Homeಮುಖಪುಟಬಿಹಾರ ಸಚಿವ ಸಂಪುಟ ವಿಸ್ತರಣೆ: ತೇಜಸ್ವಿ ಯಾದವ್‌ ಅವರ RJD ಗೆ ಸಿಂಹ ಪಾಲು

ಬಿಹಾರ ಸಚಿವ ಸಂಪುಟ ವಿಸ್ತರಣೆ: ತೇಜಸ್ವಿ ಯಾದವ್‌ ಅವರ RJD ಗೆ ಸಿಂಹ ಪಾಲು

- Advertisement -
- Advertisement -

ಬಿಜೆಪಿ ಮೈತ್ರಿಯಿಂದ ಹೊರ ಬಂದು ಆರ್‌ಜೆಡಿ ಜೊತೆಗೆ ಹೊಸದಾಗಿ ಸರ್ಕಾರ ರಚಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿಗೆ ಅತಿ ಹೆಚ್ಚು ಸ್ಥಾನಗಳು ದೊರೆತಿದ್ದು, ನೂತನ ಸಚಿವರಿಗೆ ರಾಜ್ಯಪಾಲ ಫಾಗು ಚೌಹಾಣ್ ಪ್ರಮಾಣ ವಚನ ಬೋಧಿಸಿದ್ದಾರೆ.

ಬಿಹಾರ ರಾಜಕೀಯ ಬೆಳವಣಿಗೆಯ ಇಂದಿನ ಪ್ರಮುಖ ಅಂಶಗಳು ಇಲ್ಲಿವೆ.

  • ಇಂದು ಬಿಹಾರ ಸಂಪುಟಕ್ಕೆ ಒಟ್ಟು 31 ಸಚಿವರು ಸೇರ್ಪಡೆಗೊಂಡಿದ್ದಾರೆ. ತೇಜಸ್ವಿ ಯಾದವ್‌‌ ಅವರ ಆರ್‌ಜೆಡಿಗೆ 16 ಸಚಿವ ಸ್ಥಾನಗಳು ದೊರೆತಿದ್ದು, ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌ ಅವರ ಜೆಡಿಯುಗೆ 11 ಸ್ಥಾನಗಳನ್ನು ಗಳಿಸಿದೆ.
    .
    ಇದನ್ನೂ ಓದಿ: ಬಿಹಾರ: ಬಹುಮತ ಸಾಬೀತುಪಡಿಸಲು 2 ವಾರ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್ – ಕಾರಣ?
  • ಕಾಂಗ್ರೆಸ್‌ನ ಇಬ್ಬರು ಶಾಸಕರು, ಜಿತಿನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾದ ಒಬ್ಬರು ಮತ್ತು ಏಕೈಕ ಸ್ವತಂತ್ರ ಶಾಸಕ ಸುಮಿತ್ ಕುಮಾರ್ ಸಿಂಗ್ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಸಿಎಂ ನಿತೀಶ್ ಕುಮಾರ್ ಅವರು ಮೊಹಮ್ಮದ್ ಜಮಾ ಖಾನ್, ಜಯಂತ್ ರಾಜ್, ಶೀಲಾ ಕುಮಾರಿ, ಸುನಿಲ್ ಕುಮಾರ್, ಸಂಜಯ್ ಝಾ, ಮದನ್ ಸಾಹ್ನಿ, ಶ್ರವಣ್ ಕುಮಾರ್, ಅಶೋಕ್ ಚೌಧರಿ, ಲೇಶಿ ಸಿಂಗ್, ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಯಾದವ್ ಸೇರಿದಂತೆ ತಮ್ಮ ಪಕ್ಷದ ಹೆಚ್ಚಿನ ಮಂತ್ರಿಗಳನ್ನು ಉಳಿಸಿಕೊಂಡಿದ್ದಾರೆ.
  • ಆರ್‌ಜೆಡಿಯಿಂದ ತೇಜಸ್ವಿ ಯಾದವ್ ಅವರ ಸಹೋದರ ತೇಜ್ ಪ್ರತಾಪ್ ಯಾದವ್, ಅಲೋಕ್ ಮೆಹ್ತಾ, ಸುರೇಂದ್ರ ಪ್ರಸಾದ್ ಯಾದವ್ ಮತ್ತು ರಮಾನಂದ್ ಯಾದವ್, ಕುಮಾರ್ ಸರ್ವಜೀತ್, ಲಲಿತ್ ಯಾದವ್, ಸಮೀರ್ ಕುಮಾರ್ ಮಹಾಸೇತ್, ಚಂದ್ರಶೇಖರ್, ಜಿತೇಂದ್ರ ಕುಮಾರ್ ರೈ, ಅನಿತಾ ದೇವಿ ಮತ್ತು ಸುಧಾಕರ್ ಸಿಂಗ್, ಇಸ್ರೇಲ್ ಮನ್ಸೂರಿ, ಸುರೇಂದ್ರ ಸಿಂಗ್, ಕಾರ್ತಿಕೇಯ , ಶಹನವಾಜ್ ಆಲಂ, ಶಮೀಮ್ ಅಹಮದ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
    .
    ಇದನ್ನೂ ಓದಿ: ಕಾಲು ಮುರಿಯಿರಿ, ಜಾಮೀನು ಕೊಡಿಸುತ್ತೇನೆ ಎಂದ ಸಿಎಂ ಶಿಂಧೆ ಬಣದ ಶಿವಸೇನೆ ಶಾಸಕನ ವಿರುದ್ಧ ದೂರು
  • ಕಾಂಗ್ರೆಸ್ ಶಾಸಕರಾದ ಅಫಕ್ ಆಲಂ ಮತ್ತು ಮುರಾರಿ ಲಾಲ್ ಗೌತಮ್ ಅವರು ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.
  • ಹಿಂದೂಸ್ತಾನಿ ಅವಾಮ್ ಮೋರ್ಚಾದಿಂದ ಶಾಸಕ ಸಂತೋಷ್ ಸುಮನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಬಿಹಾರ ಸಚಿವ ಸಂಪುಟವು ಮುಖ್ಯಮಂತ್ರಿ ಸೇರಿದಂತೆ 36 ಮಂತ್ರಿಗಳನ್ನು ಹೊಂದಬಹುದಾಗಿದೆ. ಭವಿಷ್ಯದ ಸಂಪುಟ ವಿಸ್ತರಣೆಗಾಗಿ ಕೆಲವು ಸಚಿವ ಸ್ಥಾನಗಳನ್ನು ಖಾಲಿ ಇರಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿವೆ.
  • ಈ ತಿಂಗಳ ಆರಂಭದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯಿಂದ ಬೇರ್ಪಟ್ಟು ಆರ್‌ಜೆಡಿ ಮತ್ತು ಇತರ ಪಕ್ಷಗಳೊಂದಿಗೆ ಸರ್ಕಾರ ರಚಿಸಿದ್ದಾರೆ.
  • ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ಅವರು ಮತ್ತು ಉಪ ಮುಖ್ಯಮಂತ್ರಿಯಾಗಿ ಆರ್‌ಜೆಡಿಯ ತೇಜಸ್ವಿ ಯಾದವ್ ಆಗಸ್ಟ್ 10 ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಬಿಜೆಪಿಯು ಮಹಾರಾಷ್ಟ್ರದ ಮಾದರಿಯನ್ನು ಪುನರಾವರ್ತಿಸಲು ಪ್ರಯತ್ನಿಸುತ್ತಿದೆ ಎಂದು ನಿತೀಶ್‌ ಕುಮಾರ್‌ ಅವರ ಪಕ್ಷವೂ ಬೆದರಿದೆ.
    .
    ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿಯನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿಹಾಕಿದ ಶಿಕ್ಷಕ
  • 243 ಸ್ಥಾನಗಳಿರುವ ಬಿಹಾರ ವಿಧಾನಸಭೆಯಲ್ಲಿ ಮಹಾಮೈತ್ರಿಕೂಟವು 163 ರ ಒಟ್ಟು ಬಲವನ್ನು ಹೊಂದಿದೆ. ಸ್ವತಂತ್ರ ಶಾಸಕ ಸುಮಿತ್ ಕುಮಾರ್ ಸಿಂಗ್ ಅವರು ನಿತೀಶ್ ಕುಮಾರ್ ಅವರಿಗೆ ಬೆಂಬಲ ನೀಡಿದ ನಂತರ ಅದರ ಬಲವು 164 ಕ್ಕೆ ಏರಿದೆ.
  • ಹೊಸ ಸರ್ಕಾರ ಆಗಸ್ಟ್ 24 ರಂದು ಬಿಹಾರ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸುವ ಸಾಧ್ಯತೆಯಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...