Homeಮುಖಪುಟಲಾಲು ಯಾದವ್‌ ಹಾಗೂ ರಾಹುಲ್ ಗಾಂಧಿ ಭೇಟಿ ಮಾಡಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌‌

ಲಾಲು ಯಾದವ್‌ ಹಾಗೂ ರಾಹುಲ್ ಗಾಂಧಿ ಭೇಟಿ ಮಾಡಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌‌

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಪಾಟ್ನಾದಲ್ಲಿರುವ ಅವರ ನಿವಾಸದಲ್ಲಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಮಾಜಿ ಸಿಎಂ ರಾಬ್ರಿ ದೇವಿ ಅವರ ಸಮ್ಮುಖದಲ್ಲಿ ಸೋಮವಾರ ಭೇಟಿಯಾಗಿದ್ದಾರೆ. ಇದರ ನಂತರ ಅವರು ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು 2024ರ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಮಾತುಕತೆಗಾಗಿ ಭೇಟಿ ಮಾಡಿದ್ದಾರೆ.

“ನಾನು ಲಾಲು ಯಾದವ್ ಅವರೊಂದಿಗೆ ಮಾತನಾಡಿದ್ದೇನೆ. ನಂತರ ದೆಹಲಿಗೆ ಭೇಟಿ ನೀಡಲಿದ್ದು ಅಲ್ಲಿ ರಾಷ್ಟ್ರಪತಿ ಮತ್ತು ಉಪಾ ರಾಷ್ಟ್ರಪತಿಯನ್ನು ಭೇಟಿ ಮಾಡಲಿದ್ದೇನೆ. ಇದರ ನಂತರ ನಾವು ಸಂಜೆ ರಾಹುಲ್ ಗಾಂಧಿಯನ್ನು ಭೇಟಿ ಮಾಡುತ್ತೇವೆ” ಎಂದು ನಿತೀಶ್‌ ಕುಮಾರ್ ದೆಹಲಿಗೆ ತೆರಳುವ ಮೊದಲು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನಕ್ಕಾಗಿ ಅವರು ರಾಷ್ಟ್ರ ರಾಜಧಾನಿಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್‌‌: ‘ಬಿಜೆಪಿ ಮುಕ್ತ ಭಾರತ’ಕ್ಕೆ ಕರೆ

ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಕೈಜೋಡಿಸಿದ ನಂತರ ನಿತೀಶ್ ಕುಮಾರ್ ಅವರು ವಿಪಕ್ಷಗಳ ನಾಯಕರನ್ನು ಇದೇ ಮೊದಲ ಬಾರಿಗೆ ಭೇಟಿಯಾಗಿದ್ದಾರೆ.

ರಾಹುಲ್ ಗಾಂಧಿ ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿತೀಶ್‌ ಕುಮಾರ್‌, ಉನ್ನತ ಹುದ್ದೆ ಬಗ್ಗೆ ಯಾವುದೇ ಆಕಾಂಕ್ಷೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ಪ್ರತಿಪಕ್ಷಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆದಿದೆ. ಈ ನಿಟ್ಟಿನಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆ ವೇಳೆಗೆ ಪ್ರತಿಪಕ್ಷಗಳನ್ನು ಒಗ್ಗೂಡಿಸಲಾಗುತ್ತಿದೆ. ನನಗೆ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿಕೊಳ್ಳುವ ಯಾವುದೇ ಉದ್ದೇಶವಿಲ್ಲ” ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

ಈ ಭೇಟಿಗೂ ಮೊದಲು ಜೆಡಿಯು ತನ್ನ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ರಾಷ್ಟ್ರೀಯ ಮಂಡಳಿ ಸಭೆಯನ್ನು ನಡೆಸಿತ್ತು.

ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿದ ನಿತೀಶ್‌ ಕುಮಾರ್,“ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಹೋರಾಡಿದರೆ, ಬಿಜೆಪಿಯನ್ನು ಪ್ಯಾಕ್ ಮಾಡಬಹುದು ಅಥವಾ ಸುಮಾರು 50 ಸ್ಥಾನಗಳಿಗೆ ಸೀಮಿತಗೊಳಿಸಬಹುದು. ನಾವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಬಿಜೆಪಿ ಸಾಮಾಜಿಕವಾಗಿ ಮತ್ತು ಕೋಮು ಸೌಹಾರ್ದತೆಗೆ ಭಂಗ ತಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ವಿಧಾನಸಭೆಯಿಂದ ಹೊರನಡೆದ ಬಿಜೆಪಿ: ವಿಶ್ವಾಸಮತ ಗೆದ್ದ ನಿತೀಶ್ ಕುಮಾರ್

ಎನ್‌ಡಿಎ ವಿರುದ್ಧ ವಾಗ್ದಾಳಿ ನಡೆಸಿದ ನಿತೀಶ್‌ ಕುಮಾರ್,“ನಾವು ಮೊದಲು ಎನ್‌ಡಿಎ ಮೈತ್ರಿಯನ್ನು ಮುರಿದ ನಂತರ ಎಲ್ಲವೂ ಚೆನ್ನಾಗಿತ್ತು. ಆದರೆ ನಂತರ ನಾವು 2017 ರಲ್ಲಿ ಮತ್ತೆ ಅವರೊಂದಿಗೆ ಕೈಜೋಡಿಸಿ ತಪ್ಪು ಮಾಡಿದೆವು. ಇದರಿಂದಾಗಿ ಕೆಲವು ರಾಜ್ಯಗಳ ಜನರು ನಮ್ಮಿಂದ ಬೇರ್ಪಟ್ಟರು. ಆದರೆ ಈಗ ನಾವು ಮತ್ತೆ ಅವರಿಂದ ಬೇರ್ಪಟ್ಟಿದ್ದು, ಈ ಬಗ್ಗೆ ಅವರು ಒಳ್ಳೆಯ ಮಾತನಾಡಿದ್ದಾರೆ” ಎಂದು ಹೇಳಿದ್ದಾರೆ.

ಈ ಮಧ್ಯೆ ನಿತೀಶ್ ಕುಮಾರ್ ಅವರನ್ನು 2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವ ವಿವಿಧ ಪೋಸ್ಟರ್‌ಗಳು ಗುರುವಾರ ಪಾಟ್ನಾದಲ್ಲಿ ಕಂಡುಬಂದಿವೆ. ಜೆಡಿಯು ಹಾಕಿರುವ ಪೋಸ್ಟರ್‌ಗಳಲ್ಲಿ ಉತ್ತಮ ಆಡಳಿತದ ಭರವಸೆ ನೀಡಲಾಗಿವೆ.

ಇದರ ಜೊತೆಗೆ ತೇಜಸ್ವಿ ಯಾದವ್ ಕೂಡಾ 2024 ರ ಚುನಾವಣೆಯಲ್ಲಿ ಪ್ರಧಾನಿ ಹುದ್ದೆಗೆ ನಿತೀಶ್‌ ಕುಮಾರ್ ಅವರು ‘ಪ್ರಬಲ ಅಭ್ಯರ್ಥಿ’ ಆಗಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲಿ ಇಂದು ವಿಶ್ವಾಸಮತ ಯಾಚನೆ ಬೆನ್ನಲ್ಲೆ RJD ಹಿರಿಯ ನಾಯಕರ ಮನೆ ಮೇಲೆ CBI ದಾಳಿ

2020ರಲ್ಲಿ ಬಿಜೆಪಿ-ಜೆಡಿ(ಯು) ಮೈತ್ರಿಯಲ್ಲಿ ಚುನಾವಣೆ ಎದುರಿಸಿ ನಿತೀಶ್‌ ಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡುವುದರೊಂದಿಗೆ ಎನ್‌ಡಿಎ ಮೈತ್ರಿ ಸರ್ಕಾರ ರಚನೆಯಾಗಿತ್ತು. ಇದಾಗಿ ಎರಡು ವರ್ಷಗಳ ಅಂತರದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯನ್ನು ತೊರೆದು ಜೆಡಿಯು ಮತ್ತು ಕಾಂಗ್ರೆಸ್ ಪಕ್ಷಗಳ ಜೊತೆಗೆ ಮೈತ್ರಿ ಮಾಡಿಕೊಂಡು ಹೊಸ ಸರ್ಕಾರ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...