Homeಮುಖಪುಟಬಿಹಾರ ಸಂಪುಟ ವಿಸ್ತರಣೆ ಮೂಲಕ ಬಿಜೆಪಿಗೆ ಸಂದೇಶ ರವಾನಿಸಿದ ನಿತೀಶ್ ಕುಮಾರ್

ಬಿಹಾರ ಸಂಪುಟ ವಿಸ್ತರಣೆ ಮೂಲಕ ಬಿಜೆಪಿಗೆ ಸಂದೇಶ ರವಾನಿಸಿದ ನಿತೀಶ್ ಕುಮಾರ್

ಪ್ರಸ್ತುತ ಬಿಜೆಪಿಯಲ್ಲಿ 16 ಮಂತ್ರಿಗಳಿದ್ದು, ಅವರ ಬಳಿ 22 ಖಾತೆಗಳಿವೆ. ಜೆಡಿಯುಗೆ 13 ಮಂತ್ರಿಗಳಿದ್ದರೂ 21 ಪ್ರಮುಖ ಇಲಾಖೆಯನ್ನು ಹಿಡಿತದಲ್ಲಿಟ್ಟುಕೊಂಡಿದೆ.

- Advertisement -
- Advertisement -

ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಮೈತ್ರಿಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು, ಆ ಮೂಲಕ ಅವರು ಬಿಜೆಪಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಮಂತ್ರಿಗಳನ್ನು ಪಡೆಯಲು ಬಿಜೆಪಿ ಸಫಲವಾಗಿದೆ. ಆದರೆ ಗೃಹ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಕಾರ್ಯಗಳು, ಜಲಸಂಪನ್ಮೂಲಗಳಂತಹ ಎಲ್ಲಾ ಪ್ರಮುಖ ಇಲಾಖೆಗಳು ನಿತೀಶ್‌ ಕುಮಾರ್ ನೇತೃತ್ವದ ಜೆಡಿಯುಗೆ ಉಳಿಸಿಕೊಂಡಿದೆ. ಇದರಿಂದಾಗಿ ಹೆಚ್ಚಿನ ಮಂತ್ರಿಗಳು ಹಾಗೂ ಶಾಸಕರು ಇದ್ದರೂ ಬಿಜೆಪಿಗೆ ಮೈತ್ರಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲವನ್ನೂ ಒಪ್ಪಿಕೊಂಡಿದೆ.

ಕಳೆದ ವರ್ಷದ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಎನ್‌ಡಿಎ ಮೈತ್ರಿಕೂಟದ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಮುಖ್ಯಮಂತ್ರಿ ಸ್ಥಾನವನ್ನು ಜೆಡಿಯುಗೆ ಬಿಟ್ಟುಕೊಟ್ಟಿತ್ತು.

ಪ್ರಸ್ತುತ ಬಿಜೆಪಿಯಲ್ಲಿ 16 ಮಂತ್ರಿಗಳಿದ್ದು, ಅವರ ಬಳಿ 22 ಖಾತೆಗಳಿವೆ. ಜೆಡಿಯುಗೆ 13 ಮಂತ್ರಿಗಳಿದ್ದರೂ 21 ಪ್ರಮುಖ ಇಲಾಖೆಯನ್ನು ಹಿಡಿತದಲ್ಲಿಟ್ಟುಕೊಂಡಿದೆ. ಜಿತಾನ್ ರಾಮ್ ಮಾಂಜಿ ಅವರ ಎಚ್‌ಎಎಂ ಪಕ್ಷಕ್ಕೆ ಮತ್ತು ವಿಐಪಿ ಪಕ್ಷಕ್ಕೆ ತಲಾ ಒಂದು ಸಚಿವ ಸ್ಥಾನವನ್ನು ನೀಡಲಾಗಿದೆ.

ಇದನ್ನೂ ಓದಿ: ಕೃಷಿ ಕಾನೂನು ವಿರೋಧಿಸಿ ರಾಜ ಭವನಕ್ಕೆ ಮುತ್ತಿಗೆ: ಬಿಹಾರದ ರೈತರ ಮೇಲೆ ಲಾಠಿ ಚಾರ್ಜ್!

ಹೊಸ ಮಂತ್ರಿ ಮಂಡಲದ ಹಿರಿಯ ನಾಯಕ, ಮಾಜಿ ಕೇಂದ್ರ ಮಂತ್ರಿ ಶಹನಾವಾಜ್ ಹುಸೇನ್‌ಗೆ‌‌ ಯಾವುದೇ ಉದ್ಯಮವನ್ನು ಹೊಂದಿರದ ರಾಜ್ಯದಲ್ಲಿ ಉದ್ಯಮ ಸಚಿವಾಲಯವನ್ನು ನೀಡಲಾಗಿದೆ. ಉಪಮುಖ್ಯಮಂತ್ರಿ ರೇಣು ದೇವಿಗೆ ವಿಪತ್ತು ನಿರ್ವಹಣಾ ಖಾತೆಯನ್ನು ನೀಡಲಾಗಿದೆ.

36 ಸದಸ್ಯರನ್ನು ಹೊಂದಿರುವ ಬಿಹಾರ ಸಚಿವ ಸಂಪುಟದಲ್ಲಿ, ಇದುವರೆಗೂ ಮುಖ್ಯಮಂತ್ರಿಯ ಹೊರತಾಗಿ ಕೇವಲ 13 ಮಂದಿ ಮಾತ್ರ ಸಚಿವರಿದ್ದರು.

ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷವು ಏಕಾಂಗಿಯಾಗಿ ಸ್ಪರ್ಧೆ ಮಾಡಿದ್ದರಿಂದ ಬಿಜೆಪಿಯು ಬಿಹಾರದಲ್ಲಿ ಅದ್ಬುತ ಫಲಿತಾಂಶ ಪಡೆಯುವಂತಾಯಿತು. ಪಾಸ್ವಾನ್ ಅವರ ಪಕ್ಷವು ಬಿಜೆಪಿ ಸ್ಫರ್ಧಿಸಿರುವ ಕ್ಷೇತ್ರಗಳನ್ನು ಬಿಟ್ಟು ಜೆಡಿಯು ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಿ, ಜೆಡಿಯು ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲದಂತೆ ನೋಡಿಕೊಂಡಿದ್ದರು.

ಇದರಿಂದಾಗಿ ಈ ಹಿಂದೆ 71 ಸ್ಥಾನಗಳನ್ನು ಹೊಂದಿದ್ದ ನಿತೀಶ್ ಕುಮಾರ್ ಪಕ್ಷವಾದ ಜೆಡಿಯು 43 ಕ್ಕೆ ಇಳಿಯಿತು. ಬಿಜೆಪಿಯು 74 ಸ್ಥಾನಗಳನ್ನು ಗೆದ್ದು ಮೈತ್ರಿಕೂಟದ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಚುನಾವಣೆಯ ನಂತರ ಈ ಬಗ್ಗೆ ನಿತೀಶ್ ಕುಮಾರ್ ತಮ್ಮ ಸೋಲಿಗೆ‌ ಎಲ್‌ಜೆಪಿಯನ್ನು ದೂಷಿಸಿದ್ದರು.


ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...