Homeಮುಖಪುಟಬಿಹಾರ ಸಚಿವ ಸಂಪುಟ ವಿಸ್ತರಣೆ: ತೇಜಸ್ವಿ ಯಾದವ್‌ ಅವರ RJD ಗೆ ಸಿಂಹ ಪಾಲು

ಬಿಹಾರ ಸಚಿವ ಸಂಪುಟ ವಿಸ್ತರಣೆ: ತೇಜಸ್ವಿ ಯಾದವ್‌ ಅವರ RJD ಗೆ ಸಿಂಹ ಪಾಲು

- Advertisement -
- Advertisement -

ಬಿಜೆಪಿ ಮೈತ್ರಿಯಿಂದ ಹೊರ ಬಂದು ಆರ್‌ಜೆಡಿ ಜೊತೆಗೆ ಹೊಸದಾಗಿ ಸರ್ಕಾರ ರಚಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿಗೆ ಅತಿ ಹೆಚ್ಚು ಸ್ಥಾನಗಳು ದೊರೆತಿದ್ದು, ನೂತನ ಸಚಿವರಿಗೆ ರಾಜ್ಯಪಾಲ ಫಾಗು ಚೌಹಾಣ್ ಪ್ರಮಾಣ ವಚನ ಬೋಧಿಸಿದ್ದಾರೆ.

ಬಿಹಾರ ರಾಜಕೀಯ ಬೆಳವಣಿಗೆಯ ಇಂದಿನ ಪ್ರಮುಖ ಅಂಶಗಳು ಇಲ್ಲಿವೆ.

  • ಇಂದು ಬಿಹಾರ ಸಂಪುಟಕ್ಕೆ ಒಟ್ಟು 31 ಸಚಿವರು ಸೇರ್ಪಡೆಗೊಂಡಿದ್ದಾರೆ. ತೇಜಸ್ವಿ ಯಾದವ್‌‌ ಅವರ ಆರ್‌ಜೆಡಿಗೆ 16 ಸಚಿವ ಸ್ಥಾನಗಳು ದೊರೆತಿದ್ದು, ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌ ಅವರ ಜೆಡಿಯುಗೆ 11 ಸ್ಥಾನಗಳನ್ನು ಗಳಿಸಿದೆ.
    .
    ಇದನ್ನೂ ಓದಿ: ಬಿಹಾರ: ಬಹುಮತ ಸಾಬೀತುಪಡಿಸಲು 2 ವಾರ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್ – ಕಾರಣ?
  • ಕಾಂಗ್ರೆಸ್‌ನ ಇಬ್ಬರು ಶಾಸಕರು, ಜಿತಿನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾದ ಒಬ್ಬರು ಮತ್ತು ಏಕೈಕ ಸ್ವತಂತ್ರ ಶಾಸಕ ಸುಮಿತ್ ಕುಮಾರ್ ಸಿಂಗ್ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಸಿಎಂ ನಿತೀಶ್ ಕುಮಾರ್ ಅವರು ಮೊಹಮ್ಮದ್ ಜಮಾ ಖಾನ್, ಜಯಂತ್ ರಾಜ್, ಶೀಲಾ ಕುಮಾರಿ, ಸುನಿಲ್ ಕುಮಾರ್, ಸಂಜಯ್ ಝಾ, ಮದನ್ ಸಾಹ್ನಿ, ಶ್ರವಣ್ ಕುಮಾರ್, ಅಶೋಕ್ ಚೌಧರಿ, ಲೇಶಿ ಸಿಂಗ್, ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಯಾದವ್ ಸೇರಿದಂತೆ ತಮ್ಮ ಪಕ್ಷದ ಹೆಚ್ಚಿನ ಮಂತ್ರಿಗಳನ್ನು ಉಳಿಸಿಕೊಂಡಿದ್ದಾರೆ.
  • ಆರ್‌ಜೆಡಿಯಿಂದ ತೇಜಸ್ವಿ ಯಾದವ್ ಅವರ ಸಹೋದರ ತೇಜ್ ಪ್ರತಾಪ್ ಯಾದವ್, ಅಲೋಕ್ ಮೆಹ್ತಾ, ಸುರೇಂದ್ರ ಪ್ರಸಾದ್ ಯಾದವ್ ಮತ್ತು ರಮಾನಂದ್ ಯಾದವ್, ಕುಮಾರ್ ಸರ್ವಜೀತ್, ಲಲಿತ್ ಯಾದವ್, ಸಮೀರ್ ಕುಮಾರ್ ಮಹಾಸೇತ್, ಚಂದ್ರಶೇಖರ್, ಜಿತೇಂದ್ರ ಕುಮಾರ್ ರೈ, ಅನಿತಾ ದೇವಿ ಮತ್ತು ಸುಧಾಕರ್ ಸಿಂಗ್, ಇಸ್ರೇಲ್ ಮನ್ಸೂರಿ, ಸುರೇಂದ್ರ ಸಿಂಗ್, ಕಾರ್ತಿಕೇಯ , ಶಹನವಾಜ್ ಆಲಂ, ಶಮೀಮ್ ಅಹಮದ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
    .
    ಇದನ್ನೂ ಓದಿ: ಕಾಲು ಮುರಿಯಿರಿ, ಜಾಮೀನು ಕೊಡಿಸುತ್ತೇನೆ ಎಂದ ಸಿಎಂ ಶಿಂಧೆ ಬಣದ ಶಿವಸೇನೆ ಶಾಸಕನ ವಿರುದ್ಧ ದೂರು
  • ಕಾಂಗ್ರೆಸ್ ಶಾಸಕರಾದ ಅಫಕ್ ಆಲಂ ಮತ್ತು ಮುರಾರಿ ಲಾಲ್ ಗೌತಮ್ ಅವರು ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.
  • ಹಿಂದೂಸ್ತಾನಿ ಅವಾಮ್ ಮೋರ್ಚಾದಿಂದ ಶಾಸಕ ಸಂತೋಷ್ ಸುಮನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಬಿಹಾರ ಸಚಿವ ಸಂಪುಟವು ಮುಖ್ಯಮಂತ್ರಿ ಸೇರಿದಂತೆ 36 ಮಂತ್ರಿಗಳನ್ನು ಹೊಂದಬಹುದಾಗಿದೆ. ಭವಿಷ್ಯದ ಸಂಪುಟ ವಿಸ್ತರಣೆಗಾಗಿ ಕೆಲವು ಸಚಿವ ಸ್ಥಾನಗಳನ್ನು ಖಾಲಿ ಇರಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿವೆ.
  • ಈ ತಿಂಗಳ ಆರಂಭದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯಿಂದ ಬೇರ್ಪಟ್ಟು ಆರ್‌ಜೆಡಿ ಮತ್ತು ಇತರ ಪಕ್ಷಗಳೊಂದಿಗೆ ಸರ್ಕಾರ ರಚಿಸಿದ್ದಾರೆ.
  • ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ಅವರು ಮತ್ತು ಉಪ ಮುಖ್ಯಮಂತ್ರಿಯಾಗಿ ಆರ್‌ಜೆಡಿಯ ತೇಜಸ್ವಿ ಯಾದವ್ ಆಗಸ್ಟ್ 10 ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಬಿಜೆಪಿಯು ಮಹಾರಾಷ್ಟ್ರದ ಮಾದರಿಯನ್ನು ಪುನರಾವರ್ತಿಸಲು ಪ್ರಯತ್ನಿಸುತ್ತಿದೆ ಎಂದು ನಿತೀಶ್‌ ಕುಮಾರ್‌ ಅವರ ಪಕ್ಷವೂ ಬೆದರಿದೆ.
    .
    ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿಯನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿಹಾಕಿದ ಶಿಕ್ಷಕ
  • 243 ಸ್ಥಾನಗಳಿರುವ ಬಿಹಾರ ವಿಧಾನಸಭೆಯಲ್ಲಿ ಮಹಾಮೈತ್ರಿಕೂಟವು 163 ರ ಒಟ್ಟು ಬಲವನ್ನು ಹೊಂದಿದೆ. ಸ್ವತಂತ್ರ ಶಾಸಕ ಸುಮಿತ್ ಕುಮಾರ್ ಸಿಂಗ್ ಅವರು ನಿತೀಶ್ ಕುಮಾರ್ ಅವರಿಗೆ ಬೆಂಬಲ ನೀಡಿದ ನಂತರ ಅದರ ಬಲವು 164 ಕ್ಕೆ ಏರಿದೆ.
  • ಹೊಸ ಸರ್ಕಾರ ಆಗಸ್ಟ್ 24 ರಂದು ಬಿಹಾರ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸುವ ಸಾಧ್ಯತೆಯಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...