Homeಮುಖಪುಟಬಿಹಾರ ಸಿಎಂ ನಿತೀಶ್‌ ಕುಮಾರ್‌ ಮೇಲೆ ದಾಳಿ; ವ್ಯಕ್ತಿ ಸೆರೆ

ಬಿಹಾರ ಸಿಎಂ ನಿತೀಶ್‌ ಕುಮಾರ್‌ ಮೇಲೆ ದಾಳಿ; ವ್ಯಕ್ತಿ ಸೆರೆ

- Advertisement -
- Advertisement -

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸ್ವಗ್ರಾಮ ಭಕ್ತಿಯಾರ್‌ಪುರದಲ್ಲಿ ಭಾರಿ ಭದ್ರತಾ ಲೋಪ ಉಂಟಾಗಿದ್ದು, ವ್ಯಕ್ತಿಯೊಬ್ಬ ನಿತೀಶ್‌ಕುಮಾರ್‌‌ ಮೇಲೆ ದಾಳಿ ಮಾಡಿರುವ ಘಟನೆ ಭಾನುವಾರ ನಡೆದಿದೆ.

ದಾಳಿ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವ್ಯಕ್ತಿಯನ್ನು ಬಂಧಿಸಲಾಗಿದೆ. ವ್ಯಕ್ತಿಯು ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾನೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಘಟನೆಯನ್ನು ದುರದೃಷ್ಟಕರ ಎಂದು ಕರೆದಿರುವ ರಾಜ್ಯ ಸಚಿವ ಅಶೋಕ್ ಚೌಧರಿ, “ಮುಖ್ಯಮಂತ್ರಿ ಭದ್ರತೆಯ ಉಸ್ತುವಾರಿ ವಹಿಸಿರುವವರ ಕಡೆಯಿಂದ ಲೋಪವಾಗಿದೆ. ತನಿಖೆಯಾಗಬೇಕು” ಎಂದು ಹೇಳಿದ್ದಾರೆ.

ಸ್ಥಳೀಯ ಸಫರ್ ಆಸ್ಪತ್ರೆ ಸಂಕೀರ್ಣದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಶಿಲಭದ್ರ ಯಾಜಿ ಅವರ ಪ್ರತಿಮೆಗೆ ಮುಖ್ಯಮಂತ್ರಿ ಮಾಲಾರ್ಪಣೆ ಮಾಡಲಿರುವಾಗ ದಾಳಿ ನಡೆದಿರುವುದನ್ನು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳು ತೋರಿಸಿವೆ.

ಹಿಂದಿನಿಂದ ಬಂದ ವ್ಯಕ್ತಿ, ವೇಗವಾಗಿ ವೇದಿಕೆಯ ಮೇಲೆ ಏರುತ್ತಾನೆ. ಪ್ರತಿಮೆಗೆ ಪುಷ್ಪನಮನ ಸಲ್ಲಿಸಲು ಬಾಗಿದ ನಿತೀಶ್‌ ಕುಮಾರ್ ಅವರಿಗೆ ಹಿಂದಿನಿಂದ ಹೊಡೆಯುತ್ತಾನೆ. ತಕ್ಷಣ ಆತನನ್ನು ಮುಖ್ಯಮಂತ್ರಿ ಭದ್ರತಾ ಸಿಬ್ಬಂದಿ ಎಳೆದೊಯ್ದರು.

“ಅವನನ್ನು ಹೊಡೆಯಬೇಡಿ. ಅವನು ಏನು ಹೇಳುತ್ತಿದ್ದಾನೆ ಎಂಬುದನ್ನು ಮೊದಲು ಕಂಡುಹಿಡಿಯಿರಿ” ಎಂದು ಮುಖ್ಯಮಂತ್ರಿಗಳು ತಮ್ಮ ಭದ್ರತಾ ಸಿಬ್ಬಂದಿಗೆ ಹೇಳಿದರು ಎಂದು ಮೂಲಗಳು ತಿಳಿಸಿವೆ.

ಆ ವ್ಯಕ್ತಿಯನ್ನು ಶಂಕರ್ ಸಾಹ್ ಎಂದು ಗುರುತಿಸಲಾಗಿದೆ. ಭಕ್ತಿಯಾರ್‌ಪುರದ ಅಬು ಮಹಮದ್‌ ಪುರ ನಿವಾಸಿ ಶಂಕರ್‌ ಆಭರಣ ಮಳಿಗೆ ಹೊಂದಿದ್ದಾರೆ.

ಹಲ್ಲೆ ನಡೆಸಿದ ವ್ಯಕ್ತಿ ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆ. ಅವರ ಕುಟುಂಬದವರು ಆತನನ್ನು ಹೆಚ್ಚಾಗಿ ಮನೆಯಲ್ಲಿಯೇ ಇರಿಸಿದ್ದರು ಎಂದು ಮೂಲಗಳು ತಿಳಿಸಿವೆ. ಕುಟುಂಬದ ಸದಸ್ಯರು ಹೊರಗಿದ್ದ ಕಾರಣ ಶಂಕರ್‌ ಮನೆಯಿಂದ ಹೊರ ಬಂದು ಈ ರೀತಿ ವರ್ತಿಸಿದ್ದಾರೆ ಎಂದು ಪಾಟ್ನಾ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ. ಭದ್ರತಾ ಲೋಪದ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿಯವರು ತಮ್ಮ ಹಳೆಯ ಲೋಕಸಭಾ ಕ್ಷೇತ್ರವಾದ ಬರ್ಹ್‌ನ ವಿವಿಧ ಭಾಗಗಳಲ್ಲಿ ಪ್ರವಾಸ ಕೈಗೊಂಡಿದ್ದರು. ನಿತೀಶ್‌ ಕುಮಾರ್ ಅವರು 1989ರಿಂದ 1999 ರವರೆಗೆ ಬಾರ್ಹ್‌ನಿಂದ ಐದು ಬಾರಿ ಆಯ್ಕೆಯಾಗಿದ್ದಾರೆ.

2020ರ ನವೆಂಬರ್‌ನಲ್ಲಿ ಬಿಹಾರದ ಮಧುಬನಿಯಲ್ಲಿ ರಾಜ್ಯ ಚುನಾವಣೆಗಳಿಗಾಗಿ ಪ್ರಚಾರ ನಡೆಸುತ್ತಿದ್ದಾಗ ನಿತೀಶ್‌ ಕುಮಾರ್ ದಾಳಿಗೊಳಗಾಗಿದ್ದರು.

ಕುಮಾರ್ ಅವರು ಹರ್ಲಖಿಯಲ್ಲಿ ನಡೆದ ರ್ಯಾಲಿಯಲ್ಲಿ ಉದ್ಯೋಗಗಳ ಕುರಿತು ಮಾತನಾಡುತ್ತಿದ್ದರು, ಜನಸಮೂಹದಿಂದ ಈರುಳ್ಳಿಯನ್ನು ಎಸೆಯಲಾಗಿತ್ತು. “ಖುಬ್ ಫೆಕೋ, ಖುಬ್ ಫೆಕೋ, ಖುಬೇ ಫೆಕೋ (ಎಸೆಯುತ್ತಲೇ ಇರು)” ಎಂದು ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಆದರೆ ದಾಳಿಕೋರನು ಭದ್ರತಾ ಸಿಬ್ಬಂದಿಯ ಕೈಗೆ ಸಿಕ್ಕಿಬಿದ್ದಾಗ ನಿತೀಶ್‌, “ಅವನು ಹೋಗಲಿ, ಅವನತ್ತ ಗಮನ ಹರಿಸಬೇಡ” ಎಂದಿದ್ದರು.

ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ದಾಳಿಯನ್ನು ಖಂಡಿಸಿದ್ದು, ಪ್ರಜಾಪ್ರಭುತ್ವದ ಮೂಲಕ ಪ್ರತಿಭಟಿಸುವಂತೆ ಜನರಿಗೆ ಸೂಚಿಸಿದ್ದಾರೆ.


ಇದನ್ನೂ ಓದಿರಿ: ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...