Homeಮುಖಪುಟಬಿಹಾರ ಸಂಪುಟ ವಿಸ್ತರಣೆ ಮೂಲಕ ಬಿಜೆಪಿಗೆ ಸಂದೇಶ ರವಾನಿಸಿದ ನಿತೀಶ್ ಕುಮಾರ್

ಬಿಹಾರ ಸಂಪುಟ ವಿಸ್ತರಣೆ ಮೂಲಕ ಬಿಜೆಪಿಗೆ ಸಂದೇಶ ರವಾನಿಸಿದ ನಿತೀಶ್ ಕುಮಾರ್

ಪ್ರಸ್ತುತ ಬಿಜೆಪಿಯಲ್ಲಿ 16 ಮಂತ್ರಿಗಳಿದ್ದು, ಅವರ ಬಳಿ 22 ಖಾತೆಗಳಿವೆ. ಜೆಡಿಯುಗೆ 13 ಮಂತ್ರಿಗಳಿದ್ದರೂ 21 ಪ್ರಮುಖ ಇಲಾಖೆಯನ್ನು ಹಿಡಿತದಲ್ಲಿಟ್ಟುಕೊಂಡಿದೆ.

- Advertisement -
- Advertisement -

ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಮೈತ್ರಿಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು, ಆ ಮೂಲಕ ಅವರು ಬಿಜೆಪಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಮಂತ್ರಿಗಳನ್ನು ಪಡೆಯಲು ಬಿಜೆಪಿ ಸಫಲವಾಗಿದೆ. ಆದರೆ ಗೃಹ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಕಾರ್ಯಗಳು, ಜಲಸಂಪನ್ಮೂಲಗಳಂತಹ ಎಲ್ಲಾ ಪ್ರಮುಖ ಇಲಾಖೆಗಳು ನಿತೀಶ್‌ ಕುಮಾರ್ ನೇತೃತ್ವದ ಜೆಡಿಯುಗೆ ಉಳಿಸಿಕೊಂಡಿದೆ. ಇದರಿಂದಾಗಿ ಹೆಚ್ಚಿನ ಮಂತ್ರಿಗಳು ಹಾಗೂ ಶಾಸಕರು ಇದ್ದರೂ ಬಿಜೆಪಿಗೆ ಮೈತ್ರಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲವನ್ನೂ ಒಪ್ಪಿಕೊಂಡಿದೆ.

ಕಳೆದ ವರ್ಷದ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಎನ್‌ಡಿಎ ಮೈತ್ರಿಕೂಟದ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಮುಖ್ಯಮಂತ್ರಿ ಸ್ಥಾನವನ್ನು ಜೆಡಿಯುಗೆ ಬಿಟ್ಟುಕೊಟ್ಟಿತ್ತು.

ಪ್ರಸ್ತುತ ಬಿಜೆಪಿಯಲ್ಲಿ 16 ಮಂತ್ರಿಗಳಿದ್ದು, ಅವರ ಬಳಿ 22 ಖಾತೆಗಳಿವೆ. ಜೆಡಿಯುಗೆ 13 ಮಂತ್ರಿಗಳಿದ್ದರೂ 21 ಪ್ರಮುಖ ಇಲಾಖೆಯನ್ನು ಹಿಡಿತದಲ್ಲಿಟ್ಟುಕೊಂಡಿದೆ. ಜಿತಾನ್ ರಾಮ್ ಮಾಂಜಿ ಅವರ ಎಚ್‌ಎಎಂ ಪಕ್ಷಕ್ಕೆ ಮತ್ತು ವಿಐಪಿ ಪಕ್ಷಕ್ಕೆ ತಲಾ ಒಂದು ಸಚಿವ ಸ್ಥಾನವನ್ನು ನೀಡಲಾಗಿದೆ.

ಇದನ್ನೂ ಓದಿ: ಕೃಷಿ ಕಾನೂನು ವಿರೋಧಿಸಿ ರಾಜ ಭವನಕ್ಕೆ ಮುತ್ತಿಗೆ: ಬಿಹಾರದ ರೈತರ ಮೇಲೆ ಲಾಠಿ ಚಾರ್ಜ್!

ಹೊಸ ಮಂತ್ರಿ ಮಂಡಲದ ಹಿರಿಯ ನಾಯಕ, ಮಾಜಿ ಕೇಂದ್ರ ಮಂತ್ರಿ ಶಹನಾವಾಜ್ ಹುಸೇನ್‌ಗೆ‌‌ ಯಾವುದೇ ಉದ್ಯಮವನ್ನು ಹೊಂದಿರದ ರಾಜ್ಯದಲ್ಲಿ ಉದ್ಯಮ ಸಚಿವಾಲಯವನ್ನು ನೀಡಲಾಗಿದೆ. ಉಪಮುಖ್ಯಮಂತ್ರಿ ರೇಣು ದೇವಿಗೆ ವಿಪತ್ತು ನಿರ್ವಹಣಾ ಖಾತೆಯನ್ನು ನೀಡಲಾಗಿದೆ.

36 ಸದಸ್ಯರನ್ನು ಹೊಂದಿರುವ ಬಿಹಾರ ಸಚಿವ ಸಂಪುಟದಲ್ಲಿ, ಇದುವರೆಗೂ ಮುಖ್ಯಮಂತ್ರಿಯ ಹೊರತಾಗಿ ಕೇವಲ 13 ಮಂದಿ ಮಾತ್ರ ಸಚಿವರಿದ್ದರು.

ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷವು ಏಕಾಂಗಿಯಾಗಿ ಸ್ಪರ್ಧೆ ಮಾಡಿದ್ದರಿಂದ ಬಿಜೆಪಿಯು ಬಿಹಾರದಲ್ಲಿ ಅದ್ಬುತ ಫಲಿತಾಂಶ ಪಡೆಯುವಂತಾಯಿತು. ಪಾಸ್ವಾನ್ ಅವರ ಪಕ್ಷವು ಬಿಜೆಪಿ ಸ್ಫರ್ಧಿಸಿರುವ ಕ್ಷೇತ್ರಗಳನ್ನು ಬಿಟ್ಟು ಜೆಡಿಯು ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಿ, ಜೆಡಿಯು ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲದಂತೆ ನೋಡಿಕೊಂಡಿದ್ದರು.

ಇದರಿಂದಾಗಿ ಈ ಹಿಂದೆ 71 ಸ್ಥಾನಗಳನ್ನು ಹೊಂದಿದ್ದ ನಿತೀಶ್ ಕುಮಾರ್ ಪಕ್ಷವಾದ ಜೆಡಿಯು 43 ಕ್ಕೆ ಇಳಿಯಿತು. ಬಿಜೆಪಿಯು 74 ಸ್ಥಾನಗಳನ್ನು ಗೆದ್ದು ಮೈತ್ರಿಕೂಟದ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಚುನಾವಣೆಯ ನಂತರ ಈ ಬಗ್ಗೆ ನಿತೀಶ್ ಕುಮಾರ್ ತಮ್ಮ ಸೋಲಿಗೆ‌ ಎಲ್‌ಜೆಪಿಯನ್ನು ದೂಷಿಸಿದ್ದರು.


ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...