Homeಮುಖಪುಟಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ "ರಾಜಕೀಯ ಡಿಎನ್‌ಎ"ಯಲ್ಲಿ ಏನೋ ದೋಷವಿದೆ ಎಂದು ಪ್ರಧಾನಿ ನರೇಂದ್ರ ಮೋದಿ 2015 ರಲ್ಲಿ ಹೇಳಿದ್ದು, ಈಗ ಬ್ಯಾನರ್‌ ರೂಪದಲ್ಲಿ ರಾರಾಜಿಸುತ್ತಿದೆ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಕೆಸರೆರಚಾಟ ಆರಂಭವಾಗಿದೆ. ಈ ವಾರದಲ್ಲಿ ಮತದಾನದ ದಿನಾಂಕ ಪ್ರಕಟವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಎಲ್ಲರ ಕಣ್ಣು ಚುನಾವಣಾ ಆಯೋಗದ ಕಡೆಗಿದೆ. ಈ ನಡುವೆ ಅನಾಮಧೇಯ ಬ್ಯಾನರ್‌ಗಳು ಅಡಳಿತಾರೂಢ ಪಕ್ಷಗಳನ್ನು ಕಾಡಲು ಪ್ರಾರಂಭಿಸಿವೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸುಮಾರು 5 ವರ್ಷಗಳ ಹಿಂದೆ ನೀಡಿದ್ದ ವಿವಾದಾತ್ಮಕ “ಡಿಎನ್‌ಎ” ಹೇಳಿಕೆ ಈಗ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ  ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (NDA) ಕಾಡಲು ಮತ್ತೆ ಬ್ಯಾನರ್‌ ರೂಪದಲ್ಲಿ ರಸ್ತೆಗಳಿಗಿಳಿದಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿ – ಜೆಡಿಯು ನಡುವೆ ಸ್ಥಾನ ಹಂಚಿಕೆ ಮಾತುಕತೆ

ನಿನ್ನೆ ಬೆಳಿಗ್ಗೆ ಪಾಟ್ನಾದಲ್ಲಿ ಮೋದಿಯವರ ಡಿಎನ್‌ಎ ಹೇಳಿಕೆ ಆಧಾರಿತ ದೊಡ್ಡ ವರ್ಣರಂಜಿತ ಬ್ಯಾನರ್‌ಗಳು ಮತ್ತು ಪೋಸ್ಟರ್‌ಗಳು ಕಾಣಿಸಿಕೊಂಡವು. ಬಿಜೆಪಿ ಮತ್ತು ಜೆಡಿಯು ಪಕ್ಷಗಳ ಮುಖಂಡರುಗಳು ಮುಜುಗರಕ್ಕಿಡು ಮಾಡುವಂತೆ ಮೋದಿ ಹೇಳಿಕೆಯನ್ನು ಬ್ಯಾನರ್‌ನಲ್ಲಿ ಹೈಲೈಟ್ ಮಾಡಲಾಗಿದೆ.

PC: Oneindia Hindi

2015ರ ಜುಲೈನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನಿತೀಶ್ ಕುಮಾರ್ ‌ ಡಿಎನ್‌ಎನಲ್ಲಿ ಏನೋ ತೊಂದರೆ ಇದೆ ಎಂದಿದ್ದರು. ಈ ವಾಕ್ಯವನ್ನು ಬ್ಯಾನರ್‌ನಲ್ಲಿ ಹೈಲಟ್ ಮಾಡಲಾಗಿದೆ. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ “ನಿತೀಶ್ ಕುಮಾರ್ ಕೆ ಡಿಎನ್‌ಎ ಮೇ ಹೇ ಗಡ್‌ಭಡ್‌ ಹೈ”.  ಬ್ಯಾನರ್‌ಗಳಲ್ಲಿ ಬಳಸಲಾದ ಮತ್ತೊಂದು ಸಾಲು ಕುಮಾರ್ ಅವರ ನಂಬಿಕೆಯನ್ನು ಪ್ರಶ್ನಿಸಿದೆ: “ಮಾರ್ತೆ ರಹೆ ಬಸಾ ಪಲಟಿ, ನಿತೀಶ್ ಕಿ ಹರ್ ಬಾತ್ ಕಚ್ಚಿ” ಎಂಬ ವಾಕ್ಯಗಳನ್ನು ಬ್ಯಾನರ್‌ನಲ್ಲಿ ಬಳಸಲಾಗಿದೆ. ವಿಶೇಷವೆಂದರೆ, ಬ್ಯಾನರ್‌ಗಳ ಪ್ರಾಯೋಜಕರ ಹೆಸರನ್ನು ಉಲ್ಲೇಖಿಸಲಾಗಿಲ್ಲ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

2015 ರಲ್ಲಿ ಪಾಟ್ನಾದಿಂದ 75 ಕಿ.ಮೀ ದೂರದಲ್ಲಿರುವ ಮುಜಾಫರ್ಪುರದಲ್ಲಿ ನಡೆದ ಪರಿವರ್ತನಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ನಿತೀಶ್ ಕುಮಾರ್ ಅವರ “ರಾಜಕೀಯ ಡಿಎನ್‌ಎ”ಯಲ್ಲಿ ಏನಾದರೂ ದೋಷವಿದೆಯೇ ಎಂದಿದ್ದರು.

’ಅವರು ಬಿಜೆಪಿಯಿಂದ ತಮ್ಮ ಬೆಂಬಲ ಹಿಂಪಡೆದುಕೊಂಡಾಗ ನನಗೆ ನೋವುಂಟಾಗಿತ್ತು( 2013ರಲ್ಲಿ ಜೆಡಿ-ಯು ಬಿಜೆಪಿಯಿಂದ ವಿಭಜನೆಯಾಗಿತ್ತು) ಆದರೆ ಮಾಜಿ ಮುಖ್ಯಮಂತ್ರಿ ಜಿತಾನ್ ರಾಮ್ ಮಾಂಜಿ ಅಂತಹವರೊಂದಿಗೂ ಅದೇ ರೀತಿ ಮಾಡಿದಾಗ, ಅವರ ರಾಜಕೀಯ ಡಿಎನ್‌ಎಯಲ್ಲಿ ಏನಾದರೂ ದೋಷವಿದೆ ಎಂದು ನಾನು ಕಂಡುಕೊಂಡೆ’ ಎಂದು ಮೋದಿ ಹೇಳಿದ್ದರು. ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಜೆಡಿಯು ಮುಖ್ಯಸ್ಥರು ಇದನ್ನು ಬಿಹಾರದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿದ್ದರು. ಮೋದಿಯವರು ತಮ್ಮ ವಿರುದ್ಧದ ಡಿಎನ್‌ಎ ಹೇಳಿಕೆಯನ್ನು ಹಿಂಪಡೆಯುವಂತೆ ಹೇಳಿ, ಈ ಹೇಳಿಕೆಯ ವಿರುದ್ಧ ಸಹಿ ಅಭಿಯಾನವನ್ನು ಪ್ರಾರಂಭಿಸಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು, ಆರ್‌ಜೆಡಿ, ಕಾಂಗ್ರೆಸ್ ಮೈತ್ರಿ ಬಿಜೆಪಿಯನ್ನು ಸೋಲಿಸಿ ಜಯಗಳಿಸಿತ್ತು. ಆದರೆ ನಿತೀಶ್ ಕುಮಾರ್ ಅವರು ಮೈತ್ರಿಯನ್ನು ಕೈಬಿಟ್ಟು ಮತ್ತೊಮ್ಮೆ ಬಿಜೆಪಿಯೊಂದಿಗೆ ಕೈಜೋಡಿಸಿ 2017 ರ ಜುಲೈನಲ್ಲಿ ಹೊಸ ಸರ್ಕಾರವನ್ನು ರಚಿಸಿದ್ದರು.

PC:Zee News

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮೋದಿ ಮತ್ತು ಕುಮಾರ್ ಅವರನ್ನು ಗುರಿಯಾಗಿಸುವ ಇತ್ತೀಚಿನ ಬ್ಯಾನರ್‌ಗಳು ಹಠಾತ್ತನೆ ಕಾಣಿಸಿಕೊಂಡಿದ್ದು, ಇದು ಪ್ರತಿಪಕ್ಷ ಆರ್‌ಜೆಡಿ ನೇತೃತ್ವದ ಮಹಾ ಮೈತ್ರಿ ಮತ್ತು ಎನ್‌ಡಿಎ ನಡುವಿನ ಬ್ಯಾನರ್‌ ಯುದ್ಧ ಎಂದೇ ಭಾವಿಸಲಾಗುತ್ತಿದೆ.

ಬಿಹಾರದ ರಾಜಕೀಯ ವಿಶ್ಲೇಷಕ ಎ.ಕೆ.ಮಿಶ್ರಾ ಹೇಳುವಂತೆ, ಪ್ರತಿಪಕ್ಷ ಮಹಾಮೈತ್ರಿ ಮತ್ತು ಆಡಳಿತಾರೂಢ ಎನ್‌ಡಿಎ ನಡುವಿನ ಬ್ಯಾನರ್‌ಗಳು ಮತ್ತು ಪೋಸ್ಟರ್‌ ಯುದ್ಧವು ರಾಜ್ಯದಾದ್ಯಂತಾ ತೀವ್ರಗೊಳ್ಳುತ್ತದೆ. ಇದು ಅವರ ಬೆಂಬಲಿಗರು ಮತ್ತು ಮತದಾರರಿಗೆ ರಾಜಕೀಯ ಸಂದೇಶವನ್ನು ಕಳುಹಿಸುವ ಕಾರ್ಯತಂತ್ರದ ಒಂದು ಭಾಗವಾಗಿದೆ. ಚುನಾವಣಾ ದಿನಾಂಕ ಪ್ರಕಟವಾಗಲಿ ಆಗ ಇನ್ನೂ ಇಂತಹ ಅನೇಕ ಬ್ಯಾನರ್ ಮತ್ತು ಹೋರ್ಡಿಂಗ್ ಬರಲಿವೆ ಎನ್ನುತ್ತಾರೆ.


ಇದನ್ನೂ ಓದಿ: ನಮ್ಮ ಮುಂದಿನ ಗುರಿ ಬಿಹಾರ ವಿಧಾನ ಸಭಾ ಚುನಾವಣೆ: ಆಪ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...