Homeಮುಖಪುಟಬಿಹಾರ ಸಚಿವ ಸಂಪುಟ ವಿಸ್ತರಣೆ: ತೇಜಸ್ವಿ ಯಾದವ್‌ ಅವರ RJD ಗೆ ಸಿಂಹ ಪಾಲು

ಬಿಹಾರ ಸಚಿವ ಸಂಪುಟ ವಿಸ್ತರಣೆ: ತೇಜಸ್ವಿ ಯಾದವ್‌ ಅವರ RJD ಗೆ ಸಿಂಹ ಪಾಲು

- Advertisement -
- Advertisement -

ಬಿಜೆಪಿ ಮೈತ್ರಿಯಿಂದ ಹೊರ ಬಂದು ಆರ್‌ಜೆಡಿ ಜೊತೆಗೆ ಹೊಸದಾಗಿ ಸರ್ಕಾರ ರಚಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿಗೆ ಅತಿ ಹೆಚ್ಚು ಸ್ಥಾನಗಳು ದೊರೆತಿದ್ದು, ನೂತನ ಸಚಿವರಿಗೆ ರಾಜ್ಯಪಾಲ ಫಾಗು ಚೌಹಾಣ್ ಪ್ರಮಾಣ ವಚನ ಬೋಧಿಸಿದ್ದಾರೆ.

ಬಿಹಾರ ರಾಜಕೀಯ ಬೆಳವಣಿಗೆಯ ಇಂದಿನ ಪ್ರಮುಖ ಅಂಶಗಳು ಇಲ್ಲಿವೆ.

  • ಇಂದು ಬಿಹಾರ ಸಂಪುಟಕ್ಕೆ ಒಟ್ಟು 31 ಸಚಿವರು ಸೇರ್ಪಡೆಗೊಂಡಿದ್ದಾರೆ. ತೇಜಸ್ವಿ ಯಾದವ್‌‌ ಅವರ ಆರ್‌ಜೆಡಿಗೆ 16 ಸಚಿವ ಸ್ಥಾನಗಳು ದೊರೆತಿದ್ದು, ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌ ಅವರ ಜೆಡಿಯುಗೆ 11 ಸ್ಥಾನಗಳನ್ನು ಗಳಿಸಿದೆ.
    .
    ಇದನ್ನೂ ಓದಿ: ಬಿಹಾರ: ಬಹುಮತ ಸಾಬೀತುಪಡಿಸಲು 2 ವಾರ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್ – ಕಾರಣ?
  • ಕಾಂಗ್ರೆಸ್‌ನ ಇಬ್ಬರು ಶಾಸಕರು, ಜಿತಿನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾದ ಒಬ್ಬರು ಮತ್ತು ಏಕೈಕ ಸ್ವತಂತ್ರ ಶಾಸಕ ಸುಮಿತ್ ಕುಮಾರ್ ಸಿಂಗ್ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಸಿಎಂ ನಿತೀಶ್ ಕುಮಾರ್ ಅವರು ಮೊಹಮ್ಮದ್ ಜಮಾ ಖಾನ್, ಜಯಂತ್ ರಾಜ್, ಶೀಲಾ ಕುಮಾರಿ, ಸುನಿಲ್ ಕುಮಾರ್, ಸಂಜಯ್ ಝಾ, ಮದನ್ ಸಾಹ್ನಿ, ಶ್ರವಣ್ ಕುಮಾರ್, ಅಶೋಕ್ ಚೌಧರಿ, ಲೇಶಿ ಸಿಂಗ್, ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಯಾದವ್ ಸೇರಿದಂತೆ ತಮ್ಮ ಪಕ್ಷದ ಹೆಚ್ಚಿನ ಮಂತ್ರಿಗಳನ್ನು ಉಳಿಸಿಕೊಂಡಿದ್ದಾರೆ.
  • ಆರ್‌ಜೆಡಿಯಿಂದ ತೇಜಸ್ವಿ ಯಾದವ್ ಅವರ ಸಹೋದರ ತೇಜ್ ಪ್ರತಾಪ್ ಯಾದವ್, ಅಲೋಕ್ ಮೆಹ್ತಾ, ಸುರೇಂದ್ರ ಪ್ರಸಾದ್ ಯಾದವ್ ಮತ್ತು ರಮಾನಂದ್ ಯಾದವ್, ಕುಮಾರ್ ಸರ್ವಜೀತ್, ಲಲಿತ್ ಯಾದವ್, ಸಮೀರ್ ಕುಮಾರ್ ಮಹಾಸೇತ್, ಚಂದ್ರಶೇಖರ್, ಜಿತೇಂದ್ರ ಕುಮಾರ್ ರೈ, ಅನಿತಾ ದೇವಿ ಮತ್ತು ಸುಧಾಕರ್ ಸಿಂಗ್, ಇಸ್ರೇಲ್ ಮನ್ಸೂರಿ, ಸುರೇಂದ್ರ ಸಿಂಗ್, ಕಾರ್ತಿಕೇಯ , ಶಹನವಾಜ್ ಆಲಂ, ಶಮೀಮ್ ಅಹಮದ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
    .
    ಇದನ್ನೂ ಓದಿ: ಕಾಲು ಮುರಿಯಿರಿ, ಜಾಮೀನು ಕೊಡಿಸುತ್ತೇನೆ ಎಂದ ಸಿಎಂ ಶಿಂಧೆ ಬಣದ ಶಿವಸೇನೆ ಶಾಸಕನ ವಿರುದ್ಧ ದೂರು
  • ಕಾಂಗ್ರೆಸ್ ಶಾಸಕರಾದ ಅಫಕ್ ಆಲಂ ಮತ್ತು ಮುರಾರಿ ಲಾಲ್ ಗೌತಮ್ ಅವರು ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.
  • ಹಿಂದೂಸ್ತಾನಿ ಅವಾಮ್ ಮೋರ್ಚಾದಿಂದ ಶಾಸಕ ಸಂತೋಷ್ ಸುಮನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಬಿಹಾರ ಸಚಿವ ಸಂಪುಟವು ಮುಖ್ಯಮಂತ್ರಿ ಸೇರಿದಂತೆ 36 ಮಂತ್ರಿಗಳನ್ನು ಹೊಂದಬಹುದಾಗಿದೆ. ಭವಿಷ್ಯದ ಸಂಪುಟ ವಿಸ್ತರಣೆಗಾಗಿ ಕೆಲವು ಸಚಿವ ಸ್ಥಾನಗಳನ್ನು ಖಾಲಿ ಇರಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿವೆ.
  • ಈ ತಿಂಗಳ ಆರಂಭದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯಿಂದ ಬೇರ್ಪಟ್ಟು ಆರ್‌ಜೆಡಿ ಮತ್ತು ಇತರ ಪಕ್ಷಗಳೊಂದಿಗೆ ಸರ್ಕಾರ ರಚಿಸಿದ್ದಾರೆ.
  • ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ಅವರು ಮತ್ತು ಉಪ ಮುಖ್ಯಮಂತ್ರಿಯಾಗಿ ಆರ್‌ಜೆಡಿಯ ತೇಜಸ್ವಿ ಯಾದವ್ ಆಗಸ್ಟ್ 10 ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಬಿಜೆಪಿಯು ಮಹಾರಾಷ್ಟ್ರದ ಮಾದರಿಯನ್ನು ಪುನರಾವರ್ತಿಸಲು ಪ್ರಯತ್ನಿಸುತ್ತಿದೆ ಎಂದು ನಿತೀಶ್‌ ಕುಮಾರ್‌ ಅವರ ಪಕ್ಷವೂ ಬೆದರಿದೆ.
    .
    ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿಯನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿಹಾಕಿದ ಶಿಕ್ಷಕ
  • 243 ಸ್ಥಾನಗಳಿರುವ ಬಿಹಾರ ವಿಧಾನಸಭೆಯಲ್ಲಿ ಮಹಾಮೈತ್ರಿಕೂಟವು 163 ರ ಒಟ್ಟು ಬಲವನ್ನು ಹೊಂದಿದೆ. ಸ್ವತಂತ್ರ ಶಾಸಕ ಸುಮಿತ್ ಕುಮಾರ್ ಸಿಂಗ್ ಅವರು ನಿತೀಶ್ ಕುಮಾರ್ ಅವರಿಗೆ ಬೆಂಬಲ ನೀಡಿದ ನಂತರ ಅದರ ಬಲವು 164 ಕ್ಕೆ ಏರಿದೆ.
  • ಹೊಸ ಸರ್ಕಾರ ಆಗಸ್ಟ್ 24 ರಂದು ಬಿಹಾರ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸುವ ಸಾಧ್ಯತೆಯಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...