಕಟಣೆ ತೆರೆ ಎಳೆದಿದೆ.

ಅಭ್ಯರ್ಥಿಗಳ ಪೈಕಿ ತೇಜಸ್ವಿ ಯಾದವ್ (ರಾಘೋಪುರ್), ಅಲೋಕ್ ಮೆಹ್ತಾ (ಉಜಿಯಾರ್‌ಪುರ್), ಮುಖೇಶ್ ರೌಶನ್ (ಮಹುವಾ) ಮತ್ತು ಅಖ್ತರುಲ್ ಇಸ್ಲಾಂ ಶಾಹಿನ್ (ಸಮಸ್ತಿಪುರ್) ಇವರೆಲ್ಲರೂ ತಮ್ಮ ಹಾಲಿ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ.

ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಆಪ್ತ ಸಹಾಯಕ ಭೋಲಾ ಯಾದವ್, 2015ರಲ್ಲಿ ಬಹದ್ದೂರ್‌ಪುರ ಸ್ಥಾನವನ್ನು ಗೆದ್ದಿದ್ದರು. ಆದರೆ, ಐದು ವರ್ಷಗಳ ನಂತರ ಪಕ್ಷವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿ (ಯು)ಗೆ ವಿರುದ್ದ ಕ್ಷೇತ್ರವನ್ನು ಕಳೆದುಕೊಂಡಿತ್ತು. ಈ ಬಾರಿ ಸಚಿವ ಮದನ್ ಸಾಹ್ನಿಯಿಂದ ಅದನ್ನು ಮರಳಿ ಪಡೆಯಲು ಮುಂದಾಗಿದೆ.

ಕಳೆದ ವರ್ಷ ಲೋಕಸಭಾ ಚುನಾವಣೆಯಲ್ಲಿ ಸಿವಾನ್‌ನಿಂದ ಸ್ಪರ್ಧಿಸಿ ಜೆಡಿಯು ವಿರುದ್ದ ಸೋತಿದ್ದ ಮಾಜಿ ಸ್ಪೀಕರ್ ಅವಧ್ ಬಿಹಾರಿ ಚೌಧರಿ ಅವರಿಗೆ ಅದೇ ಕ್ಷೇತ್ರವನ್ನು ಮತ್ತೆ ನೀಡಲಾಗಿದೆ.

ಹಿಂದೂ ಧರ್ಮಗ್ರಂಥಗಳ ಕುರಿತು ವಿವಾದಾತ್ಮಕ ದೃಷ್ಟಿಕೋನಗಳಿಂದ ಸುದ್ದಿಯಲ್ಲಿರುವ ಮಾಜಿ ಶಿಕ್ಷಣ ಸಚಿವ ಚಂದ್ರಶೇಖರ್ ಅವರನ್ನು ಅವರ ಹಾಲಿ ಕ್ಷೇತ್ರ ಮಾಧೇಪುರದಿಂದ ಕಣಕ್ಕಿಳಿಸಲಾಗಿದೆ.

ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ‘ಎಂವೈ’ (ಮುಸ್ಲಿಂ-ಯಾದವ್) ಬೆಂಬಲ ನೆಲೆಯನ್ನು ಗಮನದಲ್ಲಿರಿಸಿಕೊಂಡಿರುವಂತೆ ತೋರುತ್ತದೆ. ಆದರೂ, ಇತರ ಹಿಂದುಳಿದ ಜಾತಿಗಳು ಮತ್ತು ಮೇಲ್ಜಾತಿಗಳಿಗೂ ಟಿಕೆಟ್ ನೀಡಲಾಗಿದೆ.

ಆರ್‌ಜೆಡಿ ಈ ಬಾರಿ 21 ಮಹಿಳೆಯರನ್ನು ಕಣಕ್ಕಿಳಿಸಿದೆ. ಈ ಮೂಲಕ ಪ್ರಮುಖ ಪ್ರತಿಸ್ಪರ್ಧಿಗಳಾದ ಜೆಡಿ(ಯು) ಮತ್ತು ಬಿಜೆಪಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಿದೆ.

ಆಡಳಿತಾರೂಢ ಎನ್‌ಡಿಎಯ ಎರಡು ಪ್ರಮುಖ ಪಕ್ಷಗಳಾದ ಜೆಡಿಯು ಮತ್ತು ಬಿಜೆಪಿ ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ.

ಅಧಿಕಾರದಲ್ಲಿದ್ದಾಗ ‘ಜಂಗಲ್ ರಾಜ್‌’ ಜಾರಿಯಾಗಿದೆ ಎಂದು ವಿರೋಧಿಗಳಿಂದ ಆಗಾಗ್ಗೆ ಆರೋಪಕ್ಕೊಳಗಾಗಿದ್ದ ಆರ್‌ಜೆಡಿ, ಇಮೇಜ್ ಬದಲಾವಣೆಗಿಂತ ವಾಸ್ತವ ರಾಜಕೀಯಕ್ಕೆ ಆದ್ಯತೆ ನೀಡಿದೆ.

ಮಾಫಿಯಾ ಡಾನ್‌ನಿಂದ ರಾಜಕಾರಣಿಯಾದ ಬೋಗೋ ಸಿಂಗ್ (ಮಾತಿಹಾನಿ) ಸ್ವತಃ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಮತ್ತೊಂದೆಡೆ ಒಸಾಮಾ ಶಹಾಬ್‌ಗೆ ತಮ್ಮ ದಿವಂಗತ ತಂದೆ ಮೊಹಮ್ಮದ್ ಶಹಾಬುದ್ದೀನ್‌ರ ರಾಜಕೀಯ ಪರಂಪರೆಯನ್ನು ಮುಂದುವರೆಸಲು ಅವಕಾಶ ನೀಡಲಾಗಿದೆ. ಒಸಾಮಾ ರಘುನಾಥ್‌ಪುರದಿಂದ ಚುನಾವಣೆಗೆ ಚೊಚ್ಚಲ ಪ್ರವೇಶ ಮಾಡುತ್ತಿದ್ದಾರೆ. ಇದು ಸಿವಾನ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಈ ಕ್ಷೇತ್ರದಲ್ಲಿ ಶಹಾಬುದ್ದೀನ್ ಶಿಕ್ಷೆಗೆ ಒಳಗಾಗಿ ಅನರ್ಹಗೊಳ್ಳುವವರೆಗೂ ಯಾವುದೇ ಚುನಾವಣೆಯಲ್ಲಿ ಸೋಲದೆ ಗೆದ್ದಿದ್ದರು.

ಮಾಜಿ ಸಂಸದೆ, ರಾಜಕಾರಣಿ ಸೂರಜ್ ಭನ್ ಸಿಂಗ್ ಅವರ ಪತ್ನಿ ವೀಣಾ ದೇವಿ ಮೊಕಾಮಾ ಕ್ಷೇತ್ರದಲ್ಲಿ ತಮ್ಮ ಪತಿಯ ಬದ್ಧ ವೈರಿ ಅನಂತ್ ಸಿಂಗ್ ಅವರನ್ನು ಎದುರಿಸಲಿದ್ದಾರೆ.

ಲಂಡನ್‌ನಿಂದ ಕಾನೂನು ಪದವಿ ಪಡೆದಿರುವ ಚೊಚ್ಚಲ ಸ್ಪರ್ಧಿ ಶಿವಾನಿ ಶುಕ್ಲಾ, ಲಾಲ್‌ಗಂಜ್‌ನಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರವನ್ನು ಉತ್ತರ ಬಿಹಾರದ ಅತ್ಯಂತ ಭಯಂಕರ ಗ್ಯಾಂಗ್‌ಲಾರ್ಡ್‌ಗಳಲ್ಲಿ ಒಬ್ಬರಾದ ಅವರ ತಂದೆ ಮುನ್ನಾ ಶುಕ್ಲಾ ಎರಡು ಬಾರಿ ಮತ್ತು ಅವರ ತಾಯಿ ಅನ್ನು ಶುಕ್ಲಾ ಒಮ್ಮೆ ಗೆದ್ದಿದ್ದರು.

ಮಹಾಘಟಬಂಧನದೊಳಗಿನ ಗೊಂದಲದಿಂದಾಗಿ, ಆರ್‌ಜೆಡಿ ಇಲ್ಲಿಯವರೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರಲಿಲ್ಲ. ಆದಾಗ್ಯೂ, ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡುವ ಮೊದಲೇ, ಪಕ್ಷವು ತನ್ನ ಎಲ್ಲಾ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ಹಂಚಿಕೆ ಮಾಡಿತ್ತು.

ಕಾಂಗ್ರೆಸ್ ಸೋಮವಾರ ಇನ್ನೂ ಏಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಕ್ಷವು ಘೋಷಿಸಿದ ಒಟ್ಟು ಅಭ್ಯರ್ಥಿಗಳ ಸಂಖ್ಯೆ 61ಕ್ಕೆ ತಲುಪಿದೆ.

ಮಹಾಘಟಬಂಧನ್ ಮೈತ್ರಿಕೂಟದ ಎರಡು ಪ್ರಮುಖ ಪಕ್ಷಗಳಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಔಪಚಾರಿಕ ಸೀಟು ಹಂಚಿಕೆ ಒಪ್ಪಂದವು ಒಮ್ಮತಕ್ಕೆ ಬರಲು ಸಾಧ್ಯವಾಗದಿದ್ದರೂ, ಮಧ್ಯರಾತ್ರಿಯ ನಂತರ ಕಾಂಗ್ರೆಸ್ ಪಟ್ಟಿಯನ್ನು ಪ್ರಕಟಿಸಿದೆ.

ಇದಕ್ಕೂ ಮೊದಲು, ಕಾಂಗ್ರೆಸ್ ವಕ್ತಾರ ಪವನ್ ಖೇರಾ ಇಂಡಿಯಾ ಒಕ್ಕೂಟದ ಪಕ್ಷಗಳ ನಡುವಿನ ಸೀಟು ಹಂಚಿಕೆ ಈಗಾಗಲೇ ಅಂತಿಮಗೊಳಿಸಲಾಗಿದೆ ಎಂದು ಹೇಳಿದ್ದರು. “ಎಲ್ಲವನ್ನೂ ಅಂತಿಮಗೊಳಿಸಲಾಗಿದೆ, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ, ಅದನ್ನು ಸೂಕ್ತ ಸಮಯದಲ್ಲಿ ಮಾಡಲಾಗುವುದು” ಎಂದಿದ್ದರು.

ಮಹಾರಾಷ್ಟ್ರದ ಮತದಾರರ ಪಟ್ಟಿಗೆ ಚುನಾವಣಾ ಆಯೋಗ 96 ಲಕ್ಷ ನಕಲಿ ಮತದಾರರನ್ನು ಸೇರಿಸಿದೆ : ರಾಜ್ ಠಾಕ್ರೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...