Homeಮುಖಪುಟಬಿಹಾರ್: ವೈದ್ಯರ ಅನುಪಸ್ಥಿತಿಯಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಿದ ಕಾಂಪೌಂಡರ್; ಮಹಿಳೆ ಸಾವು

ಬಿಹಾರ್: ವೈದ್ಯರ ಅನುಪಸ್ಥಿತಿಯಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಿದ ಕಾಂಪೌಂಡರ್; ಮಹಿಳೆ ಸಾವು

- Advertisement -
- Advertisement -

ವೈದ್ಯರ ಅನುಪಸ್ಥಿತಿಯಲ್ಲಿ ಖಾಸಗಿ ಆರೋಗ್ಯ ಕೇಂದ್ರದ ಕಿರಿಯ ಸಿಬ್ಬಂದಿ ಮಹಿಳೆಯೊಬ್ಬರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಿದ ನಂತರ ಆಕೆ ಮೃತಪಟ್ಟಿದ್ದಾರೆ ಎಂದು ಪೋಷಕರು ಆರೋಪಿಸಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಿಹಾರದ ಸಮಸ್ತಿಪುರ್‌ನಲ್ಲಿ 28 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ರಾಜ್ಯದ ರಾಜಧಾನಿ ಪಾಟ್ನಾದಿಂದ ಸುಮಾರು 80 ಕಿಮೀ ದೂರದಲ್ಲಿರುವ ಜಿಲ್ಲೆಯ ಮುಸ್ರಿಘರಾರಿ ಎಂಬ ಸಣ್ಣ ಪಟ್ಟಣದಲ್ಲಿ ಈ ಘಟನೆ ವರದಿಯಾಗಿದೆ. ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಅನಿಶಾ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದೇವೆ ಎಂದು ಬಬಿತಾ ದೇವಿ ಸಂಬಂಧಿಕರು ಹೇಳಿದ್ದಾರೆ. ಸಣ್ಣ ಆರೋಗ್ಯ ಕೇಂದ್ರವು ಎರಡು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿದೆ.

‘ವೈದ್ಯರು ಲಭ್ಯವಿಲ್ಲ ಎಂದು ಕೇಂದ್ರದ ಸಿಬ್ಬಂದಿ ಹೇಳಿದ ನಂತರ ಕಾಂಪೌಂಡರ್ ಶಸ್ತ್ರಚಿಕಿತ್ಸೆ ನಡೆಸಲು ಮುಂದಾದರು’ ಎಂದು ಮಹಿಳೆಯ ಸಂಬಂಧಿಕರು ಹೇಳಿದ್ದಾರೆ.

“ನಾವು ಅವಳನ್ನು 9 ಗಂಟೆಗೆ ಇಲ್ಲಿಗೆ ಕರೆತಂದೆವು, ಅವರು ಅವಳಿಗೆ ಲವಣಯುಕ್ತ ನೀರನ್ನು ನೀಡಿದರು. ಸುಮಾರು 11 ಗಂಟೆಗೆ, ಅವರು ಆರಪೇಷನ್ ಪ್ರಾರಂಭಿಸಿದರು. ಸುಮಾರು ಒಂದು ಗಂಟೆಯ ನಂತರ, ಅವರು ಅವಳನ್ನು ಆಂಬ್ಯುಲೆನ್ಸ್‌ಗೆ ಸೇರಿಸಿದರು ಮತ್ತು ಮೋಹನ್‌ಪುರದ ಆಸ್ಪತ್ರೆಗೆ (ಸುಮಾರು 10 ಕಿ.ಮೀ ದೂರ) ಕರೆದೊಯ್ದರು” ಎಂದು ಮಹಿಳೆಯ ಚಿಕ್ಕಪ್ಪ ವಿವರಿಸಿದ್ದಾರೆ.

ಆಕೆಯ ಸ್ಥಿತಿಯ ಬಗ್ಗೆ ಕುಟುಂಬ ಸದಸ್ಯರಿಗೆ ಏನನ್ನೂ ಹೇಳಿಲ್ಲ. ಆದರೆ, ಪೋಷಕರು ಆಕೆಯನ್ನು ಪರೀಕ್ಷಿಸಲು ದೇಹ ಮುಟ್ಟಿದಾಗ ತಂಪಾಗಿತ್ತು ಎಂದು ಅವರು ಹೇಳಿದರು. “ಅವಳು ಇಲ್ಲಿಯೇ ಸತ್ತಳು. ಆದರೆ ಅವರು ನಮಗೆ ಹೇಳದೆ ಮೋಹನಪುರಕ್ಕೆ ಸಾಗಿಸಿದರು” ಎಂದು ಮೃತ ಮಹಿಳೆಯ ಚಿಕ್ಕಪ್ಪ ಆರೋಪ ಮಾಡಿದ್ದಾರೆ.

ಬಬಿತಾ ದೇವಿ ಸಾವು ಖಚಿತವಾದ ಬಳಿಕ ಆಕೆಯ ಸಂಬಂಧಿಕರು ಮೃತದೇಹವನ್ನು ಅನಿಶಾ ಆರೋಗ್ಯ ಕೇಂದ್ರಕ್ಕೆ ತಂದು ಪ್ರತಿಭಟನೆ ನಡೆಸಿದರು. ಮುಸ್ರಿಘರಾರಿ ಪಟ್ಟಣದ ಯಾವುದೇ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ ಮತ್ತು ಕಾಂಪೌಂಡರ್‌ಗಳು ಎಂದು ಕರೆಯಲ್ಪಡುವ ಕಿರಿಯ ಸಿಬ್ಬಂದಿ ಎಲ್ಲಾ ವೈದ್ಯಕೀಯ ಕಾರ್ಯವಿಧಾನಗಳನ್ನು ನಿರ್ವಹಿಸುತ್ತಿದ್ದಾರೆ ಮತ್ತು ರೋಗಿಗಳ ಜೀವಕ್ಕೆ ಅಪಾಯವನ್ನುಂಟುಮಾಡುತ್ತಿದ್ದಾರೆ ಎಂದು ಕುಟುಂಬ ಆರೋಪಿಸಿದೆ.

ಅನಿಶಾ ಆರೋಗ್ಯ ಕೇಂದ್ರದ ಸಿಬ್ಬಂದಿ ಪರಾರಿಯಾಗಿದ್ದಾರೆ; ಪ್ರತಿಯೊಬ್ಬರ ವಿರುದ್ಧವೂ ಪೊಲೀಸ್ ಕೇಸ್ ಹಾಕುವಂತೆ ಮಹಿಳೆಯ ಸಂಬಂಧಿಕರು ಒತ್ತಾಯಿಸಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳೀಯ ಪೊಲೀಸ್ ಠಾಣೆ ಪ್ರಭಾರಿ ಫೈಜುಲ್ ಅನ್ಸಾರಿ ತಿಳಿಸಿದ್ದಾರೆ.

ಇದನ್ನೂ ಓದಿ; ಮುಖ್ಯವಾಹಿನಿಯ ಮಾಧ್ಯಮಗಳು ಎಡಪಕ್ಷಗಳನ್ನು ಬಹಿಷ್ಕರಿಸುತ್ತಿವೆ: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...