Homeಮುಖಪುಟದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

ದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

- Advertisement -
- Advertisement -

2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ. ಕಳೆದ ತಿಂಗಳು ಬಿಜೆಪಿಯೊಂದಿಗೆ ಮೈತ್ರಿಯನ್ನು ಕೊನೆಗೊಳಿಸಿದ ಜನತಾ ದಳ ಯುನೈಟೆಡ್‌ನ ನಾಯಕರೂ ಆಗಿರುವ ನಿತೀಶ್‌‌ ಸೋಮವಾರದಿಂದ ದೆಹಲಿಯಲ್ಲಿ ಭೇಟಿಯಾಗಲು ಬಯಸಿದ ನಾಯಕರ ಸುದೀರ್ಘ ಪಟ್ಟಿಯನ್ನು ಹೊಂದಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಜಾತ್ಯಾತೀತ ಜನತಾದಳದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಸಿಪಿಐ ನಾಯಕ ಡಿ.ರಾಜಾ, ಭಾರತೀಯ ರಾಷ್ಟ್ರೀಯ ಲೋಕದಳದ ಓಂ ಪ್ರಕಾಶ್ ಚೌತಾಲಾ ಮತ್ತು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರು ಈಗಾಗಲೆ ಭೇಟಿಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದು ಬೆಳಿಗ್ಗೆ ಅವರು ರಾಜ್ಯದ ಮಿತ್ರ ಪಕ್ಷವಾಗಿರುವ ಸಿಪಿಐಎಂಎಲ್ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಅವರನ್ನು ಕೂಡಾ ಭೇಟಿಯಾಗಿದ್ದಾರೆ. ಇದರ ಜೊತೆಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು  ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ಅವರನ್ನು ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: ಲಾಲು ಯಾದವ್‌ ಹಾಗೂ ರಾಹುಲ್ ಗಾಂಧಿ ಭೇಟಿ ಮಾಡಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌‌

“ನಾನು ನಾಯಕನಾಗುವುದಿಲ್ಲ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತೇನೆ. ಬಿಜೆಪಿಯು ದೇಶವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಎಲ್ಲರೂ ಒಟ್ಟಾಗಿ ಚುನಾವಣೆಗಳನ್ನು ಎದುರಿಸಿದಾಗ ಚಿತ್ರಣವು ವಿಭಿನ್ನವಾಗಿರುತ್ತದೆ. ಇದಕ್ಕಾಗಿ ನಾವು ಎಲ್ಲಾ ಜನರೊಂದಿಗೆ ಮಾತನಾಡುತ್ತಿದ್ದೇವೆ” ಎಂದು ಸಭೆಯ ನಂತರ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಾವು ಬಿಜೆಪಿ ವಿರುದ್ಧ ಪ್ರಮುಖ ರಂಗವನ್ನು ರಚಿಸುತ್ತೇವೆ, ತೃತೀಯ ರಂಗವಲ್ಲ” ಎಂದು ನಿತೀಶ್‌‌ ಕುಮಾರ್ ಸಂಜೆ ಸುದ್ದಿಗಾರರೊಂದಿಗೆ ನಡೆಸಿದ ಸಂವಾದದ ಸಮಯದಲ್ಲಿ ಪುನರುಚ್ಚರಿಸಿದ್ದಾರೆ. ವಿರೋಧ ಪಕ್ಷದ ನಾಯಕರೊಂದಿಗಿನ ತಮ್ಮ ಮಾತುಕತೆಗಳು ಸಕಾರಾತ್ಮಕವಾಗಿರುತ್ತವೆ ಎಂದು ಘೋಷಿಸಿದ ಅವರು, 2024 ರ ಸಾರ್ವತ್ರಿಕ ಚುನಾವಣೆಯು ತುಂಬಾ ಒಳ್ಳೆಯದು’’ ಎಂದು ಹೇಳಿದ್ದಾರೆ. “ಚುನಾವಣೆಯು ಇಲ್ಲಿಯವರೆಗೆ ಏಕಪಕ್ಷೀಯ ಸ್ಪರ್ಧೆಯಾಗಿತ್ತು” ಎಂದು ಅವರು ಹೇಳಿದ್ದಾರೆ.

“ನನಗೆ ಯಾವುದೇ ವೈಯಕ್ತಿಕ ಆಯ್ಕೆ ಇಲ್ಲ. ಎಲ್ಲರನ್ನೂ ಭೇಟಿಯಾಗಬೇಕು ಎಂಬುದು ನನ್ನ ಏಕೈಕ ಆಸೆ. ನಾವು ಒಟ್ಟಾಗಿ ನಮ್ಮ ನಾಯಕನನ್ನು ಆಯ್ಕೆ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಿತೀಶ್‌ ಕುಮಾರ್‌ ಬೆಂಗಾವಲು ವಾಹನದ ಮೇಲೆ ದಾಳಿ; 13 ಜನರ ಬಂಧನ

ಸದ್ಯಕ್ಕೆ ನಿತೀಶ್‌ ಕುಮಾರ್ ಅವರ ಯೋಜನೆಯು ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟದ ಅಗತ್ಯವನ್ನು ಪ್ರತಿಪಕ್ಷಗಳ ಮೇಲೆ ಪ್ರಭಾವಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. 2019 ರ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳು ಪ್ರದರ್ಶಿಸಿದ ಒಗ್ಗಟ್ಟಿನ ಕೊರತೆಯ ದೃಷ್ಟಿಯಿಂದ ಇದು ಅತ್ಯಗತ್ಯವಾಗಿ ಎಂದು ಅವು ಉಲ್ಲೇಖಿಸಿದೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾರು ಮುಖಾಮುಖಿಯಾಗುತ್ತಾರೆ ಎಂಬ ಬಗ್ಗೆ ವಿಪಕ್ಷಗಳ ನಡುವೆ ಒಮ್ಮೆಯೂ ಒಮ್ಮತ ಮೂಡಿಲ್ಲ. ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಅವರ ಪ್ರತಿಪಾದನೆಯ ಹೊರತಾಗಿಯೂ, ನಿತೀಶ್ ಕುಮಾರ್ ಸೇರಿದಂತೆ ಹಲವಾರು ನಾಯಕರನ್ನು ಸಂಭವನೀಯ ಮುಖಗಳಾಗಿ ನೋಡಲಾಗುತ್ತದೆ.

ನಿತೀಶ್‌ ಕುಮಾರ್ ಅವರೊಂದಿಗಿನ ಭೇಟಿಯ ನಂತರ ಸಂದರ್ಶನವೊಂದರಲ್ಲಿ ಮಾತನಾಡಿದ ಸಿಪಿಎಂನ ಸೀತಾರಾಂ ಯೆಚೂರಿ ಚುನಾವಣೆಯ ನಂತರ ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: 2014 ರಲ್ಲಿ ಗೆದ್ದಂತೆ 2024 ಗೆಲ್ಲುತ್ತಾರೆಯೆ?: ಮೋದಿಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಸವಾಲು

ಕಳೆದ ಮೂರು ದಶಕಗಳಲ್ಲಿ ರೂಪುಗೊಂಡ ವಿವಿಧ ಮೈತ್ರಿಗಳನ್ನು ಸೂಚಿಸಿದ ಅವರು, ಯುಪಿಎ ಮತ್ತು ಎನ್‌ಡಿಎ ಒಕ್ಕೂಟಗಳು ಸಹ ಚುನಾವಣೆಯ ನಂತರ ರೂಪುಗೊಂಡವು ಎಂದು ಅವರು ಹೇಳಿದ್ದಾರೆ.

“ಈ ರೀತಿಯ ಮೈತ್ರಿ ಸಂಭವಿಸುತ್ತದೆ. ಆದರೆ ಮೊದಲು ಬಿಜೆಪಿಯನ್ನು ಅಧಿಕಾರದ ಹಿಡಿತದಿಂದ ಬೇರ್ಪಡಿಸಬೇಕು. ಎಲ್ಲಾ ಪಕ್ಷಗಳು ಅದನ್ನು ಮಾಡುತ್ತಿವೆ ನಂತರ ಒಟ್ಟಾಗಿ ನಾಯಕರನ್ನು ಆಯ್ಕೆ ಮಾಡುತ್ತಾರೆ” ಎಂದು ಸೀತಾರಾಮ್‌ ಯೆಚೂರಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...