Homeಮುಖಪುಟಜಾತಿಗಣತಿ ವರದಿ ಬಿಡುಗಡೆಗೊಳಿಸಿದ ಬಿಹಾರ

ಜಾತಿಗಣತಿ ವರದಿ ಬಿಡುಗಡೆಗೊಳಿಸಿದ ಬಿಹಾರ

- Advertisement -
- Advertisement -

ಬಿಹಾರದಲ್ಲಿ ಜಾತಿಗಣತಿಯ ವರದಿಯನ್ನು ಸರಕಾರ ಬಿಡುಗಡೆಗೊಳಿಸಿದೆ. ಈ ಮೂಲಕ ದೇಶದಲ್ಲಿ ಜಾತಿ ಆಧಾರಿತ ಸಮೀಕ್ಷೆಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಬಿಹಾರ ಪಾತ್ರವಾಗಿದೆ.

ರಾಜ್ಯದಲ್ಲಿ 36%ದಷ್ಟು ಅತಿಹೆಚ್ಚು ಹಿಂದುಳಿದಿರುವ ಮತ್ತು 27% ಹಿಂದುಳಿದ ವರ್ಗದ ಜನರಿದ್ದಾರೆ. 19.7%  ಪರಿಶಿಷ್ಟ ಜಾತಿಯ ಜನ ಮತ್ತು 1.7%  ಪರಿಶಿಷ್ಟ ಪಂಗಡಗಳ ಜನರಿದ್ದಾರೆ. ಸಾಮಾನ್ಯ ವರ್ಗದ ಜನಸಂಖ್ಯೆಯು  15.5% ದಷ್ಟಿದೆ. ರಾಜ್ಯದ ಒಟ್ಟು ಜನಸಂಖ್ಯೆ 13.1 ಕೋಟಿಗೂ ಹೆಚ್ಚು ಎಂದು ಜಾತಿಗಣತಿಯಲ್ಲಿ ಬಹಿರಂಗವಾಗಿದೆ.

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರ ಯಾದವ್ ಸಮುದಾಯವು ಅತಿಹೆಚ್ಚು ಅಂದರೆ ಒಬಿಸಿ ವರ್ಗಗಳಲ್ಲಿ 14.27 ಶೇಕಡಾ ಜನಸಂಖ್ಯೆಯನ್ನು ಹೊಂದಿದೆ. ಭೂಮಿಹಾರ್ ಜನಸಂಖ್ಯೆ ಶೇಕಡಾ 2.86 ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87 ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3 ರಷ್ಟಿದ್ದಾರೆ.

ಈ ಜಾತಿಗಣತಿಯ ವರದಿಯು ರಾಜ್ಯದಲ್ಲಿ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಲಿದೆ. ಒಬಿಸಿಗಳಿಗೆ ಕೋಟಾಗಳನ್ನು ಹೆಚ್ಚಿಸುವ ಬೇಡಿಕೆ ಕೂಡ ಹೆಚ್ಚಾಗಳಿದೆ. ಈಗ ರಾಜ್ಯದಲ್ಲಿ ಒಬಿಸಿಗಳಿಗೆ 27% ಮೀಸಲಾತಿ ಇದೆ. 2024ರ ಲೋಕಸಭಾ ಚುನಾವಣೆಗೆ ತಿಂಗಳುಗಳ ಮೊದಲು ಬಿಡುಗಡೆಯಾದ ಈ ಅಂಕಿಅಂಶಗಳ ಪ್ರಕಾರ ಒಬಿಸಿಗಳು ರಾಜ್ಯದಲ್ಲಿ ಶೇಕಡಾ 63.1ರಷ್ಟಿದ್ದಾರೆ.

ಈ ಜಾತಿಗಣತಿ ವರದಿಯು ಬಿಹಾರದಲ್ಲಿ ಒಬಿಸಿಗಳ ಪ್ರಾಬಲ್ಯ ಮತ್ತು ಚುನಾವಣಾ ಪ್ರಭಾವವನ್ನು ಒತ್ತಿಹೇಳುತ್ತಿದೆ.

ದತ್ತಾಂಶ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗಾಂಧಿ ಜಯಂತಿಯ ದಿನದಂದು ದತ್ತಾಂಶ ಬಿಡುಗಡೆ ಬಗ್ಗೆ ಶ್ಲಾಘಿಸಿ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿದ್ದಾರೆ.

ಶೀಘ್ರದಲ್ಲೇ ಬಿಹಾರ ವಿಧಾನಸಭೆಯಲ್ಲಿ ಒಂಬತ್ತು ಪಕ್ಷಗಳ ಸಭೆಯನ್ನು ಕರೆಯಲಾಗುವುದು. ಬಿಹಾರದಲ್ಲಿನ ಜಾತಿ ಆಧಾರಿತ ಜನಗಣತಿಯ ಫಲಿತಾಂಶಗಳ ಬಗ್ಗೆ ಅವರಿಗೆ ತಿಳಿಸಲಾಗುವುದು ಎಂದು ನಿತೀಶ್ ಕುಮಾರ್ ಅವರು ಹೇಳಿದ್ದಾರೆ.

ಈ ಬಗ್ಗೆ ಲಾಲು ಪ್ರಸಾದ್ ಯಾದವ್‌ ಅವರು ಪ್ರತಿಕ್ರಿಯಿಸಿದ್ದು, ಜಾತಿಗಣತಿ ಬಿಡುಗಡೆ ಬಗ್ಗೆ ಶ್ಲಾಘಿಸಿದ್ದಾರೆ.  ಬಿಜೆಪಿಯ ಪಿತೂರಿಗಳು, ಕಾನೂನು ಅಡೆತಡೆಗಳು ಹೊರತಾಗಿಯೂ ಇಂದು ಬಿಹಾರ ಸರ್ಕಾರವು ಜಾತಿ ಆಧಾರಿತ ಸಮೀಕ್ಷೆಯನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಆದರೆ ಕೇಂದ್ರ ಸಚಿವ ಮತ್ತು ಸಂಸದ ಗಿರಿರಾಜ್ ಸಿಂಗ್ ಅವರು ಜಾತಿ ಆಧಾರಿತ ಸಮೀಕ್ಷೆಯ ವರದಿಯನ್ನು “ಕಣ್ಣು ಕಟ್ಟು” ಎಂದು ಟೀಕಿಸಿದ್ದಾರೆ.

ಇದನ್ನು ಓದಿ: ಫತೇಪುರ್‌ನಲ್ಲಿ ಹಿಂಸಾಚಾರ: ಒಂದೇ ಕುಟುಂಬದ ಐವರು ಸೇರಿದಂತೆ ಆರು ಮಂದಿಯ ಹತ್ಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...