Homeಮುಖಪುಟಬಿಹಾರ ಸಿಎಂ ನಿತೀಶ್ ವಿರುದ್ಧ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅಸಭ್ಯ ಹೇಳಿಕೆ; ತೀವ್ರ ವಿವಾದ

ಬಿಹಾರ ಸಿಎಂ ನಿತೀಶ್ ವಿರುದ್ಧ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅಸಭ್ಯ ಹೇಳಿಕೆ; ತೀವ್ರ ವಿವಾದ

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ (ಯುನೈಟೆಡ್) ಪಕ್ಷದ ಉದ್ದೇಶಿತ ‘ಮಹಿಳಾ ಸಂವಾದ ಯಾತ್ರೆ’ ಡಿಸೆಂಬರ್ 15 ರಿಂದ ಆರಂಭವಾಗಲಿದೆ. ಈ ನಡುವೆ ಈ ಯಾತ್ರೆಯ ವಿರುದ್ಧ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅಸಭ್ಯ ಹೇಳಿಕೆ ನೀಡಿ ವಿವಾದಕ್ಕೆ ಒಳಗಾಗಿದ್ದಾರೆ. ಬಿಹಾರ ಸಿಎಂ ನಿತೀಶ್

ನಿತೀಶ್ ಅವರ ಉದ್ದೇಶಿತ ಯಾತ್ರೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಾಲು, ಅವರು ಮಹಿಳೆಯರನ್ನು ನೋಡಲಿದ್ದಾರೆ (ನಯನ್ ಸೆಕ್ನೆ ಜಾ ರಹೇನ್ ಹೈ) ಎಂಬ ಅರ್ಥದಲ್ಲಿ ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಶ್ಚಿಮ ಚಂಪಾರಣ್ ಜಿಲ್ಲೆಯ ವಾಲ್ಮೀಕಿನಗರದಿಂದ ಆರಂಭಿಸಲಿರುವ ಯಾತ್ರೆಯಲ್ಲಿ ನಿತೀಶ್ ಅವರು ಮಹಿಳೆಯರನ್ನು ಭೇಟಿಯಾಗಲಿದ್ದಾರೆ. ಈ ಯಾತ್ರೆಯಲ್ಲಿ ಅವರು ಮಹಿಳೆಯರು, ಜೀವಿಕಾ ದೀದಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ರಾಜ್ಯ ಸರ್ಕಾರದ ‘ಸಾತ್ ನಿಶ್ಚಯ’ (ಏಳು ಸಂಕಲ್ಪ) ಕಾರ್ಯಕ್ರಮದಡಿಯಲ್ಲಿ ಪ್ರಾರಂಭಿಸಲಾದ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ.

ಮುಂದಿನ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 225 ಸ್ಥಾನಗಳನ್ನು ಗೆಲ್ಲುವ ಬಗ್ಗೆ ನಿತೀಶ್ ಪ್ರತಿಪಾದನೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಲಾಲು, “ಪಹ್ಲೆ ಉಂಕೊ ಆಖ್ ಸೆಕ್ನೆ ದೋ (ಅವರು ಮೊದಲು ಮಹಿಳೆಯರನ್ನು ನೋಡಲಿ)” ಎಂದು ಹೇಳಿದ್ದಾರೆ. ಬಿಹಾರ ಸಿಎಂ ನಿತೀಶ್

ನಿತೀಶ್ ವಿರುದ್ಧ ಲಾಲು ಅವರ ಅಸಭ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, “ಇದು ದುರದೃಷ್ಟಕರ” ಎಂದು ಹೇಳಿದ್ದಾರೆ. ನಿತೀಶ್ ಕುಮಾರ್ ವಿರುದ್ಧ ಲಾಲು ಪ್ರಸಾದ್ ಹೇಳಿಕೆ ನಿಜಕ್ಕೂ ದುರದೃಷ್ಟಕರ ಎಂದು ಅವರು ಹೇಳಿದ್ದಾರೆ.

ಸಿಎಂ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಆರ್‌ಜೆಡಿ ಮುಖ್ಯಸ್ಥ ಅವರಿಗೆ (ಸಿಎಂ) ಬಳಸಿರುವ ಭಾಷೆ ತುಂಬಾ ದುರದೃಷ್ಟಕರ. ಮೊದಲು ಅವರು ದೈಹಿಕವಾಗಿ ಅಸ್ವಸ್ಥರಾಗಿದ್ದಾರೆ ಎಂದು ನಾವು ಭಾವಿಸಿದ್ದೆವು, ಆದರೆ ಈಗ ಅವರು ಮಾನಸಿಕವಾಗಿಯೂ ಅಸ್ವಸ್ಥರಾಗಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ನಡುವೆ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಮುನ್ನಡೆಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರಿಗೆ ಅವಕಾಶ ನೀಡಬೇಕು ಎಂದು ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ಬಿಜೆಪಿ-ವಿರೋಧಿ ಒಕ್ಕೂಟದ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಇಂಗಿತವನ್ನು ಮಮತಾ ಬ್ಯಾನರ್ಜಿ ವ್ಯಕ್ತಪಡಿಸಿದ ಬೆನ್ನಲ್ಲೇ ಲಾಲು ಪ್ರಸಾದ್ ಯಾದವ್ ಅವರ ಪರ ಬ್ಯಾಟ್ ಬೀಸಿದ್ದಾರೆ. ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷವಾಗಿರುವ ಕಾಂಗ್ರೆಸ್ ಮಮತಾ ಬ್ಯಾರ್ಜಿಯವರನ್ನು ಒಕ್ಕೂಟದ ನಾಯಕಿ ಎಂದು ಒಪ್ಪಿಕೊಂಡರೆ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಲಾಲು ಪ್ರಸಾದ್ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ಸೇರಿದಂತೆ ಯಾವುದೇ ಹಿರಿಯ ನಾಯಕರು ಇಂಡಿಯಾ ಒಕ್ಕೂಟದ ನಾಯಕತ್ವ ವಹಿಸುವುದಾದರೆ ನಮ್ಮದೇನು ಅಭ್ಯಂತರ ಇಲ್ಲ. ಆದರೆ, ಒಮ್ಮತದ ಮೂಲಕ ನಿರ್ಧಾರಕ್ಕೆ ಬರಬೇಕು ಎಂದು ಈ ಹಿಂದೆ ಲಾಲು ಪ್ರಸಾದ್ ಯಾದವ್ ಅವರ ಮಗ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದರು.

ಡಿಸೆಂಬರ್ 6ರಂದು ಸಂದರ್ಶನವೊಂದರಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ ಇಂಡಿಯಾ ಒಕ್ಕೂಟದ ಕಾರ್ಯಾಚರಣೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು. ಅವಕಾಶ ನೀಡಿದರೆ ಒಕ್ಕೂಟದ ಜವಾಬ್ದಾರಿ ವಹಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಹೈಟಿ | ಗ್ಯಾಂಗ್‌ಸ್ಟರ್ ಮಗುವಿನ ಮೇಲೆ ವಾಮಾಚಾರ ಆರೋಪ : ಸುಮಾರು 200 ಜನರ ಹತ್ಯೆ!

ಹೈಟಿ | ಗ್ಯಾಂಗ್‌ಸ್ಟರ್ ಮಗುವಿನ ಮೇಲೆ ವಾಮಾಚಾರ ಆರೋಪ : ಸುಮಾರು 200 ಜನರ ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...