Homeಮುಖಪುಟಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ "ರಾಜಕೀಯ ಡಿಎನ್‌ಎ"ಯಲ್ಲಿ ಏನೋ ದೋಷವಿದೆ ಎಂದು ಪ್ರಧಾನಿ ನರೇಂದ್ರ ಮೋದಿ 2015 ರಲ್ಲಿ ಹೇಳಿದ್ದು, ಈಗ ಬ್ಯಾನರ್‌ ರೂಪದಲ್ಲಿ ರಾರಾಜಿಸುತ್ತಿದೆ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಕೆಸರೆರಚಾಟ ಆರಂಭವಾಗಿದೆ. ಈ ವಾರದಲ್ಲಿ ಮತದಾನದ ದಿನಾಂಕ ಪ್ರಕಟವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಎಲ್ಲರ ಕಣ್ಣು ಚುನಾವಣಾ ಆಯೋಗದ ಕಡೆಗಿದೆ. ಈ ನಡುವೆ ಅನಾಮಧೇಯ ಬ್ಯಾನರ್‌ಗಳು ಅಡಳಿತಾರೂಢ ಪಕ್ಷಗಳನ್ನು ಕಾಡಲು ಪ್ರಾರಂಭಿಸಿವೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸುಮಾರು 5 ವರ್ಷಗಳ ಹಿಂದೆ ನೀಡಿದ್ದ ವಿವಾದಾತ್ಮಕ “ಡಿಎನ್‌ಎ” ಹೇಳಿಕೆ ಈಗ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ  ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (NDA) ಕಾಡಲು ಮತ್ತೆ ಬ್ಯಾನರ್‌ ರೂಪದಲ್ಲಿ ರಸ್ತೆಗಳಿಗಿಳಿದಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿ – ಜೆಡಿಯು ನಡುವೆ ಸ್ಥಾನ ಹಂಚಿಕೆ ಮಾತುಕತೆ

ನಿನ್ನೆ ಬೆಳಿಗ್ಗೆ ಪಾಟ್ನಾದಲ್ಲಿ ಮೋದಿಯವರ ಡಿಎನ್‌ಎ ಹೇಳಿಕೆ ಆಧಾರಿತ ದೊಡ್ಡ ವರ್ಣರಂಜಿತ ಬ್ಯಾನರ್‌ಗಳು ಮತ್ತು ಪೋಸ್ಟರ್‌ಗಳು ಕಾಣಿಸಿಕೊಂಡವು. ಬಿಜೆಪಿ ಮತ್ತು ಜೆಡಿಯು ಪಕ್ಷಗಳ ಮುಖಂಡರುಗಳು ಮುಜುಗರಕ್ಕಿಡು ಮಾಡುವಂತೆ ಮೋದಿ ಹೇಳಿಕೆಯನ್ನು ಬ್ಯಾನರ್‌ನಲ್ಲಿ ಹೈಲೈಟ್ ಮಾಡಲಾಗಿದೆ.

PC: Oneindia Hindi

2015ರ ಜುಲೈನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನಿತೀಶ್ ಕುಮಾರ್ ‌ ಡಿಎನ್‌ಎನಲ್ಲಿ ಏನೋ ತೊಂದರೆ ಇದೆ ಎಂದಿದ್ದರು. ಈ ವಾಕ್ಯವನ್ನು ಬ್ಯಾನರ್‌ನಲ್ಲಿ ಹೈಲಟ್ ಮಾಡಲಾಗಿದೆ. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ “ನಿತೀಶ್ ಕುಮಾರ್ ಕೆ ಡಿಎನ್‌ಎ ಮೇ ಹೇ ಗಡ್‌ಭಡ್‌ ಹೈ”.  ಬ್ಯಾನರ್‌ಗಳಲ್ಲಿ ಬಳಸಲಾದ ಮತ್ತೊಂದು ಸಾಲು ಕುಮಾರ್ ಅವರ ನಂಬಿಕೆಯನ್ನು ಪ್ರಶ್ನಿಸಿದೆ: “ಮಾರ್ತೆ ರಹೆ ಬಸಾ ಪಲಟಿ, ನಿತೀಶ್ ಕಿ ಹರ್ ಬಾತ್ ಕಚ್ಚಿ” ಎಂಬ ವಾಕ್ಯಗಳನ್ನು ಬ್ಯಾನರ್‌ನಲ್ಲಿ ಬಳಸಲಾಗಿದೆ. ವಿಶೇಷವೆಂದರೆ, ಬ್ಯಾನರ್‌ಗಳ ಪ್ರಾಯೋಜಕರ ಹೆಸರನ್ನು ಉಲ್ಲೇಖಿಸಲಾಗಿಲ್ಲ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

2015 ರಲ್ಲಿ ಪಾಟ್ನಾದಿಂದ 75 ಕಿ.ಮೀ ದೂರದಲ್ಲಿರುವ ಮುಜಾಫರ್ಪುರದಲ್ಲಿ ನಡೆದ ಪರಿವರ್ತನಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ನಿತೀಶ್ ಕುಮಾರ್ ಅವರ “ರಾಜಕೀಯ ಡಿಎನ್‌ಎ”ಯಲ್ಲಿ ಏನಾದರೂ ದೋಷವಿದೆಯೇ ಎಂದಿದ್ದರು.

’ಅವರು ಬಿಜೆಪಿಯಿಂದ ತಮ್ಮ ಬೆಂಬಲ ಹಿಂಪಡೆದುಕೊಂಡಾಗ ನನಗೆ ನೋವುಂಟಾಗಿತ್ತು( 2013ರಲ್ಲಿ ಜೆಡಿ-ಯು ಬಿಜೆಪಿಯಿಂದ ವಿಭಜನೆಯಾಗಿತ್ತು) ಆದರೆ ಮಾಜಿ ಮುಖ್ಯಮಂತ್ರಿ ಜಿತಾನ್ ರಾಮ್ ಮಾಂಜಿ ಅಂತಹವರೊಂದಿಗೂ ಅದೇ ರೀತಿ ಮಾಡಿದಾಗ, ಅವರ ರಾಜಕೀಯ ಡಿಎನ್‌ಎಯಲ್ಲಿ ಏನಾದರೂ ದೋಷವಿದೆ ಎಂದು ನಾನು ಕಂಡುಕೊಂಡೆ’ ಎಂದು ಮೋದಿ ಹೇಳಿದ್ದರು. ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಜೆಡಿಯು ಮುಖ್ಯಸ್ಥರು ಇದನ್ನು ಬಿಹಾರದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿದ್ದರು. ಮೋದಿಯವರು ತಮ್ಮ ವಿರುದ್ಧದ ಡಿಎನ್‌ಎ ಹೇಳಿಕೆಯನ್ನು ಹಿಂಪಡೆಯುವಂತೆ ಹೇಳಿ, ಈ ಹೇಳಿಕೆಯ ವಿರುದ್ಧ ಸಹಿ ಅಭಿಯಾನವನ್ನು ಪ್ರಾರಂಭಿಸಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು, ಆರ್‌ಜೆಡಿ, ಕಾಂಗ್ರೆಸ್ ಮೈತ್ರಿ ಬಿಜೆಪಿಯನ್ನು ಸೋಲಿಸಿ ಜಯಗಳಿಸಿತ್ತು. ಆದರೆ ನಿತೀಶ್ ಕುಮಾರ್ ಅವರು ಮೈತ್ರಿಯನ್ನು ಕೈಬಿಟ್ಟು ಮತ್ತೊಮ್ಮೆ ಬಿಜೆಪಿಯೊಂದಿಗೆ ಕೈಜೋಡಿಸಿ 2017 ರ ಜುಲೈನಲ್ಲಿ ಹೊಸ ಸರ್ಕಾರವನ್ನು ರಚಿಸಿದ್ದರು.

PC:Zee News

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮೋದಿ ಮತ್ತು ಕುಮಾರ್ ಅವರನ್ನು ಗುರಿಯಾಗಿಸುವ ಇತ್ತೀಚಿನ ಬ್ಯಾನರ್‌ಗಳು ಹಠಾತ್ತನೆ ಕಾಣಿಸಿಕೊಂಡಿದ್ದು, ಇದು ಪ್ರತಿಪಕ್ಷ ಆರ್‌ಜೆಡಿ ನೇತೃತ್ವದ ಮಹಾ ಮೈತ್ರಿ ಮತ್ತು ಎನ್‌ಡಿಎ ನಡುವಿನ ಬ್ಯಾನರ್‌ ಯುದ್ಧ ಎಂದೇ ಭಾವಿಸಲಾಗುತ್ತಿದೆ.

ಬಿಹಾರದ ರಾಜಕೀಯ ವಿಶ್ಲೇಷಕ ಎ.ಕೆ.ಮಿಶ್ರಾ ಹೇಳುವಂತೆ, ಪ್ರತಿಪಕ್ಷ ಮಹಾಮೈತ್ರಿ ಮತ್ತು ಆಡಳಿತಾರೂಢ ಎನ್‌ಡಿಎ ನಡುವಿನ ಬ್ಯಾನರ್‌ಗಳು ಮತ್ತು ಪೋಸ್ಟರ್‌ ಯುದ್ಧವು ರಾಜ್ಯದಾದ್ಯಂತಾ ತೀವ್ರಗೊಳ್ಳುತ್ತದೆ. ಇದು ಅವರ ಬೆಂಬಲಿಗರು ಮತ್ತು ಮತದಾರರಿಗೆ ರಾಜಕೀಯ ಸಂದೇಶವನ್ನು ಕಳುಹಿಸುವ ಕಾರ್ಯತಂತ್ರದ ಒಂದು ಭಾಗವಾಗಿದೆ. ಚುನಾವಣಾ ದಿನಾಂಕ ಪ್ರಕಟವಾಗಲಿ ಆಗ ಇನ್ನೂ ಇಂತಹ ಅನೇಕ ಬ್ಯಾನರ್ ಮತ್ತು ಹೋರ್ಡಿಂಗ್ ಬರಲಿವೆ ಎನ್ನುತ್ತಾರೆ.


ಇದನ್ನೂ ಓದಿ: ನಮ್ಮ ಮುಂದಿನ ಗುರಿ ಬಿಹಾರ ವಿಧಾನ ಸಭಾ ಚುನಾವಣೆ: ಆಪ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...