Homeಮುಖಪುಟಲಲನ್ ಸಿಂಗ್ ನಿರ್ಗಮನ ಬೆನ್ನಲ್ಲೇ ಜೆಡಿಯು ಅಧ್ಯಕ್ಷರಾಗಿ ನಿತೀಶ್ ಕುಮಾರ್ ಆಯ್ಕೆ

ಲಲನ್ ಸಿಂಗ್ ನಿರ್ಗಮನ ಬೆನ್ನಲ್ಲೇ ಜೆಡಿಯು ಅಧ್ಯಕ್ಷರಾಗಿ ನಿತೀಶ್ ಕುಮಾರ್ ಆಯ್ಕೆ

- Advertisement -
- Advertisement -

ಜನತಾದಳ ಯುನೈಟೆಡ್ (ಜೆಡಿಯು) ಪಕ್ಷದ ಅಧ್ಯಕ್ಷರಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಪಕ್ಷದ ಅಧ್ಯಕ್ಷರಾಗಿದ್ದ ಲಲನ್ ಸಿಂಗ್ ನಿರ್ಗಮನ ಬೆನ್ನಲ್ಲೇ ನಿತೀಶ್ ಕುಮಾರ್ ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ದೇಶ ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿರುವಾಗ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.

ಇಂದು (ಡಿಸೆಂಬರ್ 29) ದೆಹಲಿಯಲ್ಲಿ ನಡೆದ ಜೆಡಿಯು ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಲಲನ್ ಸಿಂಗ್ ಸ್ಪರ್ಧೆಯಿಂದ ದೂರ ಸರಿದ ಬೆನ್ನಲ್ಲೇ ನಿತೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಈ ಮೂಲಕ ವಾರಗಳ ಕಾಲ ಮುಂದುವರಿದಿದ್ದ ಜೆಡಿಯು ಅಧ್ಯಕ್ಷರ ಆಯ್ಕೆ ಕುತೂಹಲಕ್ಕೆ ತೆರೆ ಬಿದ್ದಿದೆ.

ಲಲನ್ ಸಿಂಗ್ ಅವರು ಬಿಹಾರದಲ್ಲಿ ಜೆಡಿಯುನ ಮಿತ್ರ ಪಕ್ಷ ರಾಷ್ಟ್ರೀಯ ಜನತಾದಳ (ಆರ್‌ಜೆಡಿ)ಕ್ಕೆ ಹತ್ತಿರವಾಗುತ್ತಿದ್ದಾರೆ ಎಂಬ ವದಂತಿಗಳ ಹಿನ್ನೆಲೆ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೈ ಬಿಡಲಾಗಿದೆ ಎಂದು ಹೇಳಲಾಗ್ತಿದೆ.

ಕೆಲವೊಂದು ವರದಿಗಳು, ಜೆಡಿಯು ಲಾಲು ಪ್ರಸಾದ್ ಯಾದವ್ ಅವರ ಆರ್‌ಜೆಡಿ ಜೊತೆ ವಿಲೀನವಾಗುವ ಸಾಧ್ಯತೆ ಇದೆ ಎಂದಿದೆ. ಆರ್‌ಜೆಡಿಯ ಮುಖ್ಯಸ್ಥ, ಲಾಲು ಯಾದವ್ ಅವರ ಮಗ ತೇಜಸ್ವಿ ಯಾದವ್ ಪ್ರಸ್ತುತ ಬಿಹಾರದ ಉಪ ಮುಖ್ಯಮಂತ್ರಿಯಾಗಿದ್ದಾರೆ.

ಜೆಡಿಯು ಕಾರ್ಯಕಾರಿ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ಗಮಿತ ಅಧ್ಯಕ್ಷ ಲಲನ್ ಸಿಂಗ್ ಪಕ್ಷದ ನಾಯಕರ ಮೇಲೆ ಅವರು ಮುನಿಸಿಕೊಂಡಿದ್ದಾರೆ ಎಂಬ ವರದಿಗಳನ್ನು ಅಲ್ಲಗಳೆದಿದ್ದಾರೆ. ನಿಮಗೆ ಪಕ್ಷದ ಮೇಲೆ ಕೋಪ ಇದೆಯಾ? ಎಂದು ಪ್ರಶ್ನಿಸಿದ್ದಕ್ಕೆ, “ನನಗ್ಯಾಕೆ ಕೋಪ, ಆ ತರಹದ ಪದವನ್ನು ನಾನು ಇದೇ ಮೊದಲ ಬಾರಿ ಕೇಳುತ್ತಿರುವುದು” ಎಂದಿದ್ದಾರೆ.

ಲಲನ್ ಸಿಂಗ್ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿರುವ ಕುರಿತು ಬಿಹಾರ ವಿಧಾನಸಭೆಯ ಪ್ರತಿಪಕ್ಷ ನಾಯಕ, ಬಿಜೆಪಿಯ ವಿಜಯ್ ಕುಮಾರ್ ಸಿನ್ಹಾ ಪ್ರತಿಕ್ರಿಯಿಸಿದ್ದು, “ಸ್ವಾಭಿಮಾನ ಇರುವ ವ್ಯಕ್ತಿ ಈ ರೀತಿಯ ವಿದಾಯವನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಪಕ್ಷ ಮತ್ತು ನಾಯಕತ್ವದಲ್ಲಿ ವಿಶ್ವಾಸವಿಲ್ಲದಿರುವಾಗ ಹುದ್ದೆಯನ್ನು ಅಲಂಕರಿಸುವುದರಲ್ಲಿ ಅರ್ಥವಿಲ್ಲ. ಮೊದಲೇ ರಾಜೀನಾಮೆ ಕೊಡಬೇಕಿತ್ತು” ಎಂದಿದ್ದಾರೆ.

ಲಲನ್ ಸಿಂಗ್ ಅವರು ಬಿಹಾರದ ಮುಂಗೇರ್‌ನಿಂದ ಸ್ಪರ್ಧಿಸಿ ಎರಡು ಬಾರಿ ಲೋಕಸಭಾ ಸಂಸದರಾಗಿದ್ದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಅವರು ತಮ್ಮ ಕ್ಷೇತ್ರದ ಮೇಲೆ ಗಮನ ಹರಿಸಬೇಕಾಗಿದೆ. ಈ ಕಾರಣಕ್ಕೆ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂದು ಕೆಲವೊಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಉತ್ತರ ಪ್ರದೇಶ: ಬಿಜೆಪಿ ನಾಯಕಿ, ನಟಿ ಜಯಪ್ರದಾ ಪತ್ತೆಗೆ ವಿಶೇಷ ತಂಡ ರಚಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...