Homeಮುಖಪುಟದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

ದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

- Advertisement -
- Advertisement -

2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ. ಕಳೆದ ತಿಂಗಳು ಬಿಜೆಪಿಯೊಂದಿಗೆ ಮೈತ್ರಿಯನ್ನು ಕೊನೆಗೊಳಿಸಿದ ಜನತಾ ದಳ ಯುನೈಟೆಡ್‌ನ ನಾಯಕರೂ ಆಗಿರುವ ನಿತೀಶ್‌‌ ಸೋಮವಾರದಿಂದ ದೆಹಲಿಯಲ್ಲಿ ಭೇಟಿಯಾಗಲು ಬಯಸಿದ ನಾಯಕರ ಸುದೀರ್ಘ ಪಟ್ಟಿಯನ್ನು ಹೊಂದಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಜಾತ್ಯಾತೀತ ಜನತಾದಳದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಸಿಪಿಐ ನಾಯಕ ಡಿ.ರಾಜಾ, ಭಾರತೀಯ ರಾಷ್ಟ್ರೀಯ ಲೋಕದಳದ ಓಂ ಪ್ರಕಾಶ್ ಚೌತಾಲಾ ಮತ್ತು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರು ಈಗಾಗಲೆ ಭೇಟಿಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದು ಬೆಳಿಗ್ಗೆ ಅವರು ರಾಜ್ಯದ ಮಿತ್ರ ಪಕ್ಷವಾಗಿರುವ ಸಿಪಿಐಎಂಎಲ್ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಅವರನ್ನು ಕೂಡಾ ಭೇಟಿಯಾಗಿದ್ದಾರೆ. ಇದರ ಜೊತೆಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು  ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ಅವರನ್ನು ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: ಲಾಲು ಯಾದವ್‌ ಹಾಗೂ ರಾಹುಲ್ ಗಾಂಧಿ ಭೇಟಿ ಮಾಡಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌‌

“ನಾನು ನಾಯಕನಾಗುವುದಿಲ್ಲ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತೇನೆ. ಬಿಜೆಪಿಯು ದೇಶವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಎಲ್ಲರೂ ಒಟ್ಟಾಗಿ ಚುನಾವಣೆಗಳನ್ನು ಎದುರಿಸಿದಾಗ ಚಿತ್ರಣವು ವಿಭಿನ್ನವಾಗಿರುತ್ತದೆ. ಇದಕ್ಕಾಗಿ ನಾವು ಎಲ್ಲಾ ಜನರೊಂದಿಗೆ ಮಾತನಾಡುತ್ತಿದ್ದೇವೆ” ಎಂದು ಸಭೆಯ ನಂತರ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಾವು ಬಿಜೆಪಿ ವಿರುದ್ಧ ಪ್ರಮುಖ ರಂಗವನ್ನು ರಚಿಸುತ್ತೇವೆ, ತೃತೀಯ ರಂಗವಲ್ಲ” ಎಂದು ನಿತೀಶ್‌‌ ಕುಮಾರ್ ಸಂಜೆ ಸುದ್ದಿಗಾರರೊಂದಿಗೆ ನಡೆಸಿದ ಸಂವಾದದ ಸಮಯದಲ್ಲಿ ಪುನರುಚ್ಚರಿಸಿದ್ದಾರೆ. ವಿರೋಧ ಪಕ್ಷದ ನಾಯಕರೊಂದಿಗಿನ ತಮ್ಮ ಮಾತುಕತೆಗಳು ಸಕಾರಾತ್ಮಕವಾಗಿರುತ್ತವೆ ಎಂದು ಘೋಷಿಸಿದ ಅವರು, 2024 ರ ಸಾರ್ವತ್ರಿಕ ಚುನಾವಣೆಯು ತುಂಬಾ ಒಳ್ಳೆಯದು’’ ಎಂದು ಹೇಳಿದ್ದಾರೆ. “ಚುನಾವಣೆಯು ಇಲ್ಲಿಯವರೆಗೆ ಏಕಪಕ್ಷೀಯ ಸ್ಪರ್ಧೆಯಾಗಿತ್ತು” ಎಂದು ಅವರು ಹೇಳಿದ್ದಾರೆ.

“ನನಗೆ ಯಾವುದೇ ವೈಯಕ್ತಿಕ ಆಯ್ಕೆ ಇಲ್ಲ. ಎಲ್ಲರನ್ನೂ ಭೇಟಿಯಾಗಬೇಕು ಎಂಬುದು ನನ್ನ ಏಕೈಕ ಆಸೆ. ನಾವು ಒಟ್ಟಾಗಿ ನಮ್ಮ ನಾಯಕನನ್ನು ಆಯ್ಕೆ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಿತೀಶ್‌ ಕುಮಾರ್‌ ಬೆಂಗಾವಲು ವಾಹನದ ಮೇಲೆ ದಾಳಿ; 13 ಜನರ ಬಂಧನ

ಸದ್ಯಕ್ಕೆ ನಿತೀಶ್‌ ಕುಮಾರ್ ಅವರ ಯೋಜನೆಯು ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟದ ಅಗತ್ಯವನ್ನು ಪ್ರತಿಪಕ್ಷಗಳ ಮೇಲೆ ಪ್ರಭಾವಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. 2019 ರ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳು ಪ್ರದರ್ಶಿಸಿದ ಒಗ್ಗಟ್ಟಿನ ಕೊರತೆಯ ದೃಷ್ಟಿಯಿಂದ ಇದು ಅತ್ಯಗತ್ಯವಾಗಿ ಎಂದು ಅವು ಉಲ್ಲೇಖಿಸಿದೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾರು ಮುಖಾಮುಖಿಯಾಗುತ್ತಾರೆ ಎಂಬ ಬಗ್ಗೆ ವಿಪಕ್ಷಗಳ ನಡುವೆ ಒಮ್ಮೆಯೂ ಒಮ್ಮತ ಮೂಡಿಲ್ಲ. ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಅವರ ಪ್ರತಿಪಾದನೆಯ ಹೊರತಾಗಿಯೂ, ನಿತೀಶ್ ಕುಮಾರ್ ಸೇರಿದಂತೆ ಹಲವಾರು ನಾಯಕರನ್ನು ಸಂಭವನೀಯ ಮುಖಗಳಾಗಿ ನೋಡಲಾಗುತ್ತದೆ.

ನಿತೀಶ್‌ ಕುಮಾರ್ ಅವರೊಂದಿಗಿನ ಭೇಟಿಯ ನಂತರ ಸಂದರ್ಶನವೊಂದರಲ್ಲಿ ಮಾತನಾಡಿದ ಸಿಪಿಎಂನ ಸೀತಾರಾಂ ಯೆಚೂರಿ ಚುನಾವಣೆಯ ನಂತರ ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: 2014 ರಲ್ಲಿ ಗೆದ್ದಂತೆ 2024 ಗೆಲ್ಲುತ್ತಾರೆಯೆ?: ಮೋದಿಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಸವಾಲು

ಕಳೆದ ಮೂರು ದಶಕಗಳಲ್ಲಿ ರೂಪುಗೊಂಡ ವಿವಿಧ ಮೈತ್ರಿಗಳನ್ನು ಸೂಚಿಸಿದ ಅವರು, ಯುಪಿಎ ಮತ್ತು ಎನ್‌ಡಿಎ ಒಕ್ಕೂಟಗಳು ಸಹ ಚುನಾವಣೆಯ ನಂತರ ರೂಪುಗೊಂಡವು ಎಂದು ಅವರು ಹೇಳಿದ್ದಾರೆ.

“ಈ ರೀತಿಯ ಮೈತ್ರಿ ಸಂಭವಿಸುತ್ತದೆ. ಆದರೆ ಮೊದಲು ಬಿಜೆಪಿಯನ್ನು ಅಧಿಕಾರದ ಹಿಡಿತದಿಂದ ಬೇರ್ಪಡಿಸಬೇಕು. ಎಲ್ಲಾ ಪಕ್ಷಗಳು ಅದನ್ನು ಮಾಡುತ್ತಿವೆ ನಂತರ ಒಟ್ಟಾಗಿ ನಾಯಕರನ್ನು ಆಯ್ಕೆ ಮಾಡುತ್ತಾರೆ” ಎಂದು ಸೀತಾರಾಮ್‌ ಯೆಚೂರಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...