Homeಮುಖಪುಟಬಿಹಾರ: ಸಿಎಂ ನಿತೀಶ್‌ ಅನ್ನು ನಿಯಂತ್ರಿಸುವ ರಿಮೋಟ್ ಬೇರೆಯವರ ಬಳಿಯಿದೆ- ತಾರಿಖ್ ಅನ್ವರ್

ಬಿಹಾರ: ಸಿಎಂ ನಿತೀಶ್‌ ಅನ್ನು ನಿಯಂತ್ರಿಸುವ ರಿಮೋಟ್ ಬೇರೆಯವರ ಬಳಿಯಿದೆ- ತಾರಿಖ್ ಅನ್ವರ್

ಇತ್ತೀಚೆಗೆ ನಿತೀಶ್ ಕುಮಾರ್ ಎನ್‌ಡಿಎ ಮೈತ್ರಿಕೂಟದ ಉತ್ತಮ ನಾಯಕರಾಗಿದ್ದರು. ಆದರೆ ಈ ಬಾರಿಯ ಸಂದರ್ಭ ಮೊದಲಿನಂತಿಲ್ಲ. ಬಿಜೆಪಿಯ ಒಳ ಮರ್ಮದಿಂದ ಅವರನ್ನು ನಿಶಕ್ತಿಗೊಳಿಸಲಾಗಿದೆ

- Advertisement -
- Advertisement -

ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರಾದ ತಾರಿಖ್ ಅನ್ವರ್ ಪ್ರತಿಕ್ರಿಯಿಸಿ, “ನಿತೀಶ್‌ ಮುಖ್ಯಂತ್ರಿಯಾದರೂ, ಅವರನ್ನು ನಿಯಂತ್ರಿಸುವ ರಿಮೋಟ್‌ ಬೇರೆಯವರ ಬಳಿಯಿದೆ” ಎಂದಿದ್ದಾರೆ.

ಈ ಕುರಿತು ಅವರು ನೀಡಿರುವ ಹೇಳಿಕೆಯನ್ನು ಟ್ವೀಟ್ ಮಾಡಿರುವ ಎಎನ್‌ಐ, “ಇತ್ತೀಚೆಗೆ ನಿತೀಶ್ ಕುಮಾರ್ ಎನ್‌ಡಿಎ ಮೈತ್ರಿಕೂಟದ ಉತ್ತಮ ನಾಯಕರಾಗಿದ್ದರು. ಆದರೆ ಈ ಬಾರಿಯ ಸಂದರ್ಭ ಮೊದಲಿನಂತಿಲ್ಲ. ಬಿಜೆಪಿಯ ಒಳ ಮರ್ಮದಿಂದ ಅವರನ್ನು ನಿಶಕ್ತಿಗೊಳಿಸಲಾಗಿದೆ. ಈಗ ಅವರು ಎನ್‌ಡಿಎ ನಾಯಕರಾಗಿ ಅಥವಾ ಬಿಹಾರದ ಮುಖ್ಯಮಂತ್ರಿಯಾದರೂ ಸಹ, ಇವರನ್ನು ನಿಯಂತ್ರಿಸುವ ರಿಮೋಟ್‌ ಬೇರೆಯವರ ಬಳಿಯಿರುತ್ತದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನೆರೆ ಪರಿಹಾರ ಕೊಡದಿದ್ದರೆ ರಾಜ್ಯದಾದ್ಯಂತ ತೀವ್ರ ಹೋರಾಟ – ಕರವೇ ಟಿ.ಎ.ನಾರಾಯಣಗೌಡರು

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪಿಎಚ್‌‌ಡಿ, ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿದ ಸರ್ಕಾರ!

ಇಂದು ಬಿಹಾರ ಮುಖ್ಯಮಂತ್ರಿ ಮತ್ತು ಇತರೆ ಅಂಶಗಳನ್ನು ನಿರ್ಧರಿಸಲು ಎನ್‌ಡಿಎ ಸಭೆ ಸೇರಿತ್ತು. ನಿತೀಶ್‌ ಕುಮಾರ್ ಅವರೇ ಮುಖ್ಯಮಂತ್ರಿ ಎಂಬುದನ್ನು ಬಿಜೆಪಿಯ ಉನ್ನತ ನಾಯಕರು ಸೇರಿದಂತೆ ಬಹುಪಾಲು ನಾಯಕರು ಖಚಿತಪಡಿಸಿದ್ದಾರೆ. ಇದೀಗ ಎನ್‌ಡಿಎ ವತಿಯಿಂದ ಮೈತ್ರಿಕೂಟದ ಎಲ್ಲಾ ಪಕ್ಷಗಳೂ ಸಭೆ ಸೇರಿ ಒಮ್ಮತ ನಿರ್ಧಾರಕ್ಕೆ ಬಂದಿದ್ದು, ನಿತೀಶ್‌ ಕುಮಾರ್ ಬಿಹಾರದ ಮುಖ್ಯಮಂತ್ರಿ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಈ ನಡುವೆ ಆರ್‌ಜೆಡಿ ಮುಖಂಡರಾದ ಮನೋಜ್ ಝಾ ಮಾತನಾಡಿ, “ಕೇವಲ 40 ಸೀಟುಗಳನ್ನು ಗೆದ್ದಿರುವವರು ಹೇಗೆ ಮುಖ್ಯಮಂತ್ರಿಯಾಗಲು ಸಾಧ್ಯ? ಜನಾದೇಶವು ಆತನ ವಿರುದ್ಧವಾಗಿದೆ. ಆತ ನಿರ್ಣಾಮವಾಗುತ್ತಾನೆ ಮತ್ತು ಅದನ್ನು ನಿರ್ಧರಿಸಬೇಕಿದೆ. ಬಿಹಾರವು ಸ್ವಯಂಪ್ರೇರಿತವಾಗಿ ತನ್ನ ಪರ್ಯಾಯವನ್ನು ಕಂಡುಕೊಳ್ಳುತ್ತದೆ. ಇದಕ್ಕೆ ಒಂದು ವಾರ ತೆಗೆದುಕೊಳ್ಳಬಹುದು, ಹತ್ತು ದಿನ ಅಥವಾ 1 ತಿಂಗಳು ತೆಗೆದುಕೊಳ್ಳಬಹುದು. ಆದರೆ ಇದು ಖಂಡಿತ ಸಂಭವಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿ ಪಕ್ಷವು ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 75 ಸ್ಥಾನಗಳನ್ನು ಗೆದ್ದುಕೊಂಡಿದೆ. ನಂತರದ ಸ್ಥಾನದಲ್ಲಿ ಬಿಜೆಪಿಯು 74 ಸ್ಥಾನಗಳನ್ನು ಗೆದ್ದುಕೊಂಡಿದೆ. ನಿತೀಶ್‌ ಕುಮಾರ್ ನೇತೃತ್ವದ ಜೆಡಿಯು ಪಕ್ಷವು ಕೇವಲ 43 ಸ್ಥಾನಗಳನ್ನು ಗೆದ್ದುಕೊಂಡಿದೆ. ಆದರೆ ಎನ್‌ಡಿಎ ಮೈತ್ರಿ ಪಕ್ಷವು 125 ಸ್ಥಾನಗಳನ್ನು ಗೆದ್ದುಕೊಂಡು ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.

ತೇಜಸ್ವಿ ಯಾದವ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮತ ಮರು ಎಣಿಕೆಗೆ ಒತ್ತಾಯಿಸಿ ಅಭಿಯಾನವನ್ನು ಆರಂಭಿಸಿದ್ದಾರೆ. ಮತ್ತೊಂದು ಕಡೆ ಈ ಬಾರಿ ನಿತೀಶ್‌ ಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ 110 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಹುಮತದ ಅಂಚಿಗೆ ಬಂದು ಕೆಳಗಿಳಿದಿತ್ತು. ಇದರ ನಡುವೆ ಬಿಹಾರದಲ್ಲಿ ಎಡ ಪಕ್ಷಗಳಾದ ಸಿಪಿಐ (ಎಂ-ಎಲ್) ಬಹುತೇಕ ಮುಂಚೂಣಿಯ ಪಕ್ಷಗಳಾಗಿ ಹೊರಹೊಮ್ಮಿವೆ. ಇನ್ನು ಓವೈಸಿ ನೇತೃತ್ವದ ಪಕ್ಷವು ಸುಮಾರು 5 ಸ್ಥಾನಗಳನ್ನು ಗೆದ್ದುಕೊಂಡಿದೆ.


ಇದನ್ನೂ ಓದಿ: ಬಿಹಾರ: ಕೇವಲ 40 ಸ್ಥಾನ ಪಡೆದ ಜನಾದೇಶವಿಲ್ಲದವರು ಹೇಗೆ ಸಿಎಂ ಆಗುತ್ತಾರೆ?- RJD ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...