Homeಮುಖಪುಟದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

ದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

- Advertisement -
- Advertisement -

2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ. ಕಳೆದ ತಿಂಗಳು ಬಿಜೆಪಿಯೊಂದಿಗೆ ಮೈತ್ರಿಯನ್ನು ಕೊನೆಗೊಳಿಸಿದ ಜನತಾ ದಳ ಯುನೈಟೆಡ್‌ನ ನಾಯಕರೂ ಆಗಿರುವ ನಿತೀಶ್‌‌ ಸೋಮವಾರದಿಂದ ದೆಹಲಿಯಲ್ಲಿ ಭೇಟಿಯಾಗಲು ಬಯಸಿದ ನಾಯಕರ ಸುದೀರ್ಘ ಪಟ್ಟಿಯನ್ನು ಹೊಂದಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಜಾತ್ಯಾತೀತ ಜನತಾದಳದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಸಿಪಿಐ ನಾಯಕ ಡಿ.ರಾಜಾ, ಭಾರತೀಯ ರಾಷ್ಟ್ರೀಯ ಲೋಕದಳದ ಓಂ ಪ್ರಕಾಶ್ ಚೌತಾಲಾ ಮತ್ತು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರು ಈಗಾಗಲೆ ಭೇಟಿಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದು ಬೆಳಿಗ್ಗೆ ಅವರು ರಾಜ್ಯದ ಮಿತ್ರ ಪಕ್ಷವಾಗಿರುವ ಸಿಪಿಐಎಂಎಲ್ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಅವರನ್ನು ಕೂಡಾ ಭೇಟಿಯಾಗಿದ್ದಾರೆ. ಇದರ ಜೊತೆಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು  ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ಅವರನ್ನು ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: ಲಾಲು ಯಾದವ್‌ ಹಾಗೂ ರಾಹುಲ್ ಗಾಂಧಿ ಭೇಟಿ ಮಾಡಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌‌

“ನಾನು ನಾಯಕನಾಗುವುದಿಲ್ಲ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತೇನೆ. ಬಿಜೆಪಿಯು ದೇಶವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಎಲ್ಲರೂ ಒಟ್ಟಾಗಿ ಚುನಾವಣೆಗಳನ್ನು ಎದುರಿಸಿದಾಗ ಚಿತ್ರಣವು ವಿಭಿನ್ನವಾಗಿರುತ್ತದೆ. ಇದಕ್ಕಾಗಿ ನಾವು ಎಲ್ಲಾ ಜನರೊಂದಿಗೆ ಮಾತನಾಡುತ್ತಿದ್ದೇವೆ” ಎಂದು ಸಭೆಯ ನಂತರ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಾವು ಬಿಜೆಪಿ ವಿರುದ್ಧ ಪ್ರಮುಖ ರಂಗವನ್ನು ರಚಿಸುತ್ತೇವೆ, ತೃತೀಯ ರಂಗವಲ್ಲ” ಎಂದು ನಿತೀಶ್‌‌ ಕುಮಾರ್ ಸಂಜೆ ಸುದ್ದಿಗಾರರೊಂದಿಗೆ ನಡೆಸಿದ ಸಂವಾದದ ಸಮಯದಲ್ಲಿ ಪುನರುಚ್ಚರಿಸಿದ್ದಾರೆ. ವಿರೋಧ ಪಕ್ಷದ ನಾಯಕರೊಂದಿಗಿನ ತಮ್ಮ ಮಾತುಕತೆಗಳು ಸಕಾರಾತ್ಮಕವಾಗಿರುತ್ತವೆ ಎಂದು ಘೋಷಿಸಿದ ಅವರು, 2024 ರ ಸಾರ್ವತ್ರಿಕ ಚುನಾವಣೆಯು ತುಂಬಾ ಒಳ್ಳೆಯದು’’ ಎಂದು ಹೇಳಿದ್ದಾರೆ. “ಚುನಾವಣೆಯು ಇಲ್ಲಿಯವರೆಗೆ ಏಕಪಕ್ಷೀಯ ಸ್ಪರ್ಧೆಯಾಗಿತ್ತು” ಎಂದು ಅವರು ಹೇಳಿದ್ದಾರೆ.

“ನನಗೆ ಯಾವುದೇ ವೈಯಕ್ತಿಕ ಆಯ್ಕೆ ಇಲ್ಲ. ಎಲ್ಲರನ್ನೂ ಭೇಟಿಯಾಗಬೇಕು ಎಂಬುದು ನನ್ನ ಏಕೈಕ ಆಸೆ. ನಾವು ಒಟ್ಟಾಗಿ ನಮ್ಮ ನಾಯಕನನ್ನು ಆಯ್ಕೆ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಿತೀಶ್‌ ಕುಮಾರ್‌ ಬೆಂಗಾವಲು ವಾಹನದ ಮೇಲೆ ದಾಳಿ; 13 ಜನರ ಬಂಧನ

ಸದ್ಯಕ್ಕೆ ನಿತೀಶ್‌ ಕುಮಾರ್ ಅವರ ಯೋಜನೆಯು ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟದ ಅಗತ್ಯವನ್ನು ಪ್ರತಿಪಕ್ಷಗಳ ಮೇಲೆ ಪ್ರಭಾವಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. 2019 ರ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳು ಪ್ರದರ್ಶಿಸಿದ ಒಗ್ಗಟ್ಟಿನ ಕೊರತೆಯ ದೃಷ್ಟಿಯಿಂದ ಇದು ಅತ್ಯಗತ್ಯವಾಗಿ ಎಂದು ಅವು ಉಲ್ಲೇಖಿಸಿದೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾರು ಮುಖಾಮುಖಿಯಾಗುತ್ತಾರೆ ಎಂಬ ಬಗ್ಗೆ ವಿಪಕ್ಷಗಳ ನಡುವೆ ಒಮ್ಮೆಯೂ ಒಮ್ಮತ ಮೂಡಿಲ್ಲ. ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಅವರ ಪ್ರತಿಪಾದನೆಯ ಹೊರತಾಗಿಯೂ, ನಿತೀಶ್ ಕುಮಾರ್ ಸೇರಿದಂತೆ ಹಲವಾರು ನಾಯಕರನ್ನು ಸಂಭವನೀಯ ಮುಖಗಳಾಗಿ ನೋಡಲಾಗುತ್ತದೆ.

ನಿತೀಶ್‌ ಕುಮಾರ್ ಅವರೊಂದಿಗಿನ ಭೇಟಿಯ ನಂತರ ಸಂದರ್ಶನವೊಂದರಲ್ಲಿ ಮಾತನಾಡಿದ ಸಿಪಿಎಂನ ಸೀತಾರಾಂ ಯೆಚೂರಿ ಚುನಾವಣೆಯ ನಂತರ ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: 2014 ರಲ್ಲಿ ಗೆದ್ದಂತೆ 2024 ಗೆಲ್ಲುತ್ತಾರೆಯೆ?: ಮೋದಿಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಸವಾಲು

ಕಳೆದ ಮೂರು ದಶಕಗಳಲ್ಲಿ ರೂಪುಗೊಂಡ ವಿವಿಧ ಮೈತ್ರಿಗಳನ್ನು ಸೂಚಿಸಿದ ಅವರು, ಯುಪಿಎ ಮತ್ತು ಎನ್‌ಡಿಎ ಒಕ್ಕೂಟಗಳು ಸಹ ಚುನಾವಣೆಯ ನಂತರ ರೂಪುಗೊಂಡವು ಎಂದು ಅವರು ಹೇಳಿದ್ದಾರೆ.

“ಈ ರೀತಿಯ ಮೈತ್ರಿ ಸಂಭವಿಸುತ್ತದೆ. ಆದರೆ ಮೊದಲು ಬಿಜೆಪಿಯನ್ನು ಅಧಿಕಾರದ ಹಿಡಿತದಿಂದ ಬೇರ್ಪಡಿಸಬೇಕು. ಎಲ್ಲಾ ಪಕ್ಷಗಳು ಅದನ್ನು ಮಾಡುತ್ತಿವೆ ನಂತರ ಒಟ್ಟಾಗಿ ನಾಯಕರನ್ನು ಆಯ್ಕೆ ಮಾಡುತ್ತಾರೆ” ಎಂದು ಸೀತಾರಾಮ್‌ ಯೆಚೂರಿ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...