Homeಮುಖಪುಟಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ "ರಾಜಕೀಯ ಡಿಎನ್‌ಎ"ಯಲ್ಲಿ ಏನೋ ದೋಷವಿದೆ ಎಂದು ಪ್ರಧಾನಿ ನರೇಂದ್ರ ಮೋದಿ 2015 ರಲ್ಲಿ ಹೇಳಿದ್ದು, ಈಗ ಬ್ಯಾನರ್‌ ರೂಪದಲ್ಲಿ ರಾರಾಜಿಸುತ್ತಿದೆ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಕೆಸರೆರಚಾಟ ಆರಂಭವಾಗಿದೆ. ಈ ವಾರದಲ್ಲಿ ಮತದಾನದ ದಿನಾಂಕ ಪ್ರಕಟವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಎಲ್ಲರ ಕಣ್ಣು ಚುನಾವಣಾ ಆಯೋಗದ ಕಡೆಗಿದೆ. ಈ ನಡುವೆ ಅನಾಮಧೇಯ ಬ್ಯಾನರ್‌ಗಳು ಅಡಳಿತಾರೂಢ ಪಕ್ಷಗಳನ್ನು ಕಾಡಲು ಪ್ರಾರಂಭಿಸಿವೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸುಮಾರು 5 ವರ್ಷಗಳ ಹಿಂದೆ ನೀಡಿದ್ದ ವಿವಾದಾತ್ಮಕ “ಡಿಎನ್‌ಎ” ಹೇಳಿಕೆ ಈಗ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ  ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (NDA) ಕಾಡಲು ಮತ್ತೆ ಬ್ಯಾನರ್‌ ರೂಪದಲ್ಲಿ ರಸ್ತೆಗಳಿಗಿಳಿದಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿ – ಜೆಡಿಯು ನಡುವೆ ಸ್ಥಾನ ಹಂಚಿಕೆ ಮಾತುಕತೆ

ನಿನ್ನೆ ಬೆಳಿಗ್ಗೆ ಪಾಟ್ನಾದಲ್ಲಿ ಮೋದಿಯವರ ಡಿಎನ್‌ಎ ಹೇಳಿಕೆ ಆಧಾರಿತ ದೊಡ್ಡ ವರ್ಣರಂಜಿತ ಬ್ಯಾನರ್‌ಗಳು ಮತ್ತು ಪೋಸ್ಟರ್‌ಗಳು ಕಾಣಿಸಿಕೊಂಡವು. ಬಿಜೆಪಿ ಮತ್ತು ಜೆಡಿಯು ಪಕ್ಷಗಳ ಮುಖಂಡರುಗಳು ಮುಜುಗರಕ್ಕಿಡು ಮಾಡುವಂತೆ ಮೋದಿ ಹೇಳಿಕೆಯನ್ನು ಬ್ಯಾನರ್‌ನಲ್ಲಿ ಹೈಲೈಟ್ ಮಾಡಲಾಗಿದೆ.

PC: Oneindia Hindi

2015ರ ಜುಲೈನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನಿತೀಶ್ ಕುಮಾರ್ ‌ ಡಿಎನ್‌ಎನಲ್ಲಿ ಏನೋ ತೊಂದರೆ ಇದೆ ಎಂದಿದ್ದರು. ಈ ವಾಕ್ಯವನ್ನು ಬ್ಯಾನರ್‌ನಲ್ಲಿ ಹೈಲಟ್ ಮಾಡಲಾಗಿದೆ. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ “ನಿತೀಶ್ ಕುಮಾರ್ ಕೆ ಡಿಎನ್‌ಎ ಮೇ ಹೇ ಗಡ್‌ಭಡ್‌ ಹೈ”.  ಬ್ಯಾನರ್‌ಗಳಲ್ಲಿ ಬಳಸಲಾದ ಮತ್ತೊಂದು ಸಾಲು ಕುಮಾರ್ ಅವರ ನಂಬಿಕೆಯನ್ನು ಪ್ರಶ್ನಿಸಿದೆ: “ಮಾರ್ತೆ ರಹೆ ಬಸಾ ಪಲಟಿ, ನಿತೀಶ್ ಕಿ ಹರ್ ಬಾತ್ ಕಚ್ಚಿ” ಎಂಬ ವಾಕ್ಯಗಳನ್ನು ಬ್ಯಾನರ್‌ನಲ್ಲಿ ಬಳಸಲಾಗಿದೆ. ವಿಶೇಷವೆಂದರೆ, ಬ್ಯಾನರ್‌ಗಳ ಪ್ರಾಯೋಜಕರ ಹೆಸರನ್ನು ಉಲ್ಲೇಖಿಸಲಾಗಿಲ್ಲ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

2015 ರಲ್ಲಿ ಪಾಟ್ನಾದಿಂದ 75 ಕಿ.ಮೀ ದೂರದಲ್ಲಿರುವ ಮುಜಾಫರ್ಪುರದಲ್ಲಿ ನಡೆದ ಪರಿವರ್ತನಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ನಿತೀಶ್ ಕುಮಾರ್ ಅವರ “ರಾಜಕೀಯ ಡಿಎನ್‌ಎ”ಯಲ್ಲಿ ಏನಾದರೂ ದೋಷವಿದೆಯೇ ಎಂದಿದ್ದರು.

’ಅವರು ಬಿಜೆಪಿಯಿಂದ ತಮ್ಮ ಬೆಂಬಲ ಹಿಂಪಡೆದುಕೊಂಡಾಗ ನನಗೆ ನೋವುಂಟಾಗಿತ್ತು( 2013ರಲ್ಲಿ ಜೆಡಿ-ಯು ಬಿಜೆಪಿಯಿಂದ ವಿಭಜನೆಯಾಗಿತ್ತು) ಆದರೆ ಮಾಜಿ ಮುಖ್ಯಮಂತ್ರಿ ಜಿತಾನ್ ರಾಮ್ ಮಾಂಜಿ ಅಂತಹವರೊಂದಿಗೂ ಅದೇ ರೀತಿ ಮಾಡಿದಾಗ, ಅವರ ರಾಜಕೀಯ ಡಿಎನ್‌ಎಯಲ್ಲಿ ಏನಾದರೂ ದೋಷವಿದೆ ಎಂದು ನಾನು ಕಂಡುಕೊಂಡೆ’ ಎಂದು ಮೋದಿ ಹೇಳಿದ್ದರು. ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಜೆಡಿಯು ಮುಖ್ಯಸ್ಥರು ಇದನ್ನು ಬಿಹಾರದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿದ್ದರು. ಮೋದಿಯವರು ತಮ್ಮ ವಿರುದ್ಧದ ಡಿಎನ್‌ಎ ಹೇಳಿಕೆಯನ್ನು ಹಿಂಪಡೆಯುವಂತೆ ಹೇಳಿ, ಈ ಹೇಳಿಕೆಯ ವಿರುದ್ಧ ಸಹಿ ಅಭಿಯಾನವನ್ನು ಪ್ರಾರಂಭಿಸಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು, ಆರ್‌ಜೆಡಿ, ಕಾಂಗ್ರೆಸ್ ಮೈತ್ರಿ ಬಿಜೆಪಿಯನ್ನು ಸೋಲಿಸಿ ಜಯಗಳಿಸಿತ್ತು. ಆದರೆ ನಿತೀಶ್ ಕುಮಾರ್ ಅವರು ಮೈತ್ರಿಯನ್ನು ಕೈಬಿಟ್ಟು ಮತ್ತೊಮ್ಮೆ ಬಿಜೆಪಿಯೊಂದಿಗೆ ಕೈಜೋಡಿಸಿ 2017 ರ ಜುಲೈನಲ್ಲಿ ಹೊಸ ಸರ್ಕಾರವನ್ನು ರಚಿಸಿದ್ದರು.

PC:Zee News

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮೋದಿ ಮತ್ತು ಕುಮಾರ್ ಅವರನ್ನು ಗುರಿಯಾಗಿಸುವ ಇತ್ತೀಚಿನ ಬ್ಯಾನರ್‌ಗಳು ಹಠಾತ್ತನೆ ಕಾಣಿಸಿಕೊಂಡಿದ್ದು, ಇದು ಪ್ರತಿಪಕ್ಷ ಆರ್‌ಜೆಡಿ ನೇತೃತ್ವದ ಮಹಾ ಮೈತ್ರಿ ಮತ್ತು ಎನ್‌ಡಿಎ ನಡುವಿನ ಬ್ಯಾನರ್‌ ಯುದ್ಧ ಎಂದೇ ಭಾವಿಸಲಾಗುತ್ತಿದೆ.

ಬಿಹಾರದ ರಾಜಕೀಯ ವಿಶ್ಲೇಷಕ ಎ.ಕೆ.ಮಿಶ್ರಾ ಹೇಳುವಂತೆ, ಪ್ರತಿಪಕ್ಷ ಮಹಾಮೈತ್ರಿ ಮತ್ತು ಆಡಳಿತಾರೂಢ ಎನ್‌ಡಿಎ ನಡುವಿನ ಬ್ಯಾನರ್‌ಗಳು ಮತ್ತು ಪೋಸ್ಟರ್‌ ಯುದ್ಧವು ರಾಜ್ಯದಾದ್ಯಂತಾ ತೀವ್ರಗೊಳ್ಳುತ್ತದೆ. ಇದು ಅವರ ಬೆಂಬಲಿಗರು ಮತ್ತು ಮತದಾರರಿಗೆ ರಾಜಕೀಯ ಸಂದೇಶವನ್ನು ಕಳುಹಿಸುವ ಕಾರ್ಯತಂತ್ರದ ಒಂದು ಭಾಗವಾಗಿದೆ. ಚುನಾವಣಾ ದಿನಾಂಕ ಪ್ರಕಟವಾಗಲಿ ಆಗ ಇನ್ನೂ ಇಂತಹ ಅನೇಕ ಬ್ಯಾನರ್ ಮತ್ತು ಹೋರ್ಡಿಂಗ್ ಬರಲಿವೆ ಎನ್ನುತ್ತಾರೆ.


ಇದನ್ನೂ ಓದಿ: ನಮ್ಮ ಮುಂದಿನ ಗುರಿ ಬಿಹಾರ ವಿಧಾನ ಸಭಾ ಚುನಾವಣೆ: ಆಪ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...