Homeಮುಖಪುಟಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

ಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

- Advertisement -
- Advertisement -

ಪಾಟ್ನಾ: ಪಾಟ್ನಾದ ಗಾಂಧಿ ಮೈದಾನದಲ್ಲಿ ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್‌ಸಿ) ಆಕಾಂಕ್ಷಿಗಳು ನಡೆಸುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಚುನಾವಣಾ ತಂತ್ರಗಾರ-ರಾಜಕಾರಣಿ ಪ್ರಶಾಂತ್ ಕಿಶೋರ್ ಮತ್ತು ಇತರರ ವಿರುದ್ಧ ಬಿಹಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಿಶೋರ್ ಮತ್ತು ಅವರ ಪಕ್ಷ ಜನ್ ಸೂರಾಜ್ ಪಾರ್ಟಿಯ ಇತರ ಸದಸ್ಯರು ಬಿಪಿಎಸ್‌ಸಿ ಆಕಾಂಕ್ಷಿಗಳನ್ನು ಪ್ರಚೋದಿಸಿ, ಅವರನ್ನು ಬೀದಿಗಿಳಿಸಿ ನಗರದ ವಿವಿಧ ಭಾಗಗಳಲ್ಲಿ ಗಲಭೆ ಸೃಷ್ಟಿಸಲು ಕಾರಣಕರ್ತರಾಗಿದ್ದಾರೆ. ಜಿಲ್ಲಾಡಳಿತ ತಮ್ಮ ಮನವಿಯನ್ನು ತಿರಸ್ಕರಿಸಿದ್ದರೂ ಗಾಂಧಿ ಮೈದಾನದ ಬಳಿ ಪ್ರತಿಭಟನೆ ನಡೆಸಿದೆ ಎಂದು ಆರೋಪಿಸಿ ಜನ್ ಸೂರಾಜ್ ಪಕ್ಷದ ಬಿಹಾರ ಮುಖ್ಯಸ್ಥರ ವಿರುದ್ಧವೂ ಪ್ರಕರಣ ದಾಖಲಾಗಿದೆ.

70ನೇ ಬಿಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯ ಮರುಪರೀಕ್ಷೆ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರನ್ನು ಭೇಟಿ ಮಾಡುವಂತೆ ಆಗ್ರಹಿಸಿ ಸಾವಿರಾರು ಆಕಾಂಕ್ಷಿಗಳು ಭಾನುವಾರ ಗಾಂಧಿ ಮೈದಾನದಲ್ಲಿ ಪ್ರತಿಭಟನೆ ಮುಂದುವರಿಸಿದ್ದರು. ಪ್ರತಿಭಟನೆಯು ಡಿಸೆಂಬರ್ 13ರಿಂದ ಪ್ರಾರಂಭವಾಗಿದೆ ಮತ್ತು ಅಂದಿನಿಂದ, ಹಲವಾರು ಪ್ರಮುಖ ರಾಜಕಾರಣಿಗಳು, ಶಿಕ್ಷಣ ತಜ್ಞರು ಇದನ್ನು ಬೆಂಬಲಿಸುತ್ತಾ ಬಂದಿದ್ದಾರೆ.

ಕಿಶೋರ್ ಅವರ ಜನ್ ಸೂರಾಜ್ ಪಾರ್ಟಿಯು ಗಾಂಧಿ ಮೈದಾನದಲ್ಲಿ ಛತ್ರ ಸಂಸದ್ (ವಿದ್ಯಾರ್ಥಿ ಸಂಸತ್ತು) ನಡೆಸುವ ಉದ್ದೇಶವನ್ನು ಜಿಲ್ಲಾಡಳಿತಕ್ಕೆ ಶನಿವಾರದಂದು ತಿಳಿಸಿತ್ತು ಎಂದು ಬಿಹಾರ ಪೊಲೀಸ್ ಹೇಳಿಕೆ ತಿಳಿಸಿದ್ದು, ಜಿಲ್ಲಾಡಳಿತ ಈ ಮನವಿಯನ್ನು ತಿರಸ್ಕರಿಸಿ ಪಕ್ಷಕ್ಕೆ ತನ್ನ ನಿರ್ಧಾರವನ್ನು ತಿಳಿಸಿತ್ತು.

ಇದರ ಹೊರತಾಗಿಯೂ, ಭಾನುವಾರ, ಪಕ್ಷವು ಗಾಂಧಿ ಪ್ರತಿಮೆ ಬಳಿ ಅನಧಿಕೃತ ಗುಂಪನ್ನು ಜಮಾಯಿಸಿ ಪ್ರತಿಭಟನೆಯನ್ನು ಜನ್ ಸೂರಾಜ್ ಪಾರ್ಟಿಯು ಪ್ರಚೋದಿಸಿತು ಮತ್ತು ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಸೃಷ್ಟಿಸಿತು ಎಂದು ಪೊಲೀಸರು ಹೇಳಿದ್ದಾರೆ.

ಜನ್ ಸುರಾಜ್ ಪಕ್ಷದ ಅಧ್ಯಕ್ಷ ಮನೋಜ್ ಭಾರ್ತಿ, ಕೋಚಿಂಗ್ ಇನ್‌ಸ್ಟಿಟ್ಯೂಟ್ ನಿರ್ವಾಹಕರಾದ ರಹಮಾನ್ಶು ಮಿಶ್ರಾ, ನಿಖಿಲ್ ಮಣಿ ತಿವಾರಿ, ಸುಭಾಷ್ ಕುಮಾರ್ ಠಾಕೂರ್, ಶುಭಂ ಸ್ನೇಹಿಲ್; ಪ್ರಶಾಂತ್ ಕಿಶೋರ್, ಅವರೊಂದಿಗೆ ಇಬ್ಬರು ಬೌನ್ಸರ್‌ಗಳು – ಆನಂದ್ ಮಿಶ್ರಾ ಮತ್ತು ರಾಕೇಶ್ ಕುಮಾರ್ ಮಿಶ್ರಾ ಮತ್ತು ಇತರರು ಸೇರಿದಂತೆ 19ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.

ಹೆಚ್ಚುವರಿಯಾಗಿ, 600ಕ್ಕೂ ಹೆಚ್ಚು ಅಪರಿಚಿತ ಜನರ ಮೇಲೆ ಆರೋಪ ಪಟ್ಟಿ ಮಾಡಲಾಗಿದೆ. ಈ ಬೆಳವಣಿಗೆಯನ್ನು ದೃಢಪಡಿಸಿದ ಪಾಟ್ನಾದ ಜಿಲ್ಲಾ ಮ್ಯಾಜಿಸ್ಟ್ರೇಟ್, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಭಾನುವಾರ ಮುಂಜಾನೆ, ಕಿಶೋರ್ ಅವರು ಬಿಹಾರದ ಪರೀಕ್ಷೆಯಲ್ಲಿನ ಭ್ರಷ್ಟಾಚಾರವನ್ನು ಕೊನೆಗಾಣಿಸುವಂತೆ ಒತ್ತಾಯಿಸಿ ಪ್ರತಿಭಟನಾನಿರತ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು. ನಿತೀಶ್ ಕುಮಾರ್ ಅವರು ಖಾಸಗಿ ಭೇಟಿಗಾಗಿ ದೆಹಲಿಗೆ ಹೋಗಿದ್ದಾರೆ. ಆದರೆ ತಮ್ಮದೇ ರಾಜ್ಯದ ಯುವಕರ ಭೇಟಿಗೆ ಸಮಯವಿಲ್ಲ ಎಂದು ಟೀಕಿಸಿದ್ದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಪಾಟ್ನಾದಲ್ಲಿ ಪ್ರತಿಭಟನಾ ನಿರತ ಅಭ್ಯರ್ಥಿಗಳನ್ನುದ್ದೇಶಿಸಿ ಮಾತನಾಡಿದ ಕಿಶೋರ್, ”ಮುಖ್ಯಮಂತ್ರಿಗಳಿಗೆ ಪ್ರತಿಭಟನಾ ನಿರತ ಆಕಾಂಕ್ಷಿಗಳ ಅಹವಾಲನ್ನು ಆಲಿಸಲು ಸಮಯವಿಲ್ಲದೇ ದಿಲ್ಲಿಗೆ ತೆರಳಿದ್ದಾರೆ. ಪರೀಕ್ಷೆ ರದ್ದುಗೊಳಿಸಬೇಕೆಂಬ ಅಕಾಂಕ್ಷಿಗಳ ಬೇಡಿಕೆಯನ್ನು ಈಡೇರಿಸುವವರೆಗೆ ಪ್ರತಿಭಟನೆ ಮುಂದುವರಿಯಲಿದೆ. ಪ್ರತಿಭಟಿಸುವ ವಿದ್ಯಾರ್ಥಿಗಳ ಜೊತೆ ನಾನು ಸದಾ ಇರುತ್ತೇನೆ ಎಂದಿದ್ದಾರೆ.

ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಕ್ಷೇತ್ರದ ಅಧಿಕಾರಿಗಳೊಂದಿಗೆ ವಿಸ್ತೃತ ಮಾತುಕತೆ ನಡೆಸಿದ ಕಿಶೋರ್ ಅವರು,  “ಬಿಹಾರದಲ್ಲಿ ಯಾವುದೇ ಪರೀಕ್ಷೆಯು ಭ್ರಷ್ಟಾಚಾರ ಅಥವಾ ಪೇಪರ್ ಸೋರಿಕೆ ಇಲ್ಲದೆ ನಡೆದಿಲ್ಲ. ಇದು ಕೊನೆಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಾವು ಒಂದಾಗಬೇಕು” ಎಂದು ಹೇಳಿದ್ದಾರೆ.

ಡಿಸೆಂಬರ್ ಮಧ್ಯಭಾಗದಲ್ಲಿ ಆರಂಭವಾದ ಆಂದೋಲನವು ಪೂರ್ವಭಾವಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರ ಹಲವು ಅಕ್ರಮಗಳ ಆರೋಪದಿಂದ ಕಿಡಿ ಹೊತ್ತಿಸಿದೆ.

ಹಲವಾರು ಅಭ್ಯರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ತಡವಾಗಿ ನೀಡಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಕೆಲವರು ಪರೀಕ್ಷೆಯು ಪ್ರಾರಂಭವಾಗುವ ಸುಮಾರು ಒಂದು ಗಂಟೆಯ ನಂತರ ಪತ್ರಿಕೆಗಳನ್ನು ಪಡೆದಿದ್ದೇವೆ ಎಂದು ಹೇಳಿದ್ದಾರೆ. ಇನ್ನು ಕೆಲವರು ಉತ್ತರ ಪತ್ರಿಕೆಗಳು ಹರಿದಿದ್ದು, ಅವ್ಯವಹಾರದ ಭೀತಿ ಮತ್ತಷ್ಟು ಹೆಚ್ಚಿದೆ ಎಂದು ಆರೋಪಿಸಿದ್ದಾರೆ.

ಪ್ರಶಾಂತ್ ಕಿಶೋರ್ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರು, ಘರ್ಷಣೆಗೆ ಬಿಹಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಆಂದೋಲನವನ್ನು ವಿದ್ಯಾರ್ಥಿಗಳು ಪ್ರಾರಂಭಿಸಿದ್ದಾರೆ. ನಾನು ಇತ್ತೀಚೆಗೆ ಹೋಗಿದ್ದ ಗರ್ದಾನಿ ಬಾಗ್‌ನಲ್ಲಿ ಸುಮಾರು ಎರಡು ವಾರಗಳ ಕಾಲ ನಡೆದ ಧರಣಿಯು ಸರ್ಕಾರವನ್ನು ನಡುಗುವಂತೆ ಮಾಡಿದೆ ಎಂದು ಅವರು ಭಾನುವಾರ ತಡರಾತ್ರಿ ವಿಡಿಯೋ ಸಂದೇಶದಲ್ಲಿ ತೇಜಸ್ವಿ ತಿಳಿಸಿದ್ದಾರೆ.

ಆಡಳಿತದ ಎಚ್ಚರಿಕೆಯ ಹೊರತಾಗಿಯೂ ಪ್ರತಿಭಟನಾಕಾರರನ್ನು ಗಾಂಧಿ ಮೈದಾನದಲ್ಲಿ ಮೆರವಣಿಗೆ ಮಾಡಲು ದಾರಿ ತಪ್ಪಿಸಲಾಗಿದೆ ಮತ್ತು ಲಾಠಿ ಚಾರ್ಜ್ ಮತ್ತು ನೀರಿನ ಫಿರಂಗಿಗಳನ್ನು ಪ್ರಯೋಗಿಸಿದಾಗ ಪ್ರತಿಭಟನೆಯ ನೇತೃತ್ವ ವಹಿಸಿದ್ದವರು ಓಡಿಹೋಗಲು ನಿರ್ಧರಿಸಿದರು ಎಂದು ಅವರು ಆರೋಪಿಸಿದ್ದಾರೆ.

ರಾಜ್ಯಾದ್ಯಂತ 900ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಐದು ಲಕ್ಷ ಅಭ್ಯರ್ಥಿಗಳು ಡಿಸೆಂಬರ್ 13ರಂದು ನಡೆದ ಬಿಪಿಎಸ್‌ಸಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಪ್ರತಿಭಟನಾಕಾರರ ಬೇಡಿಕೆಯನ್ನು ಆರ್ ಜೆಡಿ ಬೆಂಬಲಿಸುತ್ತದೆ ಎಂದು ತೇಜಸ್ವಿ ಯಾದವ್ ಭರವಸೆ ನೀಡಿದ್ದಾರೆ.

ಆದರೆ ನೀವು ಪೊಳ್ಳು ಭರವಸೆಗಳಿಗೆ ಮಣಿಯಬಾರದು. ಜನವರಿ 4ಕ್ಕೆ ಇನ್ನೂ ಕೆಲವೇ ದಿನಗಳು ಬಾಕಿಯಿದೆ. ಸರ್ಕಾರವನ್ನು ಮಂಡಿಯೂರಿಸಲು ಸಾಕಷ್ಟು ಸಮಯವಿದೆ. ಬಿಪಿಎಸ್‌ಸಿ ಪರೀಕ್ಷೆ ಸರ್ಕಾರದ ಅಡಿಯಲ್ಲಿ ಬರುವುದಿಲ್ಲ ಎಂದು ಹೇಳುವುದು ಅಸಂಬದ್ಧ ಎಂದು ಟೀಕಿಸಿದ್ದಾರೆ.

15 ಅಡಿ ಎತ್ತರದ ವೇದಿಕೆಯಿಂದ ಬಿದ್ದ ಕಾಂಗ್ರೆಸ್‌ ಶಾಸಕಿ : ಗಂಭೀರ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...