Homeಮುಖಪುಟಬಿಹಾರ: ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸಿ ನಿರ್ಣಯ ಅಂಗೀಕಾರ

ಬಿಹಾರ: ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸಿ ನಿರ್ಣಯ ಅಂಗೀಕಾರ

- Advertisement -
- Advertisement -

ಬಿಹಾರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಬಿಹಾರದ ನಿತೀಶ್ ಕುಮಾರ್ ಸಂಪುಟ ಬುಧವಾರ ಅಂಗೀಕರಿಸಿದೆ.

ಸಂಪುಟ ಸಭೆಯಲ್ಲಿ ಬೇಡಿಕೆಯನ್ನು ಅಂಗೀಕರಿಸಲು ಕೇಂದ್ರಕ್ಕೆ ಮನವಿ ಮಾಡುವ ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಸಾಮಾಜಿಕ ಮಾದ್ಯಮದ ಪೋಸ್ಟ್‌ನಲ್ಲಿ ಸಿಎಂ ನಿತೀಶ್‌ ಕುಮಾರ್‌ ಅವರು ಬಹಿರಂಗಪಡಿಸಿದ್ದಾರೆ.

ಬಿಹಾರಕ್ಕೆ ವಿಶೇಷ ವರ್ಗದ ಸ್ಥಾನಮಾನ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡುವ ನಿರ್ಣಯವನ್ನು ಕ್ಯಾಬಿನೆಟ್ ಅಂಗೀಕರಿಸಿದೆ. ತಮ್ಮ ಸರ್ಕಾರ ನಡೆಸಿದ ಜಾತಿ ಸಮೀಕ್ಷೆಯ ಫಲಿತಾಂಶಗಳಿಂದ ಹೊಸ ಬೇಡಿಕೆ ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ಸಮೀಕ್ಷೆಯ ಪ್ರಕಾರ, ಬಿಹಾರವು 94 ಲಕ್ಷ ಬಡ ಕುಟುಂಬಗಳಿಗೆ ನೆಲೆಯಾಗಿದೆ. ಬಡವರ ಸುಧಾರಣೆಗಾಗಿ ಸರ್ಕಾರವು ಸುಮಾರು 2.50 ಲಕ್ಷ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುವ ಯೋಜನೆಗಳನ್ನು ಪ್ರಾರಂಭಿಸಲು ಯೋಜಿಸಿದೆ. ಈ ಯೋಜನೆಗಳನ್ನು 5 ವರ್ಷಗಳಲ್ಲಿ ಪೂರ್ಣವಾಗಿ ಅನುಷ್ಠಾನಗೊಳಿಸಲು ನಾವು ಉದ್ದೇಶಿಸಿದ್ದೇವೆ. ಏಕೆಂದರೆ ಇದಕ್ಕೆ ಅಗತ್ಯವಿರುವ ಮೊತ್ತವು ದೊಡ್ಡದಾಗಿದೆ. ಕೇಂದ್ರ ಸರಕಾರವು ನಮಗೆ ಸಹಾಯ ಮಾಡಿದರೆ ನಾವು ಈ ಕೆಲಸವನ್ನು ಹೆಚ್ಚು ವೇಗವಾಗಿ ಮಾಡಬಹುದು ಎಂದು ಹೇಳಿದ್ದಾರೆ.

ನಾವು ಕಂತುಗಳಲ್ಲಿ ಬಡ  ಕುಟುಂಬದ ಒಬ್ಬ ಸದಸ್ಯರಿಗೆ  ಆರ್ಥಿಕ ಚಟುವಟಿಕೆಗಳಿಗೆ  ಎರಡು ಲಕ್ಷ ರೂಪಾಯಿಗಳ ಸಹಾಯವನ್ನು ನೀಡಲು ಉದ್ದೇಶಿಸಿದ್ದೇವೆ. ತಮ್ಮ ಸರ್ಕಾರವು ಗುಡಿಸಲುಗಳಲ್ಲಿ ವಾಸಿಸುವ 39 ಲಕ್ಷ ಕುಟುಂಬಗಳಿಗೆ ಮನೆಗಳನ್ನು ನಿರ್ಮಿಸಲು ಬದ್ಧವಾಗಿದೆ ಮತ್ತು ಮನೆ ನಿರ್ಮಾಣಕ್ಕೆ ಪ್ರತಿ ಕುಟುಂಬಕ್ಕೆ  1.20 ಲಕ್ಷ ರೂಪಾಯಿಗಳನ್ನು ನೀಡಲಾಗುತ್ತದೆ. ತಮ್ಮ ಸರ್ಕಾರವು ಭೂರಹಿತ ಕುಟುಂಬಗಳಿಗೆ ಭೂಮಿ ಖರೀದಿಸಲು 60,000 ರೂಪಾಯಿಗಳನ್ನು ನೀಡುತ್ತಿದೆ ಆದರೆ ಈಗ ಮೊತ್ತವನ್ನು 1 ಲಕ್ಷಕ್ಕೆ ಹೆಚ್ಚಿಸಲು ನಿರ್ಧರಿಸಿದೆ. ಇದು ಸಮೀಕ್ಷೆಯಲ್ಲಿ ಗುರುತಿಸಲಾದ  63,850 ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಸುದೀರ್ಘ ಅವಧಿಯಿಂದ ಮುಖ್ಯಮಂತ್ರಿಯಾಗಿರುವ ನಿತೀಶ್‌ ಕುಮಾರ್‌ ಅವರು 2010ರಿಂದಲೂ ವಿಶೇಷ ಸ್ಥಾನಮಾನದ ಬೇಡಿಕೆಯನ್ನು ಮುಂದಿಡುತ್ತಾ ಬಂದಿದ್ದರು.

 

ಇದನ್ನು ಓದಿ:ಮಹಾರಾಷ್ಟ್ರ: ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...