Homeಚಳವಳಿಬಿಹಾರ: ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಕೈಗಳನ್ನು ಕಟ್ಟಿ ಬಂಧಿಸಿದ ಪೊಲೀಸರು

ಬಿಹಾರ: ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಕೈಗಳನ್ನು ಕಟ್ಟಿ ಬಂಧಿಸಿದ ಪೊಲೀಸರು

- Advertisement -
- Advertisement -

ಬಿಹಾರದ ಗಯಾ ಜಿಲ್ಲೆಯಲ್ಲಿ ಮರಳು ಗಣಿಗಳ ಹರಾಜಿನ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಸರ್ಕಾರಿ ಅಧಿಕಾರಿಗಳಿಗೆ ಸಹಾಯ ಮಾಡುವ ಪೊಲೀಸ್ ಅಧಿಕಾರಿಗಳೊಂದಿಗೆ ಘರ್ಷಣೆ ನಡೆದಿದೆ. ಈ ಹಿನ್ನೆಲೆ ಮಹಿಳೆಯರು ಸೇರಿದಂತೆ ಹಲವರು ಗ್ರಾಮಸ್ಥರ ಕೈಗಳನ್ನು ಬಟ್ಟೆಯಿಂದಲೇ ಕಟ್ಟಿ ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಗ್ರಾಮಸ್ಥರು ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದಾಗ, ಗುಂಪು ಚದುರಿಸಲು ಪೊಲೀಸರು ಲಾಠಿ ಮತ್ತು ಅಶ್ರುವಾಯು ಸಿಡಿಸಿದ್ದಾರೆ. ಘರ್ಷಣೆಯಲ್ಲಿ ಮಹಿಳೆಯರು ಸೇರಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಸ್ಥರು ಮತ್ತು ಮಹಿಳೆಯರು ನೆಲದ ಮೇಲೆ ಕೈಕಟ್ಟಿ ಕುಳಿತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಮಹಿಳೆಯರ ಸಿರೆಯ ಸೆರಗು, ಯುವತಿಯರ ದುಪ್ಪಟ್ಟಗಳಿಂದಲೇ ಅವರ ಕೈಗಳನ್ನು ಕಟ್ಟಲಾಗಿದೆ. ಬಳಿಕ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್‍ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಿದ್ದರೂ, ಮಹಿಳಾ ಆರೋಪಿಗಳನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೆ ಎಂಬುದನ್ನು ನೋಡಿ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ರಾಜ್ಯದಲ್ಲಿ ಅಕ್ರಮ ಮರಳುಗಾರಿಕೆಯನ್ನು ನಿಭಾಯಿಸಲು, ಬಿಹಾರ ರಾಜ್ಯ ಗಣಿಗಾರಿಕೆ ನಿಗಮವು ಈ ತಿಂಗಳ ಆರಂಭದಲ್ಲಿ ಎಲ್ಲಾ ಮರಳು ಗಣಿಗಾರಿಕೆ ಸ್ಥಳಗಳ ಪರಿಸರ ಲೆಕ್ಕಪರಿಶೋಧನೆಯನ್ನು ನಡೆಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಹಿನ್ನೆಲೆ ಕೆಲಸ ನಿರ್ವಹಿಸುತ್ತಿರುವ ಖಾಸಗಿ ಸಂಸ್ಥೆಗಳು ಮರಳು ದಡಗಳನ್ನು ಪರಿಶೀಲಿಸಲು ತಂತ್ರಜ್ಞಾನ ಮತ್ತು ಡ್ರೋನ್‌ಗಳನ್ನು ಬಳಸುತ್ತಿವೆ.

ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ (ಕಾನೂನು ಮತ್ತು ಸುವ್ಯವಸ್ಥೆ), “ಬೆಳಗಂಜ್‌ನಲ್ಲಿ ಮರಳು ಗಣಿಗಾರಿಕೆಯ ಹರಾಜು ಸಂದರ್ಭದಲ್ಲಿ, ಕೆಲವು ಗ್ರಾಮಸ್ಥರು ಕಲ್ಲು ತೂರಾಟ ಆರಂಭಿಸಿದರು, ಇದರಲ್ಲಿ ಒಂಬತ್ತು ಪೊಲೀಸರು ಗಾಯಗೊಂಡಿದ್ದಾರೆ” ಎಂದು ಹೇಳಿದ್ದಾರೆ.

ಗುಂಪನ್ನು ಚದುರಿಸಲು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು, ಜಲಫಿರಂಗಿಗಳನ್ನು ಬಳಸಿದರು ಮತ್ತು ಅಶ್ರುವಾಯು ಸಿಡಿಸಿದ್ದಾರೆ. ಘರ್ಷಣೆಯಲ್ಲಿ ಮಹಿಳೆಯರು ಸೇರಿದಂತೆ ಕೆಲವು ಗ್ರಾಮಸ್ಥರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಪೊಲೀಸರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿ: ಘಾಜಿಯಾಬಾದ್: ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟಿಸುತ್ತಿದ್ದ ಮಹಿಳೆಯರ ಮೇಲೆ ಪೊಲೀಸರ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...