Homeಮುಖಪುಟಹೋಳಿಯಂದು ಮುಸ್ಲಿಮರು ಮನೆಯೊಳಗೇ ಇರಿ, ಹಿಂದೂಗಳಿಗೆ ಹಬ್ಬ ಆಚರಿಸಲು ಬಿಡಿ ಎಂದ ಬಿಹಾರದ ಬಿಜೆಪಿ ಶಾಸಕ!

ಹೋಳಿಯಂದು ಮುಸ್ಲಿಮರು ಮನೆಯೊಳಗೇ ಇರಿ, ಹಿಂದೂಗಳಿಗೆ ಹಬ್ಬ ಆಚರಿಸಲು ಬಿಡಿ ಎಂದ ಬಿಹಾರದ ಬಿಜೆಪಿ ಶಾಸಕ!

- Advertisement -
- Advertisement -

“ಈ ವರ್ಷ ಪವಿತ್ರ ರಂಝಾನ್ ಮಾಸದ ಶುಕ್ರವಾರ ಬರುವ ಹೋಳಿಯಂದು ಮನೆಯೊಳಗೆ ಇರಿ ಮತ್ತು ಹಿಂದೂಗಳು ತಮ್ಮ ಹಬ್ಬವನ್ನು ಯಾವುದೇ ಅಡೆತಡೆಗಳಿಲ್ಲದೆ ಆಚರಿಸಲು ಬಿಡಿ” ಎಂದು ಬಿಹಾರದ ಬಿಜೆಪಿ ಶಾಸಕರೊಬ್ಬರು ಸೋಮವಾರ (ಮಾ.10) ಮುಸ್ಲಿಮರಿಗೆ ಮನವಿ ಮಾಡಿರುವುದು ವಿವಾದಕ್ಕೀಡಾಗಿದೆ.

ಮಧುಬನಿ ಜಿಲ್ಲೆಯ ಬಿಸ್ಫಿ ವಿಧಾನಸಭಾ ಕ್ಷೇತ್ರದ ಶಾಸಕ ಹರಿಭೂಷಣ್ ಠಾಕೂರ್ ಬಚೌಲ್ ಅವರು ವಿಧಾನಸಭೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ.

“ಒಂದು ವರ್ಷದಲ್ಲಿ 52 ಶುಕ್ರವಾರಗಳು ಇರುತ್ತವೆ. ಅವುಗಳಲ್ಲಿ ಒಂದು ಹೋಳಿಯ ದಿನವೇ ಬಂದಿದೆ. ಆದ್ದರಿಂದ, ಮುಸ್ಲಿಮರು ಹಿಂದೂಗಳಿಗೆ ಹಬ್ಬವನ್ನು ಆಚರಿಸಲು ಬಿಡಬೇಕು. ಅವರ ಮೇಲೆ ಬಣ್ಣಗಳನ್ನು ಬಳಿದರೆ ನೊಂದುಕೊಳ್ಳಬಾರದು. ಅವರಿಗೆ ಅಂತಹ ಸಮಸ್ಯೆ ಇದ್ದರೆ, ಅವರು ಮನೆಯಲ್ಲೇ ಇರಬೇಕು. ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಇದು ಅತ್ಯಗತ್ಯ” ಎಂದು ಠಾಕೂರ್ ಹೇಳಿದ್ದಾರೆ.

ಮುಸ್ಲಿಮರು ರಂಝಾನ್ ಸಮಯದಲ್ಲಿ ಉಪವಾಸ ಆಚರಿಸುತ್ತಾರೆ. ಶುಕ್ರವಾರದಂದು ವಿಶೇಷ ಪ್ರಾರ್ಥನೆ ಮಾಡುತ್ತಾರೆ ಎಂದಾಗ, ಶಾಸಕ ಠಾಕೂರ್, “ಅವರದು ಯಾವಾಗಲೂ ದ್ವಿಮುಖ ನೀತಿ. ಬಣ್ಣದ ಪುಡಿ ಮಾರಾಟ ಮಾಡುವ ಅಂಗಡಿಗಳನ್ನು ಹಾಕುವ ಮೂಲಕ ಹಣ ಗಳಿಸಲು ಅವರಿಗೆ ಯಾವ ಅಡೆತಡೆಯೂ ಇಲ್ಲ. ಆದರೆ ಕೆಲವು ಬಣ್ಣದ ಕಲೆಗಳು ಅವರ ಬಟ್ಟೆಗಳ ಮೇಲೆ ಬಿದ್ದರೆ, ಅದು ಅವರಿಗೆ ಆಗುವುದಿಲ್ಲ”, ಎಂದಿದ್ದಾರೆ.

ಆರ್‌ಜೆಡಿ ಶಾಸಕ ಮತ್ತು ಮಾಜಿ ಸಚಿವ ಇಸ್ರೈಲ್ ಮನ್ಸೂರಿ, ಬಚೌಲ್ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಹಬ್ಬಗಳ ವಿಷಯಕ್ಕೆ ಬಂದಾಗ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಯಾವುದೇ ಸಮಸ್ಯೆ ಇಲ್ಲ. ಹಿಂದೂಗಳು ನಮ್ಮ ಇಫ್ತಾರ್ ಕೂಟಗಳಿಗೆ ಹಾಜರಾಗುತ್ತಾರೆ. ಬಿಜೆಪಿ ಶಾಸಕರು ಹೋಳಿಯಂದು ಮುಸ್ಲಿಮರ ಬಗ್ಗೆ ಏಕೆ ಚಿಂತೆ ಮಾಡುತ್ತಿದ್ದಾರೆ? ಇವರೆಲ್ಲ ರಾಜಕೀಯಕ್ಕಾಗಿ ಕೋಮು ಗಲಭೆಯನ್ನು ಹುಟ್ಟುಹಾಕುತ್ತಾರೆ. ಇವರೇ ಸನಾತನದ ಧ್ವಜಧಾರಿಗಳಂತೆ ನಟಿಸುತ್ತಾರೆ” ಎಂದು ಹೇಳಿದ್ದಾರೆ.

ರಾಜ್ಯ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಜೆಡಿ (ಯು) ನಾಯಕ ಜಮಾ ಖಾನ್, “ಹೋಳಿಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯುವುದಿಲ್ಲ. ಹಬ್ಬದ ಸಮಯದಲ್ಲಿ ಸಾಮರಸ್ಯವನ್ನು ಕಾಪಾಡಲು ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ” ಎಂದಿದ್ದಾರೆ.

ಮಧ್ಯಪ್ರದೇಶ | ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮಸೀದಿಯ ಮುಂದೆ ವಿಜಯೋತ್ಸವ ರ‍್ಯಾಲಿ ನಡೆಸಿದ ದುಷ್ಕರ್ಮಿಗಳು; ಭುಗಿಲೆದ್ದ ಕೋಮು ಸಂಘರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...