Homeಮುಖಪುಟಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

ಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

- Advertisement -
- Advertisement -

ಪಾಟ್ನಾ: ಪಾಟ್ನಾದ ಗಾಂಧಿ ಮೈದಾನದಲ್ಲಿ ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್‌ಸಿ) ಆಕಾಂಕ್ಷಿಗಳು ನಡೆಸುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಚುನಾವಣಾ ತಂತ್ರಗಾರ-ರಾಜಕಾರಣಿ ಪ್ರಶಾಂತ್ ಕಿಶೋರ್ ಮತ್ತು ಇತರರ ವಿರುದ್ಧ ಬಿಹಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಿಶೋರ್ ಮತ್ತು ಅವರ ಪಕ್ಷ ಜನ್ ಸೂರಾಜ್ ಪಾರ್ಟಿಯ ಇತರ ಸದಸ್ಯರು ಬಿಪಿಎಸ್‌ಸಿ ಆಕಾಂಕ್ಷಿಗಳನ್ನು ಪ್ರಚೋದಿಸಿ, ಅವರನ್ನು ಬೀದಿಗಿಳಿಸಿ ನಗರದ ವಿವಿಧ ಭಾಗಗಳಲ್ಲಿ ಗಲಭೆ ಸೃಷ್ಟಿಸಲು ಕಾರಣಕರ್ತರಾಗಿದ್ದಾರೆ. ಜಿಲ್ಲಾಡಳಿತ ತಮ್ಮ ಮನವಿಯನ್ನು ತಿರಸ್ಕರಿಸಿದ್ದರೂ ಗಾಂಧಿ ಮೈದಾನದ ಬಳಿ ಪ್ರತಿಭಟನೆ ನಡೆಸಿದೆ ಎಂದು ಆರೋಪಿಸಿ ಜನ್ ಸೂರಾಜ್ ಪಕ್ಷದ ಬಿಹಾರ ಮುಖ್ಯಸ್ಥರ ವಿರುದ್ಧವೂ ಪ್ರಕರಣ ದಾಖಲಾಗಿದೆ.

70ನೇ ಬಿಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯ ಮರುಪರೀಕ್ಷೆ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರನ್ನು ಭೇಟಿ ಮಾಡುವಂತೆ ಆಗ್ರಹಿಸಿ ಸಾವಿರಾರು ಆಕಾಂಕ್ಷಿಗಳು ಭಾನುವಾರ ಗಾಂಧಿ ಮೈದಾನದಲ್ಲಿ ಪ್ರತಿಭಟನೆ ಮುಂದುವರಿಸಿದ್ದರು. ಪ್ರತಿಭಟನೆಯು ಡಿಸೆಂಬರ್ 13ರಿಂದ ಪ್ರಾರಂಭವಾಗಿದೆ ಮತ್ತು ಅಂದಿನಿಂದ, ಹಲವಾರು ಪ್ರಮುಖ ರಾಜಕಾರಣಿಗಳು, ಶಿಕ್ಷಣ ತಜ್ಞರು ಇದನ್ನು ಬೆಂಬಲಿಸುತ್ತಾ ಬಂದಿದ್ದಾರೆ.

ಕಿಶೋರ್ ಅವರ ಜನ್ ಸೂರಾಜ್ ಪಾರ್ಟಿಯು ಗಾಂಧಿ ಮೈದಾನದಲ್ಲಿ ಛತ್ರ ಸಂಸದ್ (ವಿದ್ಯಾರ್ಥಿ ಸಂಸತ್ತು) ನಡೆಸುವ ಉದ್ದೇಶವನ್ನು ಜಿಲ್ಲಾಡಳಿತಕ್ಕೆ ಶನಿವಾರದಂದು ತಿಳಿಸಿತ್ತು ಎಂದು ಬಿಹಾರ ಪೊಲೀಸ್ ಹೇಳಿಕೆ ತಿಳಿಸಿದ್ದು, ಜಿಲ್ಲಾಡಳಿತ ಈ ಮನವಿಯನ್ನು ತಿರಸ್ಕರಿಸಿ ಪಕ್ಷಕ್ಕೆ ತನ್ನ ನಿರ್ಧಾರವನ್ನು ತಿಳಿಸಿತ್ತು.

ಇದರ ಹೊರತಾಗಿಯೂ, ಭಾನುವಾರ, ಪಕ್ಷವು ಗಾಂಧಿ ಪ್ರತಿಮೆ ಬಳಿ ಅನಧಿಕೃತ ಗುಂಪನ್ನು ಜಮಾಯಿಸಿ ಪ್ರತಿಭಟನೆಯನ್ನು ಜನ್ ಸೂರಾಜ್ ಪಾರ್ಟಿಯು ಪ್ರಚೋದಿಸಿತು ಮತ್ತು ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಸೃಷ್ಟಿಸಿತು ಎಂದು ಪೊಲೀಸರು ಹೇಳಿದ್ದಾರೆ.

ಜನ್ ಸುರಾಜ್ ಪಕ್ಷದ ಅಧ್ಯಕ್ಷ ಮನೋಜ್ ಭಾರ್ತಿ, ಕೋಚಿಂಗ್ ಇನ್‌ಸ್ಟಿಟ್ಯೂಟ್ ನಿರ್ವಾಹಕರಾದ ರಹಮಾನ್ಶು ಮಿಶ್ರಾ, ನಿಖಿಲ್ ಮಣಿ ತಿವಾರಿ, ಸುಭಾಷ್ ಕುಮಾರ್ ಠಾಕೂರ್, ಶುಭಂ ಸ್ನೇಹಿಲ್; ಪ್ರಶಾಂತ್ ಕಿಶೋರ್, ಅವರೊಂದಿಗೆ ಇಬ್ಬರು ಬೌನ್ಸರ್‌ಗಳು – ಆನಂದ್ ಮಿಶ್ರಾ ಮತ್ತು ರಾಕೇಶ್ ಕುಮಾರ್ ಮಿಶ್ರಾ ಮತ್ತು ಇತರರು ಸೇರಿದಂತೆ 19ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.

ಹೆಚ್ಚುವರಿಯಾಗಿ, 600ಕ್ಕೂ ಹೆಚ್ಚು ಅಪರಿಚಿತ ಜನರ ಮೇಲೆ ಆರೋಪ ಪಟ್ಟಿ ಮಾಡಲಾಗಿದೆ. ಈ ಬೆಳವಣಿಗೆಯನ್ನು ದೃಢಪಡಿಸಿದ ಪಾಟ್ನಾದ ಜಿಲ್ಲಾ ಮ್ಯಾಜಿಸ್ಟ್ರೇಟ್, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಭಾನುವಾರ ಮುಂಜಾನೆ, ಕಿಶೋರ್ ಅವರು ಬಿಹಾರದ ಪರೀಕ್ಷೆಯಲ್ಲಿನ ಭ್ರಷ್ಟಾಚಾರವನ್ನು ಕೊನೆಗಾಣಿಸುವಂತೆ ಒತ್ತಾಯಿಸಿ ಪ್ರತಿಭಟನಾನಿರತ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು. ನಿತೀಶ್ ಕುಮಾರ್ ಅವರು ಖಾಸಗಿ ಭೇಟಿಗಾಗಿ ದೆಹಲಿಗೆ ಹೋಗಿದ್ದಾರೆ. ಆದರೆ ತಮ್ಮದೇ ರಾಜ್ಯದ ಯುವಕರ ಭೇಟಿಗೆ ಸಮಯವಿಲ್ಲ ಎಂದು ಟೀಕಿಸಿದ್ದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಪಾಟ್ನಾದಲ್ಲಿ ಪ್ರತಿಭಟನಾ ನಿರತ ಅಭ್ಯರ್ಥಿಗಳನ್ನುದ್ದೇಶಿಸಿ ಮಾತನಾಡಿದ ಕಿಶೋರ್, ”ಮುಖ್ಯಮಂತ್ರಿಗಳಿಗೆ ಪ್ರತಿಭಟನಾ ನಿರತ ಆಕಾಂಕ್ಷಿಗಳ ಅಹವಾಲನ್ನು ಆಲಿಸಲು ಸಮಯವಿಲ್ಲದೇ ದಿಲ್ಲಿಗೆ ತೆರಳಿದ್ದಾರೆ. ಪರೀಕ್ಷೆ ರದ್ದುಗೊಳಿಸಬೇಕೆಂಬ ಅಕಾಂಕ್ಷಿಗಳ ಬೇಡಿಕೆಯನ್ನು ಈಡೇರಿಸುವವರೆಗೆ ಪ್ರತಿಭಟನೆ ಮುಂದುವರಿಯಲಿದೆ. ಪ್ರತಿಭಟಿಸುವ ವಿದ್ಯಾರ್ಥಿಗಳ ಜೊತೆ ನಾನು ಸದಾ ಇರುತ್ತೇನೆ ಎಂದಿದ್ದಾರೆ.

ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಕ್ಷೇತ್ರದ ಅಧಿಕಾರಿಗಳೊಂದಿಗೆ ವಿಸ್ತೃತ ಮಾತುಕತೆ ನಡೆಸಿದ ಕಿಶೋರ್ ಅವರು,  “ಬಿಹಾರದಲ್ಲಿ ಯಾವುದೇ ಪರೀಕ್ಷೆಯು ಭ್ರಷ್ಟಾಚಾರ ಅಥವಾ ಪೇಪರ್ ಸೋರಿಕೆ ಇಲ್ಲದೆ ನಡೆದಿಲ್ಲ. ಇದು ಕೊನೆಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಾವು ಒಂದಾಗಬೇಕು” ಎಂದು ಹೇಳಿದ್ದಾರೆ.

ಡಿಸೆಂಬರ್ ಮಧ್ಯಭಾಗದಲ್ಲಿ ಆರಂಭವಾದ ಆಂದೋಲನವು ಪೂರ್ವಭಾವಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರ ಹಲವು ಅಕ್ರಮಗಳ ಆರೋಪದಿಂದ ಕಿಡಿ ಹೊತ್ತಿಸಿದೆ.

ಹಲವಾರು ಅಭ್ಯರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ತಡವಾಗಿ ನೀಡಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಕೆಲವರು ಪರೀಕ್ಷೆಯು ಪ್ರಾರಂಭವಾಗುವ ಸುಮಾರು ಒಂದು ಗಂಟೆಯ ನಂತರ ಪತ್ರಿಕೆಗಳನ್ನು ಪಡೆದಿದ್ದೇವೆ ಎಂದು ಹೇಳಿದ್ದಾರೆ. ಇನ್ನು ಕೆಲವರು ಉತ್ತರ ಪತ್ರಿಕೆಗಳು ಹರಿದಿದ್ದು, ಅವ್ಯವಹಾರದ ಭೀತಿ ಮತ್ತಷ್ಟು ಹೆಚ್ಚಿದೆ ಎಂದು ಆರೋಪಿಸಿದ್ದಾರೆ.

ಪ್ರಶಾಂತ್ ಕಿಶೋರ್ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರು, ಘರ್ಷಣೆಗೆ ಬಿಹಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಆಂದೋಲನವನ್ನು ವಿದ್ಯಾರ್ಥಿಗಳು ಪ್ರಾರಂಭಿಸಿದ್ದಾರೆ. ನಾನು ಇತ್ತೀಚೆಗೆ ಹೋಗಿದ್ದ ಗರ್ದಾನಿ ಬಾಗ್‌ನಲ್ಲಿ ಸುಮಾರು ಎರಡು ವಾರಗಳ ಕಾಲ ನಡೆದ ಧರಣಿಯು ಸರ್ಕಾರವನ್ನು ನಡುಗುವಂತೆ ಮಾಡಿದೆ ಎಂದು ಅವರು ಭಾನುವಾರ ತಡರಾತ್ರಿ ವಿಡಿಯೋ ಸಂದೇಶದಲ್ಲಿ ತೇಜಸ್ವಿ ತಿಳಿಸಿದ್ದಾರೆ.

ಆಡಳಿತದ ಎಚ್ಚರಿಕೆಯ ಹೊರತಾಗಿಯೂ ಪ್ರತಿಭಟನಾಕಾರರನ್ನು ಗಾಂಧಿ ಮೈದಾನದಲ್ಲಿ ಮೆರವಣಿಗೆ ಮಾಡಲು ದಾರಿ ತಪ್ಪಿಸಲಾಗಿದೆ ಮತ್ತು ಲಾಠಿ ಚಾರ್ಜ್ ಮತ್ತು ನೀರಿನ ಫಿರಂಗಿಗಳನ್ನು ಪ್ರಯೋಗಿಸಿದಾಗ ಪ್ರತಿಭಟನೆಯ ನೇತೃತ್ವ ವಹಿಸಿದ್ದವರು ಓಡಿಹೋಗಲು ನಿರ್ಧರಿಸಿದರು ಎಂದು ಅವರು ಆರೋಪಿಸಿದ್ದಾರೆ.

ರಾಜ್ಯಾದ್ಯಂತ 900ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಐದು ಲಕ್ಷ ಅಭ್ಯರ್ಥಿಗಳು ಡಿಸೆಂಬರ್ 13ರಂದು ನಡೆದ ಬಿಪಿಎಸ್‌ಸಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಪ್ರತಿಭಟನಾಕಾರರ ಬೇಡಿಕೆಯನ್ನು ಆರ್ ಜೆಡಿ ಬೆಂಬಲಿಸುತ್ತದೆ ಎಂದು ತೇಜಸ್ವಿ ಯಾದವ್ ಭರವಸೆ ನೀಡಿದ್ದಾರೆ.

ಆದರೆ ನೀವು ಪೊಳ್ಳು ಭರವಸೆಗಳಿಗೆ ಮಣಿಯಬಾರದು. ಜನವರಿ 4ಕ್ಕೆ ಇನ್ನೂ ಕೆಲವೇ ದಿನಗಳು ಬಾಕಿಯಿದೆ. ಸರ್ಕಾರವನ್ನು ಮಂಡಿಯೂರಿಸಲು ಸಾಕಷ್ಟು ಸಮಯವಿದೆ. ಬಿಪಿಎಸ್‌ಸಿ ಪರೀಕ್ಷೆ ಸರ್ಕಾರದ ಅಡಿಯಲ್ಲಿ ಬರುವುದಿಲ್ಲ ಎಂದು ಹೇಳುವುದು ಅಸಂಬದ್ಧ ಎಂದು ಟೀಕಿಸಿದ್ದಾರೆ.

15 ಅಡಿ ಎತ್ತರದ ವೇದಿಕೆಯಿಂದ ಬಿದ್ದ ಕಾಂಗ್ರೆಸ್‌ ಶಾಸಕಿ : ಗಂಭೀರ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...