Homeಮುಖಪುಟಬಿಹಾರ ಬಿಜೆಪಿ ಮುಖಂಡನ ಸಾವಿಗೆ ಹೃದಯಾಘಾತ ಕಾರಣ ಎಂದ ಮರಣೋತ್ತರ ಪರೀಕ್ಷಾ ವರದಿ

ಬಿಹಾರ ಬಿಜೆಪಿ ಮುಖಂಡನ ಸಾವಿಗೆ ಹೃದಯಾಘಾತ ಕಾರಣ ಎಂದ ಮರಣೋತ್ತರ ಪರೀಕ್ಷಾ ವರದಿ

- Advertisement -
- Advertisement -

ಬಿಹಾರ ಸರ್ಕಾರದ ಶಿಕ್ಷಕರ ನೇಮಕಾತಿ ನೀತಿ ವಿರೋಧಿಸಿ ಬಿಜೆಪಿ ಪಕ್ಷವು ಜುಲೈ 13 ರಂದು ಪಾಟ್ನಾದಲ್ಲಿ ನಡೆಸಿದ ಬೃಹತ್ ಪ್ರತಿಭಟನೆ ವೇಳೆ ಮೃತಪಟ್ಟ ಪಕ್ಷದ ಮುಖಂಡ ವಿಜಯ್ ಕುಮಾರ್ ಸಿಂಗ್ ಸಾವಿಗೆ ಹೃದಯಾಘಾತ ಕಾರಣ ಎಂದ ಮರಣೋತ್ತರ ಪರೀಕ್ಷಾ ವರದಿ ಹೇಳಿದೆ.

ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ನೀಡಿರುವ ಮರಣೋತ್ತರ ಪರೀಕ್ಷಾ ವರದಿಯಲ್ಲಿ, “ಮೃತರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಹೃದಯಾಘಾತ ಮತ್ತು ಇತರ ಅನಾರೋಗ್ಯದ ಕಾರಣಗಳಿಂದ ಸಾವು ಸಂಭವಿಸಿದೆ” ಎಂದು ಹೇಳಲಾಗಿದೆ.

ಇದನ್ನು ಒಪ್ಪದ ಬಿಜೆಪಿ ಪಕ್ಷವು ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಮಾಡಿದ ಲಾಠೀ ಚಾರ್ಜ್‌ನಲ್ಲಿ ವಿಜಯ್ ಕುಮಾರ್ ಸಿಂಗ್ ಸಾವನಪ್ಪಿದ್ದಾರೆ ಎಂದು ಆರೋಪಿಸಿದೆ. ಆದರೆ ಬಿಹಾರ ಸರ್ಕಾರ ತಮಗೆ ಬೇಕಾದಂತೆ ಮರಣೋತ್ತರ ವರದಿ ಬರೆಸಿದೆ, ಈ ಕುರಿತು ಉನ್ನತ ತನಿಖೆ ನಡೆಸಬೇಕು ಎಂದು ಬಿಹಾರದ ವಿರೋಧ ಪಕ್ಷದ ನಾಯಕ ವಿಜಯ್ ಕುಮಾರ್ ಸಿನ್ಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, “ವಿಜಯ್ ಕುಮಾರ್‌ರವರ ಸಾವು ನಮಗೂ ನೋವು ತರಿಸಿದೆ. ಆದರೆ ಪೊಲೀಸರು ಅವರ ಮೇಲೆ ಲಾಠೀಚಾರ್ಜ್‌ ಮಾಡಿಲ್ಲ. ಬದಲಿಗೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ಮರಣೋತ್ತರ ವರದಿ ಹೇಳಿದೆ. ಹಾಗಾಗಿ ಈ ಸಾವನ್ನು ಬಿಜೆಪಿ ಮುಖಂಡರು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಾರದು” ಎಂದಿದ್ದಾರೆ.

ಲಾಠಿ ಚಾರ್ಜ್ ಸಮಯದಲ್ಲಿ ಮೃತ ಸ್ಥಳದಲ್ಲಿರಲಿಲ್ಲ – ಪೊಲೀಸ್ ಹೇಳಿಕೆ

ಬಿಜೆಪಿಯ ಆರೋಪವನ್ನು ತಳ್ಳಿ ಹಾಕಿರುವ ಬಿಹಾರ ಪೊಲೀಸರು ಬಿಜೆಪಿ ಮುಖಂಡ ಲಾಠಿ ಚಾರ್ಜ್ ಸಮಯದಲ್ಲಿ ಪ್ರತಿಭಟನಾ ಸ್ಥಳದಲ್ಲಿರಲಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಪೊಲೀಸ್ ಲಾಠಿ ಚಾರ್ಜ್‌ನಲ್ಲಿ ಬಿಜೆಪಿ ಪಕ್ಷದ ಜೆಹಾನಾಬಾದ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಸಿಂಗ್ ಅವರು ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಆರೋಪಿಸಿದ ನಂತರ ಪೊಲೀಸರು ಹೇಳಿಕೆ ನೀಡಿದ್ದು, “ಪ್ರಾಥಮಿಕ ತನಿಖೆ ಮತ್ತು ವಿವಿಧ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯಿಂದ ಜೆಹಾನಾಬಾದ್ ಮೂಲದ ವಿಜಯ್ ಕುಮಾರ್ ಸಿಂಗ್ ಲಾಠಿ ಚಾರ್ಜ್ ನಡೆದ ಡಾಕ್ ಬಂಗಲೆ ವೃತ್ತವನ್ನು ತಲುಪಿರಲಿಲ್ಲ” ಎಂದು ಪಾಟ್ನಾದ ಹಿರಿಯ ಅಧೀಕ್ಷರಾದ ರಾಜೀವ್ ಮಿಶ್ರಾ ತಿಳಿಸಿದ್ದಾರೆ.

“ಒಂದು ಸಿಸಿಟಿವಿಯ ವಿಡಿಯೋ ತುಣುಕಿನಲ್ಲಿ ವಿಜಯ್ ಕುಮಾರ್ ಸಿಂಗ್ ಮತ್ತು ಅವರೊಂದಿಗೆ ಇಬ್ಬರು ವ್ಯಕ್ತಿಗಳು ಮಧ್ಯಾಹ್ನ 1 ಗಂಟೆ 22 ನಿಮಿಷದ ಸಂದರ್ಭದಲ್ಲಿ ಗಾಂಧಿ ಮೈದಾನ-ಚಜ್ಜು ಬಾಗ್ ರಸ್ತೆಯ ಮೂಲಕ ಚಜ್ಜು ಬಾಗ್ ಪ್ರದೇಶದಲ್ಲಿ ಚಲಿಸುತ್ತಿರುವುದನ್ನು ಕಾಣಬಹುದು. ಆ ಮೂವರೂ ಪರಸ್ಪರ ಮಾತನಾಡುತ್ತಿದ್ದರು ಮತ್ತು ಅವರು ಆರೋಗ್ಯವಾಗಿದ್ದರು. ಆನಂತರ 1 ಗಂಟೆ 27ನೇ ನಿಮಿಷದ ಸಂದರ್ಭದಲ್ಲಿ ಆಟೋ ರಿಕ್ಷಾದಲ್ಲಿ  ಆಸ್ಪತ್ರೆಗೆ ಕರೆದೊಯ್ದದ್ದು ಕೂಡ ಅದೇ ವಿಡಿಯೋದಲ್ಲಿ ದಾಖಲಾಗಿದೆ. ಸಿಸಿಟಿವಿ ಕ್ಯಾಮರಾದಿಂದ ಸುಮಾರು 50 ಮೀಟರ್ ದೂರದಲ್ಲಿ ಎಲೆಕ್ಟ್ರಿಕ್ ಟ್ರಾನ್ಸ್‌ಫಾರ್ಮರ್ ಬಳಿ ಸಿಂಗ್ ರಸ್ತೆಯಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ ಎಂದು ರಾಜೀವ್ ಮಿಶ್ರಾ ಹೇಳಿದ್ದಾರೆ.

ಆ ಪ್ರದೇಶದಲ್ಲಿ ಯಾವುದೇ ಲಾಠಿ ಚಾರ್ಜ್ ನಡೆದಿಲ್ಲ, ಸಿಂಗ್ ಅವರ ದೇಹದ ಮೇಲೆ ಯಾವುದೇ ಬಾಹ್ಯ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಅವರು ಹೇಳಿದ್ದಾರೆ.

“ಮೃತ ಸಿಂಗ್ ಜೊತೆಗಿದ್ದ ಇಬ್ಬರು ವ್ಯಕ್ತಿಗಳು ತಾವು ಡಾಕ್ ಬಂಗಲೆ ವೃತ್ತಕ್ಕೆ ಹೋಗಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಆ ವೃತ್ತವನ್ನು ಬ್ಯಾರಿಕೇಡ್ ಹಾಕಿ ಮುಚ್ಚಿದ್ದರಿಂದ ಅವರು ಆ ಕಡೆ ಹೋಗದಿರಲು ನಿರ್ಧರಿಸಿದರು. ನಂತರ ಸಿಂಗ್ ಅವರ ಸ್ನೇಹಿತರು ಅವರನ್ನು ರಿಕ್ಷಾದ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ರಿಕ್ಷಾವು ಹತ್ತಿರದ ಆಸ್ಪತ್ರೆಯನ್ನು ತಲುಪಲು ಐದರಿಂದ ಆರು ನಿಮಿಷಗಳನ್ನು ತೆಗೆದುಕೊಂಡಿರಬಹುದು ಎಂದು ನಾವು ನಂಬುತ್ತೇವೆ. ಅವರು ಮೂರ್ಛೆ ಹೋದ ಘಟನೆ ಮಧ್ಯಾಹ್ನ 1.23 ರಿಂದ 1.27 ರ ನಡುವೆ ನಡೆದಿರಬಹುದು. ಸಿಂಗ್ ಸುತ್ತಲೂ ಅಥವಾ ರಿಕ್ಷಾದ ಸುತ್ತಲೂ ಯಾವುದೇ ಪೊಲೀಸರು ಕಂಡುಬಂದಿಲ್ಲ ಎಂದು ದೃಶ್ಯಗಳು ಬಹಿರಂಗಪಡಿಸಿವೆ”ಎಂದು ಅವರು ಹೇಳಿದ್ದಾರೆ.

“ಅಲ್ಲದೇ ಚಜ್ಜು ಬಾಗ್ ಪ್ರದೇಶದಲ್ಲಿನ ಸಿಸಿಟಿವಿಯ ದೃಶ್ಯಗಳಲ್ಲಿ ಯಾವುದೇ ರೀತಿಯ ಕಾಲ್ತುಳಿತದ ದೃಶ್ಯ ಕಂಡುಬಂದಿಲ್ಲ. ಆ ಪ್ರದೇಶದಲ್ಲಿ ಸಂಪೂರ್ಣ ಸಾಮಾನ್ಯ ಸಂಚಾರ ದಟ್ಟಣೆ ಕಂಡುಬಂದಿದೆ. ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಅವರ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಬಹುದು” ಎಸ್‌ಎಸ್‌ಪಿ ಹೇಳಿದ್ದರು.

ಬಿಜೆಪಿಯ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಒಟ್ಟು 59 ಜನರನ್ನು ಬಂಧಿಸಲಾಯಿತು ಆದರೆ ಅವರೆಲ್ಲರನ್ನೂ ನಂತರ ಬಿಡುಗಡೆ ಮಾಡಲಾಯಿತು ಎಂದು ಅವರು ಹೇಳಿದರು.

“ಮೃತರ ಮರಣೋತ್ತರ ಪರೀಕ್ಷೆಯನ್ನು ನಡೆಸುವಾಗ ಜಿಲ್ಲಾಡಳಿತವು ಸಂಪೂರ್ಣ ಪಾರದರ್ಶಕತೆಯನ್ನು ಅನುಸರಿಸಿದೆ. ಮ್ಯಾಜಿಸ್ಟ್ರೇಟ್ ಮತ್ತು ಮರಣೋತ್ತರ ಪರೀಕ್ಷೆಯನ್ನು ವೈದ್ಯಕೀಯ ಮಂಡಳಿಯು ವೀಡಿಯೊಗ್ರಫಿ ಅಡಿಯಲ್ಲಿ ನಡೆಸಿತು” ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಇತಿಹಾಸದಲ್ಲೇ ವಿಪಕ್ಷ ನಾಯಕನಿಲ್ಲದೆ ನಡೆದ ಅಧಿವೇಶನ: ಕುಖ್ಯಾತಿ ಪಡೆದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...