Homeಮುಖಪುಟಬಿಹಾರ: ನನ್ನವರೇ ನನಗೆ ದ್ರೋಹ ಬಗೆದಿದ್ದಾರೆ ಎಂದ ಚಿರಾಗ್ ಪಾಸ್ವಾನ್

ಬಿಹಾರ: ನನ್ನವರೇ ನನಗೆ ದ್ರೋಹ ಬಗೆದಿದ್ದಾರೆ ಎಂದ ಚಿರಾಗ್ ಪಾಸ್ವಾನ್

- Advertisement -
- Advertisement -

ಲೋಕ್ ಜನಶಕ್ತಿ ಪಕ್ಷದ (LJP) ನಾಯಕ ಚಿರಾಗ್ ಪಾಸ್ವಾನ್ ಸೋಮವಾರ ತಮ್ಮ ತಂದೆ ರಾಮ್ ವಿಲಾಸ್ ಪಾಸ್ವಾನ್ ಜನ್ಮ ದಿನದಂದು ‘ಆಶೀರ್ವಾದ್ ಯಾತ್ರೆ’ ‌ಆರಂಭಿಸಿದ್ದಾರೆ. ಈ ವೇಳೆ ಆಶೀರ್ವಾದ್ ಯಾತ್ರೆ ಪ್ರದರ್ಶನವಲ್ಲ. ಜನರ ಆಶೀರ್ವಾದ ಪಡೆಯುವ ಗುರಿಯನ್ನು ಮಾತ್ರ ಹೊಂದಿದೆ. ನನ್ನ ಸ್ವಂತ ಜನರೇ ನನಗೆ ದ್ರೋಹ ಬಗೆದಿದ್ದಾರೆ ಎಂದು ಹೇಳಿದ್ದಾರೆ.

“ನಾನು ಆಶೀರ್ವಾದ್ ಯಾತ್ರೆಯನ್ನು ಹಾಜಿಪುರದಿಂದ ಪ್ರಾರಂಭಿಸುತ್ತಿದ್ದೇನೆ. ಏಕೆಂದರೆ ಅದು ನನ್ನ ತಂದೆಯ  ಕರ್ಮ ಭೂಮಿ. ನಾವು ಬಿಹಾರದ ಪ್ರತಿ ಜಿಲ್ಲೆಯಲ್ಲೂ ಈ ಯಾತ್ರೆಯನ್ನು ನಡೆಸುತ್ತೇವೆ. ಎಲ್ಲರ ಆಶೀರ್ವಾದವನ್ನು ಪಡೆದುಕೊಳ್ಳುವುದು ನಮ್ಮ ಏಕೈಕ ಗುರಿ. ಯಾರಿಗೂ ನನ್ನ ಸ್ಥಾನಮಾನ ಪ್ರದರ್ಶಿಸುವ ಅವಶ್ಯಕತೆ ನನಗೆ ಇಲ್ಲ. ನನ್ನ ಸ್ವಂತ ಜನರೇ ನನಗೆ ದ್ರೋಹ ಬಗೆದಿದ್ದಾರೆ” ಎಂದು ಚಿರಾಗ್ ಹೇಳಿದ್ದಾರೆ.

ಎರಡು ದಶಕಗಳ ಹಿಂದೆ ರಾಮ್ ವಿಲಾಸ್ ಪಾಸ್ವಾನ್ ಲೋಕ್ ಜನಶಕ್ತಿ ಪಕ್ಷವನ್ನು ಕಟ್ಟಿದ್ದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ರಾಮ್ ವಿಲಾಸ್ ಪಾಸ್ವಾನ್ ನಿಧನರಾದರು. ಅವರ ನಿಧನದ ನಂತರ ಪಕ್ಷದಲ್ಲಿ ಬಿರುಕು ಉಂಟಾಗಿದೆ. ಚಿರಾಗ್ ಪಾಸ್ವಾನ್ ಮತ್ತು ಅವರು ಚಿಕ್ಕಪ್ಪ ಪಶುಪತಿ ಕುಮಾರ್ ಪರಾಸ್ ನಡುವೆ ಪಕ್ಷದ ನಿಯಂತ್ರಣ ಕುರಿತು ಸಂಘರ್ಷ ಉಂಟಾಗಿದೆ. ಹೀಗಾಗಿ ಈಗ ಚಿರಾಗ್ ಪಾಸ್ವಾನ್ ಆಶೀರ್ವಾದ್ ಯಾತ್ರೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

“ನಾನು ಸಿಂಹದ ಮರಿ, ಎಷ್ಟು ಜನರು ನಮ್ಮನ್ನು ತುಳಿಯಲು ಎಷ್ಟೇ ಪ್ರಯತ್ನಿಸಿದರೂ ನಾನು ಎಂದಿಗೂ ಹೆದರುವುದಿಲ್ಲ” ಎಂದು ಚಿರಾಗ್ ಯಾತ್ರೆ ಆರಂಭಿಸುವ ಮೊದಲು ಹೇಳಿದ್ದಾರೆ. ಜೊತೆಗೆ ‘ಪಾಸ್ವಾನ್’ ಎಂಬ ಪುಸ್ತಕವನ್ನೂ ಬಿಡುಗಡೆ ಮಾಡಿದ್ದಾರೆ.

ಪಕ್ಷದ ಆರು ಸಂಸದರಲ್ಲಿ ಐವರು ಪಶುಪತಿ ಕುಮಾರ್ ಪರಾಸ್ ಬೆಂಬಲವಾಗಿ ಜೂನ್ 13 ರಂದು ಬೆಂಬಲ ಪತ್ರ ನೀಡಿದ ನಂತರ ಚಿರಾಗ್ ಬದಲಿಗೆ ಪರಾಸ್ ಅವರನ್ನು ಲೋಕಸಭೆಯಲ್ಲಿ ಎಲ್‌ಜೆಪಿ ನಾಯಕರಾಗಿ ಗುರುತಿಸಲಾಗಿದೆ.

“ಬಿಜೆಪಿ ಮಧ್ಯಸ್ಥಿಕೆ ವಹಿಸಿ ಪಕ್ಷದ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಾರೆ ಎಂದು ನಾನು ನಿರೀಕ್ಷಿಸಿದ್ದೆ. ಆದರೆ, ಅವರ ಮೌನದಿಂದ ಖಂಡಿತವಾಗಿಯೂ ನೋವುಂಟಾಗಿದೆ” ಎಂದು ಚಿರಾಗ್ ಈ ಹಿಂದೆ ಹೇಳಿದ್ದರು. ಲೋಕ ಜನಶಕ್ತಿ ಪಕ್ಷದ ಬಿಕ್ಕಟ್ಟು ಪ್ರಾದೇಶಿಕ ಪಕ್ಷದ ಆಂತರಿಕ ವಿಷಯವಾಗಿದೆ ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ.


ಇದನ್ನೂ ಓದಿ: ಬಿಜೆಪಿಯ ಮೌನದಿಂದ ನೋವಾಗುತ್ತಿದೆ: ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...