Homeಮುಖಪುಟಬಿಹಾರ ವಿಧಾನಸಭೆ ಚುನಾವಣೆ : 143 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಆರ್‌ಜೆಡಿ

ಬಿಹಾರ ವಿಧಾನಸಭೆ ಚುನಾವಣೆ : 143 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಆರ್‌ಜೆಡಿ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ 143 ಅಭ್ಯರ್ಥಿಗಳ ಪಟ್ಟಿಯನ್ನು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸೋಮವಾರ (ಅ.20) ಪ್ರಕಟಿಸಿದ್ದು, ಎರಡನೇ ಮತ್ತು ಅಂತಿಮ ಹಂತದ ನಾಮಪತ್ರ ಸಲ್ಲಿಕೆಯ ಅವಧಿ ಮುಗಿಯುವ ಕೆಲವೇ ಗಂಟೆಗಳ ಮೊದಲು ಈ ಪಟ್ಟಿಯನ್ನು ಪ್ರಕಟಿಸಲಾಗಿದೆ. ನವೆಂಬರ್ 6 ಮತ್ತು 11 ರಂದು ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆಯಾಗಿ ಫಲಿತಾಂಶ ಘೋಷಣೆಯಾಗಲಿದೆ.

ವೈಶಾಲಿ ಜಿಲ್ಲೆಯ ರಾಘೋಪುರ ವಿಧಾನಸಭಾ ಕ್ಷೇತ್ರದಿಂದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಕಣಕ್ಕಿಳಿದಿದ್ದಾರೆ. ರಾಘೋಪುರ ಯಾದವ್ ಕುಟುಂಬಕ್ಕೆ ಅಪಾರ ರಾಜಕೀಯ ಮತ್ತು ಭಾವನಾತ್ಮಕ ಸಂಬಂಧವನ್ನು ಹೊಂದಿರುವ ಕ್ಷೇತ್ರವಾಗಿದೆ. ಈ ಕ್ಷೇತ್ರವು ಆರ್‌ಜೆಡಿಯ ಭದ್ರಕೋಟೆಯಾಗಿದ್ದು, ಈ ಹಿಂದೆ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪತ್ನಿ, ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಪ್ರತಿನಿಧಿಸಿದ್ದರು. ತೇಜಸ್ವಿ ಯಾದವ್ 2015ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಸತತ ಮೂರನೇ ಅವಧಿಗೆ ಸ್ಪರ್ಧಿಸುತ್ತಿದ್ದಾರೆ.

143 ಅಭ್ಯರ್ಥಿಗಳಲ್ಲಿ, ಐವರು ಇಂಡಿಯಾ ಒಕ್ಕೂಟದ ಇತರ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಲಿದ್ದಾರೆ. ಆರ್‌ಜೆಡಿ ಪ್ರಸ್ತುತ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ರಾಜೇಶ್ ಕುಮಾರ್ ರಾಮ್ ಪ್ರತಿನಿಧಿಸುವ ಕುಟುಂಬ ಕ್ಷೇತ್ರದಿಂದಲೂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದೆ ಎಂಬ ಚರ್ಚೆಗೆ ಮುನ್ನೆಲೆಗೆ ಬಂದಿತ್ತು. ಇಂಡಿಯಾ ಒಕ್ಕೂಟದ ಎರಡು ಪ್ರಮುಖ ಪಕ್ಷಗಳ ನಡುವೆ ತಿಕ್ಕಾಟಕ್ಕೆ ಕಾರಣವಾಗುತ್ತಿದ್ದ ಆ ವಂದಂತಿಗೆ ಆರ್‌ಜೆಡಿಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಇತಿಶ್ರಿ ಹಾಡಿದೆ.

ಆರ್‌ಜೆಡಿ ವೈಶಾಲಿ, ಲಾಲ್‌ಗಂಜ್ ಮತ್ತು ಕಹಲ್‌ಗಾಂವ್‌ನಲ್ಲಿ ಕಾಂಗ್ರೆಸ್ ವಿರುದ್ಧ ಹಾಗೂ ತಾರಾಪುರ ಮತ್ತು ಗೌರ ಬೋರಂನಲ್ಲಿ ಮಾಜಿ ರಾಜ್ಯ ಸಚಿವ ಮುಖೇಶ್ ಸಾಹ್ನಿ ಅವರ ವಿಕಾಸಶೀಲ ಇನ್ಸಾನ್ ಪಕ್ಷದ ವಿರುದ್ಧ ಸ್ಪರ್ಧಿಸಲಿದೆ ಎಂದು ಹೇಳಲಾಗಿತ್ತು. ಈ ವದಂತಿಗೂ ಪಟ್ಟಿ ಪ್ರಕಟಣೆ ತೆರೆ ಎಳೆದಿದೆ.

ಅಭ್ಯರ್ಥಿಗಳ ಪೈಕಿ ತೇಜಸ್ವಿ ಯಾದವ್ (ರಾಘೋಪುರ್), ಅಲೋಕ್ ಮೆಹ್ತಾ (ಉಜಿಯಾರ್‌ಪುರ್), ಮುಖೇಶ್ ರೌಶನ್ (ಮಹುವಾ) ಮತ್ತು ಅಖ್ತರುಲ್ ಇಸ್ಲಾಂ ಶಾಹಿನ್ (ಸಮಸ್ತಿಪುರ್) ಇವರೆಲ್ಲರೂ ತಮ್ಮ ಹಾಲಿ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ.

ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಆಪ್ತ ಸಹಾಯಕ ಭೋಲಾ ಯಾದವ್, 2015ರಲ್ಲಿ ಬಹದ್ದೂರ್‌ಪುರ ಸ್ಥಾನವನ್ನು ಗೆದ್ದಿದ್ದರು. ಆದರೆ, ಐದು ವರ್ಷಗಳ ನಂತರ ಪಕ್ಷವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿ (ಯು)ಗೆ ವಿರುದ್ದ ಕ್ಷೇತ್ರವನ್ನು ಕಳೆದುಕೊಂಡಿತ್ತು. ಈ ಬಾರಿ ಸಚಿವ ಮದನ್ ಸಾಹ್ನಿಯಿಂದ ಅದನ್ನು ಮರಳಿ ಪಡೆಯಲು ಮುಂದಾಗಿದೆ.

ಕಳೆದ ವರ್ಷ ಲೋಕಸಭಾ ಚುನಾವಣೆಯಲ್ಲಿ ಸಿವಾನ್‌ನಿಂದ ಸ್ಪರ್ಧಿಸಿ ಜೆಡಿಯು ವಿರುದ್ದ ಸೋತಿದ್ದ ಮಾಜಿ ಸ್ಪೀಕರ್ ಅವಧ್ ಬಿಹಾರಿ ಚೌಧರಿ ಅವರಿಗೆ ಅದೇ ಕ್ಷೇತ್ರವನ್ನು ಮತ್ತೆ ನೀಡಲಾಗಿದೆ.

ಹಿಂದೂ ಧರ್ಮಗ್ರಂಥಗಳ ಕುರಿತು ವಿವಾದಾತ್ಮಕ ದೃಷ್ಟಿಕೋನಗಳಿಂದ ಸುದ್ದಿಯಲ್ಲಿರುವ ಮಾಜಿ ಶಿಕ್ಷಣ ಸಚಿವ ಚಂದ್ರಶೇಖರ್ ಅವರನ್ನು ಅವರ ಹಾಲಿ ಕ್ಷೇತ್ರ ಮಾಧೇಪುರದಿಂದ ಕಣಕ್ಕಿಳಿಸಲಾಗಿದೆ.

ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ‘ಎಂವೈ’ (ಮುಸ್ಲಿಂ-ಯಾದವ್) ಬೆಂಬಲ ನೆಲೆಯನ್ನು ಗಮನದಲ್ಲಿರಿಸಿಕೊಂಡಿರುವಂತೆ ತೋರುತ್ತದೆ. ಆದರೂ, ಇತರ ಹಿಂದುಳಿದ ಜಾತಿಗಳು ಮತ್ತು ಮೇಲ್ಜಾತಿಗಳಿಗೂ ಟಿಕೆಟ್ ನೀಡಲಾಗಿದೆ.

ಆರ್‌ಜೆಡಿ ಈ ಬಾರಿ 21 ಮಹಿಳೆಯರನ್ನು ಕಣಕ್ಕಿಳಿಸಿದೆ. ಈ ಮೂಲಕ ಪ್ರಮುಖ ಪ್ರತಿಸ್ಪರ್ಧಿಗಳಾದ ಜೆಡಿ(ಯು) ಮತ್ತು ಬಿಜೆಪಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಿದೆ.

ಆಡಳಿತಾರೂಢ ಎನ್‌ಡಿಎಯ ಎರಡು ಪ್ರಮುಖ ಪಕ್ಷಗಳಾದ ಜೆಡಿಯು ಮತ್ತು ಬಿಜೆಪಿ ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ.

ಅಧಿಕಾರದಲ್ಲಿದ್ದಾಗ ‘ಜಂಗಲ್ ರಾಜ್‌’ ಜಾರಿಯಾಗಿದೆ ಎಂದು ವಿರೋಧಿಗಳಿಂದ ಆಗಾಗ್ಗೆ ಆರೋಪಕ್ಕೊಳಗಾಗಿದ್ದ ಆರ್‌ಜೆಡಿ, ಇಮೇಜ್ ಬದಲಾವಣೆಗಿಂತ ವಾಸ್ತವ ರಾಜಕೀಯಕ್ಕೆ ಆದ್ಯತೆ ನೀಡಿದೆ.

ಮಾಫಿಯಾ ಡಾನ್‌ನಿಂದ ರಾಜಕಾರಣಿಯಾದ ಬೋಗೋ ಸಿಂಗ್ (ಮಾತಿಹಾನಿ) ಸ್ವತಃ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಮತ್ತೊಂದೆಡೆ ಒಸಾಮಾ ಶಹಾಬ್‌ಗೆ ತಮ್ಮ ದಿವಂಗತ ತಂದೆ ಮೊಹಮ್ಮದ್ ಶಹಾಬುದ್ದೀನ್‌ರ ರಾಜಕೀಯ ಪರಂಪರೆಯನ್ನು ಮುಂದುವರೆಸಲು ಅವಕಾಶ ನೀಡಲಾಗಿದೆ. ಒಸಾಮಾ ರಘುನಾಥ್‌ಪುರದಿಂದ ಚುನಾವಣೆಗೆ ಚೊಚ್ಚಲ ಪ್ರವೇಶ ಮಾಡುತ್ತಿದ್ದಾರೆ. ಇದು ಸಿವಾನ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಈ ಕ್ಷೇತ್ರದಲ್ಲಿ ಶಹಾಬುದ್ದೀನ್ ಶಿಕ್ಷೆಗೆ ಒಳಗಾಗಿ ಅನರ್ಹಗೊಳ್ಳುವವರೆಗೂ ಯಾವುದೇ ಚುನಾವಣೆಯಲ್ಲಿ ಸೋಲದೆ ಗೆದ್ದಿದ್ದರು.

ಮಾಜಿ ಸಂಸದೆ, ರಾಜಕಾರಣಿ ಸೂರಜ್ ಭನ್ ಸಿಂಗ್ ಅವರ ಪತ್ನಿ ವೀಣಾ ದೇವಿ ಮೊಕಾಮಾ ಕ್ಷೇತ್ರದಲ್ಲಿ ತಮ್ಮ ಪತಿಯ ಬದ್ಧ ವೈರಿ ಅನಂತ್ ಸಿಂಗ್ ಅವರನ್ನು ಎದುರಿಸಲಿದ್ದಾರೆ.

ಲಂಡನ್‌ನಿಂದ ಕಾನೂನು ಪದವಿ ಪಡೆದಿರುವ ಚೊಚ್ಚಲ ಸ್ಪರ್ಧಿ ಶಿವಾನಿ ಶುಕ್ಲಾ, ಲಾಲ್‌ಗಂಜ್‌ನಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರವನ್ನು ಉತ್ತರ ಬಿಹಾರದ ಅತ್ಯಂತ ಭಯಂಕರ ಗ್ಯಾಂಗ್‌ಲಾರ್ಡ್‌ಗಳಲ್ಲಿ ಒಬ್ಬರಾದ ಅವರ ತಂದೆ ಮುನ್ನಾ ಶುಕ್ಲಾ ಎರಡು ಬಾರಿ ಮತ್ತು ಅವರ ತಾಯಿ ಅನ್ನು ಶುಕ್ಲಾ ಒಮ್ಮೆ ಗೆದ್ದಿದ್ದರು.

ಮಹಾಘಟಬಂಧನದೊಳಗಿನ ಗೊಂದಲದಿಂದಾಗಿ, ಆರ್‌ಜೆಡಿ ಇಲ್ಲಿಯವರೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರಲಿಲ್ಲ. ಆದಾಗ್ಯೂ, ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡುವ ಮೊದಲೇ, ಪಕ್ಷವು ತನ್ನ ಎಲ್ಲಾ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ಹಂಚಿಕೆ ಮಾಡಿತ್ತು.

ಕಾಂಗ್ರೆಸ್ ಸೋಮವಾರ ಇನ್ನೂ ಏಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಕ್ಷವು ಘೋಷಿಸಿದ ಒಟ್ಟು ಅಭ್ಯರ್ಥಿಗಳ ಸಂಖ್ಯೆ 61ಕ್ಕೆ ತಲುಪಿದೆ.

ಮಹಾಘಟಬಂಧನ್ ಮೈತ್ರಿಕೂಟದ ಎರಡು ಪ್ರಮುಖ ಪಕ್ಷಗಳಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಔಪಚಾರಿಕ ಸೀಟು ಹಂಚಿಕೆ ಒಪ್ಪಂದವು ಒಮ್ಮತಕ್ಕೆ ಬರಲು ಸಾಧ್ಯವಾಗದಿದ್ದರೂ, ಮಧ್ಯರಾತ್ರಿಯ ನಂತರ ಕಾಂಗ್ರೆಸ್ ಪಟ್ಟಿಯನ್ನು ಪ್ರಕಟಿಸಿದೆ.

ಇದಕ್ಕೂ ಮೊದಲು, ಕಾಂಗ್ರೆಸ್ ವಕ್ತಾರ ಪವನ್ ಖೇರಾ ಇಂಡಿಯಾ ಒಕ್ಕೂಟದ ಪಕ್ಷಗಳ ನಡುವಿನ ಸೀಟು ಹಂಚಿಕೆ ಈಗಾಗಲೇ ಅಂತಿಮಗೊಳಿಸಲಾಗಿದೆ ಎಂದು ಹೇಳಿದ್ದರು. “ಎಲ್ಲವನ್ನೂ ಅಂತಿಮಗೊಳಿಸಲಾಗಿದೆ, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ, ಅದನ್ನು ಸೂಕ್ತ ಸಮಯದಲ್ಲಿ ಮಾಡಲಾಗುವುದು” ಎಂದಿದ್ದರು.

ಮಹಾರಾಷ್ಟ್ರದ ಮತದಾರರ ಪಟ್ಟಿಗೆ ಚುನಾವಣಾ ಆಯೋಗ 96 ಲಕ್ಷ ನಕಲಿ ಮತದಾರರನ್ನು ಸೇರಿಸಿದೆ : ರಾಜ್ ಠಾಕ್ರೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...