Homeಮುಖಪುಟಬಿಹಾರ ಸಂಪುಟ ವಿಸ್ತರಣೆ ಮೂಲಕ ಬಿಜೆಪಿಗೆ ಸಂದೇಶ ರವಾನಿಸಿದ ನಿತೀಶ್ ಕುಮಾರ್

ಬಿಹಾರ ಸಂಪುಟ ವಿಸ್ತರಣೆ ಮೂಲಕ ಬಿಜೆಪಿಗೆ ಸಂದೇಶ ರವಾನಿಸಿದ ನಿತೀಶ್ ಕುಮಾರ್

ಪ್ರಸ್ತುತ ಬಿಜೆಪಿಯಲ್ಲಿ 16 ಮಂತ್ರಿಗಳಿದ್ದು, ಅವರ ಬಳಿ 22 ಖಾತೆಗಳಿವೆ. ಜೆಡಿಯುಗೆ 13 ಮಂತ್ರಿಗಳಿದ್ದರೂ 21 ಪ್ರಮುಖ ಇಲಾಖೆಯನ್ನು ಹಿಡಿತದಲ್ಲಿಟ್ಟುಕೊಂಡಿದೆ.

- Advertisement -
- Advertisement -

ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಮೈತ್ರಿಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು, ಆ ಮೂಲಕ ಅವರು ಬಿಜೆಪಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಮಂತ್ರಿಗಳನ್ನು ಪಡೆಯಲು ಬಿಜೆಪಿ ಸಫಲವಾಗಿದೆ. ಆದರೆ ಗೃಹ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಕಾರ್ಯಗಳು, ಜಲಸಂಪನ್ಮೂಲಗಳಂತಹ ಎಲ್ಲಾ ಪ್ರಮುಖ ಇಲಾಖೆಗಳು ನಿತೀಶ್‌ ಕುಮಾರ್ ನೇತೃತ್ವದ ಜೆಡಿಯುಗೆ ಉಳಿಸಿಕೊಂಡಿದೆ. ಇದರಿಂದಾಗಿ ಹೆಚ್ಚಿನ ಮಂತ್ರಿಗಳು ಹಾಗೂ ಶಾಸಕರು ಇದ್ದರೂ ಬಿಜೆಪಿಗೆ ಮೈತ್ರಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲವನ್ನೂ ಒಪ್ಪಿಕೊಂಡಿದೆ.

ಕಳೆದ ವರ್ಷದ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಎನ್‌ಡಿಎ ಮೈತ್ರಿಕೂಟದ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಮುಖ್ಯಮಂತ್ರಿ ಸ್ಥಾನವನ್ನು ಜೆಡಿಯುಗೆ ಬಿಟ್ಟುಕೊಟ್ಟಿತ್ತು.

ಪ್ರಸ್ತುತ ಬಿಜೆಪಿಯಲ್ಲಿ 16 ಮಂತ್ರಿಗಳಿದ್ದು, ಅವರ ಬಳಿ 22 ಖಾತೆಗಳಿವೆ. ಜೆಡಿಯುಗೆ 13 ಮಂತ್ರಿಗಳಿದ್ದರೂ 21 ಪ್ರಮುಖ ಇಲಾಖೆಯನ್ನು ಹಿಡಿತದಲ್ಲಿಟ್ಟುಕೊಂಡಿದೆ. ಜಿತಾನ್ ರಾಮ್ ಮಾಂಜಿ ಅವರ ಎಚ್‌ಎಎಂ ಪಕ್ಷಕ್ಕೆ ಮತ್ತು ವಿಐಪಿ ಪಕ್ಷಕ್ಕೆ ತಲಾ ಒಂದು ಸಚಿವ ಸ್ಥಾನವನ್ನು ನೀಡಲಾಗಿದೆ.

ಇದನ್ನೂ ಓದಿ: ಕೃಷಿ ಕಾನೂನು ವಿರೋಧಿಸಿ ರಾಜ ಭವನಕ್ಕೆ ಮುತ್ತಿಗೆ: ಬಿಹಾರದ ರೈತರ ಮೇಲೆ ಲಾಠಿ ಚಾರ್ಜ್!

ಹೊಸ ಮಂತ್ರಿ ಮಂಡಲದ ಹಿರಿಯ ನಾಯಕ, ಮಾಜಿ ಕೇಂದ್ರ ಮಂತ್ರಿ ಶಹನಾವಾಜ್ ಹುಸೇನ್‌ಗೆ‌‌ ಯಾವುದೇ ಉದ್ಯಮವನ್ನು ಹೊಂದಿರದ ರಾಜ್ಯದಲ್ಲಿ ಉದ್ಯಮ ಸಚಿವಾಲಯವನ್ನು ನೀಡಲಾಗಿದೆ. ಉಪಮುಖ್ಯಮಂತ್ರಿ ರೇಣು ದೇವಿಗೆ ವಿಪತ್ತು ನಿರ್ವಹಣಾ ಖಾತೆಯನ್ನು ನೀಡಲಾಗಿದೆ.

36 ಸದಸ್ಯರನ್ನು ಹೊಂದಿರುವ ಬಿಹಾರ ಸಚಿವ ಸಂಪುಟದಲ್ಲಿ, ಇದುವರೆಗೂ ಮುಖ್ಯಮಂತ್ರಿಯ ಹೊರತಾಗಿ ಕೇವಲ 13 ಮಂದಿ ಮಾತ್ರ ಸಚಿವರಿದ್ದರು.

ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷವು ಏಕಾಂಗಿಯಾಗಿ ಸ್ಪರ್ಧೆ ಮಾಡಿದ್ದರಿಂದ ಬಿಜೆಪಿಯು ಬಿಹಾರದಲ್ಲಿ ಅದ್ಬುತ ಫಲಿತಾಂಶ ಪಡೆಯುವಂತಾಯಿತು. ಪಾಸ್ವಾನ್ ಅವರ ಪಕ್ಷವು ಬಿಜೆಪಿ ಸ್ಫರ್ಧಿಸಿರುವ ಕ್ಷೇತ್ರಗಳನ್ನು ಬಿಟ್ಟು ಜೆಡಿಯು ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಿ, ಜೆಡಿಯು ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲದಂತೆ ನೋಡಿಕೊಂಡಿದ್ದರು.

ಇದರಿಂದಾಗಿ ಈ ಹಿಂದೆ 71 ಸ್ಥಾನಗಳನ್ನು ಹೊಂದಿದ್ದ ನಿತೀಶ್ ಕುಮಾರ್ ಪಕ್ಷವಾದ ಜೆಡಿಯು 43 ಕ್ಕೆ ಇಳಿಯಿತು. ಬಿಜೆಪಿಯು 74 ಸ್ಥಾನಗಳನ್ನು ಗೆದ್ದು ಮೈತ್ರಿಕೂಟದ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಚುನಾವಣೆಯ ನಂತರ ಈ ಬಗ್ಗೆ ನಿತೀಶ್ ಕುಮಾರ್ ತಮ್ಮ ಸೋಲಿಗೆ‌ ಎಲ್‌ಜೆಪಿಯನ್ನು ದೂಷಿಸಿದ್ದರು.


ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...