Homeಮುಖಪುಟಬಿಹಾರ: ರಾಮನವಮಿ ಮೆರವಣಿಗೆ ವೇಳೆ ಕೋಮು ಉದ್ವಿಗ್ನತೆ; 13 ಜನರಿಗೆ ಗಾಯ

ಬಿಹಾರ: ರಾಮನವಮಿ ಮೆರವಣಿಗೆ ವೇಳೆ ಕೋಮು ಉದ್ವಿಗ್ನತೆ; 13 ಜನರಿಗೆ ಗಾಯ

- Advertisement -
- Advertisement -

ಬಿಹಾರದ ನಳಂದಾ ಮತ್ತು ರೋಹ್ತಾಸ್ ಜಿಲ್ಲೆಗಳಲ್ಲಿ ರಾಮನವಮಿ ಮೆರವಣಿಗೆ ವೇಳೆ ಹಿಂದೂ-ಮುಸ್ಲಿಮರ ನಡುವೆ ಘರ್ಷಣೆ ಸಂಭವಿಸಿ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ 13 ಜನರು ಗಾಯಗೊಂಡಿದ್ದಾರೆ ಎಂದು ಶುಕ್ರವಾರ ಪಿಟಿಐ ವರದಿ ಮಾಡಿದೆ.

ನಳಂದದ ಬಿಹಾರ ಷರೀಫ್ ಪಟ್ಟಣದಲ್ಲಿ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ 20 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಮಿಶ್ರಾ ತಿಳಿಸಿದ್ದಾರೆ.

ಶುಕ್ರವಾರ ನಡೆದ ಘರ್ಷಣೆಯಲ್ಲಿ ಮೂವರಿಗೆ ಗುಂಡು ತಗುಲಿದ್ದು, 11 ಜನರು ಗಾಯಗೊಂಡಿದ್ದಾರೆ. ಹಲವು ವಾಹನಗಳು ಮತ್ತು ಅಂಗಡಿಗಳು ಸುಟ್ಟು ಕರಕಲಾಗಿವೆ. ಆ ಬಳಿಕ ಪೊಲೀಸರು ಸೆಕ್ಷನ್ 144ರ ಸೆಕ್ಷನ್‌ ಜಾರಿ ಮಾಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

”ಜನರಿಗೆ ಶಾಂತವಾಗಿರಲು ನಾವು ಮನವಿ ಮಾಡುತ್ತೇವೆ. ತೊಂದರೆ ಉಂಟುಮಾಡುವವರನ್ನು ಗುರುತಿಸಲು ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸುತ್ತಿದ್ದೇವೆ” ಎಂದು ನಳಂದಾ ಮ್ಯಾಜಿಸ್ಟ್ರೇಟ್ ಶಶಾಂಕ್ ಶುಭಂಕರ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ನಮಾಜ್ ವೇಳೆ ಮಸೀದಿ ಮುಂದೆ ಮೈಕ್‌ ಬಳಸಿ ಮೆರವಣಿಗೆ ಮಾಡಿದ ಹಿಂದುತ್ವ ಗುಂಪು: ಕಲ್ಲು ತೂರಾಟ

ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹರಡುವುದನ್ನು ತಡೆಯಲು ತೀವ್ರ ನಿಗಾ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೋಹ್ತಾಸ್‌ನ ಸಸಾರಾಮ್‌ನಲ್ಲಿ, ಗುರುವಾರ ಸಂಜೆ ರಾಮನವಮಿ ಮೆರವಣಿಗೆಯಲ್ಲಿ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಘರ್ಷಣೆ ನಡೆಯಿತು. ಮರುದಿನ ಬೆಳಗ್ಗೆ ಶುಕ್ರವಾರ ಮತ್ತೆ ಘರ್ಷಣೆ ನಡೆದಿದ್ದು, ಎರಡೂ ಸಮುದಾಯಗಳ ಸದಸ್ಯರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

”ಶಹಜಲಾಲ್ ಪೀರ್, ಸೋನಾ ಪಟ್ಟಿ, ಖಾದಿರ್ ಗಂಜ್ ಮತ್ತು ನವರತ್ನ ಪೀರ್‌ನಂತಹ ಪ್ರದೇಶಗಳಲ್ಲಿ ಹಲವಾರು ಅಂಗಡಿಗಳು ಮತ್ತು ವಾಹನಗಳನ್ನು ಸುಟ್ಟುಹಾಕಲಾಗಿದೆ. ಇದರಿಂದ ಕೋಪಗೊಂಡ ಅಲ್ಲಿಯ ಗುಂಪುಗಳು ಭಾರೀ ಕಲ್ಲು ತೂರಾಟದಲ್ಲಿ ತೊಡಗಿವೆ, ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ ಅನೇಕ ಜನರು ಗಾಯಗೊಂಡಿದ್ದಾರೆ” ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಹೇಳಿದರು.

ನಗರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು, ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನ ಜನ ಸೇರುವುದು, ಸಭೆ ನಡೆಸುವುದಕ್ಕೆ ನಿಷೇಧ ವಿಧಿಸಲಾಗಿದೆ. ಆ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ನಮಗೆ ಸಮಾಧಾನವಾಗಿದೆ. ಪೊಲೀಸ್ ಇಲಾಖೆ ಹೆಚ್ಚು ಜಾಗರೂಕರಾಗಿರಬೇಕು ಮತ್ತು ಪೂರ್ವಭಾವಿಯಾಗಿ ಇಂತಹ ಘಟನೆಗಳು ತೀವ್ರಗೋಳ್ಳದಂತೆ ಎಚ್ಚರವಹಿಸಬೇಕು ಎಂದು ಬಿಜೆಪಿ ಶಾಸಕ ಛೇಡಿ ಪಾಸ್ವಾನ್ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಪಟ್ಟಣಕ್ಕೆ ಭೇಟಿ ನೀಡುವ ಮುನ್ನ ಸಸಾರಾಮ್‌ನಲ್ಲಿ ಈ ಹಿಂಸಾಚಾರ ಸಂಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...