Homeಮುಖಪುಟಬಿಹಾರ ಚುನಾವಣೆ ಮೋದಿ ಆಡಳಿತ ಅಂತ್ಯದ ಆರಂಭ: ಮಲ್ಲಿಕಾರ್ಜುನ ಖರ್ಗೆ

ಬಿಹಾರ ಚುನಾವಣೆ ಮೋದಿ ಆಡಳಿತ ಅಂತ್ಯದ ಆರಂಭ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯು ಮೋದಿ ಸರ್ಕಾರದ ‘ಭ್ರಷ್ಟ’ ಮತ್ತು ‘ಅಸಮರ್ಥ’ ಆಡಳಿತದ ಅಂತ್ಯದ ಆರಂಭ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ (ಸೆ.24) ಹೇಳಿದರು.

ಪಾಟ್ನಾದಲ್ಲಿ ನಡೆದ ಸಿಡಬ್ಲ್ಯೂಸಿ ಸಭೆಯಲ್ಲಿ ಬಿಹಾರದ ರಾಜಕೀಯ ಸನ್ನಿವೇಶದ ಕುರಿತು ಪ್ರತಿಕ್ರಿಯಿಸಿದ ಖರ್ಗೆ ಅವರು, ಆಡಳಿತಾರೂಢ ಎನ್‌ಡಿಎಯೊಳಗಿನ ಬಿರುಕನ್ನು ಎತ್ತಿ ತೋರಿಸಿದರು. ಆಂತರಿಕ ಕಲಹ ಈಗ ಬಹಿರಂಗವಾಗಿದೆ ಎಂದರು.

ಬಿಜೆಪಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿ ನೋಡುತ್ತಿದೆ. ಬಿಹಾರದ ಜನರು ಬಿಜೆಪಿಯ ವಿಭಜಕ ಕಾರ್ಯಸೂಚಿಯನ್ನು ತಿರಸ್ಕರಿಸುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಬೇಕು, ಧಾರ್ಮಿಕ ಧ್ರುವೀಕರಣವಲ್ಲ ಎಂದು ಖರ್ಗೆ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಖರ್ಗೆ ಅವರು, ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ರಂಗಗಳಲ್ಲಿ ಇವರು ದೇಶವನ್ನು ವಿಫಲಗೊಳಿಸಿದ್ದಾರೆ ಎಂದು ಆರೋಪಿಸಿದರು.

ಪಕ್ಷದ ನಾಯಕರನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಭಾರತವು ಅತ್ಯಂತ ಸವಾಲಿನ ಅವಧಿಯನ್ನು ಎದುರಿಸುತ್ತಿದೆ, ರಾಜತಾಂತ್ರಿಕ ತಪ್ಪು ಹೆಜ್ಜೆಗಳು ಮತ್ತು ದೇಶೀಯ ಪ್ರಕ್ಷುಬ್ಧತೆಗಳು ಮೋದಿ ಅವಧಿಯಲ್ಲಿ ‘ಆಡಳಿತದ ಸಂಪೂರ್ಣ ವೈಫಲ್ಯ’ವನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಸಮಸ್ಯೆಗಳು ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ರಾಜತಾಂತ್ರಿಕ ವೈಫಲ್ಯದ ಪರಿಣಾಮವಾಗಿದೆ. ಪ್ರಧಾನಿಯವರು ‘ನನ್ನ ಸ್ನೇಹಿತ’ ಎಂದು ಹೆಮ್ಮೆಪಟ್ಟವರು ಇಂದು ಭಾರತವನ್ನು ಹಲವು ಸಮಸ್ಯೆಗಳಿಗೆ ಸಿಲುಕಿಸುತ್ತಿದ್ದಾರೆ ಎಂದರು.

ಇಂದು, ನಮ್ಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ತಿರುಚುತ್ತಿರುವಾಗ, ಪ್ರಜಾಪ್ರಭುತ್ವದ ತಾಯಿಯಾದ ಬಿಹಾರದಲ್ಲಿ ನಮ್ಮ ವಿಸ್ತೃತ ಸಿಡಬ್ಲ್ಯೂಸಿ ಸಭೆಯನ್ನು ನಡೆಸುವುದು ಮತ್ತು ಈ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವ ನಮ್ಮ ಪ್ರತಿಜ್ಞೆಯನ್ನು ಪುನರುಚ್ಚರಿಸುವುದು ಅತ್ಯಗತ್ಯ ಎಂದು ಖರ್ಗೆ ಹೇಳಿದರು.

ಪ್ರಜಾಪ್ರಭುತ್ವದ ಅಡಿಪಾಯ ನ್ಯಾಯಯುತ ಮತ್ತು ಪಾರದರ್ಶಕ ಚುನಾವಣೆಗಳು ಎಂದು ಪ್ರತಿಪಾದಿಸಿದ ಖರ್ಗೆ, ಚುನಾವಣಾ ಆಯೋಗದ ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಯ ಬಗ್ಗೆ ಇಂದು ಗಂಭೀರ ಪ್ರಶ್ನೆಗಳು ಎದ್ದಿವೆ ಎಂದರು.

ವಿವಿಧ ರಾಜ್ಯಗಳಲ್ಲಿ ಬಹಿರಂಗಗೊಂಡಿರುವ ಮತಗಳ್ಳತನ ಕುರಿತ ಪ್ರಶ್ನೆಗಳಿಗೆ ಉತ್ತರಿಸುವ ಬದಲು, ಚುನಾವಣಾ ಆಯೋಗವು ನಮ್ಮಿಂದ ಅಫಿಡವಿಟ್‌ ಕೇಳುತ್ತಿದೆ ಎಂದು ಖರ್ಗೆ ಕಿಡಿಕಾರಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು ಉಲ್ಲೇಖಿಸಿದ ಖರ್ಗೆ, “ಬಿಹಾರದ ಉದಾಹರಣೆಯನ್ನು ಮುಂದಿಟ್ಟುಕೊಂಡು ಈಗ ದೇಶದಾದ್ಯಂತ ಲಕ್ಷಾಂತರ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಪಿತೂರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

‘ಮತಗಳ್ಳತನ’ ಎಂದರೆ ದಲಿತರು, ಬುಡಕಟ್ಟು ಜನಾಂಗದವರು, ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ದುರ್ಬಲರು ಮತ್ತು ಬಡವರಿಗೆ ಸೇರಿದ ಪಡಿತರ, ಪಿಂಚಣಿ, ಔಷಧ, ಮಕ್ಕಳ ವಿದ್ಯಾರ್ಥಿವೇತನ ಮತ್ತು ಪರೀಕ್ಷಾ ಶುಲ್ಕದ ಕಳ್ಳತನ ಎಂದು ಖರ್ಗೆ ಹೇಳಿದರು.

‘ಮತದಾರರ ಅಧಿಕಾರ ಯಾತ್ರೆ’ ಬಿಹಾರದ ಜನರಲ್ಲಿ ಜಾಗೃತಿ ಮೂಡಿಸಿದೆ. ಜನರು ರಾಹುಲ್ ಗಾಂಧಿಯವರನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆ ಎಂದು ಎಂದರು.

ಹೆಚ್ಚುತ್ತಿರುವ ನಿರುದ್ಯೋಗ, ಸಾಮಾಜಿಕ ಧ್ರುವೀಕರಣ ಮತ್ತು ಸಾಂವಿಧಾನಿಕ ಸಂಸ್ಥೆಗಳ ವ್ಯವಸ್ಥಿತ ದುರ್ಬಲಗೊಳಿಸುವಿಕೆಯ ಬಿಕ್ಕಟ್ಟುಗಳನ್ನು ಎತ್ತಿ ತೋರಿಸಿದ ಖರ್ಗೆಮ, ಮೋದಿ ಸರ್ಕಾರವು ತನ್ನ ರಾಜಕೀಯ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು.

ತೀವ್ರಗೊಂಡ ‘ಲಡಾಖ್ ರಾಜ್ಯತ್ವ’ ಹೋರಾಟ: ಲೇಹ್‌ನಲ್ಲಿ ಬೀದಿಗಿಳಿದ ಯುವಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...