Homeಮುಖಪುಟಬಿಹಾರ: ನನ್ನವರೇ ನನಗೆ ದ್ರೋಹ ಬಗೆದಿದ್ದಾರೆ ಎಂದ ಚಿರಾಗ್ ಪಾಸ್ವಾನ್

ಬಿಹಾರ: ನನ್ನವರೇ ನನಗೆ ದ್ರೋಹ ಬಗೆದಿದ್ದಾರೆ ಎಂದ ಚಿರಾಗ್ ಪಾಸ್ವಾನ್

- Advertisement -
- Advertisement -

ಲೋಕ್ ಜನಶಕ್ತಿ ಪಕ್ಷದ (LJP) ನಾಯಕ ಚಿರಾಗ್ ಪಾಸ್ವಾನ್ ಸೋಮವಾರ ತಮ್ಮ ತಂದೆ ರಾಮ್ ವಿಲಾಸ್ ಪಾಸ್ವಾನ್ ಜನ್ಮ ದಿನದಂದು ‘ಆಶೀರ್ವಾದ್ ಯಾತ್ರೆ’ ‌ಆರಂಭಿಸಿದ್ದಾರೆ. ಈ ವೇಳೆ ಆಶೀರ್ವಾದ್ ಯಾತ್ರೆ ಪ್ರದರ್ಶನವಲ್ಲ. ಜನರ ಆಶೀರ್ವಾದ ಪಡೆಯುವ ಗುರಿಯನ್ನು ಮಾತ್ರ ಹೊಂದಿದೆ. ನನ್ನ ಸ್ವಂತ ಜನರೇ ನನಗೆ ದ್ರೋಹ ಬಗೆದಿದ್ದಾರೆ ಎಂದು ಹೇಳಿದ್ದಾರೆ.

“ನಾನು ಆಶೀರ್ವಾದ್ ಯಾತ್ರೆಯನ್ನು ಹಾಜಿಪುರದಿಂದ ಪ್ರಾರಂಭಿಸುತ್ತಿದ್ದೇನೆ. ಏಕೆಂದರೆ ಅದು ನನ್ನ ತಂದೆಯ  ಕರ್ಮ ಭೂಮಿ. ನಾವು ಬಿಹಾರದ ಪ್ರತಿ ಜಿಲ್ಲೆಯಲ್ಲೂ ಈ ಯಾತ್ರೆಯನ್ನು ನಡೆಸುತ್ತೇವೆ. ಎಲ್ಲರ ಆಶೀರ್ವಾದವನ್ನು ಪಡೆದುಕೊಳ್ಳುವುದು ನಮ್ಮ ಏಕೈಕ ಗುರಿ. ಯಾರಿಗೂ ನನ್ನ ಸ್ಥಾನಮಾನ ಪ್ರದರ್ಶಿಸುವ ಅವಶ್ಯಕತೆ ನನಗೆ ಇಲ್ಲ. ನನ್ನ ಸ್ವಂತ ಜನರೇ ನನಗೆ ದ್ರೋಹ ಬಗೆದಿದ್ದಾರೆ” ಎಂದು ಚಿರಾಗ್ ಹೇಳಿದ್ದಾರೆ.

ಎರಡು ದಶಕಗಳ ಹಿಂದೆ ರಾಮ್ ವಿಲಾಸ್ ಪಾಸ್ವಾನ್ ಲೋಕ್ ಜನಶಕ್ತಿ ಪಕ್ಷವನ್ನು ಕಟ್ಟಿದ್ದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ರಾಮ್ ವಿಲಾಸ್ ಪಾಸ್ವಾನ್ ನಿಧನರಾದರು. ಅವರ ನಿಧನದ ನಂತರ ಪಕ್ಷದಲ್ಲಿ ಬಿರುಕು ಉಂಟಾಗಿದೆ. ಚಿರಾಗ್ ಪಾಸ್ವಾನ್ ಮತ್ತು ಅವರು ಚಿಕ್ಕಪ್ಪ ಪಶುಪತಿ ಕುಮಾರ್ ಪರಾಸ್ ನಡುವೆ ಪಕ್ಷದ ನಿಯಂತ್ರಣ ಕುರಿತು ಸಂಘರ್ಷ ಉಂಟಾಗಿದೆ. ಹೀಗಾಗಿ ಈಗ ಚಿರಾಗ್ ಪಾಸ್ವಾನ್ ಆಶೀರ್ವಾದ್ ಯಾತ್ರೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

“ನಾನು ಸಿಂಹದ ಮರಿ, ಎಷ್ಟು ಜನರು ನಮ್ಮನ್ನು ತುಳಿಯಲು ಎಷ್ಟೇ ಪ್ರಯತ್ನಿಸಿದರೂ ನಾನು ಎಂದಿಗೂ ಹೆದರುವುದಿಲ್ಲ” ಎಂದು ಚಿರಾಗ್ ಯಾತ್ರೆ ಆರಂಭಿಸುವ ಮೊದಲು ಹೇಳಿದ್ದಾರೆ. ಜೊತೆಗೆ ‘ಪಾಸ್ವಾನ್’ ಎಂಬ ಪುಸ್ತಕವನ್ನೂ ಬಿಡುಗಡೆ ಮಾಡಿದ್ದಾರೆ.

ಪಕ್ಷದ ಆರು ಸಂಸದರಲ್ಲಿ ಐವರು ಪಶುಪತಿ ಕುಮಾರ್ ಪರಾಸ್ ಬೆಂಬಲವಾಗಿ ಜೂನ್ 13 ರಂದು ಬೆಂಬಲ ಪತ್ರ ನೀಡಿದ ನಂತರ ಚಿರಾಗ್ ಬದಲಿಗೆ ಪರಾಸ್ ಅವರನ್ನು ಲೋಕಸಭೆಯಲ್ಲಿ ಎಲ್‌ಜೆಪಿ ನಾಯಕರಾಗಿ ಗುರುತಿಸಲಾಗಿದೆ.

“ಬಿಜೆಪಿ ಮಧ್ಯಸ್ಥಿಕೆ ವಹಿಸಿ ಪಕ್ಷದ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಾರೆ ಎಂದು ನಾನು ನಿರೀಕ್ಷಿಸಿದ್ದೆ. ಆದರೆ, ಅವರ ಮೌನದಿಂದ ಖಂಡಿತವಾಗಿಯೂ ನೋವುಂಟಾಗಿದೆ” ಎಂದು ಚಿರಾಗ್ ಈ ಹಿಂದೆ ಹೇಳಿದ್ದರು. ಲೋಕ ಜನಶಕ್ತಿ ಪಕ್ಷದ ಬಿಕ್ಕಟ್ಟು ಪ್ರಾದೇಶಿಕ ಪಕ್ಷದ ಆಂತರಿಕ ವಿಷಯವಾಗಿದೆ ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ.


ಇದನ್ನೂ ಓದಿ: ಬಿಜೆಪಿಯ ಮೌನದಿಂದ ನೋವಾಗುತ್ತಿದೆ: ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...