Homeಮುಖಪುಟಬಿಹಾರ: ಬಹುಮತ ಸಾಬೀತುಪಡಿಸಲು 2 ವಾರ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್ - ಕಾರಣ?

ಬಿಹಾರ: ಬಹುಮತ ಸಾಬೀತುಪಡಿಸಲು 2 ವಾರ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್ – ಕಾರಣ?

ಸದ್ಯಕ್ಕೆ ಮಹಾಘಟಬಂಧನ್ ಸರ್ಕಾರಕ್ಕೆ 164 ಶಾಸಕರ ಬೆಂಬಲವಿದೆ. 243 ಸದಸ್ಯಬಲದ ಬಿಹಾರ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 122 ಶಾಸಕರ ಅಗತ್ಯವಿದೆ.

- Advertisement -
- Advertisement -

ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಅಂತ್ಯಗೊಳಿಸಿ ಆರ್‌ಜೆಡಿ ಮತ್ತು ಇತರ ಪಕ್ಷಗಳ ಜೊತೆಗೂಡಿ ಸರ್ಕಾರ ರಚಿಸಿ ಮುಖ್ಯಮಂತ್ರಿಯಾಗಿರುವ ನಿತೀಶ್‌ ಕುಮಾರ್‌ರವರು ಆಗಸ್ಟ್ 24ರ ನಂತರ ಬಹುಮತ ಸಾಬೀತುಪಡಿಸುವುದಾಗಿ ಸಮಯ ಕೇಳಿದ್ದಾರೆ.

ಆಗಸ್ಟ್ 24ರಿಂದ ವಿಧಾನಸಭಾ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಅವರು 160ಕ್ಕೂ ಹೆಚ್ಚು ಶಾಸಕರ ಬೆಂಬಲವಿದ್ದರೂ ಸಹ ಬಹುಮತ ಸಾಬೀತಪಡಿಸಲು ಎರಡು ವಾರಗಳ ಸಮಯ ಕೇಳಿದ್ದಾರೆ.

ವಿಧಾನಸಭೆಯ ಸ್ಪೀಕರ್ ಈಗಲೂ ಬಿಜೆಪಿಯವರೆ ಆಗಿರುವುದರಿಂದ ಬಹುಮತ ಇದ್ದರೂ ಸಹ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ನಿತೀಶ್ ಕುಮಾರ್ ಸದ್ಯಕ್ಕೆ ವಿಶ್ವಾಸಮತ ಯಾಚಿಸಲು ಮುಂದಾಗುತ್ತಿಲ್ಲ ಎನ್ನಲಾಗುತ್ತಿದೆ. ಸ್ಪೀಕರ್ ಬದಲಾವಣೆ ನಂತರವಷ್ಟೆ ಅವರು ವಿಶ್ವಾಸಮತ ಯಾಚಿಸಲು ನಿರ್ಧರಿಸಿದ್ದಾರೆ.

ಬಿಜೆಪಿಯ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ವಿರುದ್ಧ ಮಹಾಘಟಬಂಧನ್‌ 55 ಶಾಸಕರು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದಾರೆ. ನಿಯಮಗಳ ಪ್ರಕಾರ ಗೊತ್ತುವಳಿ ಮಂಡಿಸಿದ ಎರಡು ವಾರಗಳ ನಂತರವಷ್ಟೇ ಸ್ಪೀಕರ್‌ ಅನ್ನು ಬದಲಾಯಿಸಬಹುದಾಗಿದೆ. ಹಾಗಾಗಿ ಆಗಸ್ಟ್ 24ರವರೆಗೆ ಕಾಯಲು ಸರ್ಕಾರ ಸಿದ್ದವಾಗಿದೆ.

ಸದ್ಯಕ್ಕೆ ಮಹಾಘಟಬಂಧನ್ ಸರ್ಕಾರಕ್ಕೆ 164 ಶಾಸಕರ ಬೆಂಬಲವಿದೆ. 243 ಸದಸ್ಯಬಲದ ಬಿಹಾರ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 122 ಶಾಸಕರ ಅಗತ್ಯವಿದೆ. ಆದರೂ ವಿಧಾನಸಭಾ ಅಧಿವೇಶನದ ಮೊದಲ ದಿನ ಸ್ಪೀಕರ್‌ ಅನ್ನು ಕೆಳಗಿಳಿಸಿ ಒಪ್ಪಂದದಂತೆ ಆರ್‌ಜೆಡಿ ಪಕ್ಷದ ನೂತನ ಸ್ಪೀಕರ್ ಆಯ್ಕೆಯಾದ ನಂತರ ನಿತೀಶ್ ಕುಮಾರ್ ವಿಶ್ವಾಸಮತ ಯಾಚಿಸಲಿದ್ದಾರೆ.

ನಿತೀಶ್ ಕುಮಾರ್ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಳ್ಳಲು ಹಾಲಿ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಕೂಡ ಕಾರಣರಾಗಿದ್ದರು. ಅವರು ನಿತೀಶ್ ಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಇದು ನಿತೀಶ್ ಕುಮಾರ್‌ರವರಿಗೆ ಸಿಟ್ಟು ತರಿಸಿತ್ತು. ಹಾಗಾಗಿ ಅವರಿಬ್ಬರ ನಡುವೆ ವೈಮನಸ್ಸು ಬೆಳೆದಿತ್ತು. ಈ ಹಿಂದೆ ಜೆಡಿಯು ಪಕ್ಷವು ಅಧಿವೇಶನವನ್ನು ಬಾಯ್ಕಾಟ್ ಮಾಡಿತ್ತು. ಅದೇ ಸಂದರ್ಭದಲ್ಲಿ ಅಗ್ನಿಪಥ್ ಯೋಜನೆ ಕುರಿತು ಚರ್ಚೆಗೆ ಅವಕಾಶ ನೀಡದಿರುವುದನ್ನು ವಿರೋಧಿಸಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಪಕ್ಷಗಳು ಕೂಡ ಅಧಿವೇಶನ ಬಹಿಷ್ಕರಿಸಿದ್ದವು.

ಸ್ಪೀಕರ್ ಸಿನ್ಹಾ ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದಾಗಿದೆ. ಏಕೆಂದರೆ ಬಿಜೆಪಿ ಬಹುಮತ ಕಳೆದುಕೊಂಡಿದೆ ಎಂಬುದು ಅವರ ಅರಿವಿಗೆ ಬಂದಿದೆ. ಆದರೂ ಅವರು ಬಿಜೆಪಿ ನಾಯಕತ್ವ ಏನು ಹೇಳುತ್ತದೆ ಎಂದು ಎದುರು ನೋಡುತ್ತಿದ್ದಾರೆ. ಒಂದು ವೇಳೆ ಅವರು ರಾಜೀನಾಮೆ ನೀಡಿದರೆ ಹೊಸ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ; 2014 ರಲ್ಲಿ ಗೆದ್ದಂತೆ 2024 ಗೆಲ್ಲುತ್ತಾರೆಯೆ?: ಮೋದಿಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...