Homeಮುಖಪುಟರೈಲ್ವೇ ಪರೀಕ್ಷೆಯಲ್ಲಿನ ಅಕ್ರಮ ವಿರೋಧಿಸಿ ಬಿಹಾರ ಬಂದ್‌; ರಸ್ತೆ ತಡೆ ನಡೆಸಿ, ಟೈರ್‌ಗಳನ್ನು ಸುಟ್ಟ ಪ್ರತಿಭಟನಾಕಾರರು

ರೈಲ್ವೇ ಪರೀಕ್ಷೆಯಲ್ಲಿನ ಅಕ್ರಮ ವಿರೋಧಿಸಿ ಬಿಹಾರ ಬಂದ್‌; ರಸ್ತೆ ತಡೆ ನಡೆಸಿ, ಟೈರ್‌ಗಳನ್ನು ಸುಟ್ಟ ಪ್ರತಿಭಟನಾಕಾರರು

- Advertisement -
- Advertisement -

ರೈಲ್ವೇ ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳು ಇಂದು ಬಂದ್‌ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಬಿಹಾರದ ರಾಜಧಾನಿ ಪಾಟ್ನಾ ಮತ್ತು ರಾಜ್ಯದ ಇತರ ಸ್ಥಳಗಳಲ್ಲಿ ರಸ್ತೆ ತಡೆ ನಡೆಸಿದ್ದಾರೆ. ಅಖಿಲ ಭಾರತ ವಿದ್ಯಾರ್ಥಿಗಳ ಸಂಘ (AISA) ಸೇರಿದಂತೆ ಹಲವಾರು ವಿದ್ಯಾರ್ಥಿಗಳ ಸಂಘಟನೆಗಳು ಬಿಹಾರ ಬಂದ್‌ಗೆ ಕರೆ ನೀಡಿವೆ.

ರೈಲ್ವೇ ಉದ್ಯೋಗಗಳ ಪರೀಕ್ಷೆಯನ್ನು ವಿರೋಧಿಸಿ ಗಣರಾಜ್ಯೋತ್ಸವ ದಿನದಂದು ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸೆಗೆ ತಿರುಗಿತ್ತು. ಈ ವೇಳೆ ರೈಲೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, ಇನ್ನೊಂದು ರೈಲಿಗೆ ಕಲ್ಲು ತೂರಾಟ ನಡೆಸಲಾಗಿತ್ತು.

ಇದನ್ನೂ ಓದಿ: ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

ಎರಡು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸುವ ರೈಲ್ವೇ ಇಲಾಖೆ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದರು. 2019 ರಲ್ಲಿ ಹೊರಡಿಸಲಾದ ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆಯಲ್ಲಿ ಒಂದೇ ಒಂದು ಪರೀಕ್ಷೆಯನ್ನು ಉಲ್ಲೇಖಿಸಲಾಗಿತ್ತು. ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ರೈಲ್ವೇ ನೇಮಕಾತಿ ಮಂಡಳಿಯ (ಆರ್‌ಆರ್‌ಬಿ) ಎನ್‌ಟಿಪಿಸಿ ಹಂತ 1 ಪರೀಕ್ಷೆಯ ಫಲಿತಾಂಶಗಳಲ್ಲಿನ ಅಕ್ರಮಗಳನ್ನು ಪ್ರತಿಭಟಿಸಿ ಈ ಪ್ರತಿಭಟನೆ ನಡೆಸಲಾಗಿತ್ತು. ವಿದ್ಯಾರ್ಥಿಗಳ ಕಳವಳಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿರುವ ರೈಲ್ವೆ ಸಚಿವಾಲಯದ ಕ್ರಮವನ್ನು ವಿದ್ಯಾರ್ಥಿ ಸಂಘಟನೆಗಳು “ವಂಚನೆ” ಎಂದು ಕರೆದಿವೆ.

ಲೆವೆಲ್‌ 2 ರಿಂದ ಲೆವೆಲ್‌‌ 6 ರವರೆಗಿನ 35,000 ಕ್ಕೂ ಹೆಚ್ಚು ಹುದ್ದೆಗಳಿಗೆ ಸುಮಾರು 1.25 ಕೋಟಿ ಅಭ್ಯರ್ಥಿಗಳು ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹುದ್ದೆಗಳ ಪ್ರಾರಂಭಿಕ ವೇತನವು ತಿಂಗಳಿಗೆ ₹ 19,900 ರಿಂದ ₹ 35,400 ವರೆಗೆ ಇರುತ್ತದೆ. ಸುಮಾರು 60 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಇದನ್ನೂ ಓದಿ: ಬಿಹಾರ: ಮಕ್ಕಳನ್ನು ಓಡಿಸಲು ಗುಂಡು ಹಾರಿಸಿದ ಬಿಜೆಪಿ ಶಾಸಕನ ಮಗನಿಗೆ ಗ್ರಾಮಸ್ಥರಿಂದ ಥಳಿತ

ರಾಷ್ಟ್ರೀಯ ಜನತಾ ದಳ, ಕಾಂಗ್ರೆಸ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮತ್ತು ಸಿಪಿಐ (ಮಾರ್ಕ್ಸ್‌ವಾದಿ) ಸೇರಿದಂತೆ ವಿರೋಧ ಪಕ್ಷಗಳು ಗುರುವಾರದಂದು ನೀಡಿದ ಜಂಟಿ ಹೇಳಿಕೆಯಲ್ಲಿ, “ಬಿಹಾರವು ದೇಶದಲ್ಲಿ ಅತಿ ಹೆಚ್ಚು ಯುವಜನರನ್ನು ಹೊಂದಿದೆ ಮತ್ತು ಅತಿ ಹೆಚ್ಚು ನಿರುದ್ಯೋಗವನ್ನು ಹೊಂದಿದೆ. ಒಕ್ಕೂಟ ಹಾಗೂ ಬಿಹಾರ ಸರಕಾರಗಳಿಂದ ವಿದ್ಯಾರ್ಥಿಗಳಿಗೆ ವಂಚನೆಯಾಗುತ್ತಿದೆ” ಎಂದು ಹೇಳಿದೆ.

“ಸರ್ಕಾರಗಳು ಯುವಕರಿಗೆ ಉದ್ಯೋಗಗಳ ಭರವಸೆಯನ್ನು ನೀಡುತ್ತದೆ. ಆದರೆ ಅವರು ಉದ್ಯೋಗಕ್ಕಾಗಿ ಒತ್ತಾಯಿಸಿ ಬೀದಿಗೆ ಬಂದಾಗ, ನಿತೀಶ್ ಕುಮಾರ್ ಸರ್ಕಾರವು ಅವರ ಮೇಲೆ ಲಾಠಿ ಬೀಸುತ್ತದೆ” ಎಂದು ಹೇಳಿಕೆ ತಿಳಿಸಿದೆ.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಘಟಕವಾದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ್ದಾರೆ.

ಇದನ್ನೂ ಓದಿ: ‘ನಾನು 11 ಬಾರಿ ಲಸಿಕೆ ಪಡೆದಿದ್ದೇನೆ’ ಎಂದ ವ್ಯಕ್ತಿ: ತನಿಖೆಗೆ ಆದೇಶಿಸಿದ ಬಿಹಾರ ಸರ್ಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...