Homeಮುಖಪುಟಬಿಹಾರ ಸಿವಿಲ್ ಸರ್ವೀಸ್ ಪರೀಕ್ಷೆ ವಿವಾದ; ಉಪವಾಸ ಸತ್ಯಾಗ್ರಹ ಆರಂಭಿಸಿದ ಪ್ರಶಾಂತ್ ಕಿಶೋರ್

ಬಿಹಾರ ಸಿವಿಲ್ ಸರ್ವೀಸ್ ಪರೀಕ್ಷೆ ವಿವಾದ; ಉಪವಾಸ ಸತ್ಯಾಗ್ರಹ ಆರಂಭಿಸಿದ ಪ್ರಶಾಂತ್ ಕಿಶೋರ್

- Advertisement -
- Advertisement -

ಬಿಹಾರ ನಾಗರಿಕ ಸೇವೆಗಳ (ಬಿಪಿಎಸ್‌ಸಿ) ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರಾಜಕೀಯ ತಂತ್ರಜ್ಞ-ರಾಜಕಾರಣಿ ಪ್ರಶಾಂತ್ ಕಿಶೋರ್ ಗುರುವಾರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಮೇಲೆ ಬಿಪಿಎಸ್‌ಸಿ ನಡೆಸಿದ 70ನೇ ಸಂಯೋಜಿತ ಸ್ಪರ್ಧಾತ್ಮಕ (ಪೂರ್ವಭಾವಿ) ಪರೀಕ್ಷೆ (ಸಿಸಿಇ), 2024 ರದ್ದುಪಡಿಸುವಂತೆ ಕೋರಿ ಸಾವಿರಾರು ಅಭ್ಯರ್ಥಿಗಳು ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅಭ್ಯರ್ಥಿಗಳು ಮರು ಪರೀಕ್ಷೆ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಲು ಕೋರಿದ್ದಾರೆ.

ಜನ್ ಸೂರಾಜ್ ಪಕ್ಷದ ಸಂಸ್ಥಾಪಕರಾದ ಕಿಶೋರ್ ಅವರು ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ತಮ್ಮ ಬೆಂಬಲವನ್ನು ನೀಡಿದ್ದಾರೆ. ಬಿಹಾರದ ಪರೀಕ್ಷೆಗಳಲ್ಲಿ “ವ್ಯವಸ್ಥಿತ ಭ್ರಷ್ಟಾಚಾರವನ್ನು ಕೊನೆಗೊಳಿಸಬೇಕು” ಎಂದು ಕರೆ ನೀಡಿದರು. ಪಾಟ್ನಾದ ಗಾಂಧಿ ಮೈದಾನದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಪ್ರಚೋದಿಸಿದ ಆರೋಪದ ಮೇಲೆ ಪ್ರಶಾಂತ್ ಕಿಶೋರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿರುವುದು ಗಮನಾರ್ಹವಾಗಿದೆ.

ಪೇಪರ್ ಸೋರಿಕೆಗೆ ಯಾವುದೇ ಪುರಾವೆಗಳಿಲ್ಲ: ಸಚಿವ ವಿಜಯ್ ಚೌಧರಿ 

ಬಿಪಿಎಸ್‌ಸಿ ಪರೀಕ್ಷೆಯಲ್ಲಿ ಪೇಪರ್ ಸೋರಿಕೆಯಾಗಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಬಿಹಾರ ಸಚಿವ ವಿಜಯ್ ಕುಮಾರ್ ಚೌಧರಿ ಪ್ರತಿಪಾದಿಸಿದ್ದಾರೆ.

“ಸರ್ಕಾರವು ಹೆಚ್ಚಿನ ಸ್ಪಷ್ಟತೆಯೊಂದಿಗೆ ಕಾರ್ಯನಿರ್ವಹಿಸಲು ಸಾಧ್ಯವಾಗಲಿಲ್ಲ. ಉನ್ನತ ಅಧಿಕಾರಿಯು ನೊಂದ ವ್ಯಕ್ತಿಗೆ ತಾಳ್ಮೆಯ ವಿಚಾರಣೆಯನ್ನು ನೀಡಿದರು. ಆದರೆ, ನನ್ನ ಮಾಹಿತಿಗೆ, ಪ್ರಶ್ನೆ ಪತ್ರಿಕೆ ಸೋರಿಕೆಯ ಯಾವುದೇ ಪುರಾವೆಗಳನ್ನು ಒದಗಿಸಲಾಗಿಲ್ಲ” ಎಂದು ಚೌಧರಿ ಹೇಳಿದ್ದಾರೆ.

“ಹಾಗಾಗಿ, ಸದ್ಯಕ್ಕೆ ಪೇಪರ್ ಸೋರಿಕೆಯಾಗಿಲ್ಲ ಎಂದು ನಾವು ಭಾವಿಸುತ್ತೇವೆ. ಇದು ಲೋಕಸೇವಾ ಆಯೋಗದ ನಿಲುವು ಕೂಡ ಆಗಿದೆ. ಒಂದು ಪರೀಕ್ಷಾ ಕೇಂದ್ರದಲ್ಲಿ ಕೆಲವು ಅವ್ಯವಸ್ಥೆಗಳು ಕಂಡುಬಂದಿದ್ದು, ಹಾನಿಗೊಳಗಾದ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ಆದೇಶಿಸಲಾಗಿದೆ” ಎಂದು ಸಚಿವರು ಹೇಳಿದರು.

“ಆದರೆ, ನಿಸ್ಸಂಶಯವಾಗಿ ಪಿತೂರಿ ಇತ್ತು. ಪ್ರಶ್ನೆ ಪತ್ರಿಕೆ ಸೋರಿಕೆಯ ವದಂತಿಗಳನ್ನು ಹರಡಲಾಯಿತು. ಆದರೆ, ಅದು ಎಲ್ಲಿ ಸೋರಿಕೆಯಾಗಿದೆ, ಯಾರಿಗೆ ಸೋರಿಕೆಯಾಗಿದೆ ಎಂದು ಯಾರಿಗೂ ತಿಳಿದಿಲ್ಲ. ಇದರ ಹಿಂದೆ ಯುವ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ್ದಾರೆ. ಅವರ ಮುಖವಾಡವನ್ನು ಬಿಚ್ಚಿಡಬೇಕು” ಎಂದು ಅವರು ಹೇಳಿದರು.

ಬಿಹಾರ ಸಚಿವರ ಹೇಳಿಕೆಯು ಈ ವಿಷಯದ ಬಗ್ಗೆ ಬಿಪಿಎಸ್‌ಸಿ ತೆಗೆದುಕೊಂಡ ನಿಲುವಿಗೆ ಅನುಗುಣವಾಗಿದೆ. ಡಿಸೆಂಬರ್ 13 ರಂದು ಕಂಬೈನ್ಡ್ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆದಿದ್ದು, ರಾಜ್ಯದ ರಾಜಧಾನಿಯ ಬಾಪು ಪರೀಕ್ಷಾ ಪರಿಷತ್ತಿನಲ್ಲಿ ನೂರಾರು ಮಂದಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ಪರೀಕ್ಷೆಯನ್ನು ಬಹಿಷ್ಕರಿಸಿದರು.

ಜನವರಿ 4 ರಂದು ನಗರದ ವಿವಿಧ ಕೇಂದ್ರಗಳಲ್ಲಿ ಹೊಸದಾಗಿ ಪರೀಕ್ಷೆಗೆ ಹಾಜರಾಗಲು ಕೇಳಲಾದ 10,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ಆಯೋಗವು ಆದೇಶಿಸಿದೆ. ಆದರೆ, ಉಳಿದವುಗಳಲ್ಲಿ ಸರಿಯಾಗಿ ಪರೀಕ್ಷೆ ನಡೆದಿದೆ ಎಂದು ಆಯೋಗವು ಅಭಿಪ್ರಾಯಪಟ್ಟಿದೆ. ಬಿಹಾರದಾದ್ಯಂತ 911 ಕೇಂದ್ರಗಳಲ್ಲಿ ಪರೀಕ್ಷೆ ಬರೆದ ಐದು ಲಕ್ಷ ಅಭ್ಯರ್ಥಿಗಳಿಂದ ಯಾವುದೇ ದೂರುಗಳಿಲ್ಲ. ಆದರೆ, ಆಕಾಂಕ್ಷಿಗಳ ಒಂದು ವಿಭಾಗವು ಆಂದೋಲನವನ್ನು ಪ್ರಾರಂಭಿಸಿದೆ. “ಸಮಾನಾಂತರವಾದ ಆಟದ ಮೈದಾನ” ಖಚಿತಪಡಿಸಿಕೊಳ್ಳಲು ಎಲ್ಲಾ ಕೇಂದ್ರಗಳಿಗೆ ಮರು ಪರೀಕ್ಷೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ಅಸೆಂಬ್ಲಿ ಚುನಾವಣೆಗೆ ಒಂದು ವರ್ಷಕ್ಕಿಂತ ಮುಂಚೆಯೇ ಮೂಡಿಬರುವ ಈ ಕೋಲಾಹಲವು ರಾಜ್ಯದ ಆಡಳಿತಾರೂಢ ಎನ್‌ಡಿಎಯನ್ನು ವಿರೋಧಿಸುವ ಎಲ್ಲಾ ರಾಜಕೀಯ ಪಕ್ಷಗಳಿಂದ ಬೆಂಬಲವನ್ನು ಪಡೆದಿದೆ.

ಇದನ್ನೂ ಓದಿ; ವಯನಾಡ್ ಭೂಕುಸಿತದಿಂದ ಸಂತ್ರಸ್ತರಾದವರಿಗೆ ಕೇರಳ ಸರ್ಕಾರದಿಂದ ಎರಡು ಟೌನ್‌ಶಿಪ್‌ ನಿರ್ಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...