Homeಮುಖಪುಟಬಿಹಾರ ವಿಧಾನಸಭೆ ಚುನಾವಣೆ : 143 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಆರ್‌ಜೆಡಿ

ಬಿಹಾರ ವಿಧಾನಸಭೆ ಚುನಾವಣೆ : 143 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಆರ್‌ಜೆಡಿ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ 143 ಅಭ್ಯರ್ಥಿಗಳ ಪಟ್ಟಿಯನ್ನು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸೋಮವಾರ (ಅ.20) ಪ್ರಕಟಿಸಿದ್ದು, ಎರಡನೇ ಮತ್ತು ಅಂತಿಮ ಹಂತದ ನಾಮಪತ್ರ ಸಲ್ಲಿಕೆಯ ಅವಧಿ ಮುಗಿಯುವ ಕೆಲವೇ ಗಂಟೆಗಳ ಮೊದಲು ಈ ಪಟ್ಟಿಯನ್ನು ಪ್ರಕಟಿಸಲಾಗಿದೆ. ನವೆಂಬರ್ 6 ಮತ್ತು 11 ರಂದು ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆಯಾಗಿ ಫಲಿತಾಂಶ ಘೋಷಣೆಯಾಗಲಿದೆ.

ವೈಶಾಲಿ ಜಿಲ್ಲೆಯ ರಾಘೋಪುರ ವಿಧಾನಸಭಾ ಕ್ಷೇತ್ರದಿಂದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಕಣಕ್ಕಿಳಿದಿದ್ದಾರೆ. ರಾಘೋಪುರ ಯಾದವ್ ಕುಟುಂಬಕ್ಕೆ ಅಪಾರ ರಾಜಕೀಯ ಮತ್ತು ಭಾವನಾತ್ಮಕ ಸಂಬಂಧವನ್ನು ಹೊಂದಿರುವ ಕ್ಷೇತ್ರವಾಗಿದೆ. ಈ ಕ್ಷೇತ್ರವು ಆರ್‌ಜೆಡಿಯ ಭದ್ರಕೋಟೆಯಾಗಿದ್ದು, ಈ ಹಿಂದೆ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪತ್ನಿ, ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಪ್ರತಿನಿಧಿಸಿದ್ದರು. ತೇಜಸ್ವಿ ಯಾದವ್ 2015ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಸತತ ಮೂರನೇ ಅವಧಿಗೆ ಸ್ಪರ್ಧಿಸುತ್ತಿದ್ದಾರೆ.

143 ಅಭ್ಯರ್ಥಿಗಳಲ್ಲಿ, ಐವರು ಇಂಡಿಯಾ ಒಕ್ಕೂಟದ ಇತರ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಲಿದ್ದಾರೆ. ಆರ್‌ಜೆಡಿ ಪ್ರಸ್ತುತ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ರಾಜೇಶ್ ಕುಮಾರ್ ರಾಮ್ ಪ್ರತಿನಿಧಿಸುವ ಕುಟುಂಬ ಕ್ಷೇತ್ರದಿಂದಲೂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದೆ ಎಂಬ ಚರ್ಚೆಗೆ ಮುನ್ನೆಲೆಗೆ ಬಂದಿತ್ತು. ಇಂಡಿಯಾ ಒಕ್ಕೂಟದ ಎರಡು ಪ್ರಮುಖ ಪಕ್ಷಗಳ ನಡುವೆ ತಿಕ್ಕಾಟಕ್ಕೆ ಕಾರಣವಾಗುತ್ತಿದ್ದ ಆ ವಂದಂತಿಗೆ ಆರ್‌ಜೆಡಿಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಇತಿಶ್ರಿ ಹಾಡಿದೆ.

ಆರ್‌ಜೆಡಿ ವೈಶಾಲಿ, ಲಾಲ್‌ಗಂಜ್ ಮತ್ತು ಕಹಲ್‌ಗಾಂವ್‌ನಲ್ಲಿ ಕಾಂಗ್ರೆಸ್ ವಿರುದ್ಧ ಹಾಗೂ ತಾರಾಪುರ ಮತ್ತು ಗೌರ ಬೋರಂನಲ್ಲಿ ಮಾಜಿ ರಾಜ್ಯ ಸಚಿವ ಮುಖೇಶ್ ಸಾಹ್ನಿ ಅವರ ವಿಕಾಸಶೀಲ ಇನ್ಸಾನ್ ಪಕ್ಷದ ವಿರುದ್ಧ ಸ್ಪರ್ಧಿಸಲಿದೆ ಎಂದು ಹೇಳಲಾಗಿತ್ತು. ಈ ವದಂತಿಗೂ ಪಟ್ಟಿ ಪ್ರಕಟಣೆ ತೆರೆ ಎಳೆದಿದೆ.

ಅಭ್ಯರ್ಥಿಗಳ ಪೈಕಿ ತೇಜಸ್ವಿ ಯಾದವ್ (ರಾಘೋಪುರ್), ಅಲೋಕ್ ಮೆಹ್ತಾ (ಉಜಿಯಾರ್‌ಪುರ್), ಮುಖೇಶ್ ರೌಶನ್ (ಮಹುವಾ) ಮತ್ತು ಅಖ್ತರುಲ್ ಇಸ್ಲಾಂ ಶಾಹಿನ್ (ಸಮಸ್ತಿಪುರ್) ಇವರೆಲ್ಲರೂ ತಮ್ಮ ಹಾಲಿ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ.

ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಆಪ್ತ ಸಹಾಯಕ ಭೋಲಾ ಯಾದವ್, 2015ರಲ್ಲಿ ಬಹದ್ದೂರ್‌ಪುರ ಸ್ಥಾನವನ್ನು ಗೆದ್ದಿದ್ದರು. ಆದರೆ, ಐದು ವರ್ಷಗಳ ನಂತರ ಪಕ್ಷವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿ (ಯು)ಗೆ ವಿರುದ್ದ ಕ್ಷೇತ್ರವನ್ನು ಕಳೆದುಕೊಂಡಿತ್ತು. ಈ ಬಾರಿ ಸಚಿವ ಮದನ್ ಸಾಹ್ನಿಯಿಂದ ಅದನ್ನು ಮರಳಿ ಪಡೆಯಲು ಮುಂದಾಗಿದೆ.

ಕಳೆದ ವರ್ಷ ಲೋಕಸಭಾ ಚುನಾವಣೆಯಲ್ಲಿ ಸಿವಾನ್‌ನಿಂದ ಸ್ಪರ್ಧಿಸಿ ಜೆಡಿಯು ವಿರುದ್ದ ಸೋತಿದ್ದ ಮಾಜಿ ಸ್ಪೀಕರ್ ಅವಧ್ ಬಿಹಾರಿ ಚೌಧರಿ ಅವರಿಗೆ ಅದೇ ಕ್ಷೇತ್ರವನ್ನು ಮತ್ತೆ ನೀಡಲಾಗಿದೆ.

ಹಿಂದೂ ಧರ್ಮಗ್ರಂಥಗಳ ಕುರಿತು ವಿವಾದಾತ್ಮಕ ದೃಷ್ಟಿಕೋನಗಳಿಂದ ಸುದ್ದಿಯಲ್ಲಿರುವ ಮಾಜಿ ಶಿಕ್ಷಣ ಸಚಿವ ಚಂದ್ರಶೇಖರ್ ಅವರನ್ನು ಅವರ ಹಾಲಿ ಕ್ಷೇತ್ರ ಮಾಧೇಪುರದಿಂದ ಕಣಕ್ಕಿಳಿಸಲಾಗಿದೆ.

ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ‘ಎಂವೈ’ (ಮುಸ್ಲಿಂ-ಯಾದವ್) ಬೆಂಬಲ ನೆಲೆಯನ್ನು ಗಮನದಲ್ಲಿರಿಸಿಕೊಂಡಿರುವಂತೆ ತೋರುತ್ತದೆ. ಆದರೂ, ಇತರ ಹಿಂದುಳಿದ ಜಾತಿಗಳು ಮತ್ತು ಮೇಲ್ಜಾತಿಗಳಿಗೂ ಟಿಕೆಟ್ ನೀಡಲಾಗಿದೆ.

ಆರ್‌ಜೆಡಿ ಈ ಬಾರಿ 21 ಮಹಿಳೆಯರನ್ನು ಕಣಕ್ಕಿಳಿಸಿದೆ. ಈ ಮೂಲಕ ಪ್ರಮುಖ ಪ್ರತಿಸ್ಪರ್ಧಿಗಳಾದ ಜೆಡಿ(ಯು) ಮತ್ತು ಬಿಜೆಪಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಿದೆ.

ಆಡಳಿತಾರೂಢ ಎನ್‌ಡಿಎಯ ಎರಡು ಪ್ರಮುಖ ಪಕ್ಷಗಳಾದ ಜೆಡಿಯು ಮತ್ತು ಬಿಜೆಪಿ ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ.

ಅಧಿಕಾರದಲ್ಲಿದ್ದಾಗ ‘ಜಂಗಲ್ ರಾಜ್‌’ ಜಾರಿಯಾಗಿದೆ ಎಂದು ವಿರೋಧಿಗಳಿಂದ ಆಗಾಗ್ಗೆ ಆರೋಪಕ್ಕೊಳಗಾಗಿದ್ದ ಆರ್‌ಜೆಡಿ, ಇಮೇಜ್ ಬದಲಾವಣೆಗಿಂತ ವಾಸ್ತವ ರಾಜಕೀಯಕ್ಕೆ ಆದ್ಯತೆ ನೀಡಿದೆ.

ಮಾಫಿಯಾ ಡಾನ್‌ನಿಂದ ರಾಜಕಾರಣಿಯಾದ ಬೋಗೋ ಸಿಂಗ್ (ಮಾತಿಹಾನಿ) ಸ್ವತಃ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಮತ್ತೊಂದೆಡೆ ಒಸಾಮಾ ಶಹಾಬ್‌ಗೆ ತಮ್ಮ ದಿವಂಗತ ತಂದೆ ಮೊಹಮ್ಮದ್ ಶಹಾಬುದ್ದೀನ್‌ರ ರಾಜಕೀಯ ಪರಂಪರೆಯನ್ನು ಮುಂದುವರೆಸಲು ಅವಕಾಶ ನೀಡಲಾಗಿದೆ. ಒಸಾಮಾ ರಘುನಾಥ್‌ಪುರದಿಂದ ಚುನಾವಣೆಗೆ ಚೊಚ್ಚಲ ಪ್ರವೇಶ ಮಾಡುತ್ತಿದ್ದಾರೆ. ಇದು ಸಿವಾನ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಈ ಕ್ಷೇತ್ರದಲ್ಲಿ ಶಹಾಬುದ್ದೀನ್ ಶಿಕ್ಷೆಗೆ ಒಳಗಾಗಿ ಅನರ್ಹಗೊಳ್ಳುವವರೆಗೂ ಯಾವುದೇ ಚುನಾವಣೆಯಲ್ಲಿ ಸೋಲದೆ ಗೆದ್ದಿದ್ದರು.

ಮಾಜಿ ಸಂಸದೆ, ರಾಜಕಾರಣಿ ಸೂರಜ್ ಭನ್ ಸಿಂಗ್ ಅವರ ಪತ್ನಿ ವೀಣಾ ದೇವಿ ಮೊಕಾಮಾ ಕ್ಷೇತ್ರದಲ್ಲಿ ತಮ್ಮ ಪತಿಯ ಬದ್ಧ ವೈರಿ ಅನಂತ್ ಸಿಂಗ್ ಅವರನ್ನು ಎದುರಿಸಲಿದ್ದಾರೆ.

ಲಂಡನ್‌ನಿಂದ ಕಾನೂನು ಪದವಿ ಪಡೆದಿರುವ ಚೊಚ್ಚಲ ಸ್ಪರ್ಧಿ ಶಿವಾನಿ ಶುಕ್ಲಾ, ಲಾಲ್‌ಗಂಜ್‌ನಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರವನ್ನು ಉತ್ತರ ಬಿಹಾರದ ಅತ್ಯಂತ ಭಯಂಕರ ಗ್ಯಾಂಗ್‌ಲಾರ್ಡ್‌ಗಳಲ್ಲಿ ಒಬ್ಬರಾದ ಅವರ ತಂದೆ ಮುನ್ನಾ ಶುಕ್ಲಾ ಎರಡು ಬಾರಿ ಮತ್ತು ಅವರ ತಾಯಿ ಅನ್ನು ಶುಕ್ಲಾ ಒಮ್ಮೆ ಗೆದ್ದಿದ್ದರು.

ಮಹಾಘಟಬಂಧನದೊಳಗಿನ ಗೊಂದಲದಿಂದಾಗಿ, ಆರ್‌ಜೆಡಿ ಇಲ್ಲಿಯವರೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರಲಿಲ್ಲ. ಆದಾಗ್ಯೂ, ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡುವ ಮೊದಲೇ, ಪಕ್ಷವು ತನ್ನ ಎಲ್ಲಾ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ಹಂಚಿಕೆ ಮಾಡಿತ್ತು.

ಕಾಂಗ್ರೆಸ್ ಸೋಮವಾರ ಇನ್ನೂ ಏಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಕ್ಷವು ಘೋಷಿಸಿದ ಒಟ್ಟು ಅಭ್ಯರ್ಥಿಗಳ ಸಂಖ್ಯೆ 61ಕ್ಕೆ ತಲುಪಿದೆ.

ಮಹಾಘಟಬಂಧನ್ ಮೈತ್ರಿಕೂಟದ ಎರಡು ಪ್ರಮುಖ ಪಕ್ಷಗಳಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಔಪಚಾರಿಕ ಸೀಟು ಹಂಚಿಕೆ ಒಪ್ಪಂದವು ಒಮ್ಮತಕ್ಕೆ ಬರಲು ಸಾಧ್ಯವಾಗದಿದ್ದರೂ, ಮಧ್ಯರಾತ್ರಿಯ ನಂತರ ಕಾಂಗ್ರೆಸ್ ಪಟ್ಟಿಯನ್ನು ಪ್ರಕಟಿಸಿದೆ.

ಇದಕ್ಕೂ ಮೊದಲು, ಕಾಂಗ್ರೆಸ್ ವಕ್ತಾರ ಪವನ್ ಖೇರಾ ಇಂಡಿಯಾ ಒಕ್ಕೂಟದ ಪಕ್ಷಗಳ ನಡುವಿನ ಸೀಟು ಹಂಚಿಕೆ ಈಗಾಗಲೇ ಅಂತಿಮಗೊಳಿಸಲಾಗಿದೆ ಎಂದು ಹೇಳಿದ್ದರು. “ಎಲ್ಲವನ್ನೂ ಅಂತಿಮಗೊಳಿಸಲಾಗಿದೆ, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ, ಅದನ್ನು ಸೂಕ್ತ ಸಮಯದಲ್ಲಿ ಮಾಡಲಾಗುವುದು” ಎಂದಿದ್ದರು.

ಮಹಾರಾಷ್ಟ್ರದ ಮತದಾರರ ಪಟ್ಟಿಗೆ ಚುನಾವಣಾ ಆಯೋಗ 96 ಲಕ್ಷ ನಕಲಿ ಮತದಾರರನ್ನು ಸೇರಿಸಿದೆ : ರಾಜ್ ಠಾಕ್ರೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...