Homeಮುಖಪುಟಬಿಹಾರ್: ವೈದ್ಯರ ಅನುಪಸ್ಥಿತಿಯಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಿದ ಕಾಂಪೌಂಡರ್; ಮಹಿಳೆ ಸಾವು

ಬಿಹಾರ್: ವೈದ್ಯರ ಅನುಪಸ್ಥಿತಿಯಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಿದ ಕಾಂಪೌಂಡರ್; ಮಹಿಳೆ ಸಾವು

- Advertisement -
- Advertisement -

ವೈದ್ಯರ ಅನುಪಸ್ಥಿತಿಯಲ್ಲಿ ಖಾಸಗಿ ಆರೋಗ್ಯ ಕೇಂದ್ರದ ಕಿರಿಯ ಸಿಬ್ಬಂದಿ ಮಹಿಳೆಯೊಬ್ಬರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಿದ ನಂತರ ಆಕೆ ಮೃತಪಟ್ಟಿದ್ದಾರೆ ಎಂದು ಪೋಷಕರು ಆರೋಪಿಸಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಿಹಾರದ ಸಮಸ್ತಿಪುರ್‌ನಲ್ಲಿ 28 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ರಾಜ್ಯದ ರಾಜಧಾನಿ ಪಾಟ್ನಾದಿಂದ ಸುಮಾರು 80 ಕಿಮೀ ದೂರದಲ್ಲಿರುವ ಜಿಲ್ಲೆಯ ಮುಸ್ರಿಘರಾರಿ ಎಂಬ ಸಣ್ಣ ಪಟ್ಟಣದಲ್ಲಿ ಈ ಘಟನೆ ವರದಿಯಾಗಿದೆ. ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಅನಿಶಾ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದೇವೆ ಎಂದು ಬಬಿತಾ ದೇವಿ ಸಂಬಂಧಿಕರು ಹೇಳಿದ್ದಾರೆ. ಸಣ್ಣ ಆರೋಗ್ಯ ಕೇಂದ್ರವು ಎರಡು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿದೆ.

‘ವೈದ್ಯರು ಲಭ್ಯವಿಲ್ಲ ಎಂದು ಕೇಂದ್ರದ ಸಿಬ್ಬಂದಿ ಹೇಳಿದ ನಂತರ ಕಾಂಪೌಂಡರ್ ಶಸ್ತ್ರಚಿಕಿತ್ಸೆ ನಡೆಸಲು ಮುಂದಾದರು’ ಎಂದು ಮಹಿಳೆಯ ಸಂಬಂಧಿಕರು ಹೇಳಿದ್ದಾರೆ.

“ನಾವು ಅವಳನ್ನು 9 ಗಂಟೆಗೆ ಇಲ್ಲಿಗೆ ಕರೆತಂದೆವು, ಅವರು ಅವಳಿಗೆ ಲವಣಯುಕ್ತ ನೀರನ್ನು ನೀಡಿದರು. ಸುಮಾರು 11 ಗಂಟೆಗೆ, ಅವರು ಆರಪೇಷನ್ ಪ್ರಾರಂಭಿಸಿದರು. ಸುಮಾರು ಒಂದು ಗಂಟೆಯ ನಂತರ, ಅವರು ಅವಳನ್ನು ಆಂಬ್ಯುಲೆನ್ಸ್‌ಗೆ ಸೇರಿಸಿದರು ಮತ್ತು ಮೋಹನ್‌ಪುರದ ಆಸ್ಪತ್ರೆಗೆ (ಸುಮಾರು 10 ಕಿ.ಮೀ ದೂರ) ಕರೆದೊಯ್ದರು” ಎಂದು ಮಹಿಳೆಯ ಚಿಕ್ಕಪ್ಪ ವಿವರಿಸಿದ್ದಾರೆ.

ಆಕೆಯ ಸ್ಥಿತಿಯ ಬಗ್ಗೆ ಕುಟುಂಬ ಸದಸ್ಯರಿಗೆ ಏನನ್ನೂ ಹೇಳಿಲ್ಲ. ಆದರೆ, ಪೋಷಕರು ಆಕೆಯನ್ನು ಪರೀಕ್ಷಿಸಲು ದೇಹ ಮುಟ್ಟಿದಾಗ ತಂಪಾಗಿತ್ತು ಎಂದು ಅವರು ಹೇಳಿದರು. “ಅವಳು ಇಲ್ಲಿಯೇ ಸತ್ತಳು. ಆದರೆ ಅವರು ನಮಗೆ ಹೇಳದೆ ಮೋಹನಪುರಕ್ಕೆ ಸಾಗಿಸಿದರು” ಎಂದು ಮೃತ ಮಹಿಳೆಯ ಚಿಕ್ಕಪ್ಪ ಆರೋಪ ಮಾಡಿದ್ದಾರೆ.

ಬಬಿತಾ ದೇವಿ ಸಾವು ಖಚಿತವಾದ ಬಳಿಕ ಆಕೆಯ ಸಂಬಂಧಿಕರು ಮೃತದೇಹವನ್ನು ಅನಿಶಾ ಆರೋಗ್ಯ ಕೇಂದ್ರಕ್ಕೆ ತಂದು ಪ್ರತಿಭಟನೆ ನಡೆಸಿದರು. ಮುಸ್ರಿಘರಾರಿ ಪಟ್ಟಣದ ಯಾವುದೇ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ ಮತ್ತು ಕಾಂಪೌಂಡರ್‌ಗಳು ಎಂದು ಕರೆಯಲ್ಪಡುವ ಕಿರಿಯ ಸಿಬ್ಬಂದಿ ಎಲ್ಲಾ ವೈದ್ಯಕೀಯ ಕಾರ್ಯವಿಧಾನಗಳನ್ನು ನಿರ್ವಹಿಸುತ್ತಿದ್ದಾರೆ ಮತ್ತು ರೋಗಿಗಳ ಜೀವಕ್ಕೆ ಅಪಾಯವನ್ನುಂಟುಮಾಡುತ್ತಿದ್ದಾರೆ ಎಂದು ಕುಟುಂಬ ಆರೋಪಿಸಿದೆ.

ಅನಿಶಾ ಆರೋಗ್ಯ ಕೇಂದ್ರದ ಸಿಬ್ಬಂದಿ ಪರಾರಿಯಾಗಿದ್ದಾರೆ; ಪ್ರತಿಯೊಬ್ಬರ ವಿರುದ್ಧವೂ ಪೊಲೀಸ್ ಕೇಸ್ ಹಾಕುವಂತೆ ಮಹಿಳೆಯ ಸಂಬಂಧಿಕರು ಒತ್ತಾಯಿಸಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳೀಯ ಪೊಲೀಸ್ ಠಾಣೆ ಪ್ರಭಾರಿ ಫೈಜುಲ್ ಅನ್ಸಾರಿ ತಿಳಿಸಿದ್ದಾರೆ.

ಇದನ್ನೂ ಓದಿ; ಮುಖ್ಯವಾಹಿನಿಯ ಮಾಧ್ಯಮಗಳು ಎಡಪಕ್ಷಗಳನ್ನು ಬಹಿಷ್ಕರಿಸುತ್ತಿವೆ: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...