Homeಮುಖಪುಟಬಿಹಾರ ಬಿಜೆಪಿ ಮುಖಂಡನ ಸಾವಿಗೆ ಹೃದಯಾಘಾತ ಕಾರಣ ಎಂದ ಮರಣೋತ್ತರ ಪರೀಕ್ಷಾ ವರದಿ

ಬಿಹಾರ ಬಿಜೆಪಿ ಮುಖಂಡನ ಸಾವಿಗೆ ಹೃದಯಾಘಾತ ಕಾರಣ ಎಂದ ಮರಣೋತ್ತರ ಪರೀಕ್ಷಾ ವರದಿ

- Advertisement -
- Advertisement -

ಬಿಹಾರ ಸರ್ಕಾರದ ಶಿಕ್ಷಕರ ನೇಮಕಾತಿ ನೀತಿ ವಿರೋಧಿಸಿ ಬಿಜೆಪಿ ಪಕ್ಷವು ಜುಲೈ 13 ರಂದು ಪಾಟ್ನಾದಲ್ಲಿ ನಡೆಸಿದ ಬೃಹತ್ ಪ್ರತಿಭಟನೆ ವೇಳೆ ಮೃತಪಟ್ಟ ಪಕ್ಷದ ಮುಖಂಡ ವಿಜಯ್ ಕುಮಾರ್ ಸಿಂಗ್ ಸಾವಿಗೆ ಹೃದಯಾಘಾತ ಕಾರಣ ಎಂದ ಮರಣೋತ್ತರ ಪರೀಕ್ಷಾ ವರದಿ ಹೇಳಿದೆ.

ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ನೀಡಿರುವ ಮರಣೋತ್ತರ ಪರೀಕ್ಷಾ ವರದಿಯಲ್ಲಿ, “ಮೃತರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಹೃದಯಾಘಾತ ಮತ್ತು ಇತರ ಅನಾರೋಗ್ಯದ ಕಾರಣಗಳಿಂದ ಸಾವು ಸಂಭವಿಸಿದೆ” ಎಂದು ಹೇಳಲಾಗಿದೆ.

ಇದನ್ನು ಒಪ್ಪದ ಬಿಜೆಪಿ ಪಕ್ಷವು ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಮಾಡಿದ ಲಾಠೀ ಚಾರ್ಜ್‌ನಲ್ಲಿ ವಿಜಯ್ ಕುಮಾರ್ ಸಿಂಗ್ ಸಾವನಪ್ಪಿದ್ದಾರೆ ಎಂದು ಆರೋಪಿಸಿದೆ. ಆದರೆ ಬಿಹಾರ ಸರ್ಕಾರ ತಮಗೆ ಬೇಕಾದಂತೆ ಮರಣೋತ್ತರ ವರದಿ ಬರೆಸಿದೆ, ಈ ಕುರಿತು ಉನ್ನತ ತನಿಖೆ ನಡೆಸಬೇಕು ಎಂದು ಬಿಹಾರದ ವಿರೋಧ ಪಕ್ಷದ ನಾಯಕ ವಿಜಯ್ ಕುಮಾರ್ ಸಿನ್ಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, “ವಿಜಯ್ ಕುಮಾರ್‌ರವರ ಸಾವು ನಮಗೂ ನೋವು ತರಿಸಿದೆ. ಆದರೆ ಪೊಲೀಸರು ಅವರ ಮೇಲೆ ಲಾಠೀಚಾರ್ಜ್‌ ಮಾಡಿಲ್ಲ. ಬದಲಿಗೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ಮರಣೋತ್ತರ ವರದಿ ಹೇಳಿದೆ. ಹಾಗಾಗಿ ಈ ಸಾವನ್ನು ಬಿಜೆಪಿ ಮುಖಂಡರು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಾರದು” ಎಂದಿದ್ದಾರೆ.

ಲಾಠಿ ಚಾರ್ಜ್ ಸಮಯದಲ್ಲಿ ಮೃತ ಸ್ಥಳದಲ್ಲಿರಲಿಲ್ಲ – ಪೊಲೀಸ್ ಹೇಳಿಕೆ

ಬಿಜೆಪಿಯ ಆರೋಪವನ್ನು ತಳ್ಳಿ ಹಾಕಿರುವ ಬಿಹಾರ ಪೊಲೀಸರು ಬಿಜೆಪಿ ಮುಖಂಡ ಲಾಠಿ ಚಾರ್ಜ್ ಸಮಯದಲ್ಲಿ ಪ್ರತಿಭಟನಾ ಸ್ಥಳದಲ್ಲಿರಲಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಪೊಲೀಸ್ ಲಾಠಿ ಚಾರ್ಜ್‌ನಲ್ಲಿ ಬಿಜೆಪಿ ಪಕ್ಷದ ಜೆಹಾನಾಬಾದ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಸಿಂಗ್ ಅವರು ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಆರೋಪಿಸಿದ ನಂತರ ಪೊಲೀಸರು ಹೇಳಿಕೆ ನೀಡಿದ್ದು, “ಪ್ರಾಥಮಿಕ ತನಿಖೆ ಮತ್ತು ವಿವಿಧ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯಿಂದ ಜೆಹಾನಾಬಾದ್ ಮೂಲದ ವಿಜಯ್ ಕುಮಾರ್ ಸಿಂಗ್ ಲಾಠಿ ಚಾರ್ಜ್ ನಡೆದ ಡಾಕ್ ಬಂಗಲೆ ವೃತ್ತವನ್ನು ತಲುಪಿರಲಿಲ್ಲ” ಎಂದು ಪಾಟ್ನಾದ ಹಿರಿಯ ಅಧೀಕ್ಷರಾದ ರಾಜೀವ್ ಮಿಶ್ರಾ ತಿಳಿಸಿದ್ದಾರೆ.

“ಒಂದು ಸಿಸಿಟಿವಿಯ ವಿಡಿಯೋ ತುಣುಕಿನಲ್ಲಿ ವಿಜಯ್ ಕುಮಾರ್ ಸಿಂಗ್ ಮತ್ತು ಅವರೊಂದಿಗೆ ಇಬ್ಬರು ವ್ಯಕ್ತಿಗಳು ಮಧ್ಯಾಹ್ನ 1 ಗಂಟೆ 22 ನಿಮಿಷದ ಸಂದರ್ಭದಲ್ಲಿ ಗಾಂಧಿ ಮೈದಾನ-ಚಜ್ಜು ಬಾಗ್ ರಸ್ತೆಯ ಮೂಲಕ ಚಜ್ಜು ಬಾಗ್ ಪ್ರದೇಶದಲ್ಲಿ ಚಲಿಸುತ್ತಿರುವುದನ್ನು ಕಾಣಬಹುದು. ಆ ಮೂವರೂ ಪರಸ್ಪರ ಮಾತನಾಡುತ್ತಿದ್ದರು ಮತ್ತು ಅವರು ಆರೋಗ್ಯವಾಗಿದ್ದರು. ಆನಂತರ 1 ಗಂಟೆ 27ನೇ ನಿಮಿಷದ ಸಂದರ್ಭದಲ್ಲಿ ಆಟೋ ರಿಕ್ಷಾದಲ್ಲಿ  ಆಸ್ಪತ್ರೆಗೆ ಕರೆದೊಯ್ದದ್ದು ಕೂಡ ಅದೇ ವಿಡಿಯೋದಲ್ಲಿ ದಾಖಲಾಗಿದೆ. ಸಿಸಿಟಿವಿ ಕ್ಯಾಮರಾದಿಂದ ಸುಮಾರು 50 ಮೀಟರ್ ದೂರದಲ್ಲಿ ಎಲೆಕ್ಟ್ರಿಕ್ ಟ್ರಾನ್ಸ್‌ಫಾರ್ಮರ್ ಬಳಿ ಸಿಂಗ್ ರಸ್ತೆಯಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ ಎಂದು ರಾಜೀವ್ ಮಿಶ್ರಾ ಹೇಳಿದ್ದಾರೆ.

ಆ ಪ್ರದೇಶದಲ್ಲಿ ಯಾವುದೇ ಲಾಠಿ ಚಾರ್ಜ್ ನಡೆದಿಲ್ಲ, ಸಿಂಗ್ ಅವರ ದೇಹದ ಮೇಲೆ ಯಾವುದೇ ಬಾಹ್ಯ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಅವರು ಹೇಳಿದ್ದಾರೆ.

“ಮೃತ ಸಿಂಗ್ ಜೊತೆಗಿದ್ದ ಇಬ್ಬರು ವ್ಯಕ್ತಿಗಳು ತಾವು ಡಾಕ್ ಬಂಗಲೆ ವೃತ್ತಕ್ಕೆ ಹೋಗಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಆ ವೃತ್ತವನ್ನು ಬ್ಯಾರಿಕೇಡ್ ಹಾಕಿ ಮುಚ್ಚಿದ್ದರಿಂದ ಅವರು ಆ ಕಡೆ ಹೋಗದಿರಲು ನಿರ್ಧರಿಸಿದರು. ನಂತರ ಸಿಂಗ್ ಅವರ ಸ್ನೇಹಿತರು ಅವರನ್ನು ರಿಕ್ಷಾದ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ರಿಕ್ಷಾವು ಹತ್ತಿರದ ಆಸ್ಪತ್ರೆಯನ್ನು ತಲುಪಲು ಐದರಿಂದ ಆರು ನಿಮಿಷಗಳನ್ನು ತೆಗೆದುಕೊಂಡಿರಬಹುದು ಎಂದು ನಾವು ನಂಬುತ್ತೇವೆ. ಅವರು ಮೂರ್ಛೆ ಹೋದ ಘಟನೆ ಮಧ್ಯಾಹ್ನ 1.23 ರಿಂದ 1.27 ರ ನಡುವೆ ನಡೆದಿರಬಹುದು. ಸಿಂಗ್ ಸುತ್ತಲೂ ಅಥವಾ ರಿಕ್ಷಾದ ಸುತ್ತಲೂ ಯಾವುದೇ ಪೊಲೀಸರು ಕಂಡುಬಂದಿಲ್ಲ ಎಂದು ದೃಶ್ಯಗಳು ಬಹಿರಂಗಪಡಿಸಿವೆ”ಎಂದು ಅವರು ಹೇಳಿದ್ದಾರೆ.

“ಅಲ್ಲದೇ ಚಜ್ಜು ಬಾಗ್ ಪ್ರದೇಶದಲ್ಲಿನ ಸಿಸಿಟಿವಿಯ ದೃಶ್ಯಗಳಲ್ಲಿ ಯಾವುದೇ ರೀತಿಯ ಕಾಲ್ತುಳಿತದ ದೃಶ್ಯ ಕಂಡುಬಂದಿಲ್ಲ. ಆ ಪ್ರದೇಶದಲ್ಲಿ ಸಂಪೂರ್ಣ ಸಾಮಾನ್ಯ ಸಂಚಾರ ದಟ್ಟಣೆ ಕಂಡುಬಂದಿದೆ. ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಅವರ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಬಹುದು” ಎಸ್‌ಎಸ್‌ಪಿ ಹೇಳಿದ್ದರು.

ಬಿಜೆಪಿಯ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಒಟ್ಟು 59 ಜನರನ್ನು ಬಂಧಿಸಲಾಯಿತು ಆದರೆ ಅವರೆಲ್ಲರನ್ನೂ ನಂತರ ಬಿಡುಗಡೆ ಮಾಡಲಾಯಿತು ಎಂದು ಅವರು ಹೇಳಿದರು.

“ಮೃತರ ಮರಣೋತ್ತರ ಪರೀಕ್ಷೆಯನ್ನು ನಡೆಸುವಾಗ ಜಿಲ್ಲಾಡಳಿತವು ಸಂಪೂರ್ಣ ಪಾರದರ್ಶಕತೆಯನ್ನು ಅನುಸರಿಸಿದೆ. ಮ್ಯಾಜಿಸ್ಟ್ರೇಟ್ ಮತ್ತು ಮರಣೋತ್ತರ ಪರೀಕ್ಷೆಯನ್ನು ವೈದ್ಯಕೀಯ ಮಂಡಳಿಯು ವೀಡಿಯೊಗ್ರಫಿ ಅಡಿಯಲ್ಲಿ ನಡೆಸಿತು” ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಇತಿಹಾಸದಲ್ಲೇ ವಿಪಕ್ಷ ನಾಯಕನಿಲ್ಲದೆ ನಡೆದ ಅಧಿವೇಶನ: ಕುಖ್ಯಾತಿ ಪಡೆದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...