Homeಮುಖಪುಟಬಿಹಾರ ಸಿಎಂ ನಿತೀಶ್ ವಿರುದ್ಧ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅಸಭ್ಯ ಹೇಳಿಕೆ; ತೀವ್ರ ವಿವಾದ

ಬಿಹಾರ ಸಿಎಂ ನಿತೀಶ್ ವಿರುದ್ಧ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅಸಭ್ಯ ಹೇಳಿಕೆ; ತೀವ್ರ ವಿವಾದ

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ (ಯುನೈಟೆಡ್) ಪಕ್ಷದ ಉದ್ದೇಶಿತ ‘ಮಹಿಳಾ ಸಂವಾದ ಯಾತ್ರೆ’ ಡಿಸೆಂಬರ್ 15 ರಿಂದ ಆರಂಭವಾಗಲಿದೆ. ಈ ನಡುವೆ ಈ ಯಾತ್ರೆಯ ವಿರುದ್ಧ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅಸಭ್ಯ ಹೇಳಿಕೆ ನೀಡಿ ವಿವಾದಕ್ಕೆ ಒಳಗಾಗಿದ್ದಾರೆ. ಬಿಹಾರ ಸಿಎಂ ನಿತೀಶ್

ನಿತೀಶ್ ಅವರ ಉದ್ದೇಶಿತ ಯಾತ್ರೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಾಲು, ಅವರು ಮಹಿಳೆಯರನ್ನು ನೋಡಲಿದ್ದಾರೆ (ನಯನ್ ಸೆಕ್ನೆ ಜಾ ರಹೇನ್ ಹೈ) ಎಂಬ ಅರ್ಥದಲ್ಲಿ ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಶ್ಚಿಮ ಚಂಪಾರಣ್ ಜಿಲ್ಲೆಯ ವಾಲ್ಮೀಕಿನಗರದಿಂದ ಆರಂಭಿಸಲಿರುವ ಯಾತ್ರೆಯಲ್ಲಿ ನಿತೀಶ್ ಅವರು ಮಹಿಳೆಯರನ್ನು ಭೇಟಿಯಾಗಲಿದ್ದಾರೆ. ಈ ಯಾತ್ರೆಯಲ್ಲಿ ಅವರು ಮಹಿಳೆಯರು, ಜೀವಿಕಾ ದೀದಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ರಾಜ್ಯ ಸರ್ಕಾರದ ‘ಸಾತ್ ನಿಶ್ಚಯ’ (ಏಳು ಸಂಕಲ್ಪ) ಕಾರ್ಯಕ್ರಮದಡಿಯಲ್ಲಿ ಪ್ರಾರಂಭಿಸಲಾದ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ.

ಮುಂದಿನ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 225 ಸ್ಥಾನಗಳನ್ನು ಗೆಲ್ಲುವ ಬಗ್ಗೆ ನಿತೀಶ್ ಪ್ರತಿಪಾದನೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಲಾಲು, “ಪಹ್ಲೆ ಉಂಕೊ ಆಖ್ ಸೆಕ್ನೆ ದೋ (ಅವರು ಮೊದಲು ಮಹಿಳೆಯರನ್ನು ನೋಡಲಿ)” ಎಂದು ಹೇಳಿದ್ದಾರೆ. ಬಿಹಾರ ಸಿಎಂ ನಿತೀಶ್

ನಿತೀಶ್ ವಿರುದ್ಧ ಲಾಲು ಅವರ ಅಸಭ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, “ಇದು ದುರದೃಷ್ಟಕರ” ಎಂದು ಹೇಳಿದ್ದಾರೆ. ನಿತೀಶ್ ಕುಮಾರ್ ವಿರುದ್ಧ ಲಾಲು ಪ್ರಸಾದ್ ಹೇಳಿಕೆ ನಿಜಕ್ಕೂ ದುರದೃಷ್ಟಕರ ಎಂದು ಅವರು ಹೇಳಿದ್ದಾರೆ.

ಸಿಎಂ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಆರ್‌ಜೆಡಿ ಮುಖ್ಯಸ್ಥ ಅವರಿಗೆ (ಸಿಎಂ) ಬಳಸಿರುವ ಭಾಷೆ ತುಂಬಾ ದುರದೃಷ್ಟಕರ. ಮೊದಲು ಅವರು ದೈಹಿಕವಾಗಿ ಅಸ್ವಸ್ಥರಾಗಿದ್ದಾರೆ ಎಂದು ನಾವು ಭಾವಿಸಿದ್ದೆವು, ಆದರೆ ಈಗ ಅವರು ಮಾನಸಿಕವಾಗಿಯೂ ಅಸ್ವಸ್ಥರಾಗಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ನಡುವೆ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಮುನ್ನಡೆಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರಿಗೆ ಅವಕಾಶ ನೀಡಬೇಕು ಎಂದು ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ಬಿಜೆಪಿ-ವಿರೋಧಿ ಒಕ್ಕೂಟದ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಇಂಗಿತವನ್ನು ಮಮತಾ ಬ್ಯಾನರ್ಜಿ ವ್ಯಕ್ತಪಡಿಸಿದ ಬೆನ್ನಲ್ಲೇ ಲಾಲು ಪ್ರಸಾದ್ ಯಾದವ್ ಅವರ ಪರ ಬ್ಯಾಟ್ ಬೀಸಿದ್ದಾರೆ. ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷವಾಗಿರುವ ಕಾಂಗ್ರೆಸ್ ಮಮತಾ ಬ್ಯಾರ್ಜಿಯವರನ್ನು ಒಕ್ಕೂಟದ ನಾಯಕಿ ಎಂದು ಒಪ್ಪಿಕೊಂಡರೆ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಲಾಲು ಪ್ರಸಾದ್ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ಸೇರಿದಂತೆ ಯಾವುದೇ ಹಿರಿಯ ನಾಯಕರು ಇಂಡಿಯಾ ಒಕ್ಕೂಟದ ನಾಯಕತ್ವ ವಹಿಸುವುದಾದರೆ ನಮ್ಮದೇನು ಅಭ್ಯಂತರ ಇಲ್ಲ. ಆದರೆ, ಒಮ್ಮತದ ಮೂಲಕ ನಿರ್ಧಾರಕ್ಕೆ ಬರಬೇಕು ಎಂದು ಈ ಹಿಂದೆ ಲಾಲು ಪ್ರಸಾದ್ ಯಾದವ್ ಅವರ ಮಗ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದರು.

ಡಿಸೆಂಬರ್ 6ರಂದು ಸಂದರ್ಶನವೊಂದರಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ ಇಂಡಿಯಾ ಒಕ್ಕೂಟದ ಕಾರ್ಯಾಚರಣೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು. ಅವಕಾಶ ನೀಡಿದರೆ ಒಕ್ಕೂಟದ ಜವಾಬ್ದಾರಿ ವಹಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಹೈಟಿ | ಗ್ಯಾಂಗ್‌ಸ್ಟರ್ ಮಗುವಿನ ಮೇಲೆ ವಾಮಾಚಾರ ಆರೋಪ : ಸುಮಾರು 200 ಜನರ ಹತ್ಯೆ!

ಹೈಟಿ | ಗ್ಯಾಂಗ್‌ಸ್ಟರ್ ಮಗುವಿನ ಮೇಲೆ ವಾಮಾಚಾರ ಆರೋಪ : ಸುಮಾರು 200 ಜನರ ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...