Homeಮುಖಪುಟಬಿಹಾರ ಚುನಾವಣೆ ಮೋದಿ ಆಡಳಿತ ಅಂತ್ಯದ ಆರಂಭ: ಮಲ್ಲಿಕಾರ್ಜುನ ಖರ್ಗೆ

ಬಿಹಾರ ಚುನಾವಣೆ ಮೋದಿ ಆಡಳಿತ ಅಂತ್ಯದ ಆರಂಭ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯು ಮೋದಿ ಸರ್ಕಾರದ ‘ಭ್ರಷ್ಟ’ ಮತ್ತು ‘ಅಸಮರ್ಥ’ ಆಡಳಿತದ ಅಂತ್ಯದ ಆರಂಭ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ (ಸೆ.24) ಹೇಳಿದರು.

ಪಾಟ್ನಾದಲ್ಲಿ ನಡೆದ ಸಿಡಬ್ಲ್ಯೂಸಿ ಸಭೆಯಲ್ಲಿ ಬಿಹಾರದ ರಾಜಕೀಯ ಸನ್ನಿವೇಶದ ಕುರಿತು ಪ್ರತಿಕ್ರಿಯಿಸಿದ ಖರ್ಗೆ ಅವರು, ಆಡಳಿತಾರೂಢ ಎನ್‌ಡಿಎಯೊಳಗಿನ ಬಿರುಕನ್ನು ಎತ್ತಿ ತೋರಿಸಿದರು. ಆಂತರಿಕ ಕಲಹ ಈಗ ಬಹಿರಂಗವಾಗಿದೆ ಎಂದರು.

ಬಿಜೆಪಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿ ನೋಡುತ್ತಿದೆ. ಬಿಹಾರದ ಜನರು ಬಿಜೆಪಿಯ ವಿಭಜಕ ಕಾರ್ಯಸೂಚಿಯನ್ನು ತಿರಸ್ಕರಿಸುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಬೇಕು, ಧಾರ್ಮಿಕ ಧ್ರುವೀಕರಣವಲ್ಲ ಎಂದು ಖರ್ಗೆ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಖರ್ಗೆ ಅವರು, ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ರಂಗಗಳಲ್ಲಿ ಇವರು ದೇಶವನ್ನು ವಿಫಲಗೊಳಿಸಿದ್ದಾರೆ ಎಂದು ಆರೋಪಿಸಿದರು.

ಪಕ್ಷದ ನಾಯಕರನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಭಾರತವು ಅತ್ಯಂತ ಸವಾಲಿನ ಅವಧಿಯನ್ನು ಎದುರಿಸುತ್ತಿದೆ, ರಾಜತಾಂತ್ರಿಕ ತಪ್ಪು ಹೆಜ್ಜೆಗಳು ಮತ್ತು ದೇಶೀಯ ಪ್ರಕ್ಷುಬ್ಧತೆಗಳು ಮೋದಿ ಅವಧಿಯಲ್ಲಿ ‘ಆಡಳಿತದ ಸಂಪೂರ್ಣ ವೈಫಲ್ಯ’ವನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಸಮಸ್ಯೆಗಳು ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ರಾಜತಾಂತ್ರಿಕ ವೈಫಲ್ಯದ ಪರಿಣಾಮವಾಗಿದೆ. ಪ್ರಧಾನಿಯವರು ‘ನನ್ನ ಸ್ನೇಹಿತ’ ಎಂದು ಹೆಮ್ಮೆಪಟ್ಟವರು ಇಂದು ಭಾರತವನ್ನು ಹಲವು ಸಮಸ್ಯೆಗಳಿಗೆ ಸಿಲುಕಿಸುತ್ತಿದ್ದಾರೆ ಎಂದರು.

ಇಂದು, ನಮ್ಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ತಿರುಚುತ್ತಿರುವಾಗ, ಪ್ರಜಾಪ್ರಭುತ್ವದ ತಾಯಿಯಾದ ಬಿಹಾರದಲ್ಲಿ ನಮ್ಮ ವಿಸ್ತೃತ ಸಿಡಬ್ಲ್ಯೂಸಿ ಸಭೆಯನ್ನು ನಡೆಸುವುದು ಮತ್ತು ಈ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವ ನಮ್ಮ ಪ್ರತಿಜ್ಞೆಯನ್ನು ಪುನರುಚ್ಚರಿಸುವುದು ಅತ್ಯಗತ್ಯ ಎಂದು ಖರ್ಗೆ ಹೇಳಿದರು.

ಪ್ರಜಾಪ್ರಭುತ್ವದ ಅಡಿಪಾಯ ನ್ಯಾಯಯುತ ಮತ್ತು ಪಾರದರ್ಶಕ ಚುನಾವಣೆಗಳು ಎಂದು ಪ್ರತಿಪಾದಿಸಿದ ಖರ್ಗೆ, ಚುನಾವಣಾ ಆಯೋಗದ ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಯ ಬಗ್ಗೆ ಇಂದು ಗಂಭೀರ ಪ್ರಶ್ನೆಗಳು ಎದ್ದಿವೆ ಎಂದರು.

ವಿವಿಧ ರಾಜ್ಯಗಳಲ್ಲಿ ಬಹಿರಂಗಗೊಂಡಿರುವ ಮತಗಳ್ಳತನ ಕುರಿತ ಪ್ರಶ್ನೆಗಳಿಗೆ ಉತ್ತರಿಸುವ ಬದಲು, ಚುನಾವಣಾ ಆಯೋಗವು ನಮ್ಮಿಂದ ಅಫಿಡವಿಟ್‌ ಕೇಳುತ್ತಿದೆ ಎಂದು ಖರ್ಗೆ ಕಿಡಿಕಾರಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು ಉಲ್ಲೇಖಿಸಿದ ಖರ್ಗೆ, “ಬಿಹಾರದ ಉದಾಹರಣೆಯನ್ನು ಮುಂದಿಟ್ಟುಕೊಂಡು ಈಗ ದೇಶದಾದ್ಯಂತ ಲಕ್ಷಾಂತರ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಪಿತೂರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

‘ಮತಗಳ್ಳತನ’ ಎಂದರೆ ದಲಿತರು, ಬುಡಕಟ್ಟು ಜನಾಂಗದವರು, ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ದುರ್ಬಲರು ಮತ್ತು ಬಡವರಿಗೆ ಸೇರಿದ ಪಡಿತರ, ಪಿಂಚಣಿ, ಔಷಧ, ಮಕ್ಕಳ ವಿದ್ಯಾರ್ಥಿವೇತನ ಮತ್ತು ಪರೀಕ್ಷಾ ಶುಲ್ಕದ ಕಳ್ಳತನ ಎಂದು ಖರ್ಗೆ ಹೇಳಿದರು.

‘ಮತದಾರರ ಅಧಿಕಾರ ಯಾತ್ರೆ’ ಬಿಹಾರದ ಜನರಲ್ಲಿ ಜಾಗೃತಿ ಮೂಡಿಸಿದೆ. ಜನರು ರಾಹುಲ್ ಗಾಂಧಿಯವರನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆ ಎಂದು ಎಂದರು.

ಹೆಚ್ಚುತ್ತಿರುವ ನಿರುದ್ಯೋಗ, ಸಾಮಾಜಿಕ ಧ್ರುವೀಕರಣ ಮತ್ತು ಸಾಂವಿಧಾನಿಕ ಸಂಸ್ಥೆಗಳ ವ್ಯವಸ್ಥಿತ ದುರ್ಬಲಗೊಳಿಸುವಿಕೆಯ ಬಿಕ್ಕಟ್ಟುಗಳನ್ನು ಎತ್ತಿ ತೋರಿಸಿದ ಖರ್ಗೆಮ, ಮೋದಿ ಸರ್ಕಾರವು ತನ್ನ ರಾಜಕೀಯ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು.

ತೀವ್ರಗೊಂಡ ‘ಲಡಾಖ್ ರಾಜ್ಯತ್ವ’ ಹೋರಾಟ: ಲೇಹ್‌ನಲ್ಲಿ ಬೀದಿಗಿಳಿದ ಯುವಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...